<p><strong>ಚೆನ್ನೈ (ಪಿಟಿಐ): </strong>‘ತಮಿಳು ಮೀನುಗಾರರ ಸಮಸ್ಯೆ ಕುರಿತು ಕೇಂದ್ರ ಸರ್ಕಾರ ಪರಿಣಾಮಕಾರಿಯಲ್ಲದ ಮತ್ತು ದುರ್ಬಲ ನೀತಿ ಅನುಸರಿಸುತ್ತಿದೆ’ ಎಂದು ಆರೋಪಿಸಿರುವ ತಮಿಳುನಾಡು ಮುಖ್ಯಮಂತ್ರಿ ಜೆ. ಜಯಲಲಿತಾ, ಶ್ರೀಲಂಕಾ ನೌಕಾದಳ ಬಂಧಿಸಿರುವ ತಮಿಳು ಮೀನುಗಾರರ ಬಿಡುಗಡೆಗೆ ಅಲ್ಲಿನ ಸರ್ಕಾರದ ಮೇಲೆ ಒತ್ತಡ ಹೇರುವಂತೆ ಪ್ರಧಾನಿ ಸಿಂಗ್ ಅವರನ್ನು ಒತ್ತಾಯಿಸಿದ್ದಾರೆ.<br /> <br /> ಈ ಸಂಬಂಧ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ಶುಕ್ರವಾರ ಜಯಲಲಿತಾ ಪತ್ರ ಬರೆದಿದ್ದಾರೆ. ಉಭಯ ದೇಶಗಳ ಮೀನುಗಾರರ ಸಮಸ್ಯೆ ಕುರಿತು ಮಾ.13ರಂದು ಕೊಲಂಬೊದಲ್ಲಿ ಮಾತುಕತೆ ನಡೆಯಲಿದೆ. ಈ ಮಾತುಕತೆಗೆ ಮುನ್ನವೇ ಶ್ರೀಲಂಕಾ ನೌಕಾಪಡೆ ಉದ್ದೇಶಪೂರ್ವಕವಾಗಿ ಸೌಹಾರ್ದ ವಾತಾವರಣವನ್ನು ಹಾಳುಮಾಡುತ್ತಿದೆ ಎಂದು ಪತ್ರದಲ್ಲಿ ಆರೋಪಿಸಿದ್ದಾರೆ.<br /> <br /> ಶ್ರೀಲಂಕಾ ವಶದಲ್ಲಿರುವ 177 ತಮಿಳುನಾಡು ಮೀನುಗಾರರು ಮತ್ತು 44 ದೋಣಿಗಳನ್ನು ಬಿಡುಗಡೆ ಮಾಡಲು ಉನ್ನತ ಮಟ್ಟದ ರಾಜತಾಂತ್ರಿಕ ಮಾತುಕತೆ ನಡೆಸುವಂತೆ ಪ್ರಧಾನಿ ಅವರನ್ನು ಆಗ್ರಹಿಸಿದ್ದಾರೆ.<br /> <br /> ‘ಈ ಸಂಬಂಧ ಮಾ.4ರಂದೇ ಪ್ರಧಾನಿಗೆ ಪತ್ರ ಬರೆದಿದ್ದೆ. ಆ ನಂತರವೂ ತಮಿಳುನಾಡು ಮೀನುಗಾರರನ್ನು ಬಂಧಿಸುವ ಎರಡು ಪ್ರಕರಣಗಳು ನಡೆದಿದ್ದು, ಶ್ರೀಲಂಕಾ ನೌಕಾಪಡೆ ಉದ್ದೇಶಪೂರ್ವಕವಾಗಿ ಈ ಕೃತ್ಯ ಎಸಗುತ್ತಿದೆ’ ಎಂದು ಜಯಲಲಿತಾ ದೂರಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚೆನ್ನೈ (ಪಿಟಿಐ): </strong>‘ತಮಿಳು ಮೀನುಗಾರರ ಸಮಸ್ಯೆ ಕುರಿತು ಕೇಂದ್ರ ಸರ್ಕಾರ ಪರಿಣಾಮಕಾರಿಯಲ್ಲದ ಮತ್ತು ದುರ್ಬಲ ನೀತಿ ಅನುಸರಿಸುತ್ತಿದೆ’ ಎಂದು ಆರೋಪಿಸಿರುವ ತಮಿಳುನಾಡು ಮುಖ್ಯಮಂತ್ರಿ ಜೆ. ಜಯಲಲಿತಾ, ಶ್ರೀಲಂಕಾ ನೌಕಾದಳ ಬಂಧಿಸಿರುವ ತಮಿಳು ಮೀನುಗಾರರ ಬಿಡುಗಡೆಗೆ ಅಲ್ಲಿನ ಸರ್ಕಾರದ ಮೇಲೆ ಒತ್ತಡ ಹೇರುವಂತೆ ಪ್ರಧಾನಿ ಸಿಂಗ್ ಅವರನ್ನು ಒತ್ತಾಯಿಸಿದ್ದಾರೆ.<br /> <br /> ಈ ಸಂಬಂಧ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ಶುಕ್ರವಾರ ಜಯಲಲಿತಾ ಪತ್ರ ಬರೆದಿದ್ದಾರೆ. ಉಭಯ ದೇಶಗಳ ಮೀನುಗಾರರ ಸಮಸ್ಯೆ ಕುರಿತು ಮಾ.13ರಂದು ಕೊಲಂಬೊದಲ್ಲಿ ಮಾತುಕತೆ ನಡೆಯಲಿದೆ. ಈ ಮಾತುಕತೆಗೆ ಮುನ್ನವೇ ಶ್ರೀಲಂಕಾ ನೌಕಾಪಡೆ ಉದ್ದೇಶಪೂರ್ವಕವಾಗಿ ಸೌಹಾರ್ದ ವಾತಾವರಣವನ್ನು ಹಾಳುಮಾಡುತ್ತಿದೆ ಎಂದು ಪತ್ರದಲ್ಲಿ ಆರೋಪಿಸಿದ್ದಾರೆ.<br /> <br /> ಶ್ರೀಲಂಕಾ ವಶದಲ್ಲಿರುವ 177 ತಮಿಳುನಾಡು ಮೀನುಗಾರರು ಮತ್ತು 44 ದೋಣಿಗಳನ್ನು ಬಿಡುಗಡೆ ಮಾಡಲು ಉನ್ನತ ಮಟ್ಟದ ರಾಜತಾಂತ್ರಿಕ ಮಾತುಕತೆ ನಡೆಸುವಂತೆ ಪ್ರಧಾನಿ ಅವರನ್ನು ಆಗ್ರಹಿಸಿದ್ದಾರೆ.<br /> <br /> ‘ಈ ಸಂಬಂಧ ಮಾ.4ರಂದೇ ಪ್ರಧಾನಿಗೆ ಪತ್ರ ಬರೆದಿದ್ದೆ. ಆ ನಂತರವೂ ತಮಿಳುನಾಡು ಮೀನುಗಾರರನ್ನು ಬಂಧಿಸುವ ಎರಡು ಪ್ರಕರಣಗಳು ನಡೆದಿದ್ದು, ಶ್ರೀಲಂಕಾ ನೌಕಾಪಡೆ ಉದ್ದೇಶಪೂರ್ವಕವಾಗಿ ಈ ಕೃತ್ಯ ಎಸಗುತ್ತಿದೆ’ ಎಂದು ಜಯಲಲಿತಾ ದೂರಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>