<p><strong>ಹೈದರಾಬಾದ್(ಪಿಟಿಐ): </strong>ಹಣದುಬ್ಬರ ಮತ್ತು ಮುಂಗಾರು ಮುನ್ನೋಟ ಆಧರಿಸಿಯೇ ಈ ಬಾರಿಯ ತ್ರೈಮಾಸಿಕ ಹಣಕಾಸು ನೀತಿ ನಿರ್ಧಾರವಾಗಲಿದೆ ಎಂದು `ಭಾರತೀಯ ರಿಸರ್ವ್ ಬ್ಯಾಂಕ್'(ಆರ್ಬಿಐ) ಗವರ್ನರ್ ಡಿ.ಸುಬ್ಬರಾವ್ ಹೇಳಿದ್ದಾರೆ.<br /> <br /> ಜೂನ್ 17ರಂದು ಮೊದಲ ಹಂತದ ಮಧ್ಯಂತರ ತ್ರೈಮಾಸಿಕ ಹಣಕಾಸು ನೀತಿ ಪ್ರಕಟಗೊಳ್ಳಲಿದೆ. ದೇಶದ ಕೋಟ್ಯಂತರ ರೈತರು ಮುಂಗಾರಿಗೆ ಕಾಯುತ್ತಿರುವಂತೆ `ಆರ್ಬಿಐ' ಕೂಡ ಉತ್ತಮ ಮುಂಗಾರು ನಿರೀಕ್ಷಿಸಿದೆ. ಹಣಕಾಸು ನೀತಿ ನಿರ್ಧರಿಸುವಲ್ಲಿ ಮುಂಗಾರು ನಿರ್ಣಾಯಕ ಪಾತ್ರ ವಹಿಸಲಿದೆ ಎಂದು ಅವರು ಶುಕ್ರವಾರ ಇಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಹೇಳಿದರು.<br /> <br /> ಭಾರತೀಯ ಹವಾಮಾನ ಇಲಾಖೆ ಪ್ರಸಕ್ತ ವರ್ಷ ಸಾಮಾನ್ಯ ಮುಂಗಾರು ಇರಲಿದೆ ಎಂದು ಅಂದಾಜು ಮಾಡಿದೆ.<br /> <br /> `ಸಗಟು ಬೆಲೆ ಸೂಚ್ಯಂಕ'(ಡಬ್ಲ್ಯಪಿಐ) ಆಧರಿಸಿದ ಹಣದುಬ್ಬರ ಮೂರು ವರ್ಷಗಳ ಹಿಂದಿನ ಮಟ್ಟವಾದ ಶೇ 4.89ಕ್ಕೆ ಇಳಿಕೆ ಕಂಡಿದೆ. ಆದರೆ, ಆಹಾರ ಹಣದುಬ್ಬರ ಏಪ್ರಿಲ್ನಲ್ಲಿ ಶೇ 6.08ಕ್ಕೆ ಏರಿಕೆ ಕಂಡಿದೆ. `ಗ್ರಾಹಕ ಬೆಲೆ ಸೂಚ್ಯಂಕ'(ಸಿಪಿಐ) ಆಧರಿಸಿದ ಚಿಲ್ಲರೆ ಹಣದುಬ್ಬರ ದರ ಶೇ 9.39ಕ್ಕೆ ಏರಿದೆ. ಮುಂಬರುವ ತಿಂಗಳುಗಳಲ್ಲಿ ಹಣದುಬ್ಬರ ತಗ್ಗಲಿದೆ ಎಂದು ಕೇಂದ್ರ ಹಣಕಾಸು ಸಚಿವ ಪಿ.ಚಿದಂಬರಂ ಅವರೂ ವಿಶ್ವಾಸ ವ್ಯಕ್ತಪಡಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೈದರಾಬಾದ್(ಪಿಟಿಐ): </strong>ಹಣದುಬ್ಬರ ಮತ್ತು ಮುಂಗಾರು ಮುನ್ನೋಟ ಆಧರಿಸಿಯೇ ಈ ಬಾರಿಯ ತ್ರೈಮಾಸಿಕ ಹಣಕಾಸು ನೀತಿ ನಿರ್ಧಾರವಾಗಲಿದೆ ಎಂದು `ಭಾರತೀಯ ರಿಸರ್ವ್ ಬ್ಯಾಂಕ್'(ಆರ್ಬಿಐ) ಗವರ್ನರ್ ಡಿ.ಸುಬ್ಬರಾವ್ ಹೇಳಿದ್ದಾರೆ.<br /> <br /> ಜೂನ್ 17ರಂದು ಮೊದಲ ಹಂತದ ಮಧ್ಯಂತರ ತ್ರೈಮಾಸಿಕ ಹಣಕಾಸು ನೀತಿ ಪ್ರಕಟಗೊಳ್ಳಲಿದೆ. ದೇಶದ ಕೋಟ್ಯಂತರ ರೈತರು ಮುಂಗಾರಿಗೆ ಕಾಯುತ್ತಿರುವಂತೆ `ಆರ್ಬಿಐ' ಕೂಡ ಉತ್ತಮ ಮುಂಗಾರು ನಿರೀಕ್ಷಿಸಿದೆ. ಹಣಕಾಸು ನೀತಿ ನಿರ್ಧರಿಸುವಲ್ಲಿ ಮುಂಗಾರು ನಿರ್ಣಾಯಕ ಪಾತ್ರ ವಹಿಸಲಿದೆ ಎಂದು ಅವರು ಶುಕ್ರವಾರ ಇಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಹೇಳಿದರು.<br /> <br /> ಭಾರತೀಯ ಹವಾಮಾನ ಇಲಾಖೆ ಪ್ರಸಕ್ತ ವರ್ಷ ಸಾಮಾನ್ಯ ಮುಂಗಾರು ಇರಲಿದೆ ಎಂದು ಅಂದಾಜು ಮಾಡಿದೆ.<br /> <br /> `ಸಗಟು ಬೆಲೆ ಸೂಚ್ಯಂಕ'(ಡಬ್ಲ್ಯಪಿಐ) ಆಧರಿಸಿದ ಹಣದುಬ್ಬರ ಮೂರು ವರ್ಷಗಳ ಹಿಂದಿನ ಮಟ್ಟವಾದ ಶೇ 4.89ಕ್ಕೆ ಇಳಿಕೆ ಕಂಡಿದೆ. ಆದರೆ, ಆಹಾರ ಹಣದುಬ್ಬರ ಏಪ್ರಿಲ್ನಲ್ಲಿ ಶೇ 6.08ಕ್ಕೆ ಏರಿಕೆ ಕಂಡಿದೆ. `ಗ್ರಾಹಕ ಬೆಲೆ ಸೂಚ್ಯಂಕ'(ಸಿಪಿಐ) ಆಧರಿಸಿದ ಚಿಲ್ಲರೆ ಹಣದುಬ್ಬರ ದರ ಶೇ 9.39ಕ್ಕೆ ಏರಿದೆ. ಮುಂಬರುವ ತಿಂಗಳುಗಳಲ್ಲಿ ಹಣದುಬ್ಬರ ತಗ್ಗಲಿದೆ ಎಂದು ಕೇಂದ್ರ ಹಣಕಾಸು ಸಚಿವ ಪಿ.ಚಿದಂಬರಂ ಅವರೂ ವಿಶ್ವಾಸ ವ್ಯಕ್ತಪಡಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>