<p><strong>ಬೆಂಗಳೂರು:</strong> ಸ್ವಾಧೀನ ಮಾಡಿಕೊಂಡಿರುವ ಭೂಮಿಗೆ ಪರಿಹಾರವಾಗಿ ನೀಡಬೇಕಿರುವ ಹಣವನ್ನು ಇನ್ನು 10 ದಿನಗಳಲ್ಲಿ ಪಾವತಿ ಮಾಡುವುದಾಗಿ ಕೃಷಿಕ ಪಿ. ಅಶ್ವತ್ಥನಾರಾಯಣ ಅವರಿಗೆ ಸರ್ಕಾರದ ಮುಖ್ಯ ಕಾರ್ಯದರ್ಶಿಗಳ ಕಚೇರಿಯ ಅಧಿಕಾರಿಗಳು ಭರವಸೆ ನೀಡಿದ್ದಾರೆ. ಈ ಮೂಲಕ ಜಪ್ತಿಯಾಗುವ ಮುಜುಗರದ ಸನ್ನಿವೇಶದಿಂದ ಮುಖ್ಯ ಕಾರ್ಯದರ್ಶಿಗಳ ಕಚೇರಿ ಪಾರಾಗಿದೆ!</p>.<p>`ಅಶ್ವತ್ಥನಾರಾಯಣ ಅವರಿಗೆ ನೀಡಬೇಕಿರುವ ಪರಿಹಾರದ ಹಣವನ್ನು ಮುಖ್ಯ ಕಾರ್ಯದರ್ಶಿಗಳ ಕಚೇರಿಯ ಚರಾಸ್ತಿಯನ್ನು ಜಪ್ತಿ ಮಾಡಿ ಪಡೆಯುವಂತೆ ನಗರ ಸಿವಿಲ್ ನ್ಯಾಯಾಲಯ ಇತ್ತೀಚೆಗೆ ಆದೇಶಿಸಿತ್ತು. ಈ ಹಿನ್ನೆಲೆಯಲ್ಲಿ ಕಚೇರಿಗೆ ಮಂಗಳವಾರ ತೆರಳಿದ್ದ ನ್ಯಾಯಾಲಯದ ಸಹಾಯಕರಿಗೆ (ಕೋರ್ಟ್ ಅಮಿನ್) ಎಸ್.ವಿ. ರಂಗನಾಥ್ ಅವರ ಆಪ್ತ ಕಾರ್ಯದರ್ಶಿಗಳು ಲಿಖಿತ ಭರವಸೆ ನೀಡಿದ್ದಾರೆ~ ಎಂದು ಅಶ್ವತ್ಥನಾರಾಯಣ ಪರ ವಕೀಲ ಎನ್. ನಾಗರಾಜ ತಿಳಿಸಿದರು.</p>.<p>`ನನಗೆ ಬರಬೇಕಿರುವ ಪರಿಹಾರದ ಹಣವನ್ನು ಹತ್ತು ದಿನಗಳಲ್ಲಿ ಪಾವತಿ ಮಾಡದಿದ್ದರೆ, ಸಿವಿಲ್ ನ್ಯಾಯಾಲಯ ನೀಡಿರುವ ಆದೇಶವನ್ನೇ ಮುಂದಿಟ್ಟುಕೊಂಡು ಜಪ್ತಿಗೆ ಮತ್ತೊಮ್ಮೆ ಮುಂದಾಗುವೆ~ ಎಂದು ಅಶ್ವತ್ಥನಾರಾಯಣ ಹೇಳಿದರು.</p>.<p><strong>ಏನಿದು ಪ್ರಕರಣ?:</strong> ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಗೆ (ಡಿಆರ್ಡಿಒ) ನೀಡುವ ಉದ್ದೇಶದಿಂದ ರಾಜ್ಯ ಸರ್ಕಾರ ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಾಗುವ ಮಾರ್ಗದಲ್ಲಿನ ದೊಡ್ಡಬಿದರೆ ಹೋಬಳಿಯ ಕಟ್ಟಗೊಲ್ಲಹಳ್ಳಿಯಲ್ಲಿ 1993-94ರಲ್ಲಿ ಭೂಸ್ವಾಧೀನ ಮಾಡಿಕೊಂಡಿತ್ತು. ಅದರಲ್ಲಿ ಅಶ್ವತ್ಥನಾರಾಯಣ ಅವರಿಗೆ ಸೇರಿದ ಎರಡು ಎಕರೆ ಭೂಮಿಯೂ ಸೇರಿತ್ತು.</p>.<p>`ಎಕರೆಗೆ 60 ಸಾವಿರ ರೂಪಾಯಿ ಪರಿಹಾರ ನೀಡುವುದಾಗಿ ಆಗ ಸರ್ಕಾರ ಹೇಳಿತ್ತು. ಆದರೆ ಇದು ಕಡಿಮೆಯಾಯಿತು ಎಂದು ನಾವು ನ್ಯಾಯಾಲಯದ ಮೊರೆ ಹೋದೆವು. ನಮ್ಮ ಮನವಿ ಆಲಿಸಿದ ನ್ಯಾಯಾಲಯ, ಎಕರೆಗೆ 3.15 ಲಕ್ಷ ರೂಪಾಯಿ ಪರಿಹಾರ ನೀಡುವಂತೆ ಸರ್ಕಾರಕ್ಕೆ ಆದೇಶ ನೀಡಿತು~ ಎಂದು ನಾಗರಾಜ ಹೇಳಿದರು.</p>.<p>`ಸಿವಿಲ್ ನ್ಯಾಯಾಲಯದ ಆದೇಶ ಪ್ರಶ್ನಿಸಿ ಸರ್ಕಾರ ಮತ್ತು ಡಿಆರ್ಡಿಒ ಅಧಿಕಾರಿಗಳು ಹೈಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಸಿದರು. ಆದರೆ ಎಕರೆಗೆ ಏಳು ಲಕ್ಷ ರೂಪಾಯಿ ಮತ್ತು ಬಡ್ಡಿಯನ್ನು ಪರಿಹಾರ ರೂಪದಲ್ಲಿ ನೀಡುವಂತೆ ಹೈಕೋರ್ಟ್ ಆದೇಶಿಸಿದೆ~ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಸ್ವಾಧೀನ ಮಾಡಿಕೊಂಡಿರುವ ಭೂಮಿಗೆ ಪರಿಹಾರವಾಗಿ ನೀಡಬೇಕಿರುವ ಹಣವನ್ನು ಇನ್ನು 10 ದಿನಗಳಲ್ಲಿ ಪಾವತಿ ಮಾಡುವುದಾಗಿ ಕೃಷಿಕ ಪಿ. ಅಶ್ವತ್ಥನಾರಾಯಣ ಅವರಿಗೆ ಸರ್ಕಾರದ ಮುಖ್ಯ ಕಾರ್ಯದರ್ಶಿಗಳ ಕಚೇರಿಯ ಅಧಿಕಾರಿಗಳು ಭರವಸೆ ನೀಡಿದ್ದಾರೆ. ಈ ಮೂಲಕ ಜಪ್ತಿಯಾಗುವ ಮುಜುಗರದ ಸನ್ನಿವೇಶದಿಂದ ಮುಖ್ಯ ಕಾರ್ಯದರ್ಶಿಗಳ ಕಚೇರಿ ಪಾರಾಗಿದೆ!</p>.<p>`ಅಶ್ವತ್ಥನಾರಾಯಣ ಅವರಿಗೆ ನೀಡಬೇಕಿರುವ ಪರಿಹಾರದ ಹಣವನ್ನು ಮುಖ್ಯ ಕಾರ್ಯದರ್ಶಿಗಳ ಕಚೇರಿಯ ಚರಾಸ್ತಿಯನ್ನು ಜಪ್ತಿ ಮಾಡಿ ಪಡೆಯುವಂತೆ ನಗರ ಸಿವಿಲ್ ನ್ಯಾಯಾಲಯ ಇತ್ತೀಚೆಗೆ ಆದೇಶಿಸಿತ್ತು. ಈ ಹಿನ್ನೆಲೆಯಲ್ಲಿ ಕಚೇರಿಗೆ ಮಂಗಳವಾರ ತೆರಳಿದ್ದ ನ್ಯಾಯಾಲಯದ ಸಹಾಯಕರಿಗೆ (ಕೋರ್ಟ್ ಅಮಿನ್) ಎಸ್.ವಿ. ರಂಗನಾಥ್ ಅವರ ಆಪ್ತ ಕಾರ್ಯದರ್ಶಿಗಳು ಲಿಖಿತ ಭರವಸೆ ನೀಡಿದ್ದಾರೆ~ ಎಂದು ಅಶ್ವತ್ಥನಾರಾಯಣ ಪರ ವಕೀಲ ಎನ್. ನಾಗರಾಜ ತಿಳಿಸಿದರು.</p>.<p>`ನನಗೆ ಬರಬೇಕಿರುವ ಪರಿಹಾರದ ಹಣವನ್ನು ಹತ್ತು ದಿನಗಳಲ್ಲಿ ಪಾವತಿ ಮಾಡದಿದ್ದರೆ, ಸಿವಿಲ್ ನ್ಯಾಯಾಲಯ ನೀಡಿರುವ ಆದೇಶವನ್ನೇ ಮುಂದಿಟ್ಟುಕೊಂಡು ಜಪ್ತಿಗೆ ಮತ್ತೊಮ್ಮೆ ಮುಂದಾಗುವೆ~ ಎಂದು ಅಶ್ವತ್ಥನಾರಾಯಣ ಹೇಳಿದರು.</p>.<p><strong>ಏನಿದು ಪ್ರಕರಣ?:</strong> ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಗೆ (ಡಿಆರ್ಡಿಒ) ನೀಡುವ ಉದ್ದೇಶದಿಂದ ರಾಜ್ಯ ಸರ್ಕಾರ ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಾಗುವ ಮಾರ್ಗದಲ್ಲಿನ ದೊಡ್ಡಬಿದರೆ ಹೋಬಳಿಯ ಕಟ್ಟಗೊಲ್ಲಹಳ್ಳಿಯಲ್ಲಿ 1993-94ರಲ್ಲಿ ಭೂಸ್ವಾಧೀನ ಮಾಡಿಕೊಂಡಿತ್ತು. ಅದರಲ್ಲಿ ಅಶ್ವತ್ಥನಾರಾಯಣ ಅವರಿಗೆ ಸೇರಿದ ಎರಡು ಎಕರೆ ಭೂಮಿಯೂ ಸೇರಿತ್ತು.</p>.<p>`ಎಕರೆಗೆ 60 ಸಾವಿರ ರೂಪಾಯಿ ಪರಿಹಾರ ನೀಡುವುದಾಗಿ ಆಗ ಸರ್ಕಾರ ಹೇಳಿತ್ತು. ಆದರೆ ಇದು ಕಡಿಮೆಯಾಯಿತು ಎಂದು ನಾವು ನ್ಯಾಯಾಲಯದ ಮೊರೆ ಹೋದೆವು. ನಮ್ಮ ಮನವಿ ಆಲಿಸಿದ ನ್ಯಾಯಾಲಯ, ಎಕರೆಗೆ 3.15 ಲಕ್ಷ ರೂಪಾಯಿ ಪರಿಹಾರ ನೀಡುವಂತೆ ಸರ್ಕಾರಕ್ಕೆ ಆದೇಶ ನೀಡಿತು~ ಎಂದು ನಾಗರಾಜ ಹೇಳಿದರು.</p>.<p>`ಸಿವಿಲ್ ನ್ಯಾಯಾಲಯದ ಆದೇಶ ಪ್ರಶ್ನಿಸಿ ಸರ್ಕಾರ ಮತ್ತು ಡಿಆರ್ಡಿಒ ಅಧಿಕಾರಿಗಳು ಹೈಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಸಿದರು. ಆದರೆ ಎಕರೆಗೆ ಏಳು ಲಕ್ಷ ರೂಪಾಯಿ ಮತ್ತು ಬಡ್ಡಿಯನ್ನು ಪರಿಹಾರ ರೂಪದಲ್ಲಿ ನೀಡುವಂತೆ ಹೈಕೋರ್ಟ್ ಆದೇಶಿಸಿದೆ~ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>