<p><strong>ನವದೆಹಲಿ (ಪಿಟಿಐ):</strong> ಮುಂಗಾರು ಕುಂಠಿತಗೊಂಡಿರುವ ಹಿನ್ನೆಲೆಯಲ್ಲಿ ಈರುಳ್ಳಿ ಬೆಳೆಯುವ ಪ್ರಮುಖ ರಾಜ್ಯಗಳಾದ ಮಹಾರಾಷ್ಟ್ರ ಮತ್ತು ಗುಜರಾತ್ನಲ್ಲಿ ಈ ಬಾರಿ ಇಳುವರಿ ಕುಸಿಯುವ ಸಾಧ್ಯತೆ ಇದ್ದು, ಬೆಲೆಯಲ್ಲಿಯೂ ಭಾರಿ ಏರಿಕೆ ಆಗಬಹುದು ಎಂದು ಮಾರುಕಟ್ಟೆ ತಜ್ಞರು ಅಂದಾಜಿಸಿದ್ದಾರೆ. <br /> <br /> ಮುಂಗಾರು ವೈಫಲ್ಯ `ಅಕ್ಟೋಬರ್ -ಡಿಸೆಂಬರ್~ ಅವಧಿಯ ಈರುಳ್ಳಿ ಪೂರೈಕೆ ಮೇಲೆ ಪ್ರತಿಕೂಲ ಪರಿಣಾಮ ಬೀರಲಿದೆ. ಸದ್ಯ ಈರುಳ್ಳಿ ಕೆ.ಜಿಗೆ ರೂ10ರಿಂದ ರೂ15 ಇದ್ದು, ನಂತರದಲ್ಲಿ ಹೆಚ್ಚಬಹುದು ಎಂದು ರಾಷ್ಟ್ರೀಯ ತೋಟಗಾರಿಕೆ ಸಂಶೋಧನೆ ಅಭಿವೃದ್ಧಿ ಪ್ರತಿಷ್ಠಾನ(ಎನ್ಎಚ್ಆರ್ಡಿಎಫ್) ನಿರ್ದೇಶಕ ಆರ್.ಪಿ.ಗುಪ್ತಾ ಹೇಳಿದ್ದಾರೆ. <br /> <br /> ಮುಂಗಾರಿನಲ್ಲಿ ಬಿತ್ತನೆಯಾಗುವ ಈರುಳ್ಳಿ ಡಿಸೆಂಬರ್ಗೆ ಕೊಯ್ಲಿಗೆ ಬರುತ್ತದೆ. ಆದರೆ, ಮಳೆ ಕೊರತೆಯಿಂದ ನಾಸಿಕ್ ಸೇರಿದಂತೆ ಮಹಾರಾಷ್ಟ್ರದ ಹಲವೆಡೆ ಬಿತ್ತನೆ ಪ್ರಮಾಣ ಶೇ 50ರಷ್ಟು ಕಡಿಮೆ ಆಗಿದೆ ಎಂದು `ಎನ್ಎಚ್ಆರ್ಡಿಎಫ್~ ಹೇಳಿದೆ. <br /> <br /> `ಸದ್ಯ ದೇಶದಲ್ಲಿ 18 ಲಕ್ಷ ಟನ್ಈರುಳ್ಳಿ ದಾಸ್ತಾನಿದ್ದು, ಸದ್ಯದ ಬೇಡಿಕೆ ಪೂರೈಸುವಷ್ಟಿದೆ. ಏಪ್ರಿಲ್-ಜೂನ್ ಅವಧಿಯಲ್ಲಿ 32 ಸಾವಿರ ಟನ್ ಈರುಳ್ಳಿ ರಫ್ತು ಮಾಡಲಾಗಿದೆ~ ಎಂದು ಗುಪ್ತಾ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ (ಪಿಟಿಐ):</strong> ಮುಂಗಾರು ಕುಂಠಿತಗೊಂಡಿರುವ ಹಿನ್ನೆಲೆಯಲ್ಲಿ ಈರುಳ್ಳಿ ಬೆಳೆಯುವ ಪ್ರಮುಖ ರಾಜ್ಯಗಳಾದ ಮಹಾರಾಷ್ಟ್ರ ಮತ್ತು ಗುಜರಾತ್ನಲ್ಲಿ ಈ ಬಾರಿ ಇಳುವರಿ ಕುಸಿಯುವ ಸಾಧ್ಯತೆ ಇದ್ದು, ಬೆಲೆಯಲ್ಲಿಯೂ ಭಾರಿ ಏರಿಕೆ ಆಗಬಹುದು ಎಂದು ಮಾರುಕಟ್ಟೆ ತಜ್ಞರು ಅಂದಾಜಿಸಿದ್ದಾರೆ. <br /> <br /> ಮುಂಗಾರು ವೈಫಲ್ಯ `ಅಕ್ಟೋಬರ್ -ಡಿಸೆಂಬರ್~ ಅವಧಿಯ ಈರುಳ್ಳಿ ಪೂರೈಕೆ ಮೇಲೆ ಪ್ರತಿಕೂಲ ಪರಿಣಾಮ ಬೀರಲಿದೆ. ಸದ್ಯ ಈರುಳ್ಳಿ ಕೆ.ಜಿಗೆ ರೂ10ರಿಂದ ರೂ15 ಇದ್ದು, ನಂತರದಲ್ಲಿ ಹೆಚ್ಚಬಹುದು ಎಂದು ರಾಷ್ಟ್ರೀಯ ತೋಟಗಾರಿಕೆ ಸಂಶೋಧನೆ ಅಭಿವೃದ್ಧಿ ಪ್ರತಿಷ್ಠಾನ(ಎನ್ಎಚ್ಆರ್ಡಿಎಫ್) ನಿರ್ದೇಶಕ ಆರ್.ಪಿ.ಗುಪ್ತಾ ಹೇಳಿದ್ದಾರೆ. <br /> <br /> ಮುಂಗಾರಿನಲ್ಲಿ ಬಿತ್ತನೆಯಾಗುವ ಈರುಳ್ಳಿ ಡಿಸೆಂಬರ್ಗೆ ಕೊಯ್ಲಿಗೆ ಬರುತ್ತದೆ. ಆದರೆ, ಮಳೆ ಕೊರತೆಯಿಂದ ನಾಸಿಕ್ ಸೇರಿದಂತೆ ಮಹಾರಾಷ್ಟ್ರದ ಹಲವೆಡೆ ಬಿತ್ತನೆ ಪ್ರಮಾಣ ಶೇ 50ರಷ್ಟು ಕಡಿಮೆ ಆಗಿದೆ ಎಂದು `ಎನ್ಎಚ್ಆರ್ಡಿಎಫ್~ ಹೇಳಿದೆ. <br /> <br /> `ಸದ್ಯ ದೇಶದಲ್ಲಿ 18 ಲಕ್ಷ ಟನ್ಈರುಳ್ಳಿ ದಾಸ್ತಾನಿದ್ದು, ಸದ್ಯದ ಬೇಡಿಕೆ ಪೂರೈಸುವಷ್ಟಿದೆ. ಏಪ್ರಿಲ್-ಜೂನ್ ಅವಧಿಯಲ್ಲಿ 32 ಸಾವಿರ ಟನ್ ಈರುಳ್ಳಿ ರಫ್ತು ಮಾಡಲಾಗಿದೆ~ ಎಂದು ಗುಪ್ತಾ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>