<p> ಮುಂಬೈ (ಪಿಟಿಐ): ಟೀಮ್ ಅಣ್ಣಾ ತಂಡದ ಪ್ರಮುಖ ಸದಸ್ಯರ ಎರಡು ದಿನಗಳ ಸಭೆ ಶನಿವಾರ ಅವರ ಗ್ರಾಮ ರಾಳೇಗಣ ಸಿದ್ಧಿಯಲ್ಲಿ ಆರಂಭವಾಗಲಿದೆ.<br /> <br /> ~ಅರವಿಂದ ಕೇಜ್ರಿವಾಲ್ ಅವರು ಈದಿನ ಮಧ್ಯಾಹ್ನ ಗ್ರಾಮಕ್ಕೆ ಆಗಮಿಸಿದ್ದು, ಕಿರಣ್ ಬೇಡಿ ಮತ್ತು ಪ್ರಶಾಂತ ಭೂಷಣ್ ಅವರು ಶನಿವಾರ ಬೆಳಗಿನ ವೇಳೆಗೆ ತಲುಪಲಿದ್ದಾರೆ~ ಎಂದು ಹಜಾರೆ ನಿಕಟವರ್ತಿ ದತ್ತ ಅವರಿ ಪಿಟಿಐಗೆ ರಾಳೇಗಣ ಸಿದ್ಧಿಯಿಂದ ದೂರವಾಣಿ ಮೂಲಕ ತಿಳಿಸಿದರು.<br /> <br /> ತಮ್ಮ ತಂಡದ ಸದಸ್ಯರನ್ನು ಗುರಿಯಾಗಿರಿಸಿಕೊಂಡ ಸರ್ಕಾರ ನಡೆಸುತ್ತಿರುವ ದಾಳಿಗಳ ಬಗ್ಗೆ ಹಜಾರೆ ಅವರು ತಮ್ಮ ಅಸಮಾಧಾನವನ್ನು ಹೊರಗೆಡಹಿದ ಹಿನ್ನೆಲೆಯಲ್ಲಿ ಈ ಸಭೆ ನಡೆಯುತ್ತಿದೆ.<br /> <br /> ಬೇಡಿ, ಭೂಷಣ್ ಮತ್ತು ಕೇಜ್ರಿವಾಲ್ ಅವರಿಗೆ ಹಕ್ಕುಚ್ಯುತಿ ನೋಟಿಸ್ ನೀಡಲಾಗಿದ್ದರೆ, ಕೇಜ್ರಿವಾಲ್ ಅವರಿಗೆ ಆದಾಯ ತೆರಿಗೆ ಇಲಾಖೆಯಿಂದಲೂ ನೋಟಿಸ್ ಜಾರಿ ಮಾಡಲಾಗಿದೆ.<br /> <br /> ಕೇಂದ್ರ ಸರ್ಕಾರದಿಂದ ನೀಡಲಾಗಿರುವ ನೋಟಿಸ್ ಸೇರಿದಂತೆ ಪ್ರಸ್ತುತ ವಿಷಯಗಳ <br /> ಬಗ್ಗೆ ಚರ್ಚಿಸಿ, ಮುಂದಿನ ಕಾರ್ಯತಂತ್ರದ ಬಗ್ಗೆ ನಿರ್ಧರಿಸಲಿದೆ ಎಂದು ನಿರೀಕ್ಷಿಸಲಾಗಿದೆ.<br /> <br /> ಸೆಪ್ಟೆಂಬರ್ 2ರಂದು ರಾಳೇಗಣ ಸಿದ್ಧಿಯಲ್ಲಿ ಗ್ರಾಮಸಭೆಯಲ್ಲಿ ಮಾತನಾಡುತ್ತಾ ಕೇಂದ್ರದ ಯುಪಿಎ ಸರ್ಕಾರದ ಮೇಲೆ ಹರಿಹಾಯ್ದಿದ್ದ ಅಣ್ಣಾ ಹಜಾರೆ, ಸರ್ಕಾರದ ಅರ್ಧದಷ್ಟು ಮಂದಿ ~ಸುಳ್ಳುಗಾರರು~ ಎಂದು ಟೀಕಿಸಿದ್ದರು.<br /> <br /> ಕೇಂದ್ರ ಸಚಿವ ಚಿದಂಬರಂ ಅವರನ್ನು ~ಕಿಡಿಗೇಡಿ~ ಎಂದು ಬಣ್ಣಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p> ಮುಂಬೈ (ಪಿಟಿಐ): ಟೀಮ್ ಅಣ್ಣಾ ತಂಡದ ಪ್ರಮುಖ ಸದಸ್ಯರ ಎರಡು ದಿನಗಳ ಸಭೆ ಶನಿವಾರ ಅವರ ಗ್ರಾಮ ರಾಳೇಗಣ ಸಿದ್ಧಿಯಲ್ಲಿ ಆರಂಭವಾಗಲಿದೆ.<br /> <br /> ~ಅರವಿಂದ ಕೇಜ್ರಿವಾಲ್ ಅವರು ಈದಿನ ಮಧ್ಯಾಹ್ನ ಗ್ರಾಮಕ್ಕೆ ಆಗಮಿಸಿದ್ದು, ಕಿರಣ್ ಬೇಡಿ ಮತ್ತು ಪ್ರಶಾಂತ ಭೂಷಣ್ ಅವರು ಶನಿವಾರ ಬೆಳಗಿನ ವೇಳೆಗೆ ತಲುಪಲಿದ್ದಾರೆ~ ಎಂದು ಹಜಾರೆ ನಿಕಟವರ್ತಿ ದತ್ತ ಅವರಿ ಪಿಟಿಐಗೆ ರಾಳೇಗಣ ಸಿದ್ಧಿಯಿಂದ ದೂರವಾಣಿ ಮೂಲಕ ತಿಳಿಸಿದರು.<br /> <br /> ತಮ್ಮ ತಂಡದ ಸದಸ್ಯರನ್ನು ಗುರಿಯಾಗಿರಿಸಿಕೊಂಡ ಸರ್ಕಾರ ನಡೆಸುತ್ತಿರುವ ದಾಳಿಗಳ ಬಗ್ಗೆ ಹಜಾರೆ ಅವರು ತಮ್ಮ ಅಸಮಾಧಾನವನ್ನು ಹೊರಗೆಡಹಿದ ಹಿನ್ನೆಲೆಯಲ್ಲಿ ಈ ಸಭೆ ನಡೆಯುತ್ತಿದೆ.<br /> <br /> ಬೇಡಿ, ಭೂಷಣ್ ಮತ್ತು ಕೇಜ್ರಿವಾಲ್ ಅವರಿಗೆ ಹಕ್ಕುಚ್ಯುತಿ ನೋಟಿಸ್ ನೀಡಲಾಗಿದ್ದರೆ, ಕೇಜ್ರಿವಾಲ್ ಅವರಿಗೆ ಆದಾಯ ತೆರಿಗೆ ಇಲಾಖೆಯಿಂದಲೂ ನೋಟಿಸ್ ಜಾರಿ ಮಾಡಲಾಗಿದೆ.<br /> <br /> ಕೇಂದ್ರ ಸರ್ಕಾರದಿಂದ ನೀಡಲಾಗಿರುವ ನೋಟಿಸ್ ಸೇರಿದಂತೆ ಪ್ರಸ್ತುತ ವಿಷಯಗಳ <br /> ಬಗ್ಗೆ ಚರ್ಚಿಸಿ, ಮುಂದಿನ ಕಾರ್ಯತಂತ್ರದ ಬಗ್ಗೆ ನಿರ್ಧರಿಸಲಿದೆ ಎಂದು ನಿರೀಕ್ಷಿಸಲಾಗಿದೆ.<br /> <br /> ಸೆಪ್ಟೆಂಬರ್ 2ರಂದು ರಾಳೇಗಣ ಸಿದ್ಧಿಯಲ್ಲಿ ಗ್ರಾಮಸಭೆಯಲ್ಲಿ ಮಾತನಾಡುತ್ತಾ ಕೇಂದ್ರದ ಯುಪಿಎ ಸರ್ಕಾರದ ಮೇಲೆ ಹರಿಹಾಯ್ದಿದ್ದ ಅಣ್ಣಾ ಹಜಾರೆ, ಸರ್ಕಾರದ ಅರ್ಧದಷ್ಟು ಮಂದಿ ~ಸುಳ್ಳುಗಾರರು~ ಎಂದು ಟೀಕಿಸಿದ್ದರು.<br /> <br /> ಕೇಂದ್ರ ಸಚಿವ ಚಿದಂಬರಂ ಅವರನ್ನು ~ಕಿಡಿಗೇಡಿ~ ಎಂದು ಬಣ್ಣಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>