<p><strong>ಬೆಂಗಳೂರು:</strong> `ಮಾಹಿತಿ ಸಂಸ್ಕರಣಾ ವಿಚಾರದಲ್ಲಿ ಉತ್ತಮ ಸಂಶೋಧನಾ ಕಾರ್ಯ ನಡೆಯಬೇಕಿದ್ದು, ಈ ನಿಟ್ಟಿನಲ್ಲಿ ಇಂತಹ ಸಮ್ಮೇಳನಗಳು ಸಹಕಾರಿ~ ಎಂದು ವಿಶ್ವೇಶ್ವರಯ್ಯ ತಾಂತ್ರಿಕ ಎಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲ ಡಾ.ಕೆ.ಆರ್.ವೇಣುಗೋಪಾಲ್ ತಿಳಿಸಿದರು.<br /> <br /> ಮಾಹಿತಿ ಸಂಸ್ಕೃರಣಾ ಸಮಾಜವು ನಗರದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಮಾಹಿತಿ ಸಂಸ್ಕರಣಾ ಅಂತರರಾಷ್ಟ್ರೀಯ ಸಮಾವೇಶದಲ್ಲಿ ಅವರು ಮಾತನಾಡಿದರು.`ಮನುಷ್ಯ ಮತ್ತು ಯಂತ್ರಗಳ ನಡುವೆ ಅಂತರವನ್ನು ಕಡಿಮೆಗೊಳಿಸಲು ಕಾರ್ಯತತ್ಪರರಾಗುವ ಅಗತ್ಯವಿದೆ. ವಿದ್ಯಾರ್ಥಿಗಳಿಗೆ ಅಂತರರಾಷ್ಟ್ರೀಯ ಸಮಾವೇಶಗಳು ಕೈಗೆಟುಕುವಂತೆ ಮಾಡಬೇಕಿರುವುದು ಕೂಡ ವಿಶ್ವವಿದ್ಯಾಲಯದ ಆದ್ಯ ಕರ್ತವ್ಯ~ ಎಂದು ತಿಳಿಸಿದರು.<br /> <br /> ಎಐಸಿಟಿಇ ವಿಶ್ರಾಂತ ಅಧ್ಯಕ್ಷ ಪ್ರೊ.ಆರ್.ನಟರಾಜನ್, `ಈ ರೀತಿಯ ಸಮಾವೇಶಗಳಿಂದ ದೇಶದಲ್ಲಿ ಶೈಕ್ಷಣಿಕ ಸಂಶೋಧನಾ ಕ್ಷೇತ್ರ ಹೆಚ್ಚಿನ ಮಹತ್ವ ಪಡೆದುಕೊಳ್ಳಲಿದೆ. ಇದರೊಂದಿಗೆ ಸಂಶೋಧನಾ ಸಾಮರ್ಥ್ಯವನ್ನು ಹೆಚ್ಚಿಸಲಿದೆ~ ಎಂದು ಅಭಿಪ್ರಾಯಪಟ್ಟರು. <br /> <br /> ಭಾರತೀಯ ತಾಂತ್ರಿಕ ಶಿಕ್ಷಣ ಸಮಾಜದ ಅಧ್ಯಕ್ಷ ಎನ್.ಆರ್.ಶೆಟ್ಟಿ ಇತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> `ಮಾಹಿತಿ ಸಂಸ್ಕರಣಾ ವಿಚಾರದಲ್ಲಿ ಉತ್ತಮ ಸಂಶೋಧನಾ ಕಾರ್ಯ ನಡೆಯಬೇಕಿದ್ದು, ಈ ನಿಟ್ಟಿನಲ್ಲಿ ಇಂತಹ ಸಮ್ಮೇಳನಗಳು ಸಹಕಾರಿ~ ಎಂದು ವಿಶ್ವೇಶ್ವರಯ್ಯ ತಾಂತ್ರಿಕ ಎಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲ ಡಾ.ಕೆ.ಆರ್.ವೇಣುಗೋಪಾಲ್ ತಿಳಿಸಿದರು.<br /> <br /> ಮಾಹಿತಿ ಸಂಸ್ಕೃರಣಾ ಸಮಾಜವು ನಗರದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಮಾಹಿತಿ ಸಂಸ್ಕರಣಾ ಅಂತರರಾಷ್ಟ್ರೀಯ ಸಮಾವೇಶದಲ್ಲಿ ಅವರು ಮಾತನಾಡಿದರು.`ಮನುಷ್ಯ ಮತ್ತು ಯಂತ್ರಗಳ ನಡುವೆ ಅಂತರವನ್ನು ಕಡಿಮೆಗೊಳಿಸಲು ಕಾರ್ಯತತ್ಪರರಾಗುವ ಅಗತ್ಯವಿದೆ. ವಿದ್ಯಾರ್ಥಿಗಳಿಗೆ ಅಂತರರಾಷ್ಟ್ರೀಯ ಸಮಾವೇಶಗಳು ಕೈಗೆಟುಕುವಂತೆ ಮಾಡಬೇಕಿರುವುದು ಕೂಡ ವಿಶ್ವವಿದ್ಯಾಲಯದ ಆದ್ಯ ಕರ್ತವ್ಯ~ ಎಂದು ತಿಳಿಸಿದರು.<br /> <br /> ಎಐಸಿಟಿಇ ವಿಶ್ರಾಂತ ಅಧ್ಯಕ್ಷ ಪ್ರೊ.ಆರ್.ನಟರಾಜನ್, `ಈ ರೀತಿಯ ಸಮಾವೇಶಗಳಿಂದ ದೇಶದಲ್ಲಿ ಶೈಕ್ಷಣಿಕ ಸಂಶೋಧನಾ ಕ್ಷೇತ್ರ ಹೆಚ್ಚಿನ ಮಹತ್ವ ಪಡೆದುಕೊಳ್ಳಲಿದೆ. ಇದರೊಂದಿಗೆ ಸಂಶೋಧನಾ ಸಾಮರ್ಥ್ಯವನ್ನು ಹೆಚ್ಚಿಸಲಿದೆ~ ಎಂದು ಅಭಿಪ್ರಾಯಪಟ್ಟರು. <br /> <br /> ಭಾರತೀಯ ತಾಂತ್ರಿಕ ಶಿಕ್ಷಣ ಸಮಾಜದ ಅಧ್ಯಕ್ಷ ಎನ್.ಆರ್.ಶೆಟ್ಟಿ ಇತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>