<p>ಚಿಕ್ಕಬಳ್ಳಾಪುರ: ಪರಿಸರ ಮಾಲಿನ್ಯ ತಡೆಯುವ ನಿಟ್ಟಿನಲ್ಲಿ ಶೀಘ್ರವೇ ಕಾನೂನು ರಚಿಸುವ ಕುರಿತು ಚಿಂತನೆ ನಡೆಸಲಾಗುತ್ತಿದ್ದು, ಸರ್ಕಾರ ಕೆಲವೇ ದಿನಗಳಲ್ಲಿ ಕ್ರಮ ಕೈಗೊಳ್ಳಲಿದೆ. ಪರಿಸರ ರಕ್ಷಣೆಗಾಗಿ ಕಠಿಣ ಕ್ರಮ ಕೈಗೊಳ್ಳಬೇಕಾದ ಅಗತ್ಯವಿದೆ~ ಎಂದು ಲೋಕೋಪಯೋಗಿ ಸಚಿವ ಸಿ.ಎಂ.ಉದಾಸಿ ತಿಳಿಸಿದರು.<br /> <br /> ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಶುಕ್ರವಾರ ನಡೆದ `ಕೆರೆಗಳ ಸಂರಕ್ಷಣೆ ಮತ್ತು ಅಭಿವೃದ್ಧಿ~ ಕುರಿತ ವಿಚಾರ ಸಂಕಿರಣಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, `ಈಗಾಗಲೇ ಅಮೂಲ್ಯ ನೈಸರ್ಗಿಕ ಸಂಪತ್ತು ನಶಿಸಿದ್ದು, ಪ್ರಾಣಿ, ಪಕ್ಷಿ ಮತ್ತು ಜಲಚರಗಳಿಗೆ ತೊಂದರೆಯಾಗಿದೆ. ಕಾನೂನು ರಚಿಸಿದ್ದಲ್ಲಿ ಪರಿಸರ ಮಾಲಿನ್ಯವನ್ನು ನಿಯಂತ್ರಿಸಬಹುದು~ ಎಂದರು.<br /> <br /> `ದುರಾಸೆ ಮತ್ತು ಅಕ್ರಮ ಚಟುವಟಿಕೆಗಳಿಂದ ಪರಿಸರಕ್ಕೆ ಹಾನಿ ಮಾಡಿದಷ್ಟು, ಮುಂದಿನ ದಿನಗಳಲ್ಲಿ ಗಂಭೀರ ಸವಾಲುಗಳನ್ನು ಎದುರಿಸಬೇಕಾಗುತ್ತದೆ. ನೈಸರ್ಗಿಕ ಸಂಪನ್ಮೂಲಗಳು ನಶಿಸಿ ಹೋಗಿ ಭಾರಿ ಸಮಸ್ಯೆ-ಸಂಕಷ್ಟಗಳನ್ನು ಎದುರಿಸಬೇಕಾಗುತ್ತದೆ~ ಎಂದು ಅವರು ತಿಳಿಸಿದರು.<br /> <br /> `ಯೋಜನೆರಹಿತ ಅಭಿವೃದ್ಧಿ, ಅರಣ್ಯ ನಾಶ ಮುಂತಾದ ಕಾರಣಗಳಿಂದ ಪರಿಸರ ಅಸಮತೋಲನ ಉಂಟಾ ಗುತ್ತಿದೆ. ಮರಳು ಗಣಿಗಾರಿಕೆ ವ್ಯಾಪಕ ವಾಗಿ ನಡೆಯುತ್ತಿದ್ದು, ಕೆರೆಗಳು ಬತ್ತು ತ್ತಿವೆ. ಅಂತರ್ಜಲ ಕುಸಿಯುತ್ತಿದ್ದು, ನೀರಿನ ಪ್ರಮಾಣ ಕಡಿಮೆಯಾಗುತ್ತಿದೆ. ಈ ಎಲ್ಲ ಕಾರಣಗಳಿಂದ ಪರಿಸರವು ಇನ್ನಷ್ಟು ಹದಗೆಡಲಿದೆ~ ಎಂದು ಅವರು ತಿಳಿಸಿದರು.<br /> <br /> `ವಿಶ್ವದ ಸುತ್ತಮುತ್ತಲ ಶೇ 70ರಷ್ಟು ನೀರು ಆವರಿಸಿದ್ದು, 0.07ರಷ್ಟು ನೀರು ಮಾತ್ರ ಕುಡಿಯಲು ಯೋಗ್ಯವಿದೆ. ಕಡಿಮೆ ಪ್ರಮಾಣದಲ್ಲಿ ರುವ ಶುದ್ಧ ನೀರನ್ನು ಉಳಿಸಿ ಕೊಳ್ಳ ದಿದ್ದರೆ, ಶುದ್ಧ ನೀರು ಸಿಗುವ ಸಾಧ್ಯತೆ ಕಡಿಮೆಯಾಗುತ್ತಿದೆ. ಈ ಎಲ್ಲದರ ಹಿನ್ನೆಲೆಯಲ್ಲಿ ಪ್ರತಿಯೊಬ್ಬರು ಪರಿಸರದ ಬಗ್ಗೆ ಜಾಗೃತಿ ಮೂಡಿಸಿ ಕೊಳ್ಳಬೇಕು~ ಎಂದು ತಿಳಿಸಿದರು.<br /> <br /> `ಅಂತರ್ಜಲದ ಪ್ರಮಾಣ ಕುಸಿಯುತ್ತಿದ್ದು, ಒಂದರಿಂದ ಎರಡು ಸಾವಿರ ಅಡಿಯಷ್ಟು ಕೊಳವೆಬಾವಿ ಕೊರೆದರೂ ನೀರು ಸಿಗುತ್ತಿಲ್ಲ. ಒಂದು ವೇಳೆ ನೀರು ಸಿಕ್ಕರೂ ವಿಷಕಾರಿ ಫ್ಲೋರೈಡ್ ಅಂಶಗಳಿಂದ ಕೂಡಿರು ತ್ತದೆ. ಆದ ನೀರನ್ನು ಸೇವಿಸಿ ಮಕ್ಕಳು ಸೇರಿದಂತೆ ಹಿರಿಯರು ಅನಾರೋಗ್ಯಕ್ಕೀಡಾಗಿದ್ದಾರೆ~ ಎಂದು ಅವರು ತಿಳಿಸಿದರು.<br /> <br /> ಶಾಸಕ ಕೆ.ಪಿ.ಬಚ್ಚೇಗೌಡ ಮಾತನಾಡಿ, `ಪರಿಸರ ರಕ್ಷಣೆಗೆ ಸಂಬಂಧಿಸಿದಂತೆ ಜನರು ಬೇಗನೇ ಎಚ್ಚೆತ್ತುಕೊಳ್ಳದಿದ್ದರೆ, ಪರಿಸ್ಥಿತಿಯು ಕೈಮೀರಿ ಹೋಗುತ್ತದೆ. ವಿದ್ಯಾರ್ಥಿಗಳು, ಯುವಕರು ಮತ್ತು ಹಿರಿಯರು ಎಲ್ಲರೂ ಜೊತೆಗೂಡಿ ಕೆಲಸ ಮಾಡಿದ್ದಲ್ಲಿ, ಪರಿಸರಕ್ಕೆ ಆಗುತ್ತಿರುವ ಹಾನಿಯನ್ನು ತಡೆಗಟ್ಟಬಹುದು~ ಎಂದರು.<br /> <br /> ಭಾರತೀಯ ವಿಜ್ಞಾನ ಸಂಸ್ಥೆಯ ವಿಜ್ಞಾನಿ ಡಾ. ಟಿ.ವಿ.ರಾಮಚಂದ್ರ ಮಾತನಾಡಿ, `ಹತ್ತು ವರ್ಷಗಳ ಹಿಂದೆ ಚಿಕ್ಕಬಳ್ಳಾಪುರಕ್ಕೆ ಭೇಟಿ ನೀಡಿದಾಗ, ಪ್ರದೇಶವು ಕೆಲವೇ ವರ್ಷಗಳಲ್ಲಿ ರಾಜಸ್ತಾನದ ಮರುಭೂಮಿ ಸ್ವರೂಪ ಪಡೆಯಲಿದೆ. ನೀರು ಸಿಗಲಾರದಂತಹ ಪರಿಸ್ಥಿತಿ ನಿರ್ಮಾಣವಾಗಲಿದೆ ಎಂದು ಹೇಳಲಾಗುತಿತ್ತು. ಕಾಡು ಪ್ರದೇಶ ನಶಿಸುತ್ತಿರುವುದು, ಬೆಟ್ಟಗುಡ್ಡಗಳ ಬರಡಾಗುತ್ತಿರುವುದು ಕಂಡರೆ, ಈ ಪ್ರದೇಶಕ್ಕೆ ಖಂಡಿತವಾಗಿಯು ಗಂಭೀರ ಸಮಸ್ಯೆ ತಲೆದೋರಲಿದೆ~ ಎಂದರು.<br /> <br /> ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯ ಸಂಪನ್ಮೂಲ ವ್ಯಕ್ತಿ ರಮೇಶ್ಕುಮಾರ್, ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲ ಪ್ರೊ. ಬಿ.ವಿ.ಕೃಷ್ಣಪ್ಪ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚಿಕ್ಕಬಳ್ಳಾಪುರ: ಪರಿಸರ ಮಾಲಿನ್ಯ ತಡೆಯುವ ನಿಟ್ಟಿನಲ್ಲಿ ಶೀಘ್ರವೇ ಕಾನೂನು ರಚಿಸುವ ಕುರಿತು ಚಿಂತನೆ ನಡೆಸಲಾಗುತ್ತಿದ್ದು, ಸರ್ಕಾರ ಕೆಲವೇ ದಿನಗಳಲ್ಲಿ ಕ್ರಮ ಕೈಗೊಳ್ಳಲಿದೆ. ಪರಿಸರ ರಕ್ಷಣೆಗಾಗಿ ಕಠಿಣ ಕ್ರಮ ಕೈಗೊಳ್ಳಬೇಕಾದ ಅಗತ್ಯವಿದೆ~ ಎಂದು ಲೋಕೋಪಯೋಗಿ ಸಚಿವ ಸಿ.ಎಂ.ಉದಾಸಿ ತಿಳಿಸಿದರು.<br /> <br /> ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಶುಕ್ರವಾರ ನಡೆದ `ಕೆರೆಗಳ ಸಂರಕ್ಷಣೆ ಮತ್ತು ಅಭಿವೃದ್ಧಿ~ ಕುರಿತ ವಿಚಾರ ಸಂಕಿರಣಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, `ಈಗಾಗಲೇ ಅಮೂಲ್ಯ ನೈಸರ್ಗಿಕ ಸಂಪತ್ತು ನಶಿಸಿದ್ದು, ಪ್ರಾಣಿ, ಪಕ್ಷಿ ಮತ್ತು ಜಲಚರಗಳಿಗೆ ತೊಂದರೆಯಾಗಿದೆ. ಕಾನೂನು ರಚಿಸಿದ್ದಲ್ಲಿ ಪರಿಸರ ಮಾಲಿನ್ಯವನ್ನು ನಿಯಂತ್ರಿಸಬಹುದು~ ಎಂದರು.<br /> <br /> `ದುರಾಸೆ ಮತ್ತು ಅಕ್ರಮ ಚಟುವಟಿಕೆಗಳಿಂದ ಪರಿಸರಕ್ಕೆ ಹಾನಿ ಮಾಡಿದಷ್ಟು, ಮುಂದಿನ ದಿನಗಳಲ್ಲಿ ಗಂಭೀರ ಸವಾಲುಗಳನ್ನು ಎದುರಿಸಬೇಕಾಗುತ್ತದೆ. ನೈಸರ್ಗಿಕ ಸಂಪನ್ಮೂಲಗಳು ನಶಿಸಿ ಹೋಗಿ ಭಾರಿ ಸಮಸ್ಯೆ-ಸಂಕಷ್ಟಗಳನ್ನು ಎದುರಿಸಬೇಕಾಗುತ್ತದೆ~ ಎಂದು ಅವರು ತಿಳಿಸಿದರು.<br /> <br /> `ಯೋಜನೆರಹಿತ ಅಭಿವೃದ್ಧಿ, ಅರಣ್ಯ ನಾಶ ಮುಂತಾದ ಕಾರಣಗಳಿಂದ ಪರಿಸರ ಅಸಮತೋಲನ ಉಂಟಾ ಗುತ್ತಿದೆ. ಮರಳು ಗಣಿಗಾರಿಕೆ ವ್ಯಾಪಕ ವಾಗಿ ನಡೆಯುತ್ತಿದ್ದು, ಕೆರೆಗಳು ಬತ್ತು ತ್ತಿವೆ. ಅಂತರ್ಜಲ ಕುಸಿಯುತ್ತಿದ್ದು, ನೀರಿನ ಪ್ರಮಾಣ ಕಡಿಮೆಯಾಗುತ್ತಿದೆ. ಈ ಎಲ್ಲ ಕಾರಣಗಳಿಂದ ಪರಿಸರವು ಇನ್ನಷ್ಟು ಹದಗೆಡಲಿದೆ~ ಎಂದು ಅವರು ತಿಳಿಸಿದರು.<br /> <br /> `ವಿಶ್ವದ ಸುತ್ತಮುತ್ತಲ ಶೇ 70ರಷ್ಟು ನೀರು ಆವರಿಸಿದ್ದು, 0.07ರಷ್ಟು ನೀರು ಮಾತ್ರ ಕುಡಿಯಲು ಯೋಗ್ಯವಿದೆ. ಕಡಿಮೆ ಪ್ರಮಾಣದಲ್ಲಿ ರುವ ಶುದ್ಧ ನೀರನ್ನು ಉಳಿಸಿ ಕೊಳ್ಳ ದಿದ್ದರೆ, ಶುದ್ಧ ನೀರು ಸಿಗುವ ಸಾಧ್ಯತೆ ಕಡಿಮೆಯಾಗುತ್ತಿದೆ. ಈ ಎಲ್ಲದರ ಹಿನ್ನೆಲೆಯಲ್ಲಿ ಪ್ರತಿಯೊಬ್ಬರು ಪರಿಸರದ ಬಗ್ಗೆ ಜಾಗೃತಿ ಮೂಡಿಸಿ ಕೊಳ್ಳಬೇಕು~ ಎಂದು ತಿಳಿಸಿದರು.<br /> <br /> `ಅಂತರ್ಜಲದ ಪ್ರಮಾಣ ಕುಸಿಯುತ್ತಿದ್ದು, ಒಂದರಿಂದ ಎರಡು ಸಾವಿರ ಅಡಿಯಷ್ಟು ಕೊಳವೆಬಾವಿ ಕೊರೆದರೂ ನೀರು ಸಿಗುತ್ತಿಲ್ಲ. ಒಂದು ವೇಳೆ ನೀರು ಸಿಕ್ಕರೂ ವಿಷಕಾರಿ ಫ್ಲೋರೈಡ್ ಅಂಶಗಳಿಂದ ಕೂಡಿರು ತ್ತದೆ. ಆದ ನೀರನ್ನು ಸೇವಿಸಿ ಮಕ್ಕಳು ಸೇರಿದಂತೆ ಹಿರಿಯರು ಅನಾರೋಗ್ಯಕ್ಕೀಡಾಗಿದ್ದಾರೆ~ ಎಂದು ಅವರು ತಿಳಿಸಿದರು.<br /> <br /> ಶಾಸಕ ಕೆ.ಪಿ.ಬಚ್ಚೇಗೌಡ ಮಾತನಾಡಿ, `ಪರಿಸರ ರಕ್ಷಣೆಗೆ ಸಂಬಂಧಿಸಿದಂತೆ ಜನರು ಬೇಗನೇ ಎಚ್ಚೆತ್ತುಕೊಳ್ಳದಿದ್ದರೆ, ಪರಿಸ್ಥಿತಿಯು ಕೈಮೀರಿ ಹೋಗುತ್ತದೆ. ವಿದ್ಯಾರ್ಥಿಗಳು, ಯುವಕರು ಮತ್ತು ಹಿರಿಯರು ಎಲ್ಲರೂ ಜೊತೆಗೂಡಿ ಕೆಲಸ ಮಾಡಿದ್ದಲ್ಲಿ, ಪರಿಸರಕ್ಕೆ ಆಗುತ್ತಿರುವ ಹಾನಿಯನ್ನು ತಡೆಗಟ್ಟಬಹುದು~ ಎಂದರು.<br /> <br /> ಭಾರತೀಯ ವಿಜ್ಞಾನ ಸಂಸ್ಥೆಯ ವಿಜ್ಞಾನಿ ಡಾ. ಟಿ.ವಿ.ರಾಮಚಂದ್ರ ಮಾತನಾಡಿ, `ಹತ್ತು ವರ್ಷಗಳ ಹಿಂದೆ ಚಿಕ್ಕಬಳ್ಳಾಪುರಕ್ಕೆ ಭೇಟಿ ನೀಡಿದಾಗ, ಪ್ರದೇಶವು ಕೆಲವೇ ವರ್ಷಗಳಲ್ಲಿ ರಾಜಸ್ತಾನದ ಮರುಭೂಮಿ ಸ್ವರೂಪ ಪಡೆಯಲಿದೆ. ನೀರು ಸಿಗಲಾರದಂತಹ ಪರಿಸ್ಥಿತಿ ನಿರ್ಮಾಣವಾಗಲಿದೆ ಎಂದು ಹೇಳಲಾಗುತಿತ್ತು. ಕಾಡು ಪ್ರದೇಶ ನಶಿಸುತ್ತಿರುವುದು, ಬೆಟ್ಟಗುಡ್ಡಗಳ ಬರಡಾಗುತ್ತಿರುವುದು ಕಂಡರೆ, ಈ ಪ್ರದೇಶಕ್ಕೆ ಖಂಡಿತವಾಗಿಯು ಗಂಭೀರ ಸಮಸ್ಯೆ ತಲೆದೋರಲಿದೆ~ ಎಂದರು.<br /> <br /> ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯ ಸಂಪನ್ಮೂಲ ವ್ಯಕ್ತಿ ರಮೇಶ್ಕುಮಾರ್, ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲ ಪ್ರೊ. ಬಿ.ವಿ.ಕೃಷ್ಣಪ್ಪ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>