<p>ಮಾನ್ವಿ: ಇಲ್ಲಿನ ಕಾಕತೀಯ ಶಾಲೆಯಲ್ಲಿ ಡಿ.19ರಿಂದ 23ರವರೆಗೆ ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಆಶ್ರಯದಲ್ಲಿ ರಾಜ್ಯಮಟ್ಟದ ಕಬ್ ಮತ್ತು ಬುಲ್ಬುಲ್ ಉತ್ಸವ ಹಮ್ಮಿಕೊಳ್ಳಲಾಗಿದೆ ಎಂದು ಉತ್ಸವ ಸಮಿತಿ ಅಧ್ಯಕ್ಷ ಮಾಜಿ ಶಾಸಕ ಎನ್.ಎಸ್. ಭೋಸರಾಜು ತಿಳಿಸಿದರು.<br /> <br /> ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 14 ವರ್ಷಗಳ ನಂತರ ಸಾರ್ವಜನಿಕ ಶಿಕ್ಷಣ ಇಲಾಖೆ, ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಹಾಗೂ ರಾಯಚೂರು ಜಿಲ್ಲಾ ಘಟಕಗಳ ಆಶ್ರಯದಲ್ಲಿ ಉತ್ಸವ ಆಯೋಜಿಸಲಾಗುತ್ತಿದೆ. ವಿವಿಧ ಜಿಲ್ಲೆಗಳ ಸಾವಿರ ವಿದ್ಯಾರ್ಥಿಗಳು ಹಾಗೂ 200ಜನ ಸಿಬ್ಬಂದಿ ಭಾಗವಹಿಸಲಿದ್ದಾರೆ ಎಂದರು.<br /> <br /> ವಸ್ತುಪ್ರದರ್ಶನ, ಮಕ್ಕಳ ಸಾಹಸ ಚಟುವಟಿಕೆ, ದೇಶಭಕ್ತಿ, ಶಿಸ್ತು ಮೂಡಿಸುವ ಹಾಗೂ ಪ್ರತಿಭಾ ಪ್ರದರ್ಶನದ ಹಲವು ಕಾರ್ಯಕ್ರಮಗಳು ಜರುಗಲಿವೆ. ಉತ್ಸವಕ್ಕೆ ಬರುವವರಿಗೆ ಊಟ ಮತ್ತು ವಸತಿ ಸೌಲಭ್ಯ ಕಲ್ಪಿಸಲಾಗುವುದು ಎಂದರು.<br /> <br /> <strong>ಜಿಲ್ಲೆ ಹಾಗೂ ತಾಲ್ಲೂಕಿನ ಶಿಕ್ಷಣ</strong><br /> ಪ್ರೇಮಿಗಳು, ದಾನಿಗಳು, ಉದ್ಯಮಿಗಳು ನೆರವು ನೀಡಿದ್ದಾರೆ. ಇದರಿಂದ ಉತ್ಸವದ ಸಿದ್ಧತೆ ಮಾಡಲಾಗಿದೆ ಎಂದು ಹೇಳಿದರು.<br /> ಶಾಸಕ ಜಿ.ಹಂಪಯ್ಯ ನಾಯಕ, ಜಿ.ಪಂ ಸ್ಥಾಯಿ ಸಮಿತಿ ಅಧ್ಯಕ್ಷ ಹನುಮೇಶ ಮದ್ಲಾಪುರ, ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಮುಖ್ಯ ಆಯುಕ್ತ ಕೆ.ತಿಮ್ಮಯ್ಯ, ಪುರಸಭೆ ಅಧ್ಯಕ್ಷ ಸೈಯದ್ ನಜೀರುದ್ದೀನ್ ಖಾದ್ರಿ, ಮುಖಂಡರಾದ ಎಂ.ಈರಣ್ಣ, ಜಿ.ನಾಗರಾಜ, ಅಯ್ಯನಗೌಡ ಜಂಬಲದಿನ್ನಿ, ರೌಡೂರು ಮಹಾಂತೇಶ ಸ್ವಾಮಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮಾನ್ವಿ: ಇಲ್ಲಿನ ಕಾಕತೀಯ ಶಾಲೆಯಲ್ಲಿ ಡಿ.19ರಿಂದ 23ರವರೆಗೆ ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಆಶ್ರಯದಲ್ಲಿ ರಾಜ್ಯಮಟ್ಟದ ಕಬ್ ಮತ್ತು ಬುಲ್ಬುಲ್ ಉತ್ಸವ ಹಮ್ಮಿಕೊಳ್ಳಲಾಗಿದೆ ಎಂದು ಉತ್ಸವ ಸಮಿತಿ ಅಧ್ಯಕ್ಷ ಮಾಜಿ ಶಾಸಕ ಎನ್.ಎಸ್. ಭೋಸರಾಜು ತಿಳಿಸಿದರು.<br /> <br /> ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 14 ವರ್ಷಗಳ ನಂತರ ಸಾರ್ವಜನಿಕ ಶಿಕ್ಷಣ ಇಲಾಖೆ, ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಹಾಗೂ ರಾಯಚೂರು ಜಿಲ್ಲಾ ಘಟಕಗಳ ಆಶ್ರಯದಲ್ಲಿ ಉತ್ಸವ ಆಯೋಜಿಸಲಾಗುತ್ತಿದೆ. ವಿವಿಧ ಜಿಲ್ಲೆಗಳ ಸಾವಿರ ವಿದ್ಯಾರ್ಥಿಗಳು ಹಾಗೂ 200ಜನ ಸಿಬ್ಬಂದಿ ಭಾಗವಹಿಸಲಿದ್ದಾರೆ ಎಂದರು.<br /> <br /> ವಸ್ತುಪ್ರದರ್ಶನ, ಮಕ್ಕಳ ಸಾಹಸ ಚಟುವಟಿಕೆ, ದೇಶಭಕ್ತಿ, ಶಿಸ್ತು ಮೂಡಿಸುವ ಹಾಗೂ ಪ್ರತಿಭಾ ಪ್ರದರ್ಶನದ ಹಲವು ಕಾರ್ಯಕ್ರಮಗಳು ಜರುಗಲಿವೆ. ಉತ್ಸವಕ್ಕೆ ಬರುವವರಿಗೆ ಊಟ ಮತ್ತು ವಸತಿ ಸೌಲಭ್ಯ ಕಲ್ಪಿಸಲಾಗುವುದು ಎಂದರು.<br /> <br /> <strong>ಜಿಲ್ಲೆ ಹಾಗೂ ತಾಲ್ಲೂಕಿನ ಶಿಕ್ಷಣ</strong><br /> ಪ್ರೇಮಿಗಳು, ದಾನಿಗಳು, ಉದ್ಯಮಿಗಳು ನೆರವು ನೀಡಿದ್ದಾರೆ. ಇದರಿಂದ ಉತ್ಸವದ ಸಿದ್ಧತೆ ಮಾಡಲಾಗಿದೆ ಎಂದು ಹೇಳಿದರು.<br /> ಶಾಸಕ ಜಿ.ಹಂಪಯ್ಯ ನಾಯಕ, ಜಿ.ಪಂ ಸ್ಥಾಯಿ ಸಮಿತಿ ಅಧ್ಯಕ್ಷ ಹನುಮೇಶ ಮದ್ಲಾಪುರ, ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಮುಖ್ಯ ಆಯುಕ್ತ ಕೆ.ತಿಮ್ಮಯ್ಯ, ಪುರಸಭೆ ಅಧ್ಯಕ್ಷ ಸೈಯದ್ ನಜೀರುದ್ದೀನ್ ಖಾದ್ರಿ, ಮುಖಂಡರಾದ ಎಂ.ಈರಣ್ಣ, ಜಿ.ನಾಗರಾಜ, ಅಯ್ಯನಗೌಡ ಜಂಬಲದಿನ್ನಿ, ರೌಡೂರು ಮಹಾಂತೇಶ ಸ್ವಾಮಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>