<p>ಬೆಂಗಳೂರು: `ಮಾಧ್ಯಮದವರ ಮೇಲೆ ಶುಕ್ರವಾರ ನಡೆದ ಹಲ್ಲೆಗೆ ವಕೀಲರೇ ನೇರ ಕಾರಣ~ ಎಂದು ನಗರ ಪೊಲೀಸ್ ಕಮಿಷನರ್ ಜ್ಯೋತಿ ಪ್ರಕಾಶ್ ಮಿರ್ಜಿ ಅವರು ಸರ್ಕಾರಕ್ಕೆ ಶನಿವಾರ ಸಲ್ಲಿಸಿರುವ ವರದಿಯಲ್ಲಿ ತಿಳಿಸಿದ್ದಾರೆ.<br /> <br /> ಸಿಟಿ ಸಿವಿಲ್ ಕೋರ್ಟ್ ಆವರಣದಲ್ಲಿ ನಡೆದ ಘಟನೆಗಳ ಬಗ್ಗೆ ಅವರು ಸರ್ಕಾರಕ್ಕೆ ಪೂರ್ಣ ವರದಿ ಸಲ್ಲಿಸಿದ್ದು, ಅದರಲ್ಲಿ ಈ ಅಂಶವನ್ನು ಪ್ರಸ್ತಾಪಿಸಿದ್ದಾರೆ.<br /> <br /> ಜನಾರ್ದನ ರೆಡ್ಡಿ ಅವರನ್ನು ಸಿಬಿಐ ನ್ಯಾಯಾಲಯದ ಮುಂದೆ ಹಾಜರುಪಡಿಸಲು ಕರೆತಂದಾಗ ಅಲ್ಲಿಗೆ ಮಾಧ್ಯಮದವರು ಕೂಡ ಹೋದರು. ಆ ಸಂದರ್ಭದಲ್ಲಿ ಏಕಾಏಕಿ ಗಲಾಟೆ ಮಾಡಿದ್ದು ವಕೀಲರು. ಇದ್ದಕ್ಕಿದ್ದ ಹಾಗೆ ಮಾಧ್ಯಮದವರ ಮೇಲೆ ಹಲ್ಲೆ ಮಾಡಿದರು ಎಂದು ಮಿರ್ಜಿ ಸರ್ಕಾರಕ್ಕೆ ಸಲ್ಲಿಸಿರುವ ವರದಿಯಲ್ಲಿ ಉಲ್ಲೇಖಿಸಿದ್ದಾರೆ.<br /> ಘಟನೆಗೆ ಕಾರಣರಾದ ವಕೀಲರ ಹೆಸರುಗಳನ್ನೂ ಅವರು ವರದಿಯಲ್ಲಿ ಪ್ರಸ್ತಾಪಿಸಿದ್ದಾರೆ. ವರದಿಯನ್ನು ಮುಖ್ಯಮಂತ್ರಿ ಸದಾನಂದ ಗೌಡ, ಗೃಹ ಸಚಿವ ಆರ್.ಅಶೋಕ ಮತ್ತು ಕಾನೂನು ಸಚಿವ ಸುರೇಶ್ಕುಮಾರ್ ಅವರಿಗೆ ಸಲ್ಲಿಸಲಾಗಿದೆ.<br /> <br /> <strong>ಸುದೀರ್ಘ ಸಭೆ: </strong>ಈ ನಡುವೆ ಮುಖ್ಯಮಂತ್ರಿಯವರು ಮೈಸೂರಿನಿಂದ ನಗರಕ್ಕೆ ಬಂದ ತಕ್ಷಣವೇ ಗೃಹ ಮತ್ತು ಕಾನೂನು ಸಚಿವರನ್ನು ಕರೆಸಿಕೊಂಡು ಸುದೀರ್ಘ ಸಭೆ ನಡೆಸಿದರು. ವಕೀಲರು ಮತ್ತು ಮಾಧ್ಯಮದವರ ನಡುವಿನ ವೈಮನಸ್ಸನ್ನು ತಿಳಿಗೊಳಿಸಲು ಏನೆಲ್ಲ ಪ್ರಯತ್ನ ಮಾಡಬೇಕು ಎಂಬುದರ ಬಗ್ಗೆ ಸಮಾಲೋಚನೆ ನಡೆಸಿದರು ಎಂದು ಗೊತ್ತಾಗಿದೆ.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: `ಮಾಧ್ಯಮದವರ ಮೇಲೆ ಶುಕ್ರವಾರ ನಡೆದ ಹಲ್ಲೆಗೆ ವಕೀಲರೇ ನೇರ ಕಾರಣ~ ಎಂದು ನಗರ ಪೊಲೀಸ್ ಕಮಿಷನರ್ ಜ್ಯೋತಿ ಪ್ರಕಾಶ್ ಮಿರ್ಜಿ ಅವರು ಸರ್ಕಾರಕ್ಕೆ ಶನಿವಾರ ಸಲ್ಲಿಸಿರುವ ವರದಿಯಲ್ಲಿ ತಿಳಿಸಿದ್ದಾರೆ.<br /> <br /> ಸಿಟಿ ಸಿವಿಲ್ ಕೋರ್ಟ್ ಆವರಣದಲ್ಲಿ ನಡೆದ ಘಟನೆಗಳ ಬಗ್ಗೆ ಅವರು ಸರ್ಕಾರಕ್ಕೆ ಪೂರ್ಣ ವರದಿ ಸಲ್ಲಿಸಿದ್ದು, ಅದರಲ್ಲಿ ಈ ಅಂಶವನ್ನು ಪ್ರಸ್ತಾಪಿಸಿದ್ದಾರೆ.<br /> <br /> ಜನಾರ್ದನ ರೆಡ್ಡಿ ಅವರನ್ನು ಸಿಬಿಐ ನ್ಯಾಯಾಲಯದ ಮುಂದೆ ಹಾಜರುಪಡಿಸಲು ಕರೆತಂದಾಗ ಅಲ್ಲಿಗೆ ಮಾಧ್ಯಮದವರು ಕೂಡ ಹೋದರು. ಆ ಸಂದರ್ಭದಲ್ಲಿ ಏಕಾಏಕಿ ಗಲಾಟೆ ಮಾಡಿದ್ದು ವಕೀಲರು. ಇದ್ದಕ್ಕಿದ್ದ ಹಾಗೆ ಮಾಧ್ಯಮದವರ ಮೇಲೆ ಹಲ್ಲೆ ಮಾಡಿದರು ಎಂದು ಮಿರ್ಜಿ ಸರ್ಕಾರಕ್ಕೆ ಸಲ್ಲಿಸಿರುವ ವರದಿಯಲ್ಲಿ ಉಲ್ಲೇಖಿಸಿದ್ದಾರೆ.<br /> ಘಟನೆಗೆ ಕಾರಣರಾದ ವಕೀಲರ ಹೆಸರುಗಳನ್ನೂ ಅವರು ವರದಿಯಲ್ಲಿ ಪ್ರಸ್ತಾಪಿಸಿದ್ದಾರೆ. ವರದಿಯನ್ನು ಮುಖ್ಯಮಂತ್ರಿ ಸದಾನಂದ ಗೌಡ, ಗೃಹ ಸಚಿವ ಆರ್.ಅಶೋಕ ಮತ್ತು ಕಾನೂನು ಸಚಿವ ಸುರೇಶ್ಕುಮಾರ್ ಅವರಿಗೆ ಸಲ್ಲಿಸಲಾಗಿದೆ.<br /> <br /> <strong>ಸುದೀರ್ಘ ಸಭೆ: </strong>ಈ ನಡುವೆ ಮುಖ್ಯಮಂತ್ರಿಯವರು ಮೈಸೂರಿನಿಂದ ನಗರಕ್ಕೆ ಬಂದ ತಕ್ಷಣವೇ ಗೃಹ ಮತ್ತು ಕಾನೂನು ಸಚಿವರನ್ನು ಕರೆಸಿಕೊಂಡು ಸುದೀರ್ಘ ಸಭೆ ನಡೆಸಿದರು. ವಕೀಲರು ಮತ್ತು ಮಾಧ್ಯಮದವರ ನಡುವಿನ ವೈಮನಸ್ಸನ್ನು ತಿಳಿಗೊಳಿಸಲು ಏನೆಲ್ಲ ಪ್ರಯತ್ನ ಮಾಡಬೇಕು ಎಂಬುದರ ಬಗ್ಗೆ ಸಮಾಲೋಚನೆ ನಡೆಸಿದರು ಎಂದು ಗೊತ್ತಾಗಿದೆ.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>