<p>ಮುಂಬೈ (ಪಿಟಿಐ): 26/11ರ ಮುಂಬೈ ದಾಳಿಯಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಭಯೋತ್ಪಾದಕ ಅಬು ಜುಂದಾಲ್ ಶುಕ್ರವಾರ ಮೆಟ್ರೋಪಾಲಿಟಿನ್ ನ್ಯಾಯಾಲಯದಲ್ಲಿ ತನ್ನ ತಪ್ಪನ್ನು ಒಪ್ಪಿಕೊಳ್ಳುವ ಇಚ್ಛೆ ವ್ಯಕ್ತಪಡಿಸಿದ್ದಾನೆ.<br /> <br /> ಈಗಾಗಲೇ ಮರಣ ದಂಡನೆ ಶಿಕ್ಷೆಗೆ ಗುರಿಯಾಗಿರುವ ಅಜ್ಮಲ್ ಕಸಾಬ್ನನ್ನು ಮುಖಾಮುಖಿಯಾದ ಮಾರನೇ ದಿನವೇ ಜುಂದಾಲ್ ಮುಖ್ಯ ಮೆಟ್ರೋಪಾಲಿಟಿನ್ ನ್ಯಾಯಾಧೀಶ ಪಿ.ಎಸ್. ರಾಥೋಡ್ ಅವರೆದುರು ತಪ್ಪೊಪ್ಪಿಗೆ ಹೇಳಿಕೆ ನೀಡಲು ಸಿದ್ಧ ಎಂದು ತಿಳಿಸಿದ್ದಾನೆ.<br /> <br /> ಮುಂಬೈ ದಾಳಿಯಲ್ಲಿ ತನ್ನ ಪಾತ್ರವೇನಿತ್ತು ಎಂದು ವಿವರಿಸುವುದಾಗಿ ಆತ ತಿಳಿಸಿದ್ದಾನೆ. ತಪ್ಪೊಪ್ಪಿಗೆ ಹೇಳಿಕೆಯನ್ನು ದಾಖಲಿಸುವ ವಿಧಾನ ಮತ್ತು ಅದರಿಂದಾಗುವ ಪರಿಣಾಮಗಳ ಬಗ್ಗೆ ನ್ಯಾಯಾಧೀಶರು ಜುಂದಾಲ್ಗೆ ವಿವರಿಸಿದರು ಎಂದು ಅಪರಾಧ ವಿಭಾಗದ ಪೊಲೀಸ್ ಮೂಲಗಳು ತಿಳಿಸಿವೆ.<br /> <br /> ಹೇಳಿಕೆ ನೀಡುವ ಬಗ್ಗೆ ಪುನಃ ವಿಚಾರ ಮಾಡುವಂತೆ ತಿಳಿಸಿದ ನ್ಯಾಯಾಧೀಶರು, ಎರಡು ದಿನಗಳ ನಂತರ ಹಾಜರುಪಡಿಸಿದಾಗ ತಪ್ಪೊಪ್ಪಿಗೆ ಹೇಳಿಕೆ ನೀಡಿದರೆ ನಿಯಮದ ಪ್ರಕಾರ ದಾಖಲಿಸಿಕೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ. <br /> <br /> ಇದುವರೆಗೆ ಅಪರಾಧ ವಿಭಾಗದ ಪೊಲೀಸರ ವಶದಲ್ಲಿದ್ದ ಜುಂದಾಲ್ನನ್ನು ಶುಕ್ರವಾರದಿಂದ ಅರ್ಥರ್ ರಸ್ತೆಯ ಕೇಂದ್ರ ಕಾರಾಗೃಹದಲ್ಲಿ ಒಂಟಿ ಸೆಲ್ನಲ್ಲಿ ಇರಿಸಲಾಗಿದೆ. ಯಾರ ಪ್ರಭಾವಕ್ಕೂ ಒಳಗಾಗದೆ ಸ್ವಪ್ರೇರಣೆಯಿಂದ ಹೇಳಿಕೆ ನೀಡಲಿ ಎಂಬ ಉದ್ದೇಶದಿಂದ ಒಂಟಿ ಸೆಲ್ನಲ್ಲಿ ಬಂಧಿಸಿಡಲು ನ್ಯಾಯಾಧೀಶರು ಸೂಚಿಸಿದ್ದಾರೆ. <br /> <br /> ಜುಂದಾಲ್ನನ್ನು ನ್ಯಾಯಾಲಯಕ್ಕೆ ಕರೆ ತಂದ ಕೂಡಲೇ ಇತರ ಕಕ್ಷಿದಾರರು ಮತ್ತು ಮಾಧ್ಯಮ ಪ್ರತಿನಿಧಿಗಳಿಗೆ ಹೊರಗೆ ಹೋಗುವಮತೆ ಸೂಚಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮುಂಬೈ (ಪಿಟಿಐ): 26/11ರ ಮುಂಬೈ ದಾಳಿಯಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಭಯೋತ್ಪಾದಕ ಅಬು ಜುಂದಾಲ್ ಶುಕ್ರವಾರ ಮೆಟ್ರೋಪಾಲಿಟಿನ್ ನ್ಯಾಯಾಲಯದಲ್ಲಿ ತನ್ನ ತಪ್ಪನ್ನು ಒಪ್ಪಿಕೊಳ್ಳುವ ಇಚ್ಛೆ ವ್ಯಕ್ತಪಡಿಸಿದ್ದಾನೆ.<br /> <br /> ಈಗಾಗಲೇ ಮರಣ ದಂಡನೆ ಶಿಕ್ಷೆಗೆ ಗುರಿಯಾಗಿರುವ ಅಜ್ಮಲ್ ಕಸಾಬ್ನನ್ನು ಮುಖಾಮುಖಿಯಾದ ಮಾರನೇ ದಿನವೇ ಜುಂದಾಲ್ ಮುಖ್ಯ ಮೆಟ್ರೋಪಾಲಿಟಿನ್ ನ್ಯಾಯಾಧೀಶ ಪಿ.ಎಸ್. ರಾಥೋಡ್ ಅವರೆದುರು ತಪ್ಪೊಪ್ಪಿಗೆ ಹೇಳಿಕೆ ನೀಡಲು ಸಿದ್ಧ ಎಂದು ತಿಳಿಸಿದ್ದಾನೆ.<br /> <br /> ಮುಂಬೈ ದಾಳಿಯಲ್ಲಿ ತನ್ನ ಪಾತ್ರವೇನಿತ್ತು ಎಂದು ವಿವರಿಸುವುದಾಗಿ ಆತ ತಿಳಿಸಿದ್ದಾನೆ. ತಪ್ಪೊಪ್ಪಿಗೆ ಹೇಳಿಕೆಯನ್ನು ದಾಖಲಿಸುವ ವಿಧಾನ ಮತ್ತು ಅದರಿಂದಾಗುವ ಪರಿಣಾಮಗಳ ಬಗ್ಗೆ ನ್ಯಾಯಾಧೀಶರು ಜುಂದಾಲ್ಗೆ ವಿವರಿಸಿದರು ಎಂದು ಅಪರಾಧ ವಿಭಾಗದ ಪೊಲೀಸ್ ಮೂಲಗಳು ತಿಳಿಸಿವೆ.<br /> <br /> ಹೇಳಿಕೆ ನೀಡುವ ಬಗ್ಗೆ ಪುನಃ ವಿಚಾರ ಮಾಡುವಂತೆ ತಿಳಿಸಿದ ನ್ಯಾಯಾಧೀಶರು, ಎರಡು ದಿನಗಳ ನಂತರ ಹಾಜರುಪಡಿಸಿದಾಗ ತಪ್ಪೊಪ್ಪಿಗೆ ಹೇಳಿಕೆ ನೀಡಿದರೆ ನಿಯಮದ ಪ್ರಕಾರ ದಾಖಲಿಸಿಕೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ. <br /> <br /> ಇದುವರೆಗೆ ಅಪರಾಧ ವಿಭಾಗದ ಪೊಲೀಸರ ವಶದಲ್ಲಿದ್ದ ಜುಂದಾಲ್ನನ್ನು ಶುಕ್ರವಾರದಿಂದ ಅರ್ಥರ್ ರಸ್ತೆಯ ಕೇಂದ್ರ ಕಾರಾಗೃಹದಲ್ಲಿ ಒಂಟಿ ಸೆಲ್ನಲ್ಲಿ ಇರಿಸಲಾಗಿದೆ. ಯಾರ ಪ್ರಭಾವಕ್ಕೂ ಒಳಗಾಗದೆ ಸ್ವಪ್ರೇರಣೆಯಿಂದ ಹೇಳಿಕೆ ನೀಡಲಿ ಎಂಬ ಉದ್ದೇಶದಿಂದ ಒಂಟಿ ಸೆಲ್ನಲ್ಲಿ ಬಂಧಿಸಿಡಲು ನ್ಯಾಯಾಧೀಶರು ಸೂಚಿಸಿದ್ದಾರೆ. <br /> <br /> ಜುಂದಾಲ್ನನ್ನು ನ್ಯಾಯಾಲಯಕ್ಕೆ ಕರೆ ತಂದ ಕೂಡಲೇ ಇತರ ಕಕ್ಷಿದಾರರು ಮತ್ತು ಮಾಧ್ಯಮ ಪ್ರತಿನಿಧಿಗಳಿಗೆ ಹೊರಗೆ ಹೋಗುವಮತೆ ಸೂಚಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>