<p><strong>ಬೆಂಗಳೂರು:</strong> ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಭೇಟಿಗಾಗಿ ಹಾಲಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಅವರು ಗಂಟೆಗಟ್ಟಲೆ ಕಾದ ಪ್ರಸಂಗ ಇತ್ತೀಚೆಗೆ ನಡೆದಿದೆ.<br /> <br /> ಮನೆಗೆ ಬಂದ ಮುಖ್ಯಮಂತ್ರಿಯನ್ನು ಅರ್ಧ ಗಂಟೆಗೂ ಹೆಚ್ಚು ಕಾಲ ಕಾಯಿಸಿದ ಯಡಿಯೂರಪ್ಪ ಅವರು ನಂತರ ತಮ್ಮ ಮನೆಯವರ ಒತ್ತಡಕ್ಕೆ ಮಣಿದು ಭೇಟಿ ಮಾಡಿದರು ಎಂದು ಗೊತ್ತಾಗಿದೆ.<br /> <br /> ಇಬ್ಬರ ನಡುವಿನ ಸಂಬಂಧ ಹಳಸಿದ್ದು, ಹೇಳಿದ ಕೆಲಸಗಳನ್ನು ಸಿಎಂ ಮಾಡುತ್ತಿಲ್ಲ ಎನ್ನುವ ಅಸಮಾಧಾನ ಯಡಿಯೂರಪ್ಪ ಅವರಲ್ಲಿದೆ ಎನ್ನಲಾಗಿದೆ. <br /> <br /> ಯಡಿಯೂರಪ್ಪ ಅವರ ಬೇಡಿಕೆಗಳು:<br /> * ಸಚಿವರಾದ ಬಸವರಾಜ ಬೊಮ್ಮಾಯಿ ಮತ್ತು ಶೋಭಾ ಕರಂದ್ಲಾಜೆ ಅವರನ್ನು ಪಕ್ಷದ ಕೋರ್ ಕಮಿಟಿ ಸದಸ್ಯರನ್ನಾಗಿ ಮಾಡಬೇಕು.<br /> <br /> * ಬೆಂಗಳೂರು ನಗರ ಅಥವಾ ಗ್ರಾಮಾಂತರ ಜಿಲ್ಲೆಯ ಉಸ್ತುವಾರಿಯನ್ನು ಶೋಭಾ ಅವರಿಗೆ ನೀಡಬೇಕು.<br /> <br /> * ಸಚಿವ ಮುರುಗೇಶ ನಿರಾಣಿ ಅವರಿಗೆ ಬಾಗಲಕೋಟೆ ಜಿಲ್ಲೆಯ ಉಸ್ತುವಾರಿ ನೀಡಬೇಕು.<br /> <br /> * ಸಚಿವ ಬಸವರಾಜ ಬೊಮ್ಮಾಯಿ ಅವರನ್ನು ಶಿವಮೊಗ್ಗ ಜಿಲ್ಲೆಯ ಉಸ್ತುವಾರಿ ಸಚಿವರನ್ನಾಗಿ ನೇಮಿಸಬೇಕು.<br /> <br /> ಇವು ಯಡಿಯೂರಪ್ಪ ಅವರ ಸದ್ಯದ ಬೇಡಿಕೆಗಳು. ಇದಕ್ಕೆ ಸದಾನಂದ ಗೌಡರು ಸ್ಪಂದಿಸಿಲ್ಲ ಎನ್ನುವ ಕಾರಣಕ್ಕೆ ಅಸಮಾಧಾನಗೊಂಡಿದ್ದಾರೆ ಎನ್ನಲಾಗಿದೆ. </p>.<p>`ನನ್ನಿಂದ ಮುಖ್ಯಮಂತ್ರಿಯಾದ ನೀವು ನಾನು ಹೇಳಿದ ಕೆಲಸ ಏಕೆ ಮಾಡುತ್ತಿಲ್ಲ. ಹೀಗಾಗಿ ನಿಮ್ಮ ಜತೆ ಮಾತನಾಡುವುದಿಲ್ಲ~ ಎಂದೂ ಅಸಮಾಧಾನ ವ್ಯಕ್ತಪಡಿಸಿ, ಭೇಟಿಯಿಂದ ದೂರ ಉಳಿದಿದ್ದರು ಎಂದು ಗೊತ್ತಾಗಿದೆ.<br /> <br /> ನಂತರ ಯಡಿಯೂರಪ್ಪ ಪುತ್ರ ವಿಜಯೇಂದ್ರ ಅವರೇ ಯಡಿಯೂರಪ್ಪ ಅವರನ್ನು ಮನೆ ಮಹಡಿಯಿಂದ ಕರೆತಂದು ಭೇಟಿ ಮಾಡಿಸಿದರು ಎನ್ನಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಭೇಟಿಗಾಗಿ ಹಾಲಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಅವರು ಗಂಟೆಗಟ್ಟಲೆ ಕಾದ ಪ್ರಸಂಗ ಇತ್ತೀಚೆಗೆ ನಡೆದಿದೆ.<br /> <br /> ಮನೆಗೆ ಬಂದ ಮುಖ್ಯಮಂತ್ರಿಯನ್ನು ಅರ್ಧ ಗಂಟೆಗೂ ಹೆಚ್ಚು ಕಾಲ ಕಾಯಿಸಿದ ಯಡಿಯೂರಪ್ಪ ಅವರು ನಂತರ ತಮ್ಮ ಮನೆಯವರ ಒತ್ತಡಕ್ಕೆ ಮಣಿದು ಭೇಟಿ ಮಾಡಿದರು ಎಂದು ಗೊತ್ತಾಗಿದೆ.<br /> <br /> ಇಬ್ಬರ ನಡುವಿನ ಸಂಬಂಧ ಹಳಸಿದ್ದು, ಹೇಳಿದ ಕೆಲಸಗಳನ್ನು ಸಿಎಂ ಮಾಡುತ್ತಿಲ್ಲ ಎನ್ನುವ ಅಸಮಾಧಾನ ಯಡಿಯೂರಪ್ಪ ಅವರಲ್ಲಿದೆ ಎನ್ನಲಾಗಿದೆ. <br /> <br /> ಯಡಿಯೂರಪ್ಪ ಅವರ ಬೇಡಿಕೆಗಳು:<br /> * ಸಚಿವರಾದ ಬಸವರಾಜ ಬೊಮ್ಮಾಯಿ ಮತ್ತು ಶೋಭಾ ಕರಂದ್ಲಾಜೆ ಅವರನ್ನು ಪಕ್ಷದ ಕೋರ್ ಕಮಿಟಿ ಸದಸ್ಯರನ್ನಾಗಿ ಮಾಡಬೇಕು.<br /> <br /> * ಬೆಂಗಳೂರು ನಗರ ಅಥವಾ ಗ್ರಾಮಾಂತರ ಜಿಲ್ಲೆಯ ಉಸ್ತುವಾರಿಯನ್ನು ಶೋಭಾ ಅವರಿಗೆ ನೀಡಬೇಕು.<br /> <br /> * ಸಚಿವ ಮುರುಗೇಶ ನಿರಾಣಿ ಅವರಿಗೆ ಬಾಗಲಕೋಟೆ ಜಿಲ್ಲೆಯ ಉಸ್ತುವಾರಿ ನೀಡಬೇಕು.<br /> <br /> * ಸಚಿವ ಬಸವರಾಜ ಬೊಮ್ಮಾಯಿ ಅವರನ್ನು ಶಿವಮೊಗ್ಗ ಜಿಲ್ಲೆಯ ಉಸ್ತುವಾರಿ ಸಚಿವರನ್ನಾಗಿ ನೇಮಿಸಬೇಕು.<br /> <br /> ಇವು ಯಡಿಯೂರಪ್ಪ ಅವರ ಸದ್ಯದ ಬೇಡಿಕೆಗಳು. ಇದಕ್ಕೆ ಸದಾನಂದ ಗೌಡರು ಸ್ಪಂದಿಸಿಲ್ಲ ಎನ್ನುವ ಕಾರಣಕ್ಕೆ ಅಸಮಾಧಾನಗೊಂಡಿದ್ದಾರೆ ಎನ್ನಲಾಗಿದೆ. </p>.<p>`ನನ್ನಿಂದ ಮುಖ್ಯಮಂತ್ರಿಯಾದ ನೀವು ನಾನು ಹೇಳಿದ ಕೆಲಸ ಏಕೆ ಮಾಡುತ್ತಿಲ್ಲ. ಹೀಗಾಗಿ ನಿಮ್ಮ ಜತೆ ಮಾತನಾಡುವುದಿಲ್ಲ~ ಎಂದೂ ಅಸಮಾಧಾನ ವ್ಯಕ್ತಪಡಿಸಿ, ಭೇಟಿಯಿಂದ ದೂರ ಉಳಿದಿದ್ದರು ಎಂದು ಗೊತ್ತಾಗಿದೆ.<br /> <br /> ನಂತರ ಯಡಿಯೂರಪ್ಪ ಪುತ್ರ ವಿಜಯೇಂದ್ರ ಅವರೇ ಯಡಿಯೂರಪ್ಪ ಅವರನ್ನು ಮನೆ ಮಹಡಿಯಿಂದ ಕರೆತಂದು ಭೇಟಿ ಮಾಡಿಸಿದರು ಎನ್ನಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>