<p>ಜಮಖಂಡಿ: ಅರ್ಹ ವಯೋವೃದ್ಧರಿಗೆ, ವಿಧವೆಯರಿಗೆ, ಅಂಗವಿಕಲರಿಗೆ ಮಾಸಾಶನ ಸಿಕ್ಕಿಲ್ಲ ಎಂಬ ದೂರು ಹಿಂದಿನ ಸರ್ಕಾರದ ಅವಧಿಯಲ್ಲಿ ಕೇಳಿ ಬಂದಿದ್ದವು. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ತಕ್ಷಣ ಇಡೀ ರಾಜ್ಯದಾದ್ಯಂತ ಗ್ರಾಮ ಮಟ್ಟದಲ್ಲಿ ಸಮೀಕ್ಷೆ ಕೈಗೊಂಡು ಮಾಸಾಶನ ಮಂಜೂರು ಮಾಡಲಾಗುತ್ತಿದೆ ಎಂದು ಸಚಿವೆ ಉಮಾಶ್ರೀ ಹೇಳಿದರು.<br /> <br /> ತಾಲ್ಲೂಕಿನ ಹಿಪ್ಪರಗಿ ಗ್ರಾಮದಲ್ಲಿ ಕಂದಾಯ ಇಲಾಖೆ ಶನಿವಾರ ಏರ್ಪಡಿಸಿದ್ದ ತೇರದಾಳ ಹೋಬಳಿ ಮಟ್ಟದ ಪಿಂಚಣಿ ಅದಾಲತ್ ಕಾರ್ಯಕ್ರಮ ಉದ್ಘಾಟಿಸಿ ಹಾಗೂ ಅರ್ಹ ಫಲಾನುಭವಿಗಳಿಗೆ ಮಸಾಶನ ಮಂಜೂರಾತಿ ಆದೇಶ ಪತ್ರ ಮತ್ತು ಪರಿಹಾರಧನ ಚೆಕ್ ವಿತರಿಸಿ ಅವರು ಮಾತನಾಡಿದರು.<br /> <br /> 2013ರ ಜುಲೈ ತಿಂಗಳಿನಿಂದ ಈ ವರೆಗೆ ತೇರದಾಳ ಹೋಬಳಿ ಮಟ್ಟದಲ್ಲಿ 2500 ಕ್ಕಿಂತ ಹೆಚ್ಚು ಅರ್ಹ ಫಲಾನುಭವಿಗಳನ್ನು ಸಮೀಕ್ಷೆ ಮೂಲಕ ಗುರುತಿಸಿ ಮಾಸಾಶನ ಮಂಜೂರಾತಿ ಪತ್ರ ವಿತರಿಸಿ ಜನರ ಸಂಕಷ್ಟಕ್ಕೆ ಸರ್ಕಾರ ನೆರವಾಗಿದೆ ಎಂದರು.<br /> <br /> ಬಡವರಿಗೋಸ್ಕರ ಅಧಿಕಾರಕ್ಕೆ ಬಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಬಡವರಿಗೆ ಮೊದಲ ಆದ್ಯತೆ ನೀಡುತ್ತಿದೆ. ಹಾಗಂತ ಶ್ರೀಮಂತರ ವಿರೋಧಿ ಅಲ್ಲ. ರೈತರ, ನೇಕಾರರ ಕೋಟ್ಯಂತರ ರೂಪಾಯಿ ಸಾಲಮನ್ನಾ ಮಾಡಲಾಗಿದೆ. ಪ್ರತಿ ಲೀಟರ್ ಹಾಲಿನ ಪ್ರೋತ್ಸಾಹಧನವನ್ನು ₨ 4ಕ್ಕೆ ಹೆಚ್ಚಿಸಲಾಗಿದೆ ಎಂದರು.<br /> <br /> ತಹಶೀಲ್ದಾರ್ ರವೀಂದ್ರ ಕರಲಿಂಗಣ್ಣವರ ಪ್ರಾಸ್ತಾವಿಕವಾಗಿ ಮಾತನಾಡಿದರು. ತಾಲ್ಲೂಕು ಪಂಚಾಯಿ್ತ ಸದಸ್ಯ ಸಂಗಣ್ಣ ಪೂಜಾರಿ, ಪಶುವೈದ್ಯ ಡಾ.ಆರ್.ಡಿ. ಕುಲಕರ್ಣಿ, ಗ್ರೇಡ್ – 2 ತಹಶೀಲ್ದಾರ್ ಢವಳಗಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಜಮಖಂಡಿ: ಅರ್ಹ ವಯೋವೃದ್ಧರಿಗೆ, ವಿಧವೆಯರಿಗೆ, ಅಂಗವಿಕಲರಿಗೆ ಮಾಸಾಶನ ಸಿಕ್ಕಿಲ್ಲ ಎಂಬ ದೂರು ಹಿಂದಿನ ಸರ್ಕಾರದ ಅವಧಿಯಲ್ಲಿ ಕೇಳಿ ಬಂದಿದ್ದವು. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ತಕ್ಷಣ ಇಡೀ ರಾಜ್ಯದಾದ್ಯಂತ ಗ್ರಾಮ ಮಟ್ಟದಲ್ಲಿ ಸಮೀಕ್ಷೆ ಕೈಗೊಂಡು ಮಾಸಾಶನ ಮಂಜೂರು ಮಾಡಲಾಗುತ್ತಿದೆ ಎಂದು ಸಚಿವೆ ಉಮಾಶ್ರೀ ಹೇಳಿದರು.<br /> <br /> ತಾಲ್ಲೂಕಿನ ಹಿಪ್ಪರಗಿ ಗ್ರಾಮದಲ್ಲಿ ಕಂದಾಯ ಇಲಾಖೆ ಶನಿವಾರ ಏರ್ಪಡಿಸಿದ್ದ ತೇರದಾಳ ಹೋಬಳಿ ಮಟ್ಟದ ಪಿಂಚಣಿ ಅದಾಲತ್ ಕಾರ್ಯಕ್ರಮ ಉದ್ಘಾಟಿಸಿ ಹಾಗೂ ಅರ್ಹ ಫಲಾನುಭವಿಗಳಿಗೆ ಮಸಾಶನ ಮಂಜೂರಾತಿ ಆದೇಶ ಪತ್ರ ಮತ್ತು ಪರಿಹಾರಧನ ಚೆಕ್ ವಿತರಿಸಿ ಅವರು ಮಾತನಾಡಿದರು.<br /> <br /> 2013ರ ಜುಲೈ ತಿಂಗಳಿನಿಂದ ಈ ವರೆಗೆ ತೇರದಾಳ ಹೋಬಳಿ ಮಟ್ಟದಲ್ಲಿ 2500 ಕ್ಕಿಂತ ಹೆಚ್ಚು ಅರ್ಹ ಫಲಾನುಭವಿಗಳನ್ನು ಸಮೀಕ್ಷೆ ಮೂಲಕ ಗುರುತಿಸಿ ಮಾಸಾಶನ ಮಂಜೂರಾತಿ ಪತ್ರ ವಿತರಿಸಿ ಜನರ ಸಂಕಷ್ಟಕ್ಕೆ ಸರ್ಕಾರ ನೆರವಾಗಿದೆ ಎಂದರು.<br /> <br /> ಬಡವರಿಗೋಸ್ಕರ ಅಧಿಕಾರಕ್ಕೆ ಬಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಬಡವರಿಗೆ ಮೊದಲ ಆದ್ಯತೆ ನೀಡುತ್ತಿದೆ. ಹಾಗಂತ ಶ್ರೀಮಂತರ ವಿರೋಧಿ ಅಲ್ಲ. ರೈತರ, ನೇಕಾರರ ಕೋಟ್ಯಂತರ ರೂಪಾಯಿ ಸಾಲಮನ್ನಾ ಮಾಡಲಾಗಿದೆ. ಪ್ರತಿ ಲೀಟರ್ ಹಾಲಿನ ಪ್ರೋತ್ಸಾಹಧನವನ್ನು ₨ 4ಕ್ಕೆ ಹೆಚ್ಚಿಸಲಾಗಿದೆ ಎಂದರು.<br /> <br /> ತಹಶೀಲ್ದಾರ್ ರವೀಂದ್ರ ಕರಲಿಂಗಣ್ಣವರ ಪ್ರಾಸ್ತಾವಿಕವಾಗಿ ಮಾತನಾಡಿದರು. ತಾಲ್ಲೂಕು ಪಂಚಾಯಿ್ತ ಸದಸ್ಯ ಸಂಗಣ್ಣ ಪೂಜಾರಿ, ಪಶುವೈದ್ಯ ಡಾ.ಆರ್.ಡಿ. ಕುಲಕರ್ಣಿ, ಗ್ರೇಡ್ – 2 ತಹಶೀಲ್ದಾರ್ ಢವಳಗಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>