<p>ಬೆಂಗಳೂರು: `ಭೌಗೋಳಿಕ ಪರಿಸರ ಸಂರಕ್ಷಣೆಗೆ ಆದ್ಯತೆ ನೀಡುವ ಜತೆಗೆ ಮನುಷ್ಯರ ಮಾನಸಿಕ ಪರಿಸರವನ್ನು ಶುದ್ಧಿಗೊಳಿಸುವ ಕಾರ್ಯಕ್ಕೂ ಒತ್ತು ನೀಡಬೇಕಿದೆ~ ಎಂದು ಸಾಹಿತಿ ಪ್ರೊ. ಬರಗೂರು ರಾಮಚಂದ್ರಪ್ಪ ಅಭಿಪ್ರಾಯಪಟ್ಟರು.<br /> <br /> ಚಿಲ್ಡ್ರನ್ಸ್ ಇಂಡಿಯಾ ಸಂಸ್ಥೆಯು 7ನೇ ಅಂತರರಾಷ್ಟ್ರೀಯ ಮಕ್ಕಳ ಚಿತ್ರೋತ್ಸವದ ಹಿನ್ನೆಲೆಯಲ್ಲಿ ಸುಚಿತ್ರಾ ಫಿಲಂ ಸೊಸೈಟಿ ಸಭಾಂಗಣದಲ್ಲಿ ಮಂಗಳವಾರ ಆಯೋಜಿಸಿದ್ದ ಪರಿಸರ ಚಿತ್ರಗಳ ಪ್ರದರ್ಶನ ಉದ್ಘಾಟಿಸಿ ಅವರು ಮಾತನಾಡಿದರು.<br /> <br /> `ಜನರ ಚಿಂತನೆ ಹಾಳಾಗುತ್ತಿರುವ ಈ ಸಂದರ್ಭದಲ್ಲಿ ಅವರ ಮಾನಸಿಕ ಪರಿಸರವನ್ನು ಉತ್ಕೃಷ್ಟಗೊಳಿಸಬೇಕಿದೆ. ಭವಿಷ್ಯದ ಪ್ರಜೆಗಳಾದ ಮಕ್ಕಳಿಗೆ ಚಿಕ್ಕಂದಿನಿಂದಲೇ ಉತ್ತಮ ವಿಚಾರಗಳನ್ನು ತಿಳಿಸಬೇಕು. ಹಾಗೆಯೇ ಪರಿಸರ ಸಂರಕ್ಷಣೆಯ ಬಗ್ಗೆ ಅರಿವು ಮೂಡಿಸಲು ಪರಿಸರ ಸಂಬಂಧಿ ಚಿತ್ರ ಪ್ರದರ್ಶನ ಏರ್ಪಡಿಸಿರುವುದು ಉತ್ತಮವಾಗಿದೆ~ ಎಂದರು.<br /> <br /> `ಸ್ಟಂಟ್, ಗಿಮಿಕ್ಗಳ ಮೂಲಕ ಕಟ್ಟಡಗಳನ್ನು ಕೆಡವುವ, ಸ್ಫೋಟಿಸುವ ದೃಶ್ಯಗಳಿಂದ ರೋಚಕತೆ ಉಂಟು ಮಾಡುವ ಚಿತ್ರಗಳು ಎಂದಿಗೂ ಉತ್ತಮ ಚಿತ್ರಗಳೆನಿಸಿಕೊಳ್ಳುವುದಿಲ್ಲ. ಹಾಗಾಗಿ ವಿಧ್ವಂಸಕ ಮನೋವೃತ್ತಿಯ ಬದಲಿಗೆ ಸಂಸ್ಕೃತಿ ಕಟ್ಟುವ ಚಿತ್ರಗಳಿಗೆ ಆದ್ಯತೆ ನೀಡಬೇಕು~ ಎಂದು ಹೇಳಿದರು.<br /> <br /> ಚಿತ್ರ ನಿರ್ದೇಶಕ ಕೆ.ಎಸ್. ಭಗವಾನ್, `ಸಮಾಜದ ಮೇಲೆ ಚಲನಚಿತ್ರರಂಗವು ಗಂಭೀರ ಪರಿಣಾಮ ಬೀರುವುದರಿಂದ ನಿರ್ದೇಶಕರು, ನಿರ್ಮಾಪಕರ ಜವಾಬ್ದಾರಿ ಹೆಚ್ಚಿದೆ. ಉತ್ತಮ ಸಂದೇಶ ಸಾರುವ ಚಿತ್ರಗಳ ನಿರ್ಮಾಣಕ್ಕೆ ಚಿತ್ರೋದ್ಯಮ ಮುಂದಾಗಬೇಕು~ ಎಂದರು.<br /> <br /> ಹಿರಿಯ ನಟ ಸುಂದರ್ರಾಜ್, `ವಿಕೃತ ಆಲೋಚನೆಗಳನ್ನು ಚಿತ್ರಗಳಲ್ಲಿ ಪ್ರದರ್ಶಿಸುವುದು ಸರಿಯಲ್ಲ. ಸದಭಿರುಚಿಯ ಚಿತ್ರಗಳು ಮೂಡಿಬರಬೇಕು. ಒಳ್ಳೆಯ ಚಿತ್ರಗಳು ಹೇಗಿರುತ್ತವೆ ಎಂಬುದನ್ನು ಮಕ್ಕಳಿಗೆ ತೋರಿಸುವ ಪ್ರಯತ್ನ ಉತ್ತಮವಾಗಿದೆ~ ಎಂದು ಹೇಳಿದರು.<br /> <br /> ನಟಿ ಮೇಘನಾ ರಾಜ್, ನಿರ್ದೇಶಕ ತಿಪಟೂರು ರಘು, ಸಂಸ್ಥೆಯ ಅಧ್ಯಕ್ಷ ಎನ್.ಆರ್. ನಂಜುಂಡೇಗೌಡ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: `ಭೌಗೋಳಿಕ ಪರಿಸರ ಸಂರಕ್ಷಣೆಗೆ ಆದ್ಯತೆ ನೀಡುವ ಜತೆಗೆ ಮನುಷ್ಯರ ಮಾನಸಿಕ ಪರಿಸರವನ್ನು ಶುದ್ಧಿಗೊಳಿಸುವ ಕಾರ್ಯಕ್ಕೂ ಒತ್ತು ನೀಡಬೇಕಿದೆ~ ಎಂದು ಸಾಹಿತಿ ಪ್ರೊ. ಬರಗೂರು ರಾಮಚಂದ್ರಪ್ಪ ಅಭಿಪ್ರಾಯಪಟ್ಟರು.<br /> <br /> ಚಿಲ್ಡ್ರನ್ಸ್ ಇಂಡಿಯಾ ಸಂಸ್ಥೆಯು 7ನೇ ಅಂತರರಾಷ್ಟ್ರೀಯ ಮಕ್ಕಳ ಚಿತ್ರೋತ್ಸವದ ಹಿನ್ನೆಲೆಯಲ್ಲಿ ಸುಚಿತ್ರಾ ಫಿಲಂ ಸೊಸೈಟಿ ಸಭಾಂಗಣದಲ್ಲಿ ಮಂಗಳವಾರ ಆಯೋಜಿಸಿದ್ದ ಪರಿಸರ ಚಿತ್ರಗಳ ಪ್ರದರ್ಶನ ಉದ್ಘಾಟಿಸಿ ಅವರು ಮಾತನಾಡಿದರು.<br /> <br /> `ಜನರ ಚಿಂತನೆ ಹಾಳಾಗುತ್ತಿರುವ ಈ ಸಂದರ್ಭದಲ್ಲಿ ಅವರ ಮಾನಸಿಕ ಪರಿಸರವನ್ನು ಉತ್ಕೃಷ್ಟಗೊಳಿಸಬೇಕಿದೆ. ಭವಿಷ್ಯದ ಪ್ರಜೆಗಳಾದ ಮಕ್ಕಳಿಗೆ ಚಿಕ್ಕಂದಿನಿಂದಲೇ ಉತ್ತಮ ವಿಚಾರಗಳನ್ನು ತಿಳಿಸಬೇಕು. ಹಾಗೆಯೇ ಪರಿಸರ ಸಂರಕ್ಷಣೆಯ ಬಗ್ಗೆ ಅರಿವು ಮೂಡಿಸಲು ಪರಿಸರ ಸಂಬಂಧಿ ಚಿತ್ರ ಪ್ರದರ್ಶನ ಏರ್ಪಡಿಸಿರುವುದು ಉತ್ತಮವಾಗಿದೆ~ ಎಂದರು.<br /> <br /> `ಸ್ಟಂಟ್, ಗಿಮಿಕ್ಗಳ ಮೂಲಕ ಕಟ್ಟಡಗಳನ್ನು ಕೆಡವುವ, ಸ್ಫೋಟಿಸುವ ದೃಶ್ಯಗಳಿಂದ ರೋಚಕತೆ ಉಂಟು ಮಾಡುವ ಚಿತ್ರಗಳು ಎಂದಿಗೂ ಉತ್ತಮ ಚಿತ್ರಗಳೆನಿಸಿಕೊಳ್ಳುವುದಿಲ್ಲ. ಹಾಗಾಗಿ ವಿಧ್ವಂಸಕ ಮನೋವೃತ್ತಿಯ ಬದಲಿಗೆ ಸಂಸ್ಕೃತಿ ಕಟ್ಟುವ ಚಿತ್ರಗಳಿಗೆ ಆದ್ಯತೆ ನೀಡಬೇಕು~ ಎಂದು ಹೇಳಿದರು.<br /> <br /> ಚಿತ್ರ ನಿರ್ದೇಶಕ ಕೆ.ಎಸ್. ಭಗವಾನ್, `ಸಮಾಜದ ಮೇಲೆ ಚಲನಚಿತ್ರರಂಗವು ಗಂಭೀರ ಪರಿಣಾಮ ಬೀರುವುದರಿಂದ ನಿರ್ದೇಶಕರು, ನಿರ್ಮಾಪಕರ ಜವಾಬ್ದಾರಿ ಹೆಚ್ಚಿದೆ. ಉತ್ತಮ ಸಂದೇಶ ಸಾರುವ ಚಿತ್ರಗಳ ನಿರ್ಮಾಣಕ್ಕೆ ಚಿತ್ರೋದ್ಯಮ ಮುಂದಾಗಬೇಕು~ ಎಂದರು.<br /> <br /> ಹಿರಿಯ ನಟ ಸುಂದರ್ರಾಜ್, `ವಿಕೃತ ಆಲೋಚನೆಗಳನ್ನು ಚಿತ್ರಗಳಲ್ಲಿ ಪ್ರದರ್ಶಿಸುವುದು ಸರಿಯಲ್ಲ. ಸದಭಿರುಚಿಯ ಚಿತ್ರಗಳು ಮೂಡಿಬರಬೇಕು. ಒಳ್ಳೆಯ ಚಿತ್ರಗಳು ಹೇಗಿರುತ್ತವೆ ಎಂಬುದನ್ನು ಮಕ್ಕಳಿಗೆ ತೋರಿಸುವ ಪ್ರಯತ್ನ ಉತ್ತಮವಾಗಿದೆ~ ಎಂದು ಹೇಳಿದರು.<br /> <br /> ನಟಿ ಮೇಘನಾ ರಾಜ್, ನಿರ್ದೇಶಕ ತಿಪಟೂರು ರಘು, ಸಂಸ್ಥೆಯ ಅಧ್ಯಕ್ಷ ಎನ್.ಆರ್. ನಂಜುಂಡೇಗೌಡ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>