<p><strong>ಲಾಹೋರ್ (ಪಿಟಿಐ):</strong> 2008ರ ಮುಂಬೈ ಮೇಲಿನ ಉಗ್ರರ ದಾಳಿಯ ಪ್ರಕರಣವನ್ನು ಮುಂದಿಟ್ಟುಕೊಂಡು ಭಾರತ-ಪಾಕ್ ನಡುವಿನ ದ್ವಿಪಕ್ಷೀಯ ಮಾತುಕತೆಗೆ ಹಿನ್ನಡೆ ಆಗುವುದು ಬೇಡ ಎಂದು ಪಾಕ್ ಪ್ರಧಾನಿ ಯೂಸುಫ್ ರಜಾ ಗಿಲಾನಿ ಹೇಳಿದರು.<br /> <br /> ಉಭಯ ದೇಶಗಳ ನಡುವಿನ ವಿದೇಶಾಂಗ ಕಾರ್ಯದರ್ಶಿಗಳ ನಡುವಿನ ಮಾತುಕತೆ ನಿರಂತರ ಮುಂದೆ ಹೋಗುತ್ತಿರುವುದನ್ನು ಉಲ್ಲೇಖಿಸಿ ಅವರು ಈ ರೀತಿ ಹೇಳಿದರು. ಮಾತುಕತೆ ಪುನರಾರಂಭಿಸಲು ಭಾರತದ ಪ್ರಧಾನಿ ಮನಮೋಹನ್ ಸಿಂಗ್ ರಾಜಕೀಯ ಒತ್ತಡ ಎದುರಿಸುತ್ತಿದ್ದಾರೆ. ಆದರೆ ಮಾತುಕತೆ ಆರಂಭಕ್ಕೆ ಮುಂಬೈ ದಾಳಿಯೇ ಪ್ರಮುಖ ತಡೆ ಆಗಬಾರದು ಎಂದು ವಿದೇಶಿ ಪತ್ರಕರ್ತರೊಂದಿಗೆ ಮಾತನಾಡಿದ ಗಿಲಾನಿ ಅಭಿಪ್ರಾಯಪಟ್ಟರು.<br /> <br /> ಕಾಶ್ಮೀರ ವಿಷಯಕ್ಕೆ ಸಂಬಂಧಿಸಿದಂತೆ ಶಾಂತಿಯುತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಭಾರತದೊಂದಿಗೆ ರಾಜತಾಂತ್ರಿಕ ಪ್ರಯತ್ನಗಳು ನಿರಂತರವಾಗಿ ನಡೆಯುತ್ತಿವೆ ಎಂದ ಅವರು, ಹೆಚ್ಚಿನ ಮಾಹಿತಿ ನೀಡಲಿಲ್ಲ.ಮುಂಬೈ ದಾಳಿಯನ್ನು ಮುಂದಿಟ್ಟುಕೊಂಡು ಭಾರತ ಮಾತುಕತೆ ಸ್ಥಗಿತಗೊಳಿಸಿರುವುದಕ್ಕೆ ಸಂಬಂಧಿಸಿದಂತೆ, ಪುನಃ ಮಾತುಕತೆ ಆರಂಭವಾಗುತ್ತದೆಯೇ ಎನ್ನುವ ಪ್ರಶ್ನೆಗೆ ಶೇ 50: 50ರಷ್ಟು ಎಂದು ಮಾರ್ಮಿಕವಾಗಿ ನುಡಿದರು.<br /> <br /> ಮುಂಬೈ ದಾಳಿಯ ಸಂದರ್ಭದಲ್ಲಿ ಮೃತರಾದ ಇಬ್ಬರು ಯಹೂದಿಗಳ ಸಂಬಂಧಿಕರು ಅಮೆರಿಕ ನ್ಯಾಯಾಲಯದಲ್ಲಿ ಹೂಡಿರುವ ದಾವೆಗೆ ಸಂಬಂಧಿಸಿದಂತೆ ಕೇಳಲಾದ ಪ್ರಶ್ನೆಗೆ, ವಾದಿಸಬೇಕೆ, ಬೇಡವೇ ಎನ್ನುವ ಕುರಿತು ಐಎಸ್ಐ ನಿರ್ಧಾರ ಕೈಗೊಳ್ಳಲಿದೆ.ಈ ನಿಟ್ಟಿನಲ್ಲಿ ಐಎಸ್ಐಗೆ ಪೂರ್ಣ ಅಧಿಕಾರ ನೀಡಲಾಗಿದೆ ಹಾಗೂ ಬೆಂಬಲ ನೀಡುವುದಾಗಿ ಹೇಳಿದರು.<br /> <br /> ಹಾಗೆಯೆ ದಾವೆಯಲ್ಲಿ ಪ್ರತಿವಾದಿಯಾಗಿರುವ ಲಷ್ಕರ್-ಎ-ತೊಯ್ಬಾ ಸಂಘಟನೆಯ ಸಂಸ್ಥಾಪಕ ಹಫೀಜ್ ಮಹಮ್ಮದ್ ಸಯೀದ್ ಅವರ ಪರವಾಗಿಯೂ ವಾದಿಸಲಾಗುವುದೇ ಎನ್ನುವ ಪ್ರಶ್ನೆಗೆ, ಕಾನೂನಿನಂತೆ ಐಎಸ್ಐ ನಿರ್ಧಾರ ಕೈಗೊಳ್ಳುತ್ತದೆ. ಕಾನೂನಿಗಿಂತ ಯಾರೂ ಮೇಲಿಲ್ಲ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಾಹೋರ್ (ಪಿಟಿಐ):</strong> 2008ರ ಮುಂಬೈ ಮೇಲಿನ ಉಗ್ರರ ದಾಳಿಯ ಪ್ರಕರಣವನ್ನು ಮುಂದಿಟ್ಟುಕೊಂಡು ಭಾರತ-ಪಾಕ್ ನಡುವಿನ ದ್ವಿಪಕ್ಷೀಯ ಮಾತುಕತೆಗೆ ಹಿನ್ನಡೆ ಆಗುವುದು ಬೇಡ ಎಂದು ಪಾಕ್ ಪ್ರಧಾನಿ ಯೂಸುಫ್ ರಜಾ ಗಿಲಾನಿ ಹೇಳಿದರು.<br /> <br /> ಉಭಯ ದೇಶಗಳ ನಡುವಿನ ವಿದೇಶಾಂಗ ಕಾರ್ಯದರ್ಶಿಗಳ ನಡುವಿನ ಮಾತುಕತೆ ನಿರಂತರ ಮುಂದೆ ಹೋಗುತ್ತಿರುವುದನ್ನು ಉಲ್ಲೇಖಿಸಿ ಅವರು ಈ ರೀತಿ ಹೇಳಿದರು. ಮಾತುಕತೆ ಪುನರಾರಂಭಿಸಲು ಭಾರತದ ಪ್ರಧಾನಿ ಮನಮೋಹನ್ ಸಿಂಗ್ ರಾಜಕೀಯ ಒತ್ತಡ ಎದುರಿಸುತ್ತಿದ್ದಾರೆ. ಆದರೆ ಮಾತುಕತೆ ಆರಂಭಕ್ಕೆ ಮುಂಬೈ ದಾಳಿಯೇ ಪ್ರಮುಖ ತಡೆ ಆಗಬಾರದು ಎಂದು ವಿದೇಶಿ ಪತ್ರಕರ್ತರೊಂದಿಗೆ ಮಾತನಾಡಿದ ಗಿಲಾನಿ ಅಭಿಪ್ರಾಯಪಟ್ಟರು.<br /> <br /> ಕಾಶ್ಮೀರ ವಿಷಯಕ್ಕೆ ಸಂಬಂಧಿಸಿದಂತೆ ಶಾಂತಿಯುತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಭಾರತದೊಂದಿಗೆ ರಾಜತಾಂತ್ರಿಕ ಪ್ರಯತ್ನಗಳು ನಿರಂತರವಾಗಿ ನಡೆಯುತ್ತಿವೆ ಎಂದ ಅವರು, ಹೆಚ್ಚಿನ ಮಾಹಿತಿ ನೀಡಲಿಲ್ಲ.ಮುಂಬೈ ದಾಳಿಯನ್ನು ಮುಂದಿಟ್ಟುಕೊಂಡು ಭಾರತ ಮಾತುಕತೆ ಸ್ಥಗಿತಗೊಳಿಸಿರುವುದಕ್ಕೆ ಸಂಬಂಧಿಸಿದಂತೆ, ಪುನಃ ಮಾತುಕತೆ ಆರಂಭವಾಗುತ್ತದೆಯೇ ಎನ್ನುವ ಪ್ರಶ್ನೆಗೆ ಶೇ 50: 50ರಷ್ಟು ಎಂದು ಮಾರ್ಮಿಕವಾಗಿ ನುಡಿದರು.<br /> <br /> ಮುಂಬೈ ದಾಳಿಯ ಸಂದರ್ಭದಲ್ಲಿ ಮೃತರಾದ ಇಬ್ಬರು ಯಹೂದಿಗಳ ಸಂಬಂಧಿಕರು ಅಮೆರಿಕ ನ್ಯಾಯಾಲಯದಲ್ಲಿ ಹೂಡಿರುವ ದಾವೆಗೆ ಸಂಬಂಧಿಸಿದಂತೆ ಕೇಳಲಾದ ಪ್ರಶ್ನೆಗೆ, ವಾದಿಸಬೇಕೆ, ಬೇಡವೇ ಎನ್ನುವ ಕುರಿತು ಐಎಸ್ಐ ನಿರ್ಧಾರ ಕೈಗೊಳ್ಳಲಿದೆ.ಈ ನಿಟ್ಟಿನಲ್ಲಿ ಐಎಸ್ಐಗೆ ಪೂರ್ಣ ಅಧಿಕಾರ ನೀಡಲಾಗಿದೆ ಹಾಗೂ ಬೆಂಬಲ ನೀಡುವುದಾಗಿ ಹೇಳಿದರು.<br /> <br /> ಹಾಗೆಯೆ ದಾವೆಯಲ್ಲಿ ಪ್ರತಿವಾದಿಯಾಗಿರುವ ಲಷ್ಕರ್-ಎ-ತೊಯ್ಬಾ ಸಂಘಟನೆಯ ಸಂಸ್ಥಾಪಕ ಹಫೀಜ್ ಮಹಮ್ಮದ್ ಸಯೀದ್ ಅವರ ಪರವಾಗಿಯೂ ವಾದಿಸಲಾಗುವುದೇ ಎನ್ನುವ ಪ್ರಶ್ನೆಗೆ, ಕಾನೂನಿನಂತೆ ಐಎಸ್ಐ ನಿರ್ಧಾರ ಕೈಗೊಳ್ಳುತ್ತದೆ. ಕಾನೂನಿಗಿಂತ ಯಾರೂ ಮೇಲಿಲ್ಲ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>