<p>ನವದೆಹಲಿ: ಫೇಸ್ಬುಕ್ನಲ್ಲಿ ಹೇಳಿಕೆ ದಾಖಲಿಸಿದ್ದಕ್ಕಾಗಿ ಮಹಾರಾಷ್ಟ್ರದಲ್ಲಿ ಇಬ್ಬರು ಯುವತಿಯರನ್ನು ಬಂಧಿಸಿದ ಪ್ರಕರಣದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಮಾಹಿತಿ ತಂತ್ರಜ್ಞಾನ ಕಾಯ್ದೆಯ ದುರ್ಬಳಕೆ ತಡೆಯಲು ಹೊಸ ಮಾರ್ಗಸೂಚಿ ಜಾರಿಗೆ ತಂದಿದೆ.</p>.<p>ಯಾರೇ ಆಗಲಿ ಇಂಟರ್ನೆಟ್ನಲ್ಲಿ ಮುಜುಗರ ಅಥವಾ ಕಿರಿಕಿರಿ ಉಂಟು ಮಾಡುವ ಹೇಳಿಕೆ ದಾಖಲಿಸಿದ್ದಲ್ಲಿ ಅಂಥವರ ವಿರುದ್ಧ ಮಾಹಿತಿ ತಂತ್ರಜ್ಞಾನ ಕಾಯ್ದೆಯ `66 ಎ' ಕಲಂ ಅನ್ವಯ ಪ್ರಕರಣ ದಾಖಲಿಸುವುದಾದಲ್ಲಿ, ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಡಿಸಿಪಿ ಮಟ್ಟದ ಅಧಿಕಾರಿಗಳ ಅನುಮತಿ ಪಡೆಯಲೇಬೇಕು ಎಂದು ಸರ್ಕಾರ ಸ್ಪಷ್ಟವಾಗಿ ಹೇಳಿದೆ.</p>.<p>ಮೆಟ್ರೊಪಾಲಿಟನ್ ನಗರಗಳಲ್ಲಿ ಇಂತಹ ಪ್ರಕರಣ ದಾಖಲಿಸಬೇಕಾದಲ್ಲಿ ಐಜಿಪಿ ಮಟ್ಟದ ಅಧಿಕಾರಿಗಳು ಅನುಮತಿ ನೀಡಬೇಕಾಗುತ್ತದೆ. ವಿದ್ಯುನ್ಮಾನ ಸಂದೇಶಗಳ ಮೂಲಕ ದ್ವೇಷ ಬಿತ್ತುವಂತಹ ಕೃತ್ಯ ಕೈಗೊಂಡಲ್ಲಿ `66 ಎ' ಕಲಂ ಅನ್ವಯ ಪ್ರಕರಣ ದಾಖಲಿಸಬೇಕಾಗುತ್ತದೆ.</p>.<p>ಸುಪ್ರೀಂಕೋರ್ಟ್ ಕಳವಳ: ಫೇಸ್ಬುಕ್ನಲ್ಲಿ ಹೇಳಿಕೆಗಾಗಿ ಮಹಾರಾಷ್ಟ್ರದಲ್ಲಿ ಇಬ್ಬರು ಯುವತಿಯರನ್ನು ಬಂಧಿಸಿದ ಪ್ರಕರಣದ ಕುರಿತು ಸುಪ್ರೀಂಕೋರ್ಟ್ ತೀವ್ರ ಕಳವಳ ವ್ಯಕ್ತಪಡಿಸಿದೆ.</p>.<p>ಶ್ರೇಯಾ ಸಿಂಘಾಲ್ ಎಂಬ ದೆಹಲಿ ವಿದ್ಯಾರ್ಥಿನಿ ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಪೀಠ ಈ ಅಭಿಪ್ರಾಯ ವ್ಯಕ್ತಪಡಿಸಿದೆ. ಅರ್ಜಿಯ ಕುರಿತು ನಿರ್ಧಾರ ಕೈಗೊಳ್ಳಲು ನೆರವು ನೀಡುವಂತೆ ಅಟಾರ್ನಿ ಜನರಲ್ ಜಿ.ಇ. ವಹನ್ವತಿ ಅವರಿಗೆ ಪೀಠ ಸೂಚಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ನವದೆಹಲಿ: ಫೇಸ್ಬುಕ್ನಲ್ಲಿ ಹೇಳಿಕೆ ದಾಖಲಿಸಿದ್ದಕ್ಕಾಗಿ ಮಹಾರಾಷ್ಟ್ರದಲ್ಲಿ ಇಬ್ಬರು ಯುವತಿಯರನ್ನು ಬಂಧಿಸಿದ ಪ್ರಕರಣದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಮಾಹಿತಿ ತಂತ್ರಜ್ಞಾನ ಕಾಯ್ದೆಯ ದುರ್ಬಳಕೆ ತಡೆಯಲು ಹೊಸ ಮಾರ್ಗಸೂಚಿ ಜಾರಿಗೆ ತಂದಿದೆ.</p>.<p>ಯಾರೇ ಆಗಲಿ ಇಂಟರ್ನೆಟ್ನಲ್ಲಿ ಮುಜುಗರ ಅಥವಾ ಕಿರಿಕಿರಿ ಉಂಟು ಮಾಡುವ ಹೇಳಿಕೆ ದಾಖಲಿಸಿದ್ದಲ್ಲಿ ಅಂಥವರ ವಿರುದ್ಧ ಮಾಹಿತಿ ತಂತ್ರಜ್ಞಾನ ಕಾಯ್ದೆಯ `66 ಎ' ಕಲಂ ಅನ್ವಯ ಪ್ರಕರಣ ದಾಖಲಿಸುವುದಾದಲ್ಲಿ, ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಡಿಸಿಪಿ ಮಟ್ಟದ ಅಧಿಕಾರಿಗಳ ಅನುಮತಿ ಪಡೆಯಲೇಬೇಕು ಎಂದು ಸರ್ಕಾರ ಸ್ಪಷ್ಟವಾಗಿ ಹೇಳಿದೆ.</p>.<p>ಮೆಟ್ರೊಪಾಲಿಟನ್ ನಗರಗಳಲ್ಲಿ ಇಂತಹ ಪ್ರಕರಣ ದಾಖಲಿಸಬೇಕಾದಲ್ಲಿ ಐಜಿಪಿ ಮಟ್ಟದ ಅಧಿಕಾರಿಗಳು ಅನುಮತಿ ನೀಡಬೇಕಾಗುತ್ತದೆ. ವಿದ್ಯುನ್ಮಾನ ಸಂದೇಶಗಳ ಮೂಲಕ ದ್ವೇಷ ಬಿತ್ತುವಂತಹ ಕೃತ್ಯ ಕೈಗೊಂಡಲ್ಲಿ `66 ಎ' ಕಲಂ ಅನ್ವಯ ಪ್ರಕರಣ ದಾಖಲಿಸಬೇಕಾಗುತ್ತದೆ.</p>.<p>ಸುಪ್ರೀಂಕೋರ್ಟ್ ಕಳವಳ: ಫೇಸ್ಬುಕ್ನಲ್ಲಿ ಹೇಳಿಕೆಗಾಗಿ ಮಹಾರಾಷ್ಟ್ರದಲ್ಲಿ ಇಬ್ಬರು ಯುವತಿಯರನ್ನು ಬಂಧಿಸಿದ ಪ್ರಕರಣದ ಕುರಿತು ಸುಪ್ರೀಂಕೋರ್ಟ್ ತೀವ್ರ ಕಳವಳ ವ್ಯಕ್ತಪಡಿಸಿದೆ.</p>.<p>ಶ್ರೇಯಾ ಸಿಂಘಾಲ್ ಎಂಬ ದೆಹಲಿ ವಿದ್ಯಾರ್ಥಿನಿ ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಪೀಠ ಈ ಅಭಿಪ್ರಾಯ ವ್ಯಕ್ತಪಡಿಸಿದೆ. ಅರ್ಜಿಯ ಕುರಿತು ನಿರ್ಧಾರ ಕೈಗೊಳ್ಳಲು ನೆರವು ನೀಡುವಂತೆ ಅಟಾರ್ನಿ ಜನರಲ್ ಜಿ.ಇ. ವಹನ್ವತಿ ಅವರಿಗೆ ಪೀಠ ಸೂಚಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>