<p><strong>ರಾಯಗಡ (ಐಎಎನ್ಎಸ್, ಪಿಟಿಐ):</strong> ಬಿಜೆಡಿ ಶಾಸಕ ಜಿನಾ ಹಿಕಾಕ ಹಾಗೂ ಇಟಲಿ ಪ್ರವಾಸಿ ಮಾರ್ಗದರ್ಶಿ ಬಾಸ್ಕೊ ಪಾಲೊ ಅವರ ಬಿಡುಗಡೆಗೆ ಮಾವೊವಾದಿಗಳು ವಿಧಿಸಿದ್ದ ಗಡುವು ಮಂಗಳವಾರ ಸಂಜೆ ಕೊನೆಗೊಂಡಿದ್ದು ಪರಿಸ್ಥಿತಿ ಅನಿಶ್ಚಿತತೆಯಿಂದ ಕೂಡಿದೆ. ಈ ಇಬ್ಬರನ್ನು ಮಾವೊವಾದಿಗಳು ತಮ್ಮ ವಶದಲ್ಲಿರಿಸಿಕೊಂಡಿದ್ದಾರೆ.<br /> <br /> ಸಾಕ್ಷ್ಯಾಧಾರಗಳ ಕೊರತೆಯಿಂದಾಗಿ ಮಾವೊವಾದಿಗಳ ನಾಯಕ ಸವ್ಯಸಾಚಿ ಪಾಂಡಾ ಅವರ ಪತ್ನಿ ಶುಭಶ್ರೀ ದಾಸ್ ಅವರನ್ನು ಇಲ್ಲಿನ ತ್ವರಿತ ನ್ಯಾಯಾಲಯ ಮಂಗಳವಾರ ಬಿಡುಗಡೆ ಮಾಡಿದೆ. ಒತ್ತೆಯಾಳುಗಳ ಬಿಡುಗಡೆಗೆ ಪ್ರತಿಯಾಗಿ ಶುಭಶ್ರೀ ಮತ್ತಿತರರನ್ನು ಬಿಡುಗಡೆಮಾಡಬೇಕು ಎಂಬ ಷರತ್ತನ್ನು ಮಾವೊವಾದಿಗಳು ಹಾಕಿದ್ದನ್ನು ಇಲ್ಲಿ ಸ್ಮರಿಸಬಹುದು. <br /> <br /> ಒಡಿಶಾದ ರಾಯಗಡ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ 2010ರಲ್ಲಿ ಮಾವೊವಾದಿಗಳು ಹಾಗೂ ಭದ್ರತಾ ಪಡೆಗಳ ನಡುವೆ ನಡೆದ ಗುಂಡಿನ ಚಕಮಕಿಯ ಸಂದರ್ಭದಲ್ಲಿ ಶುಭಶ್ರೀ ಅವರನ್ನು ಬಂಧಿಸಲಾಗಿತ್ತು. ಒತ್ತೆಯಾಳುಗಳ ಬಿಡುಗಡೆಗೆ ರಾಜ್ಯ ಸರ್ಕಾರ ಮನವಿ ಮಾಡಿಕೊಂಡಿದ್ದರೂ ಮಾವೊವಾದಿಗಳಿಂದ ಈ ಕುರಿತು ಸಕಾರಾತ್ಮಕ ಪ್ರತಿಕ್ರಿಯೆ ಬಂದಿಲ್ಲ. <br /> <br /> 50ಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿಯ ಹತ್ಯೆ ಪ್ರಕರಣದ ಆರೋಪಿಯಾಗಿರುವ ಮಾವೊವಾದಿ ನಾಯಕ ಚೆಂದಾ ಭೂಷಣಂ ಅವರನ್ನು ಬಿಡುಗಡೆ ಮಾಡುವುದಲ್ಲದೆ, ಆದಿವಾಸಿಗಳ ಪ್ರದೇಶದಲ್ಲಿ ಪ್ರವಾಸೋದ್ಯಮ ಚಟುವಟಿಕೆ ನಿಷೇಧಿಸಬೇಕೆಂದುದು ಸೇರಿದಂತೆ ಒಟ್ಟು 13 ಬೇಡಿಕೆಗಳನ್ನು ಅವರು ಮುಂದಿಟ್ಟಿದ್ದಾರೆ. <br /> <br /> <strong>ಶಂಕರಾಚಾರ್ಯ ಕಳವಳ:</strong> ಈ ನಡುವೆ, ಮಾವೊವಾದಿಗಳ ಅಟ್ಟಹಾಸದ ಕುರಿತು ಹೇಳಿಕೆ ನೀಡಿರುವ ಪುರಿ ಶಂಕರಾಚಾರ್ಯ ಸ್ವಾಮಿ ನಿಶ್ಚಲಾನಂದ ಸರಸ್ವತಿ, ಈ ಸಂಬಂಧ ಸರ್ಕಾರ ಯಾವುದೇ ಕ್ರಮ ಕೈಗೊಳ್ಳುವ ಮೊದಲು ಸಾಕಷ್ಟು ಎಚ್ಚರಿಕೆ ವಹಿಸಬೇಕು ಎಂದಿದ್ದಾರೆ.<br /> <br /> `ಮಾವೊವಾದಿಗಳ ಚಟುವಟಿಕೆ ತೀವ್ರಗೊಳ್ಳಲು ಇವತ್ತಿನ ನಮ್ಮ ಉದ್ಯೋಗ ಆಧಾರಿತ ಶಿಕ್ಷಣ ಪದ್ಧತಿಯೇ ಕಾರಣ, ಸಾಂಸ್ಕೃತಿಕ ಪರಂಪರೆ ಎತ್ತಿ ಹಿಡಿಯುವ ಶಿಕ್ಷಣ ನಮ್ಮದಾಗಬೇಕು~ ಎಂದಿದ್ದಾರೆ.<br /> <br /> <strong>ಭುವನೇಶ್ವರ ವರದಿ:</strong> ಒತ್ತೆಯಾಳುಗಳ ಬಿಡುಗಡೆ ಸಂಬಂಧ ಮಾವೊವಾದಿಗಳು ಮುಂದಿಟ್ಟಿರುವ ಬೇಡಿಕೆಗಳನ್ನು ಈಡೇರಿಸುವ ಕುರಿತು ರಾಜ್ಯ ಸರ್ಕಾರ ಉತ್ಸುಕವಾಗಿಲ್ಲ. ಅವರ ಬೇಡಿಕೆ ಈಡೇರಿಸುವುದಾದಲ್ಲಿ ನಕ್ಸಲ್ (ಮಾವೊವಾದಿ) ವಿರೋಧಿ ಕಾರ್ಯಾಚರಣೆಯಿಂದ ಹಿಂದೆ ಸರಿಯುವುದಾಗಿ ಪೊಲೀಸ್ ಸಂಘಟನೆ ಬೆದರಿಕೆ ಹಾಕಿರುವುದರಿಂದ ಸರ್ಕಾರ ಈ ಕುರಿತು ನಿರ್ಧಾರ ಕೈಗೊಳ್ಳದಂತಾಗಿದೆ. <br /> <br /> `ಅಪಹೃತ ಶಾಸಕರನ್ನು ಬಿಡುಗಡೆ ಮಾಡಿದರೆ ನಿಮ್ಮ 23 ಕೈದಿಗಳ ಬಿಡುಗಡೆಗೆ ಕ್ರಮ ಕೈಗೊಳ್ಳಲಾಗುವುದು~ ಎಂಬ ಸಂದೇಶವನ್ನು ರಾಜ್ಯ ಗೃಹ ಕಾರ್ಯದರ್ಶಿ ಯು.ಎನ್. ಬೆಹ್ರಾ ಮಾವೊಗಳಿಗೆ ರವಾನಿಸಿರುವುದು ಪೊಲೀಸರ ಅಸಮಾಧಾನಕ್ಕೆ ಕಾರಣವಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಗಡ (ಐಎಎನ್ಎಸ್, ಪಿಟಿಐ):</strong> ಬಿಜೆಡಿ ಶಾಸಕ ಜಿನಾ ಹಿಕಾಕ ಹಾಗೂ ಇಟಲಿ ಪ್ರವಾಸಿ ಮಾರ್ಗದರ್ಶಿ ಬಾಸ್ಕೊ ಪಾಲೊ ಅವರ ಬಿಡುಗಡೆಗೆ ಮಾವೊವಾದಿಗಳು ವಿಧಿಸಿದ್ದ ಗಡುವು ಮಂಗಳವಾರ ಸಂಜೆ ಕೊನೆಗೊಂಡಿದ್ದು ಪರಿಸ್ಥಿತಿ ಅನಿಶ್ಚಿತತೆಯಿಂದ ಕೂಡಿದೆ. ಈ ಇಬ್ಬರನ್ನು ಮಾವೊವಾದಿಗಳು ತಮ್ಮ ವಶದಲ್ಲಿರಿಸಿಕೊಂಡಿದ್ದಾರೆ.<br /> <br /> ಸಾಕ್ಷ್ಯಾಧಾರಗಳ ಕೊರತೆಯಿಂದಾಗಿ ಮಾವೊವಾದಿಗಳ ನಾಯಕ ಸವ್ಯಸಾಚಿ ಪಾಂಡಾ ಅವರ ಪತ್ನಿ ಶುಭಶ್ರೀ ದಾಸ್ ಅವರನ್ನು ಇಲ್ಲಿನ ತ್ವರಿತ ನ್ಯಾಯಾಲಯ ಮಂಗಳವಾರ ಬಿಡುಗಡೆ ಮಾಡಿದೆ. ಒತ್ತೆಯಾಳುಗಳ ಬಿಡುಗಡೆಗೆ ಪ್ರತಿಯಾಗಿ ಶುಭಶ್ರೀ ಮತ್ತಿತರರನ್ನು ಬಿಡುಗಡೆಮಾಡಬೇಕು ಎಂಬ ಷರತ್ತನ್ನು ಮಾವೊವಾದಿಗಳು ಹಾಕಿದ್ದನ್ನು ಇಲ್ಲಿ ಸ್ಮರಿಸಬಹುದು. <br /> <br /> ಒಡಿಶಾದ ರಾಯಗಡ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ 2010ರಲ್ಲಿ ಮಾವೊವಾದಿಗಳು ಹಾಗೂ ಭದ್ರತಾ ಪಡೆಗಳ ನಡುವೆ ನಡೆದ ಗುಂಡಿನ ಚಕಮಕಿಯ ಸಂದರ್ಭದಲ್ಲಿ ಶುಭಶ್ರೀ ಅವರನ್ನು ಬಂಧಿಸಲಾಗಿತ್ತು. ಒತ್ತೆಯಾಳುಗಳ ಬಿಡುಗಡೆಗೆ ರಾಜ್ಯ ಸರ್ಕಾರ ಮನವಿ ಮಾಡಿಕೊಂಡಿದ್ದರೂ ಮಾವೊವಾದಿಗಳಿಂದ ಈ ಕುರಿತು ಸಕಾರಾತ್ಮಕ ಪ್ರತಿಕ್ರಿಯೆ ಬಂದಿಲ್ಲ. <br /> <br /> 50ಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿಯ ಹತ್ಯೆ ಪ್ರಕರಣದ ಆರೋಪಿಯಾಗಿರುವ ಮಾವೊವಾದಿ ನಾಯಕ ಚೆಂದಾ ಭೂಷಣಂ ಅವರನ್ನು ಬಿಡುಗಡೆ ಮಾಡುವುದಲ್ಲದೆ, ಆದಿವಾಸಿಗಳ ಪ್ರದೇಶದಲ್ಲಿ ಪ್ರವಾಸೋದ್ಯಮ ಚಟುವಟಿಕೆ ನಿಷೇಧಿಸಬೇಕೆಂದುದು ಸೇರಿದಂತೆ ಒಟ್ಟು 13 ಬೇಡಿಕೆಗಳನ್ನು ಅವರು ಮುಂದಿಟ್ಟಿದ್ದಾರೆ. <br /> <br /> <strong>ಶಂಕರಾಚಾರ್ಯ ಕಳವಳ:</strong> ಈ ನಡುವೆ, ಮಾವೊವಾದಿಗಳ ಅಟ್ಟಹಾಸದ ಕುರಿತು ಹೇಳಿಕೆ ನೀಡಿರುವ ಪುರಿ ಶಂಕರಾಚಾರ್ಯ ಸ್ವಾಮಿ ನಿಶ್ಚಲಾನಂದ ಸರಸ್ವತಿ, ಈ ಸಂಬಂಧ ಸರ್ಕಾರ ಯಾವುದೇ ಕ್ರಮ ಕೈಗೊಳ್ಳುವ ಮೊದಲು ಸಾಕಷ್ಟು ಎಚ್ಚರಿಕೆ ವಹಿಸಬೇಕು ಎಂದಿದ್ದಾರೆ.<br /> <br /> `ಮಾವೊವಾದಿಗಳ ಚಟುವಟಿಕೆ ತೀವ್ರಗೊಳ್ಳಲು ಇವತ್ತಿನ ನಮ್ಮ ಉದ್ಯೋಗ ಆಧಾರಿತ ಶಿಕ್ಷಣ ಪದ್ಧತಿಯೇ ಕಾರಣ, ಸಾಂಸ್ಕೃತಿಕ ಪರಂಪರೆ ಎತ್ತಿ ಹಿಡಿಯುವ ಶಿಕ್ಷಣ ನಮ್ಮದಾಗಬೇಕು~ ಎಂದಿದ್ದಾರೆ.<br /> <br /> <strong>ಭುವನೇಶ್ವರ ವರದಿ:</strong> ಒತ್ತೆಯಾಳುಗಳ ಬಿಡುಗಡೆ ಸಂಬಂಧ ಮಾವೊವಾದಿಗಳು ಮುಂದಿಟ್ಟಿರುವ ಬೇಡಿಕೆಗಳನ್ನು ಈಡೇರಿಸುವ ಕುರಿತು ರಾಜ್ಯ ಸರ್ಕಾರ ಉತ್ಸುಕವಾಗಿಲ್ಲ. ಅವರ ಬೇಡಿಕೆ ಈಡೇರಿಸುವುದಾದಲ್ಲಿ ನಕ್ಸಲ್ (ಮಾವೊವಾದಿ) ವಿರೋಧಿ ಕಾರ್ಯಾಚರಣೆಯಿಂದ ಹಿಂದೆ ಸರಿಯುವುದಾಗಿ ಪೊಲೀಸ್ ಸಂಘಟನೆ ಬೆದರಿಕೆ ಹಾಕಿರುವುದರಿಂದ ಸರ್ಕಾರ ಈ ಕುರಿತು ನಿರ್ಧಾರ ಕೈಗೊಳ್ಳದಂತಾಗಿದೆ. <br /> <br /> `ಅಪಹೃತ ಶಾಸಕರನ್ನು ಬಿಡುಗಡೆ ಮಾಡಿದರೆ ನಿಮ್ಮ 23 ಕೈದಿಗಳ ಬಿಡುಗಡೆಗೆ ಕ್ರಮ ಕೈಗೊಳ್ಳಲಾಗುವುದು~ ಎಂಬ ಸಂದೇಶವನ್ನು ರಾಜ್ಯ ಗೃಹ ಕಾರ್ಯದರ್ಶಿ ಯು.ಎನ್. ಬೆಹ್ರಾ ಮಾವೊಗಳಿಗೆ ರವಾನಿಸಿರುವುದು ಪೊಲೀಸರ ಅಸಮಾಧಾನಕ್ಕೆ ಕಾರಣವಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>