<p><strong>ದಾವಣಗೆರೆ:</strong> ಅಧಿಕಾರಿಗಳು ದಾವಣಗೆರೆಯನ್ನು ರಾಜ್ಯದಲ್ಲಿ ಮಾದರಿ ತಾಲ್ಲೂಕು ಮಾಡಬೇಕು. ಅದಕ್ಕಾಗಿ ಶ್ರಮಿಸಿ, ನೀವು ಒಳ್ಳೆಯ ಕೆಲಸ ಮಾಡಿದರೆ ನಿಮ್ಮನ್ನು ಇನ್ನೂ ಮೂರು ವರ್ಷ ಇಲ್ಲಿಂದ ವರ್ಗಾವಣೆ ಮಾಡಿಸುವುದಿಲ್ಲ. ನಮ್ಮ ಸರ್ಕಾರ ಬಿದ್ದರೂ, ಮುಂದಿನ ಶಾಸಕ ನಾನೇ. ಕ್ಷೇತ್ರದ ಜನರ ಆರ್ಶೀವಾದ ನನಗಿದೆ...<br /> <br /> ಇದು ತಾಲ್ಲೂಕು ಪಂಚಾಯ್ತಿ ಸಭಾಂಗಣಲ್ಲಿ ಮಂಗಳವಾರ ನಡೆದ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾಯಕೊಂಡ ಶಾಸಕ ಹಾಗೂ ಬಂಜಾರ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಂ. ಬಸವರಾಜ ನಾಯ್ಕ ಅಧಿಕಾರಿಗಳಿಗೆ ನೀಡಿದ ಆಶ್ವಾಸನೆ.<br /> <br /> ಪ್ರತಿ ಇಲಾಖೆಯ ಮಾಹಿತಿ ವಿವರವಾಗಿ ಪಡೆದ ಶಾಸಕರು, ತಮ್ಮ ಕ್ಷೇತ್ರಕ್ಕೆ ಆಗುವ ಅನುಕೂಲ-ಅನನುಕೂಲ ಲೆಕ್ಕಹಾಕಿ, ತಾಲ್ಲೂಕಿನಲ್ಲಿ ಯಾವುದೇ ಯೋಜನೆ ಅನುಷ್ಠಾನಗೊಳಿಸುವ ಮುನ್ನ ತಮ್ಮ ಜತೆ ಚರ್ಚಿಸಬೇಕು. ಪ್ರೌಢಶಾಲೆಗಳಲ್ಲಿ ಗೌರವ ಶಿಕ್ಷಕರ ನೇಮಕ, ಅಂಗನವಾಡಿ ಶಿಕ್ಷಕಿಯರ ನೇಮಕ ಸೇರಿದಂತೆ ಯೋಜನೆಗಳ ಅನುಷ್ಠಾನಕ್ಕೆ ಮುನ್ನ ತಮ್ಮ ಬಳಿ ಚರ್ಚಿಸಿ, ಅಂತಿಮ ನಿರ್ಧಾರ ತೆಗೆದುಕೊಳ್ಳುವಂತೆ ಅಧಿಕಾರಿಗಳಿಗೆ ತಾಕೀತು ಮಾಡಿದರು.<br /> <br /> ತೋಟಗಾರಿಕಾ ಇಲಾಖೆಯಲ್ಲಿ ಸಬ್ಸಿಡಿ ದರದಲ್ಲಿ ವಿತರಿಸುವ ಸಾಮಗ್ರಿಗಳನ್ನು ಪಡೆಯುವ ಫಲಾನುಭವಿಗಳು ಪುನರಾವರ್ತನೆ ಆಗುತ್ತಿದ್ದಾರೆ. ಈ ಬಗ್ಗೆ ಸೂಕ್ತ ಎಚ್ಚರಿಕೆ ವಹಿಸಬೇಕು. ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡಬೇಕು ಎಂದು ತಾಲ್ಲೂಕು ಪಂಚಾಯ್ತಿ ಅಧ್ಯಕ್ಷೆ ಪ್ರತಿಭಾ ಮಲ್ಲಿಕಾರ್ಜುನ್ ತಾಕೀತು ಮಾಡಿದರು.<br /> <br /> ತಾಲ್ಲೂಕಿನ ಕೆಲ ಶಾಲೆಗಳಿಗೆ ಬೈಸಿಕಲ್ ವಿತರಿಸದಿರುವ ಬಗ್ಗೆ ಪ್ರತಿಭಾ ಅಸಮಾಧಾನ ವ್ಯಕ್ತಪಡಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಬಿಇಒ, ಎರಡು ಶಾಲೆಗಳಲ್ಲಿ ಮಾತ್ರ ವಿತರಿಸಲಿಲ್ಲ. ಎರಡು ದಿನದಲ್ಲಿ ಪ್ರಕ್ರಿಯೆ ಪೂರ್ಣಗೊಳಿಸಲಾಗುವುದು ಎಂದು ಭರವಸೆ ನೀಡಿದರು.<br /> <br /> ತಾಲ್ಲೂಕಿನಲ್ಲಿ ಈ ಬಾರಿ 35 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಮೆಕ್ಕೆಜೋಳ ಬೆಳೆಯಲಾಗಿದೆ. ಬೆಳೆ ಸಮೃದ್ಧವಾಗಿದೆ. ತಾಲ್ಲೂಕಿನಲ್ಲಿ ಭೂಚೇತನ ಯೋಜನೆ ಯಶಸ್ವಿಯಾಗಿದೆ. ರಸಗೊಬ್ಬರದ ಕೊರತೆ ಇಲ್ಲ ಎಂದು ಸಹಾಯಕ ಕೃಷಿ ನಿರ್ದೇಶಕ ಎಸ್.ಬಿ. ರಾಜಶೇಖರಪ್ಪ ಮಾಹಿತಿ ನೀಡಿದರು.<br /> <strong><br /> ಸರ್ಕಾರಕ್ಕೆ ಪ್ರಸ್ತಾವ</strong><br /> ತಾಲ್ಲೂಕಿನಲ್ಲಿ 5 ಖಾಸಗಿ ಹಾಸ್ಟೆಲ್ಗಳು ಮುಚ್ಚಿದ್ದು, ಇದರಿಂದ ಹಾಸ್ಟೆಲ್ ಕೊರತೆ ಇದೆ. 500 ಹೆಚ್ಚುವರಿ ವಿದ್ಯಾರ್ಥಿಗಳಿಗೆ ಅನುಮತಿ ನೀಡಲು ಸರ್ಕಾರಕ್ಕೆ ಪ್ರಸ್ತಾವ ಕಳುಹಿಸಲಾಗಿದೆ. ಅದಕ್ಕೆ ಶಾಸಕರು ಸಹಕಾರ ನೀಡಿ ಅನುಮತಿ ದೊರಕಿಸಬೇಕು ಎಂದು ತಾಲ್ಲೂಕು ಸಮಾಜ ಕಲ್ಯಾಣಾಧಿಕಾರಿ ಚಂದ್ರಪ್ಪ ಕೋರಿದರು.<br /> <br /> ಸಿಡಿಪಿಒ ರಾಜಾನಾಯ್ಕ ಮಾತನಾಡಿ, ತಾಲ್ಲೂಕಿನಲ್ಲಿ 480 ಅಂಗನವಾಡಿ ಕೇಂದ್ರಗಳಿವೆ. ಅದರಲ್ಲಿ 267 ಕೇಂದ್ರಗಳಿಗೆ ಸ್ವಂತ ಕಟ್ಟಡವಿದ್ದು, ಉಳಿದ ಕೇಂದ್ರಗಳಿಗೆ ಕಟ್ಟಡದ ಆವಶ್ಯಕತೆ ಇದೆ ಎಂದರು.<br /> <br /> ತಾಲ್ಲೂಕಿನ 7 ಗ್ರಾಮಗಳಲ್ಲಿ ಸುವರ್ಣ ಗ್ರಾಮೋದಯ ಯೋಜನೆ ಅನುಷ್ಠಾನಗೊಳ್ಳುತ್ತಿದ್ದು, ಶೇ. 70ರಷ್ಟು ಕಾಮಗಾರಿ ಪೂರ್ಣಗೊಂಡಿದೆ. ಆರು ಆಸ್ಪತ್ರೆಗಳು ತಲಾ ಒಂದು ಕೋಟಿ ವೆಚ್ಚದಲ್ಲಿ ಉನ್ನತೀಕರಣಗೊಂಡಿವೆ. 15 ಕೆರೆಗಳಲ್ಲಿ 9 ಕೆರೆಗಳನ್ನು ್ಙ 2.2 ಕೋಟಿ ವೆಚ್ಚದಲ್ಲಿ ಹಾಗೂ ಕೊಡಗನೂರು ಸೇರಿದಂತೆ ಉಳಿದ ಕೆರೆಗಳನ್ನು ್ಙ 6 ಕೋಟಿ ವೆಚ್ಚದಲ್ಲಿ ಪುನಶ್ಚೇತನ ಗೊಳಿಸಲಾಗುತ್ತಿದೆ ಎಂದು ಎಇಇ ಶಿವಕುಮಾರ್ ಮಾಹಿತಿ ನೀಡಿದರು.<br /> <br /> ತಹಶೀಲ್ದಾರ್ ಡಾ.ಬಿ.ಆರ್. ಹರೀಶ್, ತಾ.ಪಂ. ಇಒ ಎಲ್.ಎಸ್. ಪ್ರಭುದೇವ್, ಉಪಾಧ್ಯಕ್ಷ ಶಿವರುದ್ರಪ್ಪ, ಸ್ಥಾಯಿ ಸಮಿತಿ ಅಧ್ಯಕ್ಷ ರುದ್ರಗೌಡ ಇತರರು ಉಪಸ್ಥಿತರಿದ್ದರು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ:</strong> ಅಧಿಕಾರಿಗಳು ದಾವಣಗೆರೆಯನ್ನು ರಾಜ್ಯದಲ್ಲಿ ಮಾದರಿ ತಾಲ್ಲೂಕು ಮಾಡಬೇಕು. ಅದಕ್ಕಾಗಿ ಶ್ರಮಿಸಿ, ನೀವು ಒಳ್ಳೆಯ ಕೆಲಸ ಮಾಡಿದರೆ ನಿಮ್ಮನ್ನು ಇನ್ನೂ ಮೂರು ವರ್ಷ ಇಲ್ಲಿಂದ ವರ್ಗಾವಣೆ ಮಾಡಿಸುವುದಿಲ್ಲ. ನಮ್ಮ ಸರ್ಕಾರ ಬಿದ್ದರೂ, ಮುಂದಿನ ಶಾಸಕ ನಾನೇ. ಕ್ಷೇತ್ರದ ಜನರ ಆರ್ಶೀವಾದ ನನಗಿದೆ...<br /> <br /> ಇದು ತಾಲ್ಲೂಕು ಪಂಚಾಯ್ತಿ ಸಭಾಂಗಣಲ್ಲಿ ಮಂಗಳವಾರ ನಡೆದ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾಯಕೊಂಡ ಶಾಸಕ ಹಾಗೂ ಬಂಜಾರ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಂ. ಬಸವರಾಜ ನಾಯ್ಕ ಅಧಿಕಾರಿಗಳಿಗೆ ನೀಡಿದ ಆಶ್ವಾಸನೆ.<br /> <br /> ಪ್ರತಿ ಇಲಾಖೆಯ ಮಾಹಿತಿ ವಿವರವಾಗಿ ಪಡೆದ ಶಾಸಕರು, ತಮ್ಮ ಕ್ಷೇತ್ರಕ್ಕೆ ಆಗುವ ಅನುಕೂಲ-ಅನನುಕೂಲ ಲೆಕ್ಕಹಾಕಿ, ತಾಲ್ಲೂಕಿನಲ್ಲಿ ಯಾವುದೇ ಯೋಜನೆ ಅನುಷ್ಠಾನಗೊಳಿಸುವ ಮುನ್ನ ತಮ್ಮ ಜತೆ ಚರ್ಚಿಸಬೇಕು. ಪ್ರೌಢಶಾಲೆಗಳಲ್ಲಿ ಗೌರವ ಶಿಕ್ಷಕರ ನೇಮಕ, ಅಂಗನವಾಡಿ ಶಿಕ್ಷಕಿಯರ ನೇಮಕ ಸೇರಿದಂತೆ ಯೋಜನೆಗಳ ಅನುಷ್ಠಾನಕ್ಕೆ ಮುನ್ನ ತಮ್ಮ ಬಳಿ ಚರ್ಚಿಸಿ, ಅಂತಿಮ ನಿರ್ಧಾರ ತೆಗೆದುಕೊಳ್ಳುವಂತೆ ಅಧಿಕಾರಿಗಳಿಗೆ ತಾಕೀತು ಮಾಡಿದರು.<br /> <br /> ತೋಟಗಾರಿಕಾ ಇಲಾಖೆಯಲ್ಲಿ ಸಬ್ಸಿಡಿ ದರದಲ್ಲಿ ವಿತರಿಸುವ ಸಾಮಗ್ರಿಗಳನ್ನು ಪಡೆಯುವ ಫಲಾನುಭವಿಗಳು ಪುನರಾವರ್ತನೆ ಆಗುತ್ತಿದ್ದಾರೆ. ಈ ಬಗ್ಗೆ ಸೂಕ್ತ ಎಚ್ಚರಿಕೆ ವಹಿಸಬೇಕು. ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡಬೇಕು ಎಂದು ತಾಲ್ಲೂಕು ಪಂಚಾಯ್ತಿ ಅಧ್ಯಕ್ಷೆ ಪ್ರತಿಭಾ ಮಲ್ಲಿಕಾರ್ಜುನ್ ತಾಕೀತು ಮಾಡಿದರು.<br /> <br /> ತಾಲ್ಲೂಕಿನ ಕೆಲ ಶಾಲೆಗಳಿಗೆ ಬೈಸಿಕಲ್ ವಿತರಿಸದಿರುವ ಬಗ್ಗೆ ಪ್ರತಿಭಾ ಅಸಮಾಧಾನ ವ್ಯಕ್ತಪಡಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಬಿಇಒ, ಎರಡು ಶಾಲೆಗಳಲ್ಲಿ ಮಾತ್ರ ವಿತರಿಸಲಿಲ್ಲ. ಎರಡು ದಿನದಲ್ಲಿ ಪ್ರಕ್ರಿಯೆ ಪೂರ್ಣಗೊಳಿಸಲಾಗುವುದು ಎಂದು ಭರವಸೆ ನೀಡಿದರು.<br /> <br /> ತಾಲ್ಲೂಕಿನಲ್ಲಿ ಈ ಬಾರಿ 35 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಮೆಕ್ಕೆಜೋಳ ಬೆಳೆಯಲಾಗಿದೆ. ಬೆಳೆ ಸಮೃದ್ಧವಾಗಿದೆ. ತಾಲ್ಲೂಕಿನಲ್ಲಿ ಭೂಚೇತನ ಯೋಜನೆ ಯಶಸ್ವಿಯಾಗಿದೆ. ರಸಗೊಬ್ಬರದ ಕೊರತೆ ಇಲ್ಲ ಎಂದು ಸಹಾಯಕ ಕೃಷಿ ನಿರ್ದೇಶಕ ಎಸ್.ಬಿ. ರಾಜಶೇಖರಪ್ಪ ಮಾಹಿತಿ ನೀಡಿದರು.<br /> <strong><br /> ಸರ್ಕಾರಕ್ಕೆ ಪ್ರಸ್ತಾವ</strong><br /> ತಾಲ್ಲೂಕಿನಲ್ಲಿ 5 ಖಾಸಗಿ ಹಾಸ್ಟೆಲ್ಗಳು ಮುಚ್ಚಿದ್ದು, ಇದರಿಂದ ಹಾಸ್ಟೆಲ್ ಕೊರತೆ ಇದೆ. 500 ಹೆಚ್ಚುವರಿ ವಿದ್ಯಾರ್ಥಿಗಳಿಗೆ ಅನುಮತಿ ನೀಡಲು ಸರ್ಕಾರಕ್ಕೆ ಪ್ರಸ್ತಾವ ಕಳುಹಿಸಲಾಗಿದೆ. ಅದಕ್ಕೆ ಶಾಸಕರು ಸಹಕಾರ ನೀಡಿ ಅನುಮತಿ ದೊರಕಿಸಬೇಕು ಎಂದು ತಾಲ್ಲೂಕು ಸಮಾಜ ಕಲ್ಯಾಣಾಧಿಕಾರಿ ಚಂದ್ರಪ್ಪ ಕೋರಿದರು.<br /> <br /> ಸಿಡಿಪಿಒ ರಾಜಾನಾಯ್ಕ ಮಾತನಾಡಿ, ತಾಲ್ಲೂಕಿನಲ್ಲಿ 480 ಅಂಗನವಾಡಿ ಕೇಂದ್ರಗಳಿವೆ. ಅದರಲ್ಲಿ 267 ಕೇಂದ್ರಗಳಿಗೆ ಸ್ವಂತ ಕಟ್ಟಡವಿದ್ದು, ಉಳಿದ ಕೇಂದ್ರಗಳಿಗೆ ಕಟ್ಟಡದ ಆವಶ್ಯಕತೆ ಇದೆ ಎಂದರು.<br /> <br /> ತಾಲ್ಲೂಕಿನ 7 ಗ್ರಾಮಗಳಲ್ಲಿ ಸುವರ್ಣ ಗ್ರಾಮೋದಯ ಯೋಜನೆ ಅನುಷ್ಠಾನಗೊಳ್ಳುತ್ತಿದ್ದು, ಶೇ. 70ರಷ್ಟು ಕಾಮಗಾರಿ ಪೂರ್ಣಗೊಂಡಿದೆ. ಆರು ಆಸ್ಪತ್ರೆಗಳು ತಲಾ ಒಂದು ಕೋಟಿ ವೆಚ್ಚದಲ್ಲಿ ಉನ್ನತೀಕರಣಗೊಂಡಿವೆ. 15 ಕೆರೆಗಳಲ್ಲಿ 9 ಕೆರೆಗಳನ್ನು ್ಙ 2.2 ಕೋಟಿ ವೆಚ್ಚದಲ್ಲಿ ಹಾಗೂ ಕೊಡಗನೂರು ಸೇರಿದಂತೆ ಉಳಿದ ಕೆರೆಗಳನ್ನು ್ಙ 6 ಕೋಟಿ ವೆಚ್ಚದಲ್ಲಿ ಪುನಶ್ಚೇತನ ಗೊಳಿಸಲಾಗುತ್ತಿದೆ ಎಂದು ಎಇಇ ಶಿವಕುಮಾರ್ ಮಾಹಿತಿ ನೀಡಿದರು.<br /> <br /> ತಹಶೀಲ್ದಾರ್ ಡಾ.ಬಿ.ಆರ್. ಹರೀಶ್, ತಾ.ಪಂ. ಇಒ ಎಲ್.ಎಸ್. ಪ್ರಭುದೇವ್, ಉಪಾಧ್ಯಕ್ಷ ಶಿವರುದ್ರಪ್ಪ, ಸ್ಥಾಯಿ ಸಮಿತಿ ಅಧ್ಯಕ್ಷ ರುದ್ರಗೌಡ ಇತರರು ಉಪಸ್ಥಿತರಿದ್ದರು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>