<p>ಗದಗ: ನೀರು ಮನುಷ್ಯನಿಗೆ ಅತ್ಯಮೂ ಲ್ಯವಾಗಿದೆ. ನೀರನ್ನು ಮಿತವ್ಯಯವಾಗಿ ಬಳಕೆ ಮಾಡಬೇಕು ಎಂದು ಮಾಜಿ ಸಚಿವ ಎಚ್.ಕೆ. ಪಾಟೀಲ ಹೇಳಿದರು. <br /> <br /> ಸ್ಥಳೀಯ ಎಸ್.ಎಂ. ಕೃಷ್ಣ ಆಶ್ರಯ ಕಾಲೊನಿಯಲ್ಲಿ ಬುಧವಾರ ನೂತನ ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟಿಸಿ ಮಾತನಾಡಿದ ಅವರು, ಆಶ್ರಯ ಕಾಲೊನಿಯಲ್ಲಿರುವ ಬಡವರು ಹಾಗೂ ಎಲ್ಲ ಸಮಾಜ ಬಾಂಧವರು ಈ ಶುದ್ಧ ಕುಡಿಯುವ ನೀರು ಘಟಕದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಸಲಹೆ ನೀಡಿದರು. <br /> <br /> ಗದಗ ತಾಲ್ಲೂಕಿನ ಜನರಿಗೆ 3-4ಲಕ್ಷ ಲೀಟರ್ ಕುಡಿಯುವ ನೀರಿನ ಅಗತ್ಯವಿದೆ. ಅದರಲ್ಲಿ ಈಗಾಗಲೇ ಗದಗ ನಗರದಲ್ಲಿ ನಾಲ್ಕು ಕಡೆ, ಹುಲಕೋಟಿ, ಬಿಂಕದಕಟ್ಟಿ, ಅಸುಂಡಿ ಸೇರಿದಂತೆ ಇತರೆಡೆ ಕೆ.ಎಚ್. ಪಾಟೀಲ ಪ್ರತಿಷ್ಠಾನ ಹಾಗೂ ರೂರಲ್ ಮೆಡಿಕಲ್ ಸರ್ವಿಸ್ ಸೊಸೈಟಿ ವತಿಯಿಂದ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಆರಂಭಿಸಲಾಗಿದೆ.<br /> <br /> ಇದರಿಂದ 2.50ಲಕ್ಷ ಲೀಟರ್ ನೀರಿನ ಪೂರೈಕೆ ಮಾಡಲಾಗಿದೆ. ಬೆಳಧಡಿ, ಚಿಂಚಲಿ ಸೇರಿದಂತೆ ಇತರ ಕಡೆಗಳಲ್ಲಿ ಕುಡಿಯುವ ನೀರಿನ ಘಟಕಗಳನ್ನು ಸ್ಥಾಪನೆಗೆ ಕಾರ್ಯ ನಡೆದಿದೆ ಎಂದು ಹೇಳಿದರು. |<br /> <br /> ರಮ್ಜಾನ್ ಹಬ್ಬದ ಅಂಗವಾಗಿ ಮುಸ್ಲಿಂ ಬಾಂಧವರಿಗೆ ಶುಭ ಕೋರಿದ ಅವರು, ಹಬ್ಬದ ದಿನವೇ ಶುದ್ಧ ಕುಡಿಯುವ ನೀರಿನ ಉದ್ಘಾಟನೆ ಆಗಿರುವುದು ಸಂತಸ ತಂದಿದೆ ಎಂದರು. <br /> <br /> ಮಾಜಿ ಶಾಸಕ ಡಿ.ಆರ್. ಪಾಟೀಲ, ನಗರಸಭೆ ಅಧ್ಯಕ್ಷ ಶಿವಣ್ಣ ಮುಳಗುಂದ, ಅನಿಲ ಗರಗ, ಜ್ಯೋತಿ ಇರಾಳ, ಅಕ್ಕಿ, ಗುರಣ್ಣ ಬಳಗಾನೂರ, ಉಮರ್ಫರೂಕ್ ಹುಬ್ಬಳ್ಳಿ, ಅಕ್ಬರ್ಸಾಬ್ ಬಬರ್ಚಿ, ಎಂ.ಜಿ. ಶೇಖ್, ಅಶೋಕ ಮಂದಾಲಿ, ಜಮಾದಾರ್ ಮತ್ತಿತರರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಗದಗ: ನೀರು ಮನುಷ್ಯನಿಗೆ ಅತ್ಯಮೂ ಲ್ಯವಾಗಿದೆ. ನೀರನ್ನು ಮಿತವ್ಯಯವಾಗಿ ಬಳಕೆ ಮಾಡಬೇಕು ಎಂದು ಮಾಜಿ ಸಚಿವ ಎಚ್.ಕೆ. ಪಾಟೀಲ ಹೇಳಿದರು. <br /> <br /> ಸ್ಥಳೀಯ ಎಸ್.ಎಂ. ಕೃಷ್ಣ ಆಶ್ರಯ ಕಾಲೊನಿಯಲ್ಲಿ ಬುಧವಾರ ನೂತನ ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟಿಸಿ ಮಾತನಾಡಿದ ಅವರು, ಆಶ್ರಯ ಕಾಲೊನಿಯಲ್ಲಿರುವ ಬಡವರು ಹಾಗೂ ಎಲ್ಲ ಸಮಾಜ ಬಾಂಧವರು ಈ ಶುದ್ಧ ಕುಡಿಯುವ ನೀರು ಘಟಕದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಸಲಹೆ ನೀಡಿದರು. <br /> <br /> ಗದಗ ತಾಲ್ಲೂಕಿನ ಜನರಿಗೆ 3-4ಲಕ್ಷ ಲೀಟರ್ ಕುಡಿಯುವ ನೀರಿನ ಅಗತ್ಯವಿದೆ. ಅದರಲ್ಲಿ ಈಗಾಗಲೇ ಗದಗ ನಗರದಲ್ಲಿ ನಾಲ್ಕು ಕಡೆ, ಹುಲಕೋಟಿ, ಬಿಂಕದಕಟ್ಟಿ, ಅಸುಂಡಿ ಸೇರಿದಂತೆ ಇತರೆಡೆ ಕೆ.ಎಚ್. ಪಾಟೀಲ ಪ್ರತಿಷ್ಠಾನ ಹಾಗೂ ರೂರಲ್ ಮೆಡಿಕಲ್ ಸರ್ವಿಸ್ ಸೊಸೈಟಿ ವತಿಯಿಂದ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಆರಂಭಿಸಲಾಗಿದೆ.<br /> <br /> ಇದರಿಂದ 2.50ಲಕ್ಷ ಲೀಟರ್ ನೀರಿನ ಪೂರೈಕೆ ಮಾಡಲಾಗಿದೆ. ಬೆಳಧಡಿ, ಚಿಂಚಲಿ ಸೇರಿದಂತೆ ಇತರ ಕಡೆಗಳಲ್ಲಿ ಕುಡಿಯುವ ನೀರಿನ ಘಟಕಗಳನ್ನು ಸ್ಥಾಪನೆಗೆ ಕಾರ್ಯ ನಡೆದಿದೆ ಎಂದು ಹೇಳಿದರು. |<br /> <br /> ರಮ್ಜಾನ್ ಹಬ್ಬದ ಅಂಗವಾಗಿ ಮುಸ್ಲಿಂ ಬಾಂಧವರಿಗೆ ಶುಭ ಕೋರಿದ ಅವರು, ಹಬ್ಬದ ದಿನವೇ ಶುದ್ಧ ಕುಡಿಯುವ ನೀರಿನ ಉದ್ಘಾಟನೆ ಆಗಿರುವುದು ಸಂತಸ ತಂದಿದೆ ಎಂದರು. <br /> <br /> ಮಾಜಿ ಶಾಸಕ ಡಿ.ಆರ್. ಪಾಟೀಲ, ನಗರಸಭೆ ಅಧ್ಯಕ್ಷ ಶಿವಣ್ಣ ಮುಳಗುಂದ, ಅನಿಲ ಗರಗ, ಜ್ಯೋತಿ ಇರಾಳ, ಅಕ್ಕಿ, ಗುರಣ್ಣ ಬಳಗಾನೂರ, ಉಮರ್ಫರೂಕ್ ಹುಬ್ಬಳ್ಳಿ, ಅಕ್ಬರ್ಸಾಬ್ ಬಬರ್ಚಿ, ಎಂ.ಜಿ. ಶೇಖ್, ಅಶೋಕ ಮಂದಾಲಿ, ಜಮಾದಾರ್ ಮತ್ತಿತರರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>