<p><strong>ಬಳ್ಳಾರಿ:</strong> ಎಲ್ಲ ಅಧಿಕಾರಿಗಳು ಮಾನವ ಅಭಿವೃದ್ಧಿ ವರದಿ ತಯಾರಿಸುವ ಮುನ್ನ ಜನಪ್ರತಿನಿಧಿಗಳಿಂದ ಸೂಕ್ತ ಸಲಹೆ ಪಡೆಯಬೇಕು ಎಂದ ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಚಂದ್ರಶೇಖರ ಗುಡಿ ಸೂಚಿಸಿದರು.<br /> <br /> ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದ ಸಂಯುಕ್ತ ಆಶ್ರಯದಲ್ಲಿ ಗುರುವಾರ ಜಿಲ್ಲಾ ಪಂಚಾಯತಿ ನಜೀರ್ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಜಿಲ್ಲಾ ಮಾನವ ಅಭಿವೃದ್ಧಿ ವರದಿ ತಯಾರಿಕೆ ಕುರಿತ ತಾಲ್ಲೂಕು ಮಟ್ಟದ ಕಾರ್ಯಾಗಾರದ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು.<br /> <br /> ಮಾನವ ಅಭಿವೃದ್ಧಿಯು ಜನರ ಕಲ್ಯಾಣದ ಜತೆಗೆ ಜನರಿಗಿರುವ ಆಯ್ಕೆಗಳನ್ನು ವಿಸ್ತರಿಸುವ ಮಹತ್ತರ ಪ್ರಕ್ರಿಯೆಯಾಗಿದೆ. ಜಿಲ್ಲೆಯಲ್ಲಿ ಅನುಷ್ಠಾನ ಆಗುತ್ತಿರುವ ಯೋಜನೆಗಳು ಮಾನವ ಅಭಿವೃದ್ಧಿಗೆ ಹೇಗೆ ಪೂರಕ ಎಂಬುದರ ಅಧ್ಯಯನವೇ ಈ ವರದಿ ತಯಾರಿಕೆಯ ಉದ್ದೇಶ ಎಂದು ಅವರು ಹೇಳಿದರು.<br /> <br /> ಆರೋಗ್ಯ, ಶಿಕ್ಷಣ, ತಲಾ ಆದಾಯವನ್ನು ಆಧರಿಸಿ ಮಾನವ ಅಭಿವೃದ್ಧಿ ವರದಿ ತಯಾರಿಸಲಾಗುತ್ತದೆ. ಎಲ್ಲ ತಾಲ್ಲೂಕುಗಳಲ್ಲಿ ತಾಲ್ಲೂಕು ಮಟ್ಟದ ಕಾರ್ಯಾಗಾರ ನಡೆಸಿ ವರದಿ ತಯಾರಿಸುವ ಕುರಿತು ತರಬೇತಿ ನೀಡಲಾಗುತ್ತಿದೆ ಎಂದು ಅವರು ತಿಳಿಸಿದರು.<br /> <br /> ತಾ.ಪಂ. ಅಧ್ಯಕ್ಷ ವಿ. ಗಾದಿಲಿಂಗಪ್ಪ ಕಾರ್ಯಾಗಾರ ಉದ್ಘಾಟಿಸಿದರು. ಉಪಾಧ್ಯಕ್ಷೆ ಮರೆಮ್ಮ, ಸಿರುಗುಪ್ಪ ತಾ.ಪಂ. ಅಧ್ಯಕ್ಷೆ ಅಂಕಮ್ಮ, ಕಾರ್ಯ ನಿರ್ವಾಹಕಾಧಿಕಾರಿ ಜಾನಕೀರಾಮ, ರಾಧಾಕೃಷ್ಣ ರೆಡ್ಡಿ, ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.<br /> <br /> ಕರ್ನಾಟಕ ವಿವಿಯ ಸಹಾಯಕ ಪ್ರಾಧ್ಯಾಪಕ ಬಿ.ಎಚ್. ನಾಗೂರ್ ಉಪನ್ಯಾಸ ನೀಡಿದರು. ಖಾದರ್ ಸ್ವಾಗತಿಸಿದರು. ಗೋಪಾಲಕೃಷ್ಣ ಪ್ರಾಸ್ತಾವಿಕವಾಗಿ ಮಾತನಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಳ್ಳಾರಿ:</strong> ಎಲ್ಲ ಅಧಿಕಾರಿಗಳು ಮಾನವ ಅಭಿವೃದ್ಧಿ ವರದಿ ತಯಾರಿಸುವ ಮುನ್ನ ಜನಪ್ರತಿನಿಧಿಗಳಿಂದ ಸೂಕ್ತ ಸಲಹೆ ಪಡೆಯಬೇಕು ಎಂದ ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಚಂದ್ರಶೇಖರ ಗುಡಿ ಸೂಚಿಸಿದರು.<br /> <br /> ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದ ಸಂಯುಕ್ತ ಆಶ್ರಯದಲ್ಲಿ ಗುರುವಾರ ಜಿಲ್ಲಾ ಪಂಚಾಯತಿ ನಜೀರ್ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಜಿಲ್ಲಾ ಮಾನವ ಅಭಿವೃದ್ಧಿ ವರದಿ ತಯಾರಿಕೆ ಕುರಿತ ತಾಲ್ಲೂಕು ಮಟ್ಟದ ಕಾರ್ಯಾಗಾರದ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು.<br /> <br /> ಮಾನವ ಅಭಿವೃದ್ಧಿಯು ಜನರ ಕಲ್ಯಾಣದ ಜತೆಗೆ ಜನರಿಗಿರುವ ಆಯ್ಕೆಗಳನ್ನು ವಿಸ್ತರಿಸುವ ಮಹತ್ತರ ಪ್ರಕ್ರಿಯೆಯಾಗಿದೆ. ಜಿಲ್ಲೆಯಲ್ಲಿ ಅನುಷ್ಠಾನ ಆಗುತ್ತಿರುವ ಯೋಜನೆಗಳು ಮಾನವ ಅಭಿವೃದ್ಧಿಗೆ ಹೇಗೆ ಪೂರಕ ಎಂಬುದರ ಅಧ್ಯಯನವೇ ಈ ವರದಿ ತಯಾರಿಕೆಯ ಉದ್ದೇಶ ಎಂದು ಅವರು ಹೇಳಿದರು.<br /> <br /> ಆರೋಗ್ಯ, ಶಿಕ್ಷಣ, ತಲಾ ಆದಾಯವನ್ನು ಆಧರಿಸಿ ಮಾನವ ಅಭಿವೃದ್ಧಿ ವರದಿ ತಯಾರಿಸಲಾಗುತ್ತದೆ. ಎಲ್ಲ ತಾಲ್ಲೂಕುಗಳಲ್ಲಿ ತಾಲ್ಲೂಕು ಮಟ್ಟದ ಕಾರ್ಯಾಗಾರ ನಡೆಸಿ ವರದಿ ತಯಾರಿಸುವ ಕುರಿತು ತರಬೇತಿ ನೀಡಲಾಗುತ್ತಿದೆ ಎಂದು ಅವರು ತಿಳಿಸಿದರು.<br /> <br /> ತಾ.ಪಂ. ಅಧ್ಯಕ್ಷ ವಿ. ಗಾದಿಲಿಂಗಪ್ಪ ಕಾರ್ಯಾಗಾರ ಉದ್ಘಾಟಿಸಿದರು. ಉಪಾಧ್ಯಕ್ಷೆ ಮರೆಮ್ಮ, ಸಿರುಗುಪ್ಪ ತಾ.ಪಂ. ಅಧ್ಯಕ್ಷೆ ಅಂಕಮ್ಮ, ಕಾರ್ಯ ನಿರ್ವಾಹಕಾಧಿಕಾರಿ ಜಾನಕೀರಾಮ, ರಾಧಾಕೃಷ್ಣ ರೆಡ್ಡಿ, ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.<br /> <br /> ಕರ್ನಾಟಕ ವಿವಿಯ ಸಹಾಯಕ ಪ್ರಾಧ್ಯಾಪಕ ಬಿ.ಎಚ್. ನಾಗೂರ್ ಉಪನ್ಯಾಸ ನೀಡಿದರು. ಖಾದರ್ ಸ್ವಾಗತಿಸಿದರು. ಗೋಪಾಲಕೃಷ್ಣ ಪ್ರಾಸ್ತಾವಿಕವಾಗಿ ಮಾತನಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>