<p>ನವದೆಹಲಿ (ಐಎಎನ್ಎಸ್): ಕೇರಳದ ಮೀನುಗಾರರ ಹತ್ಯೆಗೆ ಸಂಬಂಧಿಸಿದಂತೆ ಬಂಧಿತ ಇಬ್ಬರು ಇಟಲಿ ನೌಕಾಪಡೆಯ ಸಿಬ್ಬಂದಿಯ ಬಿಡುಗಡೆ ಕೋರಿ ಹಡಗಿನ ಮಾಲೀಕರು ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಸಿದ್ದು, ಈ ಸಂಬಂಧ ಕೇರಳ ಪೊಲೀಸರು ಹಾಗೂ ರಾಜ್ಯ ಬಂದರು ವಿಭಾಗಕ್ಕೆ ಸುಪ್ರೀಂಕೋರ್ಟ್ ಮಂಗಳವಾರ ನೋಟಿಸ್ ಜಾರಿ ಮಾಡಿದೆ.<br /> <br /> ಕೇಂದ್ರ ಸರ್ಕಾರ ಹಾಗೂ ಹತ್ಯೆಯಾದ ಮೀನುಗಾರರೊಬ್ಬರ ಪತ್ನಿ ಗೌರಮ್ಮ ಅವರಿಗೂ ಸುಪ್ರೀಂಕೋರ್ಟ್ ನೋಟಿಸ್ ನೀಡಿದೆ.<br /> <br /> ಹಿರಿಯ ನ್ಯಾಯವಾದಿ ಕೆ.ಕೆ. ವೇಣುಗೋಪಾಲ್, `ಇಬ್ಬರು ಇಟಲಿ ನೌಕಾಪಡೆಯ ಸಿಬ್ಬಂದಿ ಪೊಲೀಸ್ ವಶದಲ್ಲಿದ್ದಾಗ ಅವರ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ~ ಎಂಬ ಮಾಹಿತಿಯನ್ನು ಕೋರ್ಟ್ಗೆ ನೀಡಿದ ನಂತರ, ನ್ಯಾಯಮೂರ್ತಿ ಆರ್.ಎಂ. ಲೋಧಾ ನೇತೃತ್ವದ ಪೀಠ ಈ ನೋಟಿಸ್ ಜಾರಿ ಮಾಡಿದೆ. `ಈ ಪ್ರಕರಣದಲ್ಲಿ ಹಡಗು ಯಾವುದೇ ಅಪರಾಧ ಮಾಡಿಲ್ಲ. ಹಾಗಾಗಿ ಅದನ್ನು ಪ್ರಕರಣದೊಳಗೆ ಸೇರಿಸುವ ಅಗತ್ಯವಿರಲಿಲ್ಲ~ ಎಂದು ವೇಣುಗೋಪಾಲ್ ಕೋರ್ಟ್ಗೆ ವಿವರಿಸಿದ್ದಾರೆ.<br /> <br /> ಪ್ರಕರಣ ಕುರಿತು ವಿಚಾರಣೆ ನಡೆಸಿದ ಕೇರಳ ಹೈಕೋರ್ಟ್, ಇಟಲಿಯ ಹಡಗನ್ನು ವಶಪಡಿಸಿಕೊಳ್ಳುವಂತೆ ಆದೇಶಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ಹಾಗೂ ಇಟಲಿ ಸಿಬ್ಬಂದಿ ಬಿಡುಗಡೆಗಾಗಿ ಎಂ.ಟಿ. ಎನ್ರಿಕಾ ಲೆಕ್ಸಿ ಹಡಗಿನ ಮಾಲೀಕರು ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು.<br /> <br /> ಕೇರಳದ ಅಲಪ್ಪುಝಾ ಕರಾವಳಿ ಪ್ರದೇಶದಲ್ಲಿ ಫೆಬ್ರುವರಿ 15ರಂದು ಇಬ್ಬರು ಮೀನುಗಾರರು ಮೀನು ಹಿಡಿಯುತ್ತಿದ್ದ ಸಂದರ್ಭದಲ್ಲಿ, ಇವರನ್ನು ಕಡಲ್ಗಳ್ಳರೆಂದು ತಪ್ಪಾಗಿ ಭಾವಿಸಿದ ಇಟಲಿ ನೌಕಾಪಡೆ ಸಿಬ್ಬಂದಿ ಗುಂಡು ಹಾರಿಸಿ ಕೊಂದಿದ್ದರು. <br /> </p>.<p><strong>ಹತ್ಯೆಗೆ `ಬೆರೆಟ್ಟಾ ಬಂದೂಕು~</strong></p>.<p><strong>ಕೊಚ್ಚಿ (ಪಿಟಿಐ):</strong> ಕೇರಳದ ಮೀನುಗಾರರನ್ನು ಹತ್ಯೆ ಮಾಡಲು ಇಟಲಿಯ ಇಬ್ಬರು ನೌಕಾಪಡೆ ಸಿಬ್ಬಂದಿ ಬೆರೆಟ್ಟಾ ಬಂದೂಕುಗಳನ್ನು ಬಳಸಿರುವುದು ವಿಧಿ ವಿಜ್ಞಾನ ಪ್ರಯೋಗಾಲಯದ ವರದಿಯಿಂದ ದೃಢಪಟ್ಟಿದೆ.<br /> <br /> ಪ್ರಯೋಗಾಲಯದ ವರದಿಯನ್ನು ಸ್ವೀಕರಿಸಿದ ಕೊಚ್ಚಿ ಪೊಲೀಸ್ ಆಯುಕ್ತ ಎಂ.ಆರ್. ಅಜಿತ್ ಕುಮಾರ್ ಅವರನ್ನೊಳಗೊಂಡ ವಿಶೇಷ ತನಿಖಾ ತಂಡ, ಕೊಲ್ಲಂ ಮ್ಯಾಜಿಸ್ಟ್ರೇಟ್ ಕೋರ್ಟ್ಗೆ ಸಲ್ಲಿಸಿದೆ.<br /> <br /> ಇಟಲಿ ನೌಕಾಪಡೆ ಸಿಬ್ಬಂದಿಯನ್ನು ಬಂಧಿಸಿದ ವೇಳೆ ಪೊಲೀಸರು ಆರು ಬೆರೆಟ್ಟಾ ಬಂದೂಕು ಮತ್ತು 15 ಶಸ್ತ್ರಾಸ್ತ್ರಗಳು ಹಾಗೂ ಹತ್ತು ಸಾವಿರ ಮದ್ದುಗುಂಡುಗಳನ್ನು ವಶಪಡಿಸಿಕೊಂಡಿದ್ದನ್ನು ಇಲ್ಲಿ ಸ್ಮರಿಸಬಹುದು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ನವದೆಹಲಿ (ಐಎಎನ್ಎಸ್): ಕೇರಳದ ಮೀನುಗಾರರ ಹತ್ಯೆಗೆ ಸಂಬಂಧಿಸಿದಂತೆ ಬಂಧಿತ ಇಬ್ಬರು ಇಟಲಿ ನೌಕಾಪಡೆಯ ಸಿಬ್ಬಂದಿಯ ಬಿಡುಗಡೆ ಕೋರಿ ಹಡಗಿನ ಮಾಲೀಕರು ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಸಿದ್ದು, ಈ ಸಂಬಂಧ ಕೇರಳ ಪೊಲೀಸರು ಹಾಗೂ ರಾಜ್ಯ ಬಂದರು ವಿಭಾಗಕ್ಕೆ ಸುಪ್ರೀಂಕೋರ್ಟ್ ಮಂಗಳವಾರ ನೋಟಿಸ್ ಜಾರಿ ಮಾಡಿದೆ.<br /> <br /> ಕೇಂದ್ರ ಸರ್ಕಾರ ಹಾಗೂ ಹತ್ಯೆಯಾದ ಮೀನುಗಾರರೊಬ್ಬರ ಪತ್ನಿ ಗೌರಮ್ಮ ಅವರಿಗೂ ಸುಪ್ರೀಂಕೋರ್ಟ್ ನೋಟಿಸ್ ನೀಡಿದೆ.<br /> <br /> ಹಿರಿಯ ನ್ಯಾಯವಾದಿ ಕೆ.ಕೆ. ವೇಣುಗೋಪಾಲ್, `ಇಬ್ಬರು ಇಟಲಿ ನೌಕಾಪಡೆಯ ಸಿಬ್ಬಂದಿ ಪೊಲೀಸ್ ವಶದಲ್ಲಿದ್ದಾಗ ಅವರ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ~ ಎಂಬ ಮಾಹಿತಿಯನ್ನು ಕೋರ್ಟ್ಗೆ ನೀಡಿದ ನಂತರ, ನ್ಯಾಯಮೂರ್ತಿ ಆರ್.ಎಂ. ಲೋಧಾ ನೇತೃತ್ವದ ಪೀಠ ಈ ನೋಟಿಸ್ ಜಾರಿ ಮಾಡಿದೆ. `ಈ ಪ್ರಕರಣದಲ್ಲಿ ಹಡಗು ಯಾವುದೇ ಅಪರಾಧ ಮಾಡಿಲ್ಲ. ಹಾಗಾಗಿ ಅದನ್ನು ಪ್ರಕರಣದೊಳಗೆ ಸೇರಿಸುವ ಅಗತ್ಯವಿರಲಿಲ್ಲ~ ಎಂದು ವೇಣುಗೋಪಾಲ್ ಕೋರ್ಟ್ಗೆ ವಿವರಿಸಿದ್ದಾರೆ.<br /> <br /> ಪ್ರಕರಣ ಕುರಿತು ವಿಚಾರಣೆ ನಡೆಸಿದ ಕೇರಳ ಹೈಕೋರ್ಟ್, ಇಟಲಿಯ ಹಡಗನ್ನು ವಶಪಡಿಸಿಕೊಳ್ಳುವಂತೆ ಆದೇಶಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ಹಾಗೂ ಇಟಲಿ ಸಿಬ್ಬಂದಿ ಬಿಡುಗಡೆಗಾಗಿ ಎಂ.ಟಿ. ಎನ್ರಿಕಾ ಲೆಕ್ಸಿ ಹಡಗಿನ ಮಾಲೀಕರು ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು.<br /> <br /> ಕೇರಳದ ಅಲಪ್ಪುಝಾ ಕರಾವಳಿ ಪ್ರದೇಶದಲ್ಲಿ ಫೆಬ್ರುವರಿ 15ರಂದು ಇಬ್ಬರು ಮೀನುಗಾರರು ಮೀನು ಹಿಡಿಯುತ್ತಿದ್ದ ಸಂದರ್ಭದಲ್ಲಿ, ಇವರನ್ನು ಕಡಲ್ಗಳ್ಳರೆಂದು ತಪ್ಪಾಗಿ ಭಾವಿಸಿದ ಇಟಲಿ ನೌಕಾಪಡೆ ಸಿಬ್ಬಂದಿ ಗುಂಡು ಹಾರಿಸಿ ಕೊಂದಿದ್ದರು. <br /> </p>.<p><strong>ಹತ್ಯೆಗೆ `ಬೆರೆಟ್ಟಾ ಬಂದೂಕು~</strong></p>.<p><strong>ಕೊಚ್ಚಿ (ಪಿಟಿಐ):</strong> ಕೇರಳದ ಮೀನುಗಾರರನ್ನು ಹತ್ಯೆ ಮಾಡಲು ಇಟಲಿಯ ಇಬ್ಬರು ನೌಕಾಪಡೆ ಸಿಬ್ಬಂದಿ ಬೆರೆಟ್ಟಾ ಬಂದೂಕುಗಳನ್ನು ಬಳಸಿರುವುದು ವಿಧಿ ವಿಜ್ಞಾನ ಪ್ರಯೋಗಾಲಯದ ವರದಿಯಿಂದ ದೃಢಪಟ್ಟಿದೆ.<br /> <br /> ಪ್ರಯೋಗಾಲಯದ ವರದಿಯನ್ನು ಸ್ವೀಕರಿಸಿದ ಕೊಚ್ಚಿ ಪೊಲೀಸ್ ಆಯುಕ್ತ ಎಂ.ಆರ್. ಅಜಿತ್ ಕುಮಾರ್ ಅವರನ್ನೊಳಗೊಂಡ ವಿಶೇಷ ತನಿಖಾ ತಂಡ, ಕೊಲ್ಲಂ ಮ್ಯಾಜಿಸ್ಟ್ರೇಟ್ ಕೋರ್ಟ್ಗೆ ಸಲ್ಲಿಸಿದೆ.<br /> <br /> ಇಟಲಿ ನೌಕಾಪಡೆ ಸಿಬ್ಬಂದಿಯನ್ನು ಬಂಧಿಸಿದ ವೇಳೆ ಪೊಲೀಸರು ಆರು ಬೆರೆಟ್ಟಾ ಬಂದೂಕು ಮತ್ತು 15 ಶಸ್ತ್ರಾಸ್ತ್ರಗಳು ಹಾಗೂ ಹತ್ತು ಸಾವಿರ ಮದ್ದುಗುಂಡುಗಳನ್ನು ವಶಪಡಿಸಿಕೊಂಡಿದ್ದನ್ನು ಇಲ್ಲಿ ಸ್ಮರಿಸಬಹುದು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>