<p><strong>ಹಿರಿಯೂರು: </strong>ತಾಲ್ಲೂಕಿನ ಯರದಕಟ್ಟೆ ಗ್ರಾಮದಲ್ಲಿ ಚಲವಾದಿ ಜನಾಂಗದವರು ನೂತನವಾಗಿ ನಿರ್ಮಿಸುತ್ತಿರುವ ಕಣಿವೆ ಮಾರಮ್ಮ ದೇವಸ್ಥಾನದ ಕಾಮಗಾರಿ ಪೂರ್ಣಗೊಳಿಸಲು ಆರ್ಥಿಕ ನೆರವು ನೀಡಲಾಗುವುದು ಎಂದು ಮಂಗಳವಾರ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ದೇವಸ್ಥಾನದ ಉದ್ಘಾಟನಾ ಸಮಾರಂಭದಲ್ಲಿ ಶಾಸಕ ಡಿ. ಸುಧಾಕರ್ ಭರವಸೆ ನೀಡಿದರು.<br /> <br /> ದೇಗುಲದ ಗೋಪುರ ನಿರ್ಮಾಣ ಬಾಕಿ ಇದ್ದು, ಅದಕ್ಕೆ ರೂ 25 ಸಾವಿರ ನೀಡುತ್ತೇನೆ. ಗ್ರಾಮದ ಪರಿಶಿಷ್ಟ ಕಾಲೊನಿಯಲ್ಲಿ ಭಕ್ತರು ನಿರ್ಮಿಸುತ್ತಿರುವ ದೇಗುಲಕ್ಕೂ ರೂ 1 ಲಕ್ಷ ವಂತಿಗೆ ನೀಡುತ್ತೇನೆ. ಗ್ರಾಮಕ್ಕೆ ಮೂಲಸೌಲಭ್ಯ ಕಲ್ಪಿಸಲು ಸಮಗ್ರ ಯೋಜನೆ ತಯಾರಿಸಿ ಕಾರ್ಯರೂಪಕ್ಕೆ ತರಲಾಗುವುದು ಎಂದು ಅವರು ಹೇಳಿದರು.<br /> <br /> ರೂ 3.5 ಲಕ್ಷ ವೆಚ್ಚದ ಮಹಿಳಾ ಭವನ ಕಾಮಗಾರಿ ಮುಕ್ತಾಯ ಹಂತದಲ್ಲಿದೆ ಎಂದು ತಿಳಿಸಿದರು.<br /> ದ್ಯಾಮಣ್ಣ, ಬಿ.ಆರ್. ಚಿನ್ನರಾಜು, ಕೆ. ನಾಗರತ್ನಮ್ಮ, ಆರ್. ಮಂಜು ನಾಥ್, ಕೆಂಚಮ್ಮ, ಹನುಮಕ್ಕ, ವೈ.ಆರ್. ಸಣ್ಣ ಜಲಜಯ್ಯ, ವೈ.ಆರ್. ಮೋಹನ್ಬಾಬು, ಎಚ್.ಆರ್. ತಿಮ್ಮಯ್ಯ, ಕಂದಿಕೆರೆ ಸುರೇಶ್ಬಾಬು, ರಾಘವೇಂದ್ರರೆಡ್ಡಿ, ಈರಲಿಂಗೇಗೌಡ, ಎಂ.ಟಿ. ಸುರೇಶ್, ಕಾಂತರಾಜ್ ಮತ್ತಿತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಿರಿಯೂರು: </strong>ತಾಲ್ಲೂಕಿನ ಯರದಕಟ್ಟೆ ಗ್ರಾಮದಲ್ಲಿ ಚಲವಾದಿ ಜನಾಂಗದವರು ನೂತನವಾಗಿ ನಿರ್ಮಿಸುತ್ತಿರುವ ಕಣಿವೆ ಮಾರಮ್ಮ ದೇವಸ್ಥಾನದ ಕಾಮಗಾರಿ ಪೂರ್ಣಗೊಳಿಸಲು ಆರ್ಥಿಕ ನೆರವು ನೀಡಲಾಗುವುದು ಎಂದು ಮಂಗಳವಾರ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ದೇವಸ್ಥಾನದ ಉದ್ಘಾಟನಾ ಸಮಾರಂಭದಲ್ಲಿ ಶಾಸಕ ಡಿ. ಸುಧಾಕರ್ ಭರವಸೆ ನೀಡಿದರು.<br /> <br /> ದೇಗುಲದ ಗೋಪುರ ನಿರ್ಮಾಣ ಬಾಕಿ ಇದ್ದು, ಅದಕ್ಕೆ ರೂ 25 ಸಾವಿರ ನೀಡುತ್ತೇನೆ. ಗ್ರಾಮದ ಪರಿಶಿಷ್ಟ ಕಾಲೊನಿಯಲ್ಲಿ ಭಕ್ತರು ನಿರ್ಮಿಸುತ್ತಿರುವ ದೇಗುಲಕ್ಕೂ ರೂ 1 ಲಕ್ಷ ವಂತಿಗೆ ನೀಡುತ್ತೇನೆ. ಗ್ರಾಮಕ್ಕೆ ಮೂಲಸೌಲಭ್ಯ ಕಲ್ಪಿಸಲು ಸಮಗ್ರ ಯೋಜನೆ ತಯಾರಿಸಿ ಕಾರ್ಯರೂಪಕ್ಕೆ ತರಲಾಗುವುದು ಎಂದು ಅವರು ಹೇಳಿದರು.<br /> <br /> ರೂ 3.5 ಲಕ್ಷ ವೆಚ್ಚದ ಮಹಿಳಾ ಭವನ ಕಾಮಗಾರಿ ಮುಕ್ತಾಯ ಹಂತದಲ್ಲಿದೆ ಎಂದು ತಿಳಿಸಿದರು.<br /> ದ್ಯಾಮಣ್ಣ, ಬಿ.ಆರ್. ಚಿನ್ನರಾಜು, ಕೆ. ನಾಗರತ್ನಮ್ಮ, ಆರ್. ಮಂಜು ನಾಥ್, ಕೆಂಚಮ್ಮ, ಹನುಮಕ್ಕ, ವೈ.ಆರ್. ಸಣ್ಣ ಜಲಜಯ್ಯ, ವೈ.ಆರ್. ಮೋಹನ್ಬಾಬು, ಎಚ್.ಆರ್. ತಿಮ್ಮಯ್ಯ, ಕಂದಿಕೆರೆ ಸುರೇಶ್ಬಾಬು, ರಾಘವೇಂದ್ರರೆಡ್ಡಿ, ಈರಲಿಂಗೇಗೌಡ, ಎಂ.ಟಿ. ಸುರೇಶ್, ಕಾಂತರಾಜ್ ಮತ್ತಿತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>