<p><strong>ಹುಬ್ಬಳ್ಳಿ: </strong>ಧಾರವಾಡ ನಗರ ಹಾಗೂ ವಿವಿಧ ತಾಲ್ಲೂಕುಗಳಲ್ಲಿ ಶನಿವಾರ ನಡೆದ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಆಗಮಿಸಿದ್ದ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಭಾನುವಾರ ಬೆಳಿಗ್ಗೆ ಬೆಂಗಳೂರಿಗೆ ವಾಪಸಾದರು.<br /> ಮುಂಜಾನೆ 5.30ಕ್ಕೆ ಎದ್ದ ಅವರು ಖಾಸಗಿ ಕಾರ್ಯಕ್ರಮಗಳಲ್ಲಿ ಭಾಗವಹಿಸಿ 9.30ಕ್ಕೆ ವಿಶೇಷ ವಿಮಾನದಲ್ಲಿ ಪ್ರಯಾಣ ಬೆಳೆಸಿದರು ಎಂದು ಅವರ ಆಪ್ತ ಮೂಲಗಳು ತಿಳಿಸಿವೆ.</p>.<p>ಮುಖ್ಯಮಂತ್ರಿಗಳು ತಮ್ಮ ನಿವಾಸದಲ್ಲಿರುವುದು ತಿಳಿದ ನೂರಾರು ಮಂದಿ ವಿವಿಧ ವಿಷಯಗಳಿಗೆ ಸಂಬಂಧಪಟ್ಟ ಮನವಿ ಪತ್ರಗಳ ಜೊತೆಗೆ ಆಗಮಿಸಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು. ಕೆಲವು ಸಂಘಟನೆಗಳ ಪ್ರತಿನಿಧಿಗಳು ಕೂಡ ಮನವಿ ನೀಡಿದರು.</p>.<p>ಈ ಮಧ್ಯೆ ಬಿಡುವು ಮಾಡಿಕೊಂಡ ಮುಖ್ಯಮಂತ್ರಿಗಳು ನಗರದ ಆರ್ಎಸ್ಎಸ್ ಕಚೇರಿಗೆ ಭೇಟಿ ನೀಡಿ ಮುಖಂಡರ ಜೊತೆ ಮಾತನಾಡಿ ವಾಪಸಾದರು ಎಂದು ಬಿಜೆಪಿಯ ಹಿರಿಯ ಮುಖಂಡರು ತಿಳಿಸಿದ್ದಾರೆ.<br /> ತೆರಿಗೆ ವಿನಾಯಿತಿ ನೀಡಿ: ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದ ವಾಯವ್ಯ ಸಾರಿಗೆ ಮಜ್ದೂರ್ ಸಂಘದ ಸದಸ್ಯರು ಮೋಟಾರ್ ವಾಹನ ತೆರಿಗೆ ವಿನಾಯಿತಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿದರು.</p>.<p>ಗುಲ್ಬರ್ಗದಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಿರುವಂತೆ ತೆರಿಗೆ ವಿನಾಯಿತಿ ನೀಡಬೇಕು, ವಾಯವ್ಯ ಸಾರಿಗೆ ಮಜ್ದೂರ್ ಸಂಘಕ್ಕೆ ವಿಶೇಷ ಅನುದಾನ ನೀಡಬೇಕು, ಕಾರ್ಮಿಕರ ವೇತನ ಪರಿಷ್ಕರಣೆಗೆ ಮುಂದಾಗಬೇಕು, ಸಂಘದ ಮಾನ್ಯತೆಗಾಗಿ ಚುನಾವಣೆ ನಡೆಸಲು ಅವಕಾಶ ನೀಡಬೇಕು ಎಂಬಿತ್ಯಾದಿ ಬೇಡಿಕೆಗಳನ್ನು ಮುಂದಿಡಲಾಯಿತು.</p>.<p>ಸಂಘದ ಕಾರ್ಯಾಧ್ಯಕ್ಷ ಎಚ್.ಜಿ.ಕೊಪ್ಪದ, ಪ್ರಧಾನ ಕಾರ್ಯದರ್ಶಿ ಹನಮಂತಪ್ಪ ಎಸ್. ಇಟಗಿ ಮತ್ತಿತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ: </strong>ಧಾರವಾಡ ನಗರ ಹಾಗೂ ವಿವಿಧ ತಾಲ್ಲೂಕುಗಳಲ್ಲಿ ಶನಿವಾರ ನಡೆದ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಆಗಮಿಸಿದ್ದ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಭಾನುವಾರ ಬೆಳಿಗ್ಗೆ ಬೆಂಗಳೂರಿಗೆ ವಾಪಸಾದರು.<br /> ಮುಂಜಾನೆ 5.30ಕ್ಕೆ ಎದ್ದ ಅವರು ಖಾಸಗಿ ಕಾರ್ಯಕ್ರಮಗಳಲ್ಲಿ ಭಾಗವಹಿಸಿ 9.30ಕ್ಕೆ ವಿಶೇಷ ವಿಮಾನದಲ್ಲಿ ಪ್ರಯಾಣ ಬೆಳೆಸಿದರು ಎಂದು ಅವರ ಆಪ್ತ ಮೂಲಗಳು ತಿಳಿಸಿವೆ.</p>.<p>ಮುಖ್ಯಮಂತ್ರಿಗಳು ತಮ್ಮ ನಿವಾಸದಲ್ಲಿರುವುದು ತಿಳಿದ ನೂರಾರು ಮಂದಿ ವಿವಿಧ ವಿಷಯಗಳಿಗೆ ಸಂಬಂಧಪಟ್ಟ ಮನವಿ ಪತ್ರಗಳ ಜೊತೆಗೆ ಆಗಮಿಸಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು. ಕೆಲವು ಸಂಘಟನೆಗಳ ಪ್ರತಿನಿಧಿಗಳು ಕೂಡ ಮನವಿ ನೀಡಿದರು.</p>.<p>ಈ ಮಧ್ಯೆ ಬಿಡುವು ಮಾಡಿಕೊಂಡ ಮುಖ್ಯಮಂತ್ರಿಗಳು ನಗರದ ಆರ್ಎಸ್ಎಸ್ ಕಚೇರಿಗೆ ಭೇಟಿ ನೀಡಿ ಮುಖಂಡರ ಜೊತೆ ಮಾತನಾಡಿ ವಾಪಸಾದರು ಎಂದು ಬಿಜೆಪಿಯ ಹಿರಿಯ ಮುಖಂಡರು ತಿಳಿಸಿದ್ದಾರೆ.<br /> ತೆರಿಗೆ ವಿನಾಯಿತಿ ನೀಡಿ: ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದ ವಾಯವ್ಯ ಸಾರಿಗೆ ಮಜ್ದೂರ್ ಸಂಘದ ಸದಸ್ಯರು ಮೋಟಾರ್ ವಾಹನ ತೆರಿಗೆ ವಿನಾಯಿತಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿದರು.</p>.<p>ಗುಲ್ಬರ್ಗದಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಿರುವಂತೆ ತೆರಿಗೆ ವಿನಾಯಿತಿ ನೀಡಬೇಕು, ವಾಯವ್ಯ ಸಾರಿಗೆ ಮಜ್ದೂರ್ ಸಂಘಕ್ಕೆ ವಿಶೇಷ ಅನುದಾನ ನೀಡಬೇಕು, ಕಾರ್ಮಿಕರ ವೇತನ ಪರಿಷ್ಕರಣೆಗೆ ಮುಂದಾಗಬೇಕು, ಸಂಘದ ಮಾನ್ಯತೆಗಾಗಿ ಚುನಾವಣೆ ನಡೆಸಲು ಅವಕಾಶ ನೀಡಬೇಕು ಎಂಬಿತ್ಯಾದಿ ಬೇಡಿಕೆಗಳನ್ನು ಮುಂದಿಡಲಾಯಿತು.</p>.<p>ಸಂಘದ ಕಾರ್ಯಾಧ್ಯಕ್ಷ ಎಚ್.ಜಿ.ಕೊಪ್ಪದ, ಪ್ರಧಾನ ಕಾರ್ಯದರ್ಶಿ ಹನಮಂತಪ್ಪ ಎಸ್. ಇಟಗಿ ಮತ್ತಿತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>