<p><strong>ನವದೆಹಲಿ (ಪಿಟಿಐ): </strong>ಕೋಮು ಗಲಭೆಗೆ ತುತ್ತಾದ ಉತ್ತರ ಪ್ರದೇಶದ ಮುಜಫ್ಫರ್ನಗರ ಜಿಲ್ಲೆಯಲ್ಲಿ ಆರಂಭಿಸಲಾದ ಪರಿಹಾರ ಶಿಬಿರದಲ್ಲಿ 40 ಮಕ್ಕಳು ಸಾವಿಗೀಡಾಗಿರುವ ವಿಷಯದ ಬಗ್ಗೆ ಸುಪ್ರೀಂಕೋರ್ಟ್ ತೀವ್ರ ಕಳವಳ ವ್ಯಕ್ತಪಡಿಸಿದ್ದು, ಮಿತಿ ಮೀರಿದ ಚಳಿಯಿಂದ ರಕ್ಷಣೆಗೆ ರಾಜ್ಯ ಸರ್ಕಾರ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಆದೇಶಿಸಿದೆ.<br /> <br /> ಪರಿಹಾರ ಕೇಂದ್ರಗಳಲ್ಲಿ ದಾಖಲಾದವರ ಆರೋಗ್ಯದ ಕುರಿತು ಅಗತ್ಯ ಕ್ರಮ ಕೈಗೊಳ್ಳಲು ತಾನು ಆದೇಶ ನೀಡಿದ ನಂತರವೂ ಸಾವಿನ ಪ್ರಕರಣ ವರದಿಯಾಗುತ್ತಿದ್ದು, ಈ ಬಗ್ಗೆ ಮಾಧ್ಯಮ ವರದಿಗಳು ಗಮನಸೆಳೆದಿವೆ. ಹಾಗಾಗಿ ಈ ಕುರಿತು ರಾಜ್ಯದ ಆಡಳಿತ ಸರಿಯಾದ ಮಾಹಿತಿ ನೀಡಬೇಕು ಎಂದು ಕೋರ್ಟ್ ಸೂಚಿಸಿದೆ.<br /> <br /> ‘ಮಕ್ಕಳ ಸಾವಿನ ಪ್ರಕರಣ ಹೆಚ್ಚುತ್ತಿರುವ ಕುರಿತು ಸಂಸತ್ತಿನಲ್ಲೂ ತೀವ್ರ ಚರ್ಚೆಯಾಗುತ್ತಿದ್ದು, ಮಾಧ್ಯಮ ವರದಿಗಳನ್ನು ನಾವು ಓದಿದ್ದೇವೆ’ ಎಂದು ಮುಖ್ಯ ನ್ಯಾಯಮೂರ್ತಿ ಪಿ. ಸದಾಶಿವಂ ಹಾಗೂ ನ್ಯಾಯಮೂರ್ತಿಗಳಾದ ರಂಜನಾ ಪ್ರಕಾಶ್ ದೇಸಾಯಿ ಹಾಗೂ ರಂಜನ್ ಗೊಗೋಯಿ ಅವರನ್ನು ಒಳಗೊಂಡ ಪೀಠ ಕಳವಳವ್ಯಕ್ತಪಡಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ (ಪಿಟಿಐ): </strong>ಕೋಮು ಗಲಭೆಗೆ ತುತ್ತಾದ ಉತ್ತರ ಪ್ರದೇಶದ ಮುಜಫ್ಫರ್ನಗರ ಜಿಲ್ಲೆಯಲ್ಲಿ ಆರಂಭಿಸಲಾದ ಪರಿಹಾರ ಶಿಬಿರದಲ್ಲಿ 40 ಮಕ್ಕಳು ಸಾವಿಗೀಡಾಗಿರುವ ವಿಷಯದ ಬಗ್ಗೆ ಸುಪ್ರೀಂಕೋರ್ಟ್ ತೀವ್ರ ಕಳವಳ ವ್ಯಕ್ತಪಡಿಸಿದ್ದು, ಮಿತಿ ಮೀರಿದ ಚಳಿಯಿಂದ ರಕ್ಷಣೆಗೆ ರಾಜ್ಯ ಸರ್ಕಾರ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಆದೇಶಿಸಿದೆ.<br /> <br /> ಪರಿಹಾರ ಕೇಂದ್ರಗಳಲ್ಲಿ ದಾಖಲಾದವರ ಆರೋಗ್ಯದ ಕುರಿತು ಅಗತ್ಯ ಕ್ರಮ ಕೈಗೊಳ್ಳಲು ತಾನು ಆದೇಶ ನೀಡಿದ ನಂತರವೂ ಸಾವಿನ ಪ್ರಕರಣ ವರದಿಯಾಗುತ್ತಿದ್ದು, ಈ ಬಗ್ಗೆ ಮಾಧ್ಯಮ ವರದಿಗಳು ಗಮನಸೆಳೆದಿವೆ. ಹಾಗಾಗಿ ಈ ಕುರಿತು ರಾಜ್ಯದ ಆಡಳಿತ ಸರಿಯಾದ ಮಾಹಿತಿ ನೀಡಬೇಕು ಎಂದು ಕೋರ್ಟ್ ಸೂಚಿಸಿದೆ.<br /> <br /> ‘ಮಕ್ಕಳ ಸಾವಿನ ಪ್ರಕರಣ ಹೆಚ್ಚುತ್ತಿರುವ ಕುರಿತು ಸಂಸತ್ತಿನಲ್ಲೂ ತೀವ್ರ ಚರ್ಚೆಯಾಗುತ್ತಿದ್ದು, ಮಾಧ್ಯಮ ವರದಿಗಳನ್ನು ನಾವು ಓದಿದ್ದೇವೆ’ ಎಂದು ಮುಖ್ಯ ನ್ಯಾಯಮೂರ್ತಿ ಪಿ. ಸದಾಶಿವಂ ಹಾಗೂ ನ್ಯಾಯಮೂರ್ತಿಗಳಾದ ರಂಜನಾ ಪ್ರಕಾಶ್ ದೇಸಾಯಿ ಹಾಗೂ ರಂಜನ್ ಗೊಗೋಯಿ ಅವರನ್ನು ಒಳಗೊಂಡ ಪೀಠ ಕಳವಳವ್ಯಕ್ತಪಡಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>