<p><strong>ದಾವಣಗೆರೆ:</strong> ನಾಯಕ ಸಮಾಜದವರಿಗೆ ಶೇ. 7.5 ಮೀಸಲಾತಿ ನೀಡಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ಎಲ್.ಜಿ. ಹಾವನೂರ ನಾಯಕರ ಹೋರಾಟ ಸಮಿತಿ ವತಿಯಿಂದ ಸೋಮವಾರ ನಗರದಲ್ಲಿ ನಾಯಕ ಸಮಾಜದವರು ಅನಿರ್ದಿಷ್ಟ ಅವಧಿ ಧರಣಿಯನ್ನು ಆರಂಭಿಸಿದರು. <br /> <br /> ಜಿಲ್ಲಾಧಿಕಾರಿ ಕಚೇರಿವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದ ಸಮಾಜದ ನೂರಾರು ಮಂದಿ, ಕೇಂದ್ರ ಸರ್ಕಾರವು ಜನಗಣತಿ ಪ್ರಕಾರ ರಾಜಕೀಯ, ಶಿಕ್ಷಣ, ಉದ್ಯೋಗಕ್ಕೆ ನೀಡುತ್ತಿರುವಂತೆ ರಾಜ್ಯ ಸರ್ಕಾರವೂ ಜಾರಿಗೊಳಿಸಬೇಕೆಂದು ಒತ್ತಾಯಿಸಿದರು.<br /> <br /> ಸುಳ್ಳು ಜಾತಿ ಪ್ರಮಾಣಪತ್ರ ನೀಡಿ ಸರ್ಕಾರಿ ನೌಕರಿ ಪಡೆದಿರುವ ಇತರ ವರ್ಗಕ್ಕೆ ಸೇರಿದವರನ್ನು ಕೆಲಸದಿಂದ ವಜಾಗೊಳಿಸಬೇಕು ಮತ್ತು ಆ ಹುದ್ದೆಗಳನ್ನು ಬ್ಯಾಕ್ಲಾಗ್ ಹುದ್ದೆಗಳೆಂದು ತೀರ್ಮಾನಿಸಿ ಅರ್ಹರನ್ನು ನೇಮಕ ಮಾಡಿಕೊಳ್ಳಬೇಕು. <br /> <br /> ಸಂವಿಧಾನಬದ್ಧವಾಗಿ ಸಿಗಬೇಕಾದ ಸೌಲಭ್ಯಗಳು ಪರಿಶಿಷ್ಟ ಪಂಗಡವರಿಗೆ ಸಮರ್ಪಕವಾಗಿ ಸಿಗುವಂತೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿಗೆ ಮನವಿ ಸಲ್ಲಿಸಿದರು.<br /> <br /> ಹುಚ್ಚವ್ವನಹಳ್ಳಿ ಮಂಜುನಾಥ್ ಪ್ರತಿಭಟನೆಯ ನೇತೃತ್ವ ವಹಿಸಿದ್ದರು. ಕರೂರು ನರೇಂದ್ರ, ಹುಚ್ಚವ್ವನಹಳ್ಳಿ ಅಜ್ಜಯ್ಯ, ಫಣಿಯಾಪುರ ಲಿಂಗರಾಜು, ಮಾಲತಿ ನಾಯಕ, ಪಾಮೇನಹಳ್ಳಿ ಗೌಡ್ರ ಶೇಖರಪ್ಪ, ರಾಜಾಚಂದ್ರಪ್ಪ ನಾಯಕ, ರಾಜ್ಕುಮಾರ್, ಕಾನನಕಟ್ಟೆ ತಿಪ್ಪೇಸ್ವಾಮಿ, ಪಾಲನಾಯಕನಕೋಟೆ ಮಾರನಾಯಕ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ:</strong> ನಾಯಕ ಸಮಾಜದವರಿಗೆ ಶೇ. 7.5 ಮೀಸಲಾತಿ ನೀಡಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ಎಲ್.ಜಿ. ಹಾವನೂರ ನಾಯಕರ ಹೋರಾಟ ಸಮಿತಿ ವತಿಯಿಂದ ಸೋಮವಾರ ನಗರದಲ್ಲಿ ನಾಯಕ ಸಮಾಜದವರು ಅನಿರ್ದಿಷ್ಟ ಅವಧಿ ಧರಣಿಯನ್ನು ಆರಂಭಿಸಿದರು. <br /> <br /> ಜಿಲ್ಲಾಧಿಕಾರಿ ಕಚೇರಿವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದ ಸಮಾಜದ ನೂರಾರು ಮಂದಿ, ಕೇಂದ್ರ ಸರ್ಕಾರವು ಜನಗಣತಿ ಪ್ರಕಾರ ರಾಜಕೀಯ, ಶಿಕ್ಷಣ, ಉದ್ಯೋಗಕ್ಕೆ ನೀಡುತ್ತಿರುವಂತೆ ರಾಜ್ಯ ಸರ್ಕಾರವೂ ಜಾರಿಗೊಳಿಸಬೇಕೆಂದು ಒತ್ತಾಯಿಸಿದರು.<br /> <br /> ಸುಳ್ಳು ಜಾತಿ ಪ್ರಮಾಣಪತ್ರ ನೀಡಿ ಸರ್ಕಾರಿ ನೌಕರಿ ಪಡೆದಿರುವ ಇತರ ವರ್ಗಕ್ಕೆ ಸೇರಿದವರನ್ನು ಕೆಲಸದಿಂದ ವಜಾಗೊಳಿಸಬೇಕು ಮತ್ತು ಆ ಹುದ್ದೆಗಳನ್ನು ಬ್ಯಾಕ್ಲಾಗ್ ಹುದ್ದೆಗಳೆಂದು ತೀರ್ಮಾನಿಸಿ ಅರ್ಹರನ್ನು ನೇಮಕ ಮಾಡಿಕೊಳ್ಳಬೇಕು. <br /> <br /> ಸಂವಿಧಾನಬದ್ಧವಾಗಿ ಸಿಗಬೇಕಾದ ಸೌಲಭ್ಯಗಳು ಪರಿಶಿಷ್ಟ ಪಂಗಡವರಿಗೆ ಸಮರ್ಪಕವಾಗಿ ಸಿಗುವಂತೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿಗೆ ಮನವಿ ಸಲ್ಲಿಸಿದರು.<br /> <br /> ಹುಚ್ಚವ್ವನಹಳ್ಳಿ ಮಂಜುನಾಥ್ ಪ್ರತಿಭಟನೆಯ ನೇತೃತ್ವ ವಹಿಸಿದ್ದರು. ಕರೂರು ನರೇಂದ್ರ, ಹುಚ್ಚವ್ವನಹಳ್ಳಿ ಅಜ್ಜಯ್ಯ, ಫಣಿಯಾಪುರ ಲಿಂಗರಾಜು, ಮಾಲತಿ ನಾಯಕ, ಪಾಮೇನಹಳ್ಳಿ ಗೌಡ್ರ ಶೇಖರಪ್ಪ, ರಾಜಾಚಂದ್ರಪ್ಪ ನಾಯಕ, ರಾಜ್ಕುಮಾರ್, ಕಾನನಕಟ್ಟೆ ತಿಪ್ಪೇಸ್ವಾಮಿ, ಪಾಲನಾಯಕನಕೋಟೆ ಮಾರನಾಯಕ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>