<p>ಪ<strong>ಟ್ನಾ (ಪಿಟಿಐ):</strong> ~ಮುಂದಿನ ಬಾರಿ ಕೇಂದ್ರದಲ್ಲಿ ಎನ್ ಡಿಎ ಅಧಿಕಾರದ ಚುಕ್ಕಾಣಿ ಹಿಡಿಯುವ ಎಲ್ಲಾ ಸಾಧ್ಯತೆಗಳಿವೆ~ ಎಂದು ಹಿರಿಯ ಬಿಜೆಪಿ ನಾಯಕ ಎಲ್. ಕೆ.ಅಡ್ವಾಣಿ ಅವರು ಬುಧವಾರ ಇಲ್ಲಿ ಭವಿಷ್ಯ ನುಡಿದಿದ್ದಾರೆ. </p>.<p>ಅದರೆ, ಅವರು ಮುಂದಿನ ಪ್ರಧಾನಿಯಾಗುವ ತಮ್ಮ ಪಕ್ಷದ ಅಭ್ಯರ್ಥಿಗಳ ಪಟ್ಟಿಯಲ್ಲಿ ತಮ್ಮ ಹೆಸರಿರಲಿದೆ ಎಂಬುದನ್ನು ಮಾತ್ರ ಖಚಿತಪಡಿಸಲಿಲ್ಲ.</p>.<p>ಮುಖ್ಯಮಂತ್ರಿ ನಿತಿಶ್ ಕುಮಾರ್ ಬೆಂಬಲದಲ್ಲಿ ಮಂಗಳವಾರ ಬಿಹಾರದಲ್ಲಿ ಆರಂಭವಾದ ತಮ್ಮ ಜನ ಚೇತನ ಯಾತ್ರೆಗೆ ಜನರಿಂದ ಲಭಿಸಿದ ಪ್ರೋತ್ಸಾಹದಿಂದ ಉತ್ತೇಜಿತರಾದಂತೆ ಕಂಡುಬಂದ ಅಡ್ವಾಣಿ ಅವರು, ಬುಧವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ, ~ಸದ್ಯದ ಪರಿಸ್ಥಿತಿಯನ್ನು ಗಮನಿಸಿದರೆ ಯುಪಿಎ ಸರ್ಕಾರ ತನ್ನ ಪೂರ್ಣ ಅವಧಿಯನ್ನು ಪೂರೈಸಲಿದೆ~ ಎಂದು ಹೇಳಿದರು. </p>.<p>~ಸನಿಹದಲ್ಲೇ ಚುನಾವಣೆ ನಡೆಯುವ ಸಾಧ್ಯತೆಗಳು ಇಲ್ಲ. ಆದರೆ ಯುಪಿಎ ಸರ್ಕಾರದ ಆಡಳಿತದ ವೈಖರಿಯನ್ನು ಗಮನಿಸಿದರೆ, ಅವಧಿಗೆ ಮೊದಲೇ ಚುನಾವಣೆ ಘೋಷಣೆಯಾಗಬಹುದೆಂಬ ಅನುಮಾನಗಳು ಮೂಡುತ್ತಿವೆ. ಮುಂದಿನ ಬಾರಿ ಕೇಂದ್ರದಲ್ಲಿ ಅಧಿಕಾರಕ್ಕೆ ಬರುವ ಎಲ್ಲಾ ಸಾಧ್ಯತೆಗಳೂ ಇವೆ~ ಎಂದು ಅವರು ತಿಳಿಸಿದರು.<br /> <br /> ಪ್ರಶ್ನೆಯೊಂದಕ್ಕೆ ಉತ್ತರಿಸುತ್ತಿದ್ದ ಅವರು, ~ಸದ್ಯಕ್ಕೇನು ಚುನಾವಣೆ ಹತ್ತಿರದಲ್ಲಿಲ್ಲ. ಚುನಾವಣೆ ಘೋಷಣೆಯಾಗುತ್ತಿದ್ದಂತೆಯೇ ಪಕ್ಷವು ತನ್ನ ಪ್ರಧಾನಿ ಅಭ್ಯರ್ಥಿಯ ಹೆಸರಿನ ಕುರಿತಂತೆ ನಿರ್ಧಾರ ಕೈಗೊಳ್ಳಲಿದೆ~ ಎಂದರು. ಜೊತೆಗೆ, ~ಕಳೆದ 2009ರ ಸಾರ್ವತ್ರಿಕ ಚುನಾವಣೆಯ ಸಂದರ್ಭದಲ್ಲೂ ತಾವು ಪ್ರಧಾನಿ ಅಭ್ಯರ್ಥಿ ಎಂದು ಹೇಳಿಕೊಂಡಿಲ್ಲ~ ಎಂದು ಅವರು ಸ್ಪಷ್ಟಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಪ<strong>ಟ್ನಾ (ಪಿಟಿಐ):</strong> ~ಮುಂದಿನ ಬಾರಿ ಕೇಂದ್ರದಲ್ಲಿ ಎನ್ ಡಿಎ ಅಧಿಕಾರದ ಚುಕ್ಕಾಣಿ ಹಿಡಿಯುವ ಎಲ್ಲಾ ಸಾಧ್ಯತೆಗಳಿವೆ~ ಎಂದು ಹಿರಿಯ ಬಿಜೆಪಿ ನಾಯಕ ಎಲ್. ಕೆ.ಅಡ್ವಾಣಿ ಅವರು ಬುಧವಾರ ಇಲ್ಲಿ ಭವಿಷ್ಯ ನುಡಿದಿದ್ದಾರೆ. </p>.<p>ಅದರೆ, ಅವರು ಮುಂದಿನ ಪ್ರಧಾನಿಯಾಗುವ ತಮ್ಮ ಪಕ್ಷದ ಅಭ್ಯರ್ಥಿಗಳ ಪಟ್ಟಿಯಲ್ಲಿ ತಮ್ಮ ಹೆಸರಿರಲಿದೆ ಎಂಬುದನ್ನು ಮಾತ್ರ ಖಚಿತಪಡಿಸಲಿಲ್ಲ.</p>.<p>ಮುಖ್ಯಮಂತ್ರಿ ನಿತಿಶ್ ಕುಮಾರ್ ಬೆಂಬಲದಲ್ಲಿ ಮಂಗಳವಾರ ಬಿಹಾರದಲ್ಲಿ ಆರಂಭವಾದ ತಮ್ಮ ಜನ ಚೇತನ ಯಾತ್ರೆಗೆ ಜನರಿಂದ ಲಭಿಸಿದ ಪ್ರೋತ್ಸಾಹದಿಂದ ಉತ್ತೇಜಿತರಾದಂತೆ ಕಂಡುಬಂದ ಅಡ್ವಾಣಿ ಅವರು, ಬುಧವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ, ~ಸದ್ಯದ ಪರಿಸ್ಥಿತಿಯನ್ನು ಗಮನಿಸಿದರೆ ಯುಪಿಎ ಸರ್ಕಾರ ತನ್ನ ಪೂರ್ಣ ಅವಧಿಯನ್ನು ಪೂರೈಸಲಿದೆ~ ಎಂದು ಹೇಳಿದರು. </p>.<p>~ಸನಿಹದಲ್ಲೇ ಚುನಾವಣೆ ನಡೆಯುವ ಸಾಧ್ಯತೆಗಳು ಇಲ್ಲ. ಆದರೆ ಯುಪಿಎ ಸರ್ಕಾರದ ಆಡಳಿತದ ವೈಖರಿಯನ್ನು ಗಮನಿಸಿದರೆ, ಅವಧಿಗೆ ಮೊದಲೇ ಚುನಾವಣೆ ಘೋಷಣೆಯಾಗಬಹುದೆಂಬ ಅನುಮಾನಗಳು ಮೂಡುತ್ತಿವೆ. ಮುಂದಿನ ಬಾರಿ ಕೇಂದ್ರದಲ್ಲಿ ಅಧಿಕಾರಕ್ಕೆ ಬರುವ ಎಲ್ಲಾ ಸಾಧ್ಯತೆಗಳೂ ಇವೆ~ ಎಂದು ಅವರು ತಿಳಿಸಿದರು.<br /> <br /> ಪ್ರಶ್ನೆಯೊಂದಕ್ಕೆ ಉತ್ತರಿಸುತ್ತಿದ್ದ ಅವರು, ~ಸದ್ಯಕ್ಕೇನು ಚುನಾವಣೆ ಹತ್ತಿರದಲ್ಲಿಲ್ಲ. ಚುನಾವಣೆ ಘೋಷಣೆಯಾಗುತ್ತಿದ್ದಂತೆಯೇ ಪಕ್ಷವು ತನ್ನ ಪ್ರಧಾನಿ ಅಭ್ಯರ್ಥಿಯ ಹೆಸರಿನ ಕುರಿತಂತೆ ನಿರ್ಧಾರ ಕೈಗೊಳ್ಳಲಿದೆ~ ಎಂದರು. ಜೊತೆಗೆ, ~ಕಳೆದ 2009ರ ಸಾರ್ವತ್ರಿಕ ಚುನಾವಣೆಯ ಸಂದರ್ಭದಲ್ಲೂ ತಾವು ಪ್ರಧಾನಿ ಅಭ್ಯರ್ಥಿ ಎಂದು ಹೇಳಿಕೊಂಡಿಲ್ಲ~ ಎಂದು ಅವರು ಸ್ಪಷ್ಟಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>