<p><strong>ಮಂಗಳೂರು: </strong>`ವಕ್ಫ್ ಮಂಡಳಿಯ ಆಸ್ತಿ ದುರ್ಬಳಕೆ ಕುರಿತು ರಾಜ್ಯ ಅಲ್ಪಸಂಖ್ಯಾತ ಆಯೋಗದ ಮಾಜಿ ಅಧ್ಯಕ್ಷ ಅನ್ವರ್ ಮಾಣಿಪ್ಪಾಡಿ ಅವರು ಸಲ್ಲಿಸಿದ ವರದಿಯ ಆಧಾರದಲ್ಲಿ ಕ್ರಮ ಕೈಗೊಳ್ಳಲು ಸಾಧ್ಯವಿಲ್ಲ' ಎಂದು ಪೌರಾಡಳಿತ ಮತ್ತು ವಕ್ಫ್ ಖಾತೆ ಸಚಿವ ಖಮರುಲ್ ಇಸ್ಲಾಂ ಭಾನುವಾರ ಇಲ್ಲಿ ಹೇಳಿದರು.<br /> <br /> ಸಚಿವರಾದ ಬಳಿಕ ದಕ್ಷಿಣ ಕನ್ನಡ ಜಿಲ್ಲೆಗೆ ಮೊದಲ ಬಾರಿ ಭೇಟಿ ನೀಡಿದ ಅವರು ನಗರದ ಸರ್ಕೀಟ್ ಹೌಸ್ನಲ್ಲಿ ಸುದ್ದಿಗಾರರ ಜತೆ ಮಾತನಾಡಿದರು.<br /> <br /> `ಅನ್ವರ್ ಮಾಣಿಪ್ಪಾಡಿ ಆಯೋಗದ ಕಾರ್ಯಾವಧಿ ಮುಗಿದ ಬಳಿಕ ವರದಿ ಸಲ್ಲಿಸಿದ್ದಾರೆ. ಆಯೋಗದ ಸದಸ್ಯರನ್ನು ವಿಶ್ವಾಸಕ್ಕೆ ಪಡೆಯದೆ ಎಲ್ಲೋ ಕುಳಿತು ವರದಿ ಸಿದ್ಧಪಡಿಸಿದ್ದರು. ಅವರು ತಯಾರಿಸಿದ ವರದಿ ರಾಜಕೀಯ ದುರುದ್ದೇಶದಿಂದ ಕೂಡಿದೆ' ಎಂದು ಆರೋಪಿಸಿದರು.<br /> <br /> `ವರದಿಯಲ್ಲಿ ವಕ್ಫ್ ಮಂಡಳಿ ಮಾಜಿ ಅಧ್ಯಕ್ಷರ ಮೇಲೆಲ್ಲ ಬೇಕಾಬಿಟ್ಟಿ ಆರೋಪ ಮಾಡಲಾಗಿದೆ. ಮಾಣಿಪ್ಪಾಡಿ ಅವರು ತಾವೊಬ್ಬರೇ ಸಾಚಾ ಎಂದು ಭಾವಿಸಿದಂತಿದೆ' ಎಂದು ಅವರು ವ್ಯಂಗ್ಯವಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು: </strong>`ವಕ್ಫ್ ಮಂಡಳಿಯ ಆಸ್ತಿ ದುರ್ಬಳಕೆ ಕುರಿತು ರಾಜ್ಯ ಅಲ್ಪಸಂಖ್ಯಾತ ಆಯೋಗದ ಮಾಜಿ ಅಧ್ಯಕ್ಷ ಅನ್ವರ್ ಮಾಣಿಪ್ಪಾಡಿ ಅವರು ಸಲ್ಲಿಸಿದ ವರದಿಯ ಆಧಾರದಲ್ಲಿ ಕ್ರಮ ಕೈಗೊಳ್ಳಲು ಸಾಧ್ಯವಿಲ್ಲ' ಎಂದು ಪೌರಾಡಳಿತ ಮತ್ತು ವಕ್ಫ್ ಖಾತೆ ಸಚಿವ ಖಮರುಲ್ ಇಸ್ಲಾಂ ಭಾನುವಾರ ಇಲ್ಲಿ ಹೇಳಿದರು.<br /> <br /> ಸಚಿವರಾದ ಬಳಿಕ ದಕ್ಷಿಣ ಕನ್ನಡ ಜಿಲ್ಲೆಗೆ ಮೊದಲ ಬಾರಿ ಭೇಟಿ ನೀಡಿದ ಅವರು ನಗರದ ಸರ್ಕೀಟ್ ಹೌಸ್ನಲ್ಲಿ ಸುದ್ದಿಗಾರರ ಜತೆ ಮಾತನಾಡಿದರು.<br /> <br /> `ಅನ್ವರ್ ಮಾಣಿಪ್ಪಾಡಿ ಆಯೋಗದ ಕಾರ್ಯಾವಧಿ ಮುಗಿದ ಬಳಿಕ ವರದಿ ಸಲ್ಲಿಸಿದ್ದಾರೆ. ಆಯೋಗದ ಸದಸ್ಯರನ್ನು ವಿಶ್ವಾಸಕ್ಕೆ ಪಡೆಯದೆ ಎಲ್ಲೋ ಕುಳಿತು ವರದಿ ಸಿದ್ಧಪಡಿಸಿದ್ದರು. ಅವರು ತಯಾರಿಸಿದ ವರದಿ ರಾಜಕೀಯ ದುರುದ್ದೇಶದಿಂದ ಕೂಡಿದೆ' ಎಂದು ಆರೋಪಿಸಿದರು.<br /> <br /> `ವರದಿಯಲ್ಲಿ ವಕ್ಫ್ ಮಂಡಳಿ ಮಾಜಿ ಅಧ್ಯಕ್ಷರ ಮೇಲೆಲ್ಲ ಬೇಕಾಬಿಟ್ಟಿ ಆರೋಪ ಮಾಡಲಾಗಿದೆ. ಮಾಣಿಪ್ಪಾಡಿ ಅವರು ತಾವೊಬ್ಬರೇ ಸಾಚಾ ಎಂದು ಭಾವಿಸಿದಂತಿದೆ' ಎಂದು ಅವರು ವ್ಯಂಗ್ಯವಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>