<p><strong>ಬೆಂಗಳೂರು: </strong>ನಗರ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳಿಗೆ ಈ ಹಿಂದೆ ರೂಪಿಸಿದ ಮಾರ್ಗಸೂಚಿ ಪ್ರಕಾರವೇ ಮೀಸಲಾತಿ ನಿಗದಿಪಡಿಸಬೇಕು ಎಂದು ಬಿಜೆಪಿ ವಕ್ತಾರ ಸಿ.ಟಿ.ರವಿ ಆಗ್ರಹಪಡಿಸಿದರು.<br /> <br /> ಕೋರ್ಟ್ ಆದೇಶದಂತೆ 2001ರ ಜನಗಣತಿ ಪ್ರಕಾರ ವಾರ್ಡ್ವಾರು ಮೀಸಲಾತಿ ನಿಗದಿಪಡಿಸಲಾಗಿತ್ತು. ಈಗ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೂ ಅದೇ ಜನಗಣತಿ ಪ್ರಕಾರ ಮೀಸಲಾತಿ ನಿಗದಿಪಡಿಸಬೇಕು ಎಂದು ಅವರು ಪತ್ರಿಕಾಗೋಷ್ಠಿಯಲ್ಲಿ ಒತ್ತಾಯಿಸಿದರು.<br /> <br /> ಹಲವು ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕಾಂಗ್ರೆಸ್ಗೆ ಬಹುಮತ ಇಲ್ಲ. ಅಂತಹ ಕಡೆ ಹಿಂಬಾಗಿಲ ಮೂಲಕ ಅಧಿಕಾರದ ಚುಕ್ಕಾಣಿ ಹಿಡಿಯಲು ಕಾಂಗ್ರೆಸ್ ಪ್ರಯತ್ನ ನಡೆಸಿದೆ. ಇದಕ್ಕೆ ಪೂರಕವಾಗಿ 2011ರ ಜನಗಣತಿ ಪ್ರಕಾರ ಮೀಸಲಾತಿ ನಿಗದಿಪಡಿಸುವ ಹುನ್ನಾರ ನಡೆಸಿದೆ ಎಂದು ಅವರು ದೂರಿದರು.<br /> <br /> ಈ ಹಿಂದಿನ ಮಾರ್ಗಸೂಚಿ ಪ್ರಕಾರವೇ ಮೀಸಲಾತಿ ನಿಗದಿಪಡಿಸಬೇಕು. ಯಾವುದೇ ಕಾರಣಕ್ಕೂ ಅದನ್ನು ಬದಲಿಸಬಾರದು. ಒಂದು ವೇಳೆ ಬದಲಿಸಿದರೆ ಅದರ ವಿರುದ್ಧ ನ್ಯಾಯಾಲಯದಲ್ಲಿ ಹೋರಾಟ ನಡೆಸಲಾಗುವುದು ಎಂದು ಅವರು ಎಚ್ಚರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ನಗರ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳಿಗೆ ಈ ಹಿಂದೆ ರೂಪಿಸಿದ ಮಾರ್ಗಸೂಚಿ ಪ್ರಕಾರವೇ ಮೀಸಲಾತಿ ನಿಗದಿಪಡಿಸಬೇಕು ಎಂದು ಬಿಜೆಪಿ ವಕ್ತಾರ ಸಿ.ಟಿ.ರವಿ ಆಗ್ರಹಪಡಿಸಿದರು.<br /> <br /> ಕೋರ್ಟ್ ಆದೇಶದಂತೆ 2001ರ ಜನಗಣತಿ ಪ್ರಕಾರ ವಾರ್ಡ್ವಾರು ಮೀಸಲಾತಿ ನಿಗದಿಪಡಿಸಲಾಗಿತ್ತು. ಈಗ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೂ ಅದೇ ಜನಗಣತಿ ಪ್ರಕಾರ ಮೀಸಲಾತಿ ನಿಗದಿಪಡಿಸಬೇಕು ಎಂದು ಅವರು ಪತ್ರಿಕಾಗೋಷ್ಠಿಯಲ್ಲಿ ಒತ್ತಾಯಿಸಿದರು.<br /> <br /> ಹಲವು ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕಾಂಗ್ರೆಸ್ಗೆ ಬಹುಮತ ಇಲ್ಲ. ಅಂತಹ ಕಡೆ ಹಿಂಬಾಗಿಲ ಮೂಲಕ ಅಧಿಕಾರದ ಚುಕ್ಕಾಣಿ ಹಿಡಿಯಲು ಕಾಂಗ್ರೆಸ್ ಪ್ರಯತ್ನ ನಡೆಸಿದೆ. ಇದಕ್ಕೆ ಪೂರಕವಾಗಿ 2011ರ ಜನಗಣತಿ ಪ್ರಕಾರ ಮೀಸಲಾತಿ ನಿಗದಿಪಡಿಸುವ ಹುನ್ನಾರ ನಡೆಸಿದೆ ಎಂದು ಅವರು ದೂರಿದರು.<br /> <br /> ಈ ಹಿಂದಿನ ಮಾರ್ಗಸೂಚಿ ಪ್ರಕಾರವೇ ಮೀಸಲಾತಿ ನಿಗದಿಪಡಿಸಬೇಕು. ಯಾವುದೇ ಕಾರಣಕ್ಕೂ ಅದನ್ನು ಬದಲಿಸಬಾರದು. ಒಂದು ವೇಳೆ ಬದಲಿಸಿದರೆ ಅದರ ವಿರುದ್ಧ ನ್ಯಾಯಾಲಯದಲ್ಲಿ ಹೋರಾಟ ನಡೆಸಲಾಗುವುದು ಎಂದು ಅವರು ಎಚ್ಚರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>