<p><br /> ಬೆಂಗಳೂರು: ರಾಜಧಾನಿಯ ವ್ಯಾಪ್ತಿಯಲ್ಲಿ 60 ಕಿ.ಮೀ. ಉದ್ದದಲ್ಲಿ ಮಾನೊ ರೈಲು, ಲಘು ರೈಲು ಸಂಪರ್ಕ ಕಲ್ಪಿಸುವ ಪ್ರಸ್ತಾವ ರಾಜ್ಯ ಸರ್ಕಾರದ ಮುಂದಿದೆ ಎಂದು ಮೂಲಸೌಕರ್ಯ ಅಭಿವೃದ್ಧಿ ಸಚಿವ ಜಿ.ಜನಾರ್ದನ ರೆಡ್ಡಿ ತಿಳಿಸಿದ್ದಾರೆ.<br /> <br /> ವಿಧಾನ ಪರಿಷತ್ನ ಕಾಂಗ್ರೆಸ್ ಸದಸ್ಯ ಆರ್.ವಿ.ವೆಂಕಟೇಶ್ ಅವರ ಪ್ರಶ್ನೆಗೆ ಗುರುವಾರ ಲಿಖಿತ ಉತ್ತರ ನೀಡಿರುವ ಸಚಿವರು, ‘ನಾಲ್ಕು ಕಾರಿಡಾರ್ಗಳಲ್ಲಿ ಮಾನೊ ರೈಲು, ಲಘು ರೈಲು ಸಂಪರ್ಕ ಕಲ್ಪಿಸುವ ಪ್ರಸ್ತಾವವಿದೆ. ಕತ್ತರಿಗುಪ್ಪೆ ರಸ್ತೆ-ವರ್ತುಲ ರಸ್ತೆ ಜಂಕ್ಷನ್-ನ್ಯಾಷನಲ್ ಕಾಲೇಜು (5 ಕಿ.ಮೀ), ಹೊಸೂರು ರಸ್ತೆ-ಬನ್ನೇರುಘಟ್ಟ ರಸ್ತೆ ಜಂಕ್ಷನ್ (15) ಕಿ.ಮೀ ಕಾರಿಡಾರ್ಗಳನ್ನು ‘ನಮ್ಮ ಮೆಟ್ರೊ’ ಎರಡನೇ ಹಂತದಲ್ಲೇ ಕೈಗೆತ್ತಿಕೊಳ್ಳಲಾಗುವುದು’ ಎಂದು ತಿಳಿಸಿದ್ದಾರೆ.<br /> <br /> ಬೆಂಗಳೂರು ಮಹಾನಗರ ಪ್ರದೇಶಾಭಿವೃದ್ಧಿ ಪ್ರಾಧಿಕಾರವು (ಬಿಎಂಆರ್ಡಿಎ) 2010ರ ಡಿಸೆಂಬರ್ನಲ್ಲಿ ನಡೆಸಿರುವ ಸಂಚಾರ ಮತ್ತು ಸಾಗಣೆ ಅಧ್ಯಯನ (ಸಿಟಿಟಿಎಸ್) ವರದಿಯಲ್ಲಿ ಒಂಬತ್ತು ಕಾರಿಡಾರ್ಗಳನ್ನು ಶಿಫಾರಸು ಮಾಡಲಾಗಿದೆ. ಈ ವರದಿಗೆ ಅನುಮೋದನೆ ದೊರೆತ ಬಳಿಕ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><br /> ಬೆಂಗಳೂರು: ರಾಜಧಾನಿಯ ವ್ಯಾಪ್ತಿಯಲ್ಲಿ 60 ಕಿ.ಮೀ. ಉದ್ದದಲ್ಲಿ ಮಾನೊ ರೈಲು, ಲಘು ರೈಲು ಸಂಪರ್ಕ ಕಲ್ಪಿಸುವ ಪ್ರಸ್ತಾವ ರಾಜ್ಯ ಸರ್ಕಾರದ ಮುಂದಿದೆ ಎಂದು ಮೂಲಸೌಕರ್ಯ ಅಭಿವೃದ್ಧಿ ಸಚಿವ ಜಿ.ಜನಾರ್ದನ ರೆಡ್ಡಿ ತಿಳಿಸಿದ್ದಾರೆ.<br /> <br /> ವಿಧಾನ ಪರಿಷತ್ನ ಕಾಂಗ್ರೆಸ್ ಸದಸ್ಯ ಆರ್.ವಿ.ವೆಂಕಟೇಶ್ ಅವರ ಪ್ರಶ್ನೆಗೆ ಗುರುವಾರ ಲಿಖಿತ ಉತ್ತರ ನೀಡಿರುವ ಸಚಿವರು, ‘ನಾಲ್ಕು ಕಾರಿಡಾರ್ಗಳಲ್ಲಿ ಮಾನೊ ರೈಲು, ಲಘು ರೈಲು ಸಂಪರ್ಕ ಕಲ್ಪಿಸುವ ಪ್ರಸ್ತಾವವಿದೆ. ಕತ್ತರಿಗುಪ್ಪೆ ರಸ್ತೆ-ವರ್ತುಲ ರಸ್ತೆ ಜಂಕ್ಷನ್-ನ್ಯಾಷನಲ್ ಕಾಲೇಜು (5 ಕಿ.ಮೀ), ಹೊಸೂರು ರಸ್ತೆ-ಬನ್ನೇರುಘಟ್ಟ ರಸ್ತೆ ಜಂಕ್ಷನ್ (15) ಕಿ.ಮೀ ಕಾರಿಡಾರ್ಗಳನ್ನು ‘ನಮ್ಮ ಮೆಟ್ರೊ’ ಎರಡನೇ ಹಂತದಲ್ಲೇ ಕೈಗೆತ್ತಿಕೊಳ್ಳಲಾಗುವುದು’ ಎಂದು ತಿಳಿಸಿದ್ದಾರೆ.<br /> <br /> ಬೆಂಗಳೂರು ಮಹಾನಗರ ಪ್ರದೇಶಾಭಿವೃದ್ಧಿ ಪ್ರಾಧಿಕಾರವು (ಬಿಎಂಆರ್ಡಿಎ) 2010ರ ಡಿಸೆಂಬರ್ನಲ್ಲಿ ನಡೆಸಿರುವ ಸಂಚಾರ ಮತ್ತು ಸಾಗಣೆ ಅಧ್ಯಯನ (ಸಿಟಿಟಿಎಸ್) ವರದಿಯಲ್ಲಿ ಒಂಬತ್ತು ಕಾರಿಡಾರ್ಗಳನ್ನು ಶಿಫಾರಸು ಮಾಡಲಾಗಿದೆ. ಈ ವರದಿಗೆ ಅನುಮೋದನೆ ದೊರೆತ ಬಳಿಕ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>