<p><strong>ಮುಂಬೈ (ಪಿಟಿಐ): </strong>ಸಂಸ್ಥೆಯನ್ನು ಮುಚ್ಚುವ ವದಂತಿಗೆ ತೆರೆ ಎಳೆಯಲು ಪ್ರಯತ್ನಿಸಿರುವ ಕಿಂಗ್ಫಿಷರ್, ಬ್ಯಾಂಕ್ ಖಾತೆಗಳ ಮುಟ್ಟುಗೋಲು ತೆರವುಗೊಳಿಸಲು ಆದಾಯ ತೆರಿಗೆ ಅಧಿಕಾರಿಗಳ ಜತೆ ಸಮಾಲೋಚನೆ ನಡೆಸುತ್ತಿರುವುದಾಗಿ ಭಾನುವಾರ ಹೇಳಿದೆ. ಅಲ್ಲದೆ, ಪ್ರತಿಭಟನಾ ನಿರತ ಪೈಲಟ್ಗಳಿಗೆ ಕರ್ತವ್ಯಕ್ಕೆ ಹಾಜರಾಗುವಂತೆ ಸೂಚನೆ ನೀಡಿದೆ.<br /> <br /> ಕರ್ತವ್ಯಕ್ಕೆ ಹಾಜರಾಗದಿದ್ದರೆ ಕಠಿಣ ಕ್ರಮ ತೆಗೆದುಕೊಳ್ಳಬೇಕಾಗುತ್ತದೆ ಎಂದು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಂಜಯ್ ಅಗರವಾಲ್, ಗುರುವಾರ ನಡೆದ ಸಭೆಯಲ್ಲಿ ಎಚ್ಚರಿಕೆ ನೀಡುವ ಮೂಲಕ ಸಂಸ್ಥೆಯನ್ನು ಮುಚ್ಚುವ ಸೂಚನೆ ನೀಡಿದ್ದರು ಎಂದು ಪೈಲಟ್ಗಳು ಹೇಳಿದ್ದಾರೆ.<br /> <br /> `ಕರ್ತವ್ಯಕ್ಕೆ ಹಾಜರಾಗುವಂತೆ ಮನವಿ ಮಾಡಲು ಅಗರವಾಲ್ ಪೈಲಟ್ಗಳನ್ನು ಭೇಟಿಯಾಗಿದ್ದರು. ಸಂಸ್ಥೆಯನ್ನು ಮುಚ್ಚುವ ಸೂಚನೆ ನೀಡಿಲ್ಲ~ ಎಂದು ಕಿಂಗ್ಫಿಷರ್ ಏರ್ಲೈನ್ಸ್ನ ಕಾರ್ಪೊರೇಟ್ ಸಂಪರ್ಕದ ಉಪಾಧ್ಯಕ್ಷ ಪ್ರಕಾಶ್ ಮಿರ್ಪುರಿ ಹೇಳಿದ್ದಾರೆ.<br /> <br /> `ಆದಾಯ ತೆರಿಗೆ ಅಧಿಕಾರಿಗಳ ಜತೆ ನಮ್ಮ ಕೈಲಾದ ರೀತಿಯಲ್ಲಿ ಸಹಕರಿಸುತ್ತಿದ್ದೇವೆ ಮತ್ತು ಶೀಘ್ರವೇ ಬ್ಯಾಂಕ್ ಖಾತೆಗಳನ್ನು ಮುಟ್ಟುಗೋಲಿನಿಂದ ತೆರವುಗೊಳಿಸಿಕೊಳ್ಳಲು ಪ್ರಯತ್ನಿಸುತ್ತಿದ್ದೇವೆ. ಇದರಿಂದ ವೇತನ ಪಾವತಿಗೆ ಅನುಕೂಲವಾಗುತ್ತದೆ~ ಎಂದು ತಿಳಿಸಿದ್ದಾರೆ.<br /> <br /> ಆದರೆ, ಗುರುವಾರದ ಸಭೆಯಲ್ಲಿ ನಡೆದ ಚರ್ಚೆಯ ಬಗ್ಗೆ ಪೈಲಟ್ಗಳು ವ್ಯತಿರಿಕ್ತವಾದ ಹೇಳಿಕೆ ನೀಡಿದ್ದಾರೆ.<br /> `ನಿಮಗೆ ಇಷ್ಟವಿದ್ದರೆ ಕೆಲಸಕ್ಕೆ ಬನ್ನಿ, ಇಲ್ಲದಿದ್ದರೆ ನಾವು ಕಠಿಣ ನಿರ್ಧಾರ (ಸಂಸ್ಥೆಯನ್ನು ಸಂಪೂರ್ಣವಾಗಿ ಮುಚ್ಚುವುದು) ತೆಗೆದುಕೊಳ್ಳಬೇಕಾಗುತ್ತದೆ. ಮಾರ್ಚ್ 10ರೊಳಗೆ ಏನನ್ನೂ ಹೇಳಲಾಗದು~ ಎಂದು ಅಗರವಾಲ್ ತಿಳಿಸಿದ್ದಾಗಿ ಪೈಲಟ್ಗಳು ಹೇಳಿದ್ದಾರೆ.<br /> <br /> `ಡಿಸೆಂಬರ್ನಿಂದ ಬಾಕಿ ಇರುವ ವೇತನ ಪಾವತಿಸುವಂತೆ ನಾವು ಮುಂದಿಟ್ಟಿರುವ ಬೇಡಿಕೆ ಈಡೇರಿಸಲು ಅಗರವಾಲ್ ಬದ್ಧರಾಗಿಲ್ಲ~ ಎಂದು ಹಿರಿಯ ಪೈಲಟ್ ಒಬ್ಬರು ಹೇಳಿದ್ದಾರೆ.<br /> <br /> 40 ಕೋಟಿ ರೂಪಾಯಿ ತೆರಿಗೆ ಬಾಕಿ ಪಾವತಿಸದ ಕಾರಣ ಆದಾಯ ತೆರಿಗೆ ಅಧಿಕಾರಿಗಳು ಸಂಸ್ಥೆಯ ಸುಮಾರು 40 ಬ್ಯಾಂಕ್ ಖಾತೆಗಳನ್ನು ಶನಿವಾರ ಮುಟ್ಟುಗೋಲು ಹಾಕಿಕೊಂಡಿದ್ದರು.<br /> <br /> `ಸಂಸ್ಥೆಯು ಸಮಸ್ಯೆಗಳಿಂದ ಹೊರಬಂದು ಮತ್ತೆ ಕಾರ್ಯಾರಂಭ ಮಾಡಲು ಒಂದು ಅವಕಾಶ ನೀಡಲಾಗುತ್ತದೆ. ಅದಕ್ಕಾಗಿ ವಿಮಾನ ಹಾರಾಟ ಪರವಾನಗಿಯನ್ನು ತಾತ್ಕಾಲಿಕವಾಗಿ ಅಮಾನತುಗೊಳಿಸಲಾಗುತ್ತದೆ~ ಎಂದು ನಾಗರಿಕ ವಿಮಾನಯಾನ ಸಚಿವ ಅಜಿತ್ ಸಿಂಗ್ ಸೂಚನೆ ನೀಡಿದ್ದಾರೆ.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ (ಪಿಟಿಐ): </strong>ಸಂಸ್ಥೆಯನ್ನು ಮುಚ್ಚುವ ವದಂತಿಗೆ ತೆರೆ ಎಳೆಯಲು ಪ್ರಯತ್ನಿಸಿರುವ ಕಿಂಗ್ಫಿಷರ್, ಬ್ಯಾಂಕ್ ಖಾತೆಗಳ ಮುಟ್ಟುಗೋಲು ತೆರವುಗೊಳಿಸಲು ಆದಾಯ ತೆರಿಗೆ ಅಧಿಕಾರಿಗಳ ಜತೆ ಸಮಾಲೋಚನೆ ನಡೆಸುತ್ತಿರುವುದಾಗಿ ಭಾನುವಾರ ಹೇಳಿದೆ. ಅಲ್ಲದೆ, ಪ್ರತಿಭಟನಾ ನಿರತ ಪೈಲಟ್ಗಳಿಗೆ ಕರ್ತವ್ಯಕ್ಕೆ ಹಾಜರಾಗುವಂತೆ ಸೂಚನೆ ನೀಡಿದೆ.<br /> <br /> ಕರ್ತವ್ಯಕ್ಕೆ ಹಾಜರಾಗದಿದ್ದರೆ ಕಠಿಣ ಕ್ರಮ ತೆಗೆದುಕೊಳ್ಳಬೇಕಾಗುತ್ತದೆ ಎಂದು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಂಜಯ್ ಅಗರವಾಲ್, ಗುರುವಾರ ನಡೆದ ಸಭೆಯಲ್ಲಿ ಎಚ್ಚರಿಕೆ ನೀಡುವ ಮೂಲಕ ಸಂಸ್ಥೆಯನ್ನು ಮುಚ್ಚುವ ಸೂಚನೆ ನೀಡಿದ್ದರು ಎಂದು ಪೈಲಟ್ಗಳು ಹೇಳಿದ್ದಾರೆ.<br /> <br /> `ಕರ್ತವ್ಯಕ್ಕೆ ಹಾಜರಾಗುವಂತೆ ಮನವಿ ಮಾಡಲು ಅಗರವಾಲ್ ಪೈಲಟ್ಗಳನ್ನು ಭೇಟಿಯಾಗಿದ್ದರು. ಸಂಸ್ಥೆಯನ್ನು ಮುಚ್ಚುವ ಸೂಚನೆ ನೀಡಿಲ್ಲ~ ಎಂದು ಕಿಂಗ್ಫಿಷರ್ ಏರ್ಲೈನ್ಸ್ನ ಕಾರ್ಪೊರೇಟ್ ಸಂಪರ್ಕದ ಉಪಾಧ್ಯಕ್ಷ ಪ್ರಕಾಶ್ ಮಿರ್ಪುರಿ ಹೇಳಿದ್ದಾರೆ.<br /> <br /> `ಆದಾಯ ತೆರಿಗೆ ಅಧಿಕಾರಿಗಳ ಜತೆ ನಮ್ಮ ಕೈಲಾದ ರೀತಿಯಲ್ಲಿ ಸಹಕರಿಸುತ್ತಿದ್ದೇವೆ ಮತ್ತು ಶೀಘ್ರವೇ ಬ್ಯಾಂಕ್ ಖಾತೆಗಳನ್ನು ಮುಟ್ಟುಗೋಲಿನಿಂದ ತೆರವುಗೊಳಿಸಿಕೊಳ್ಳಲು ಪ್ರಯತ್ನಿಸುತ್ತಿದ್ದೇವೆ. ಇದರಿಂದ ವೇತನ ಪಾವತಿಗೆ ಅನುಕೂಲವಾಗುತ್ತದೆ~ ಎಂದು ತಿಳಿಸಿದ್ದಾರೆ.<br /> <br /> ಆದರೆ, ಗುರುವಾರದ ಸಭೆಯಲ್ಲಿ ನಡೆದ ಚರ್ಚೆಯ ಬಗ್ಗೆ ಪೈಲಟ್ಗಳು ವ್ಯತಿರಿಕ್ತವಾದ ಹೇಳಿಕೆ ನೀಡಿದ್ದಾರೆ.<br /> `ನಿಮಗೆ ಇಷ್ಟವಿದ್ದರೆ ಕೆಲಸಕ್ಕೆ ಬನ್ನಿ, ಇಲ್ಲದಿದ್ದರೆ ನಾವು ಕಠಿಣ ನಿರ್ಧಾರ (ಸಂಸ್ಥೆಯನ್ನು ಸಂಪೂರ್ಣವಾಗಿ ಮುಚ್ಚುವುದು) ತೆಗೆದುಕೊಳ್ಳಬೇಕಾಗುತ್ತದೆ. ಮಾರ್ಚ್ 10ರೊಳಗೆ ಏನನ್ನೂ ಹೇಳಲಾಗದು~ ಎಂದು ಅಗರವಾಲ್ ತಿಳಿಸಿದ್ದಾಗಿ ಪೈಲಟ್ಗಳು ಹೇಳಿದ್ದಾರೆ.<br /> <br /> `ಡಿಸೆಂಬರ್ನಿಂದ ಬಾಕಿ ಇರುವ ವೇತನ ಪಾವತಿಸುವಂತೆ ನಾವು ಮುಂದಿಟ್ಟಿರುವ ಬೇಡಿಕೆ ಈಡೇರಿಸಲು ಅಗರವಾಲ್ ಬದ್ಧರಾಗಿಲ್ಲ~ ಎಂದು ಹಿರಿಯ ಪೈಲಟ್ ಒಬ್ಬರು ಹೇಳಿದ್ದಾರೆ.<br /> <br /> 40 ಕೋಟಿ ರೂಪಾಯಿ ತೆರಿಗೆ ಬಾಕಿ ಪಾವತಿಸದ ಕಾರಣ ಆದಾಯ ತೆರಿಗೆ ಅಧಿಕಾರಿಗಳು ಸಂಸ್ಥೆಯ ಸುಮಾರು 40 ಬ್ಯಾಂಕ್ ಖಾತೆಗಳನ್ನು ಶನಿವಾರ ಮುಟ್ಟುಗೋಲು ಹಾಕಿಕೊಂಡಿದ್ದರು.<br /> <br /> `ಸಂಸ್ಥೆಯು ಸಮಸ್ಯೆಗಳಿಂದ ಹೊರಬಂದು ಮತ್ತೆ ಕಾರ್ಯಾರಂಭ ಮಾಡಲು ಒಂದು ಅವಕಾಶ ನೀಡಲಾಗುತ್ತದೆ. ಅದಕ್ಕಾಗಿ ವಿಮಾನ ಹಾರಾಟ ಪರವಾನಗಿಯನ್ನು ತಾತ್ಕಾಲಿಕವಾಗಿ ಅಮಾನತುಗೊಳಿಸಲಾಗುತ್ತದೆ~ ಎಂದು ನಾಗರಿಕ ವಿಮಾನಯಾನ ಸಚಿವ ಅಜಿತ್ ಸಿಂಗ್ ಸೂಚನೆ ನೀಡಿದ್ದಾರೆ.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>