<p>ಬೆಂಗಳೂರು: ಚಿನ್ನಾಭರಣ ಮಳಿಗೆಗೆ ನುಗ್ಗಿದ ದುಷ್ಕರ್ಮಿಗಳು ಮಳಿಗೆಯ ಮಾಲೀಕನ ಮೇಲೆ ಹಲ್ಲೆ ನಡೆಸಿ 12 ಲಕ್ಷ ರೂಪಾಯಿ ಹಣ ದರೋಡೆ ಮಾಡಿರುವ ಘಟನೆ ನಗರ್ತಪೇಟೆ ಸಮೀಪದ ಮಕ್ಕಳಪ್ಪ ಲೇಔಟ್ನಲ್ಲಿ ಸೋಮವಾರ ರಾತ್ರಿ ನಡೆದಿದೆ.<br /> <br /> ಮಕ್ಕಳಪ್ಪ ಲೇಔಟ್ನಲ್ಲಿರುವ `ಚಂದ್ರಸೇನ ಸಿಲ್ವರ್ ರಿಫೈನರ್~ ಮಳಿಗೆಯ ಮಾಲೀಕ ಪ್ರಕಾಶ್ ಗಾಡಗಿ ಅವರು ಈ ಸಂಬಂಧ ದೂರು ನೀಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.<br /> <br /> ಕಿಲಾರಿ ರಸ್ತೆ ನಿವಾಸಿಯಾದ ಪ್ರಕಾಶ್, ಚಿನ್ನಾಭರಣ ವ್ಯಾಪಾರಿಗಳು ಮತ್ತು ಗ್ರಾಹಕರಿಂದ ಆಭರಣಗಳನ್ನು ಪಡೆದುಕೊಂಡು ಅವುಗಳನ್ನು ಕರಗಿಸಿ ಚಿನ್ನದ ಗಟ್ಟಿ ಮಾಡಿಕೊಡುವ ವಹಿವಾಟು ಮಾಡುತ್ತಾರೆ. <br /> <br /> ಅವರು ಬಾಬಾ ಮಾರುಕಟ್ಟೆಯ ಚಿನ್ನಾಭರಣ ಮಳಿಗೆಯೊಂದರಿಂದ ಏಳು ಲಕ್ಷ ರೂಪಾಯಿ ಹಣ ಪಡೆದುಕೊಂಡು ರಾತ್ರಿ 8.30ರ ಸುಮಾರಿಗೆ ಅಂಗಡಿಗೆ ಬಂದರು. ಆ ಹಣ ಮತ್ತು ದಿನದ ವಹಿವಾಟಿನ ಐದು ಲಕ್ಷ ರೂಪಾಯಿ ಹಣವನ್ನು ಅವರು ಎಣಿಕೆ ಮಾಡುತ್ತಾ ಅಂಗಡಿಯಲ್ಲಿ ಕುಳಿತಿದ್ದರು. <br /> <br /> ಅದೇ ವೇಳೆಗೆ ಏಕಾಏಕಿ ಅಂಗಡಿಯೊಳಗೆ ನುಗ್ಗಿದ ಇಬ್ಬರು ದುಷ್ಕರ್ಮಿಗಳು, ಅವರ ಕಣ್ಣಿಗೆ ದ್ರಾವಣವೊಂದನ್ನು ಸಿಂಪಡಿಸಿ ಮತ್ತು ಎಡಗೈಗೆ ಚಾಕುವಿನಿಂದ ಇರಿದು ಹಲ್ಲೆ ನಡೆಸಿ ಹಣ ಕಿತ್ತುಕೊಂಡು ಪರಾರಿಯಾಗಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.<br /> <br /> ಈ ಘಟನೆ ನಡೆದ ಸಂದರ್ಭದಲ್ಲಿ ಅಂಗಡಿಯ ನೌಕರರೆಲ್ಲ ಮನೆಗೆ ಹೋಗಿದ್ದರು. ದುಷ್ಕರ್ಮಿಗಳು ಹೆಲ್ಮೆಟ್ ಧರಿಸಿದ್ದರಿಂದ ಅವರ ಗುರುತು ಸಿಕ್ಕಿಲ್ಲ ಎಂದು ಪ್ರಕಾಶ್ ವಿಚಾರಣೆ ವೇಳೆ ಹೇಳಿಕೆ ಕೊಟ್ಟಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.<br /> <br /> `ಪ್ರಕಾಶ್ ಅವರ ಅಂಗಡಿಯಲ್ಲಿ ಸಿ.ಸಿ ಟಿವಿ ಕ್ಯಾಮೆರಾ ಅಳವಡಿಸಿರಲಿಲ್ಲ. ಇದರಿಂದಾಗಿ ದುಷ್ಕರ್ಮಿಗಳ ಬಗ್ಗೆ ಯಾವುದೇ ಸುಳಿವು ಸಿಕ್ಕಿಲ್ಲ. ಪ್ರಕರಣದ ತನಿಖೆಗೆ ಎರಡು ವಿಶೇಷ ತಂಡಗಳನ್ನು ರಚಿಸಲಾಗಿದೆ~ ಎಂದು ಕೇಂದ್ರ ವಿಭಾಗದ ಡಿಸಿಪಿ ಬಿ.ಆರ್.ರವಿಕಾಂತೇಗೌಡ `ಪ್ರಜಾವಾಣಿ~ಗೆ ತಿಳಿಸಿದರು. ಹಲಸೂರುಗೇಟ್ ಪೊಲೀಸ್ ಠಾಣೆಯಲ್ಲಿ ದರೋಡೆ ಪ್ರಕರಣ ದಾಖಲಾಗಿದೆ.<br /> <br /> <br /> <strong>ಸಿಲಿಂಡರ್ ಸ್ಫೋಟ: ಗಾಯಾಳು ಮಗು ಸಾವು</strong> <br /> ರಾಜಗೋಪಾಲ ನಗರ ಸಮೀಪದ ಹೆಗ್ಗನಹಳ್ಳಿಯ ಮನೆಯೊಂದರಲ್ಲಿ ಏ.20 ರಂದು ಸಿಲಿಂಡರ್ ಸ್ಫೋಟದಿಂದ ಗಾಯಗೊಂಡಿದ್ದ ಮೂರು ವರ್ಷದ ಮಗು ಯಶಸ್ವಿನಿ ಸೋಮವಾರ ರಾತ್ರಿ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮೃತಪಟ್ಟಿದೆ.<br /> <br /> ಘಟನೆ ನಡೆದ ಮರುದಿನವೇ ಒಂದು ವರ್ಷದ ಮಗು ನಿಖಿಲ್ ಸಾವನ್ನಪ್ಪಿತ್ತು. ಮೃತ ಮಕ್ಕಳ ತಂದೆ ಗಂಗಾಧರ್, ತಾಯಿ ಉಷಾ ಹಾಗೂ ಸಂಬಂಧಿಕರಾದ ಗಿರೀಶ್ ಮತ್ತು ಲಿಂಗಪ್ಪ ಅವರು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. <br /> <br /> ಉಷಾ ಅವರ ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.ನಿಖಿಲ್ನ ಒಂದು ವರ್ಷದ ಹುಟ್ಟು ಹಬ್ಬದ ಆಚರಣೆಯ ವೇಳೆ ಈ ದುರಂತ ಸಂಭವಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ಚಿನ್ನಾಭರಣ ಮಳಿಗೆಗೆ ನುಗ್ಗಿದ ದುಷ್ಕರ್ಮಿಗಳು ಮಳಿಗೆಯ ಮಾಲೀಕನ ಮೇಲೆ ಹಲ್ಲೆ ನಡೆಸಿ 12 ಲಕ್ಷ ರೂಪಾಯಿ ಹಣ ದರೋಡೆ ಮಾಡಿರುವ ಘಟನೆ ನಗರ್ತಪೇಟೆ ಸಮೀಪದ ಮಕ್ಕಳಪ್ಪ ಲೇಔಟ್ನಲ್ಲಿ ಸೋಮವಾರ ರಾತ್ರಿ ನಡೆದಿದೆ.<br /> <br /> ಮಕ್ಕಳಪ್ಪ ಲೇಔಟ್ನಲ್ಲಿರುವ `ಚಂದ್ರಸೇನ ಸಿಲ್ವರ್ ರಿಫೈನರ್~ ಮಳಿಗೆಯ ಮಾಲೀಕ ಪ್ರಕಾಶ್ ಗಾಡಗಿ ಅವರು ಈ ಸಂಬಂಧ ದೂರು ನೀಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.<br /> <br /> ಕಿಲಾರಿ ರಸ್ತೆ ನಿವಾಸಿಯಾದ ಪ್ರಕಾಶ್, ಚಿನ್ನಾಭರಣ ವ್ಯಾಪಾರಿಗಳು ಮತ್ತು ಗ್ರಾಹಕರಿಂದ ಆಭರಣಗಳನ್ನು ಪಡೆದುಕೊಂಡು ಅವುಗಳನ್ನು ಕರಗಿಸಿ ಚಿನ್ನದ ಗಟ್ಟಿ ಮಾಡಿಕೊಡುವ ವಹಿವಾಟು ಮಾಡುತ್ತಾರೆ. <br /> <br /> ಅವರು ಬಾಬಾ ಮಾರುಕಟ್ಟೆಯ ಚಿನ್ನಾಭರಣ ಮಳಿಗೆಯೊಂದರಿಂದ ಏಳು ಲಕ್ಷ ರೂಪಾಯಿ ಹಣ ಪಡೆದುಕೊಂಡು ರಾತ್ರಿ 8.30ರ ಸುಮಾರಿಗೆ ಅಂಗಡಿಗೆ ಬಂದರು. ಆ ಹಣ ಮತ್ತು ದಿನದ ವಹಿವಾಟಿನ ಐದು ಲಕ್ಷ ರೂಪಾಯಿ ಹಣವನ್ನು ಅವರು ಎಣಿಕೆ ಮಾಡುತ್ತಾ ಅಂಗಡಿಯಲ್ಲಿ ಕುಳಿತಿದ್ದರು. <br /> <br /> ಅದೇ ವೇಳೆಗೆ ಏಕಾಏಕಿ ಅಂಗಡಿಯೊಳಗೆ ನುಗ್ಗಿದ ಇಬ್ಬರು ದುಷ್ಕರ್ಮಿಗಳು, ಅವರ ಕಣ್ಣಿಗೆ ದ್ರಾವಣವೊಂದನ್ನು ಸಿಂಪಡಿಸಿ ಮತ್ತು ಎಡಗೈಗೆ ಚಾಕುವಿನಿಂದ ಇರಿದು ಹಲ್ಲೆ ನಡೆಸಿ ಹಣ ಕಿತ್ತುಕೊಂಡು ಪರಾರಿಯಾಗಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.<br /> <br /> ಈ ಘಟನೆ ನಡೆದ ಸಂದರ್ಭದಲ್ಲಿ ಅಂಗಡಿಯ ನೌಕರರೆಲ್ಲ ಮನೆಗೆ ಹೋಗಿದ್ದರು. ದುಷ್ಕರ್ಮಿಗಳು ಹೆಲ್ಮೆಟ್ ಧರಿಸಿದ್ದರಿಂದ ಅವರ ಗುರುತು ಸಿಕ್ಕಿಲ್ಲ ಎಂದು ಪ್ರಕಾಶ್ ವಿಚಾರಣೆ ವೇಳೆ ಹೇಳಿಕೆ ಕೊಟ್ಟಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.<br /> <br /> `ಪ್ರಕಾಶ್ ಅವರ ಅಂಗಡಿಯಲ್ಲಿ ಸಿ.ಸಿ ಟಿವಿ ಕ್ಯಾಮೆರಾ ಅಳವಡಿಸಿರಲಿಲ್ಲ. ಇದರಿಂದಾಗಿ ದುಷ್ಕರ್ಮಿಗಳ ಬಗ್ಗೆ ಯಾವುದೇ ಸುಳಿವು ಸಿಕ್ಕಿಲ್ಲ. ಪ್ರಕರಣದ ತನಿಖೆಗೆ ಎರಡು ವಿಶೇಷ ತಂಡಗಳನ್ನು ರಚಿಸಲಾಗಿದೆ~ ಎಂದು ಕೇಂದ್ರ ವಿಭಾಗದ ಡಿಸಿಪಿ ಬಿ.ಆರ್.ರವಿಕಾಂತೇಗೌಡ `ಪ್ರಜಾವಾಣಿ~ಗೆ ತಿಳಿಸಿದರು. ಹಲಸೂರುಗೇಟ್ ಪೊಲೀಸ್ ಠಾಣೆಯಲ್ಲಿ ದರೋಡೆ ಪ್ರಕರಣ ದಾಖಲಾಗಿದೆ.<br /> <br /> <br /> <strong>ಸಿಲಿಂಡರ್ ಸ್ಫೋಟ: ಗಾಯಾಳು ಮಗು ಸಾವು</strong> <br /> ರಾಜಗೋಪಾಲ ನಗರ ಸಮೀಪದ ಹೆಗ್ಗನಹಳ್ಳಿಯ ಮನೆಯೊಂದರಲ್ಲಿ ಏ.20 ರಂದು ಸಿಲಿಂಡರ್ ಸ್ಫೋಟದಿಂದ ಗಾಯಗೊಂಡಿದ್ದ ಮೂರು ವರ್ಷದ ಮಗು ಯಶಸ್ವಿನಿ ಸೋಮವಾರ ರಾತ್ರಿ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮೃತಪಟ್ಟಿದೆ.<br /> <br /> ಘಟನೆ ನಡೆದ ಮರುದಿನವೇ ಒಂದು ವರ್ಷದ ಮಗು ನಿಖಿಲ್ ಸಾವನ್ನಪ್ಪಿತ್ತು. ಮೃತ ಮಕ್ಕಳ ತಂದೆ ಗಂಗಾಧರ್, ತಾಯಿ ಉಷಾ ಹಾಗೂ ಸಂಬಂಧಿಕರಾದ ಗಿರೀಶ್ ಮತ್ತು ಲಿಂಗಪ್ಪ ಅವರು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. <br /> <br /> ಉಷಾ ಅವರ ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.ನಿಖಿಲ್ನ ಒಂದು ವರ್ಷದ ಹುಟ್ಟು ಹಬ್ಬದ ಆಚರಣೆಯ ವೇಳೆ ಈ ದುರಂತ ಸಂಭವಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>