<p><strong>ಇಸ್ಲಾಮಾಬಾದ್(ಪಿಟಿಐ): </strong>ನಿರಂತರ ಮಾತುಕತೆ ಮೂಲಕ ಕಾಶ್ಮೀರ ಸೇರಿದಂತೆ ಭಾರತದೊಂದಿಗಿನ ಎಲ್ಲ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಲು ಬದ್ಧವಾಗಿದ್ದೇವೆ ಎಂದು ಪಾಕಿಸ್ತಾನ ಪ್ರಧಾನಿ ನವಾಜ್ ಷರೀಫ್ ಹೇಳಿದ್ದಾರೆ. ನೆರೆಹೊರೆಯಲ್ಲಿ ಶಾಂತಿ ಅತ್ಯಂತ ಅಗತ್ಯ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.<br /> <br /> ದಕ್ಷಿಣ ಏಷ್ಯಾದಲ್ಲಿ ಸಹಕಾರ ಮುಖ್ಯವೇ ಹೊರತು ಸಂಘರ್ಷ ಅಲ್ಲ ಎಂದು ಪಾಕಿಸ್ತಾನದ ಮಧ್ಯಪ್ರಾಚ್ಯದ ರಾಯಭಾರಿಗಳ ಸಭೆಯಲ್ಲಿ ಹೇಳಿದರು.<br /> ಅಭಿವೃದ್ಧಿಯ ವೇಗವನ್ನು ಹೆಚ್ಚಿಸಿ, ಸಂಪೂರ್ಣ ಸಾಮರ್ಥ್ಯದ ಪ್ರಯೋಜನ ಪಡೆದುಕೊಂಡಾಗ ಮಾತ್ರ ಈ ಪ್ರದೇಶದ ಜನರ ಭರವಸೆ ಮತ್ತು ಆಕಾಂಕ್ಷೆಗಳು ನನಸಾಗುವುದು ಸಾಧ್ಯ ಎಂದು ಅವರು ಅಭಿಪ್ರಾಯಪಟ್ಟರು.<br /> <br /> ಕೆಲವೇ ದಿನಗಳ ಹಿಂದೆ ಪಾಕಿಸ್ತಾನದ ಪ್ರಭಾವಿ ಸೇನಾ ಮುಖ್ಯಸ್ಥ ರಹೀಲ್ ಷರೀಫ್ ಕಾಶ್ಮೀರ ವಿಷಯದಲ್ಲಿ ವಿವಾದ ಸೃಷ್ಟಿಸಿದ್ದರು. ಕಾಶ್ಮೀರವು ಪಾಕಿಸ್ತಾನದ ಕಂಠ ರಕ್ತನಾಳ ಎಂದು ಅವರು ಹೇಳಿದ್ದರು.<br /> <br /> ಕಳೆದ ವರ್ಷ ನಡೆದ ಚುನಾವಣೆ ನಂತರ ಅಧಿಕಾರ ವಹಿಸಿಕೊಳ್ಳುವುದಕ್ಕೆ ಮೊದಲೇ ಭಾರತದೊಂದಿಗೆ ಉತ್ತಮ ಸಂಬಂಧ ಹೊಂದುವ ಬಗ್ಗೆ ಶರೀಫ್ ಹೇಳಿಕೆಗಳನ್ನು ನೀಡಿದ್ದರು.<br /> <br /> ಆದರೆ ಕಳೆದ ಇಡೀ ವರ್ಷ ನಿಯಂತ್ರಣ ರೇಖೆಯಲ್ಲಿನ ಸಂಘರ್ಷದಲ್ಲಿ ಭಾರತದ ಹಲವು ಯೋಧರು ಮೃತಪಟ್ಟು ಉತ್ತಮ ಬಾಂಧವ್ಯಕ್ಕೆ ಧಕ್ಕೆ ಉಂಟಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಇಸ್ಲಾಮಾಬಾದ್(ಪಿಟಿಐ): </strong>ನಿರಂತರ ಮಾತುಕತೆ ಮೂಲಕ ಕಾಶ್ಮೀರ ಸೇರಿದಂತೆ ಭಾರತದೊಂದಿಗಿನ ಎಲ್ಲ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಲು ಬದ್ಧವಾಗಿದ್ದೇವೆ ಎಂದು ಪಾಕಿಸ್ತಾನ ಪ್ರಧಾನಿ ನವಾಜ್ ಷರೀಫ್ ಹೇಳಿದ್ದಾರೆ. ನೆರೆಹೊರೆಯಲ್ಲಿ ಶಾಂತಿ ಅತ್ಯಂತ ಅಗತ್ಯ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.<br /> <br /> ದಕ್ಷಿಣ ಏಷ್ಯಾದಲ್ಲಿ ಸಹಕಾರ ಮುಖ್ಯವೇ ಹೊರತು ಸಂಘರ್ಷ ಅಲ್ಲ ಎಂದು ಪಾಕಿಸ್ತಾನದ ಮಧ್ಯಪ್ರಾಚ್ಯದ ರಾಯಭಾರಿಗಳ ಸಭೆಯಲ್ಲಿ ಹೇಳಿದರು.<br /> ಅಭಿವೃದ್ಧಿಯ ವೇಗವನ್ನು ಹೆಚ್ಚಿಸಿ, ಸಂಪೂರ್ಣ ಸಾಮರ್ಥ್ಯದ ಪ್ರಯೋಜನ ಪಡೆದುಕೊಂಡಾಗ ಮಾತ್ರ ಈ ಪ್ರದೇಶದ ಜನರ ಭರವಸೆ ಮತ್ತು ಆಕಾಂಕ್ಷೆಗಳು ನನಸಾಗುವುದು ಸಾಧ್ಯ ಎಂದು ಅವರು ಅಭಿಪ್ರಾಯಪಟ್ಟರು.<br /> <br /> ಕೆಲವೇ ದಿನಗಳ ಹಿಂದೆ ಪಾಕಿಸ್ತಾನದ ಪ್ರಭಾವಿ ಸೇನಾ ಮುಖ್ಯಸ್ಥ ರಹೀಲ್ ಷರೀಫ್ ಕಾಶ್ಮೀರ ವಿಷಯದಲ್ಲಿ ವಿವಾದ ಸೃಷ್ಟಿಸಿದ್ದರು. ಕಾಶ್ಮೀರವು ಪಾಕಿಸ್ತಾನದ ಕಂಠ ರಕ್ತನಾಳ ಎಂದು ಅವರು ಹೇಳಿದ್ದರು.<br /> <br /> ಕಳೆದ ವರ್ಷ ನಡೆದ ಚುನಾವಣೆ ನಂತರ ಅಧಿಕಾರ ವಹಿಸಿಕೊಳ್ಳುವುದಕ್ಕೆ ಮೊದಲೇ ಭಾರತದೊಂದಿಗೆ ಉತ್ತಮ ಸಂಬಂಧ ಹೊಂದುವ ಬಗ್ಗೆ ಶರೀಫ್ ಹೇಳಿಕೆಗಳನ್ನು ನೀಡಿದ್ದರು.<br /> <br /> ಆದರೆ ಕಳೆದ ಇಡೀ ವರ್ಷ ನಿಯಂತ್ರಣ ರೇಖೆಯಲ್ಲಿನ ಸಂಘರ್ಷದಲ್ಲಿ ಭಾರತದ ಹಲವು ಯೋಧರು ಮೃತಪಟ್ಟು ಉತ್ತಮ ಬಾಂಧವ್ಯಕ್ಕೆ ಧಕ್ಕೆ ಉಂಟಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>