<p>ಮೈಸೂರು: ವಿಧಾನ ಪರಿಷತ್ತಿನ ದಕ್ಷಿಣ ಪದವೀಧರ ಕ್ಷೇತ್ರ ವ್ಯಾಪ್ತಿಯ ನಾಲ್ಕು ದೇವಾಲಯಗಳಿಗೆ ರಾಜ್ಯ ಸರ್ಕಾರ ಅನುದಾನ ಬಿಡುಗಡೆ ಮಾಡಿ ಆದೇಶ ಹೊರಡಿಸಿದೆ ಎಂದು ವಿಧಾನ ಪರಿಷತ್ ಸದಸ್ಯ ಗೋ. ಮಧುಸೂದನ್ ತಿಳಿಸಿದ್ದಾರೆ.<br /> <br /> ಕ್ಷೇತ್ರ ವ್ಯಾಪ್ತಿಯ ಮೈಸೂರು, ಹಾಸನ, ಮಂಡ್ಯ ಹಾಗೂ ಚಾಮರಾಜನಗರ ಜಿಲ್ಲೆಯ ನಾಲ್ಕು ದೇವಾಲಯಗಳಿಗೆ ಸರ್ಕಾರ ₨ 10 ಲಕ್ಷ ಬಿಡುಗಡೆ ಮಾಡಿದೆ.<br /> <br /> ಮೈಸೂರಿನ ಸಂತೆಪೇಟೆಯ ಪ್ರಸನ್ನ ನಂಜುಂಡೇಶ್ವರಸ್ವಾಮಿ ದೇವಸ್ಥಾನ, ಗುಂಡ್ಲುಪೇಟೆ ತಾಲ್ಲೂಕಿನ ಹುಲುಗನಮುರಡಿ ಗ್ರಾಮದ ವೆಂಕಟರಾಮಣಸ್ವಾಮಿ ದೇವಸ್ಥಾನ, ಪಾಂಡವಪುರ ತಾಲ್ಲೂಕಿನ ಕೋದಂಡರಾಮಸ್ವಾಮಿ ದೇವಾಲಯ ಹಾಗೂ ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲ್ಲೂಕಿನ ಆನೆಕನ್ನಂಬಾಡಿಯ ತ್ರಿಕೂಟಾಚಲ ದೇವಾಲಯಗಳಿಗೆ ಮುಜರಾಯಿ ಸಚಿವ ಪ್ರಕಾಶ್ ಹುಕ್ಕೇರಿ ಅವರು ತಲಾ ₨ 2.5 ಲಕ್ಷ ಅನುದಾನ ಬಿಡುಗಡೆ ಮಾಡಿ ಆದೇಶ ಹೊರಡಿಸಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.<br /> <br /> ವಿಧಾನ ಪರಿಷತ್ತಿನ ದಕ್ಷಿಣ ಪದವೀಧರ ಕ್ಷೇತ್ರ ವ್ಯಾಪ್ತಿಯಲ್ಲಿ ಐತಿಹಾಸಿಕ ದೇವಾಲಯಗಳಿವೆ. ಈ ಪೈಕಿ ಕೆಲವು ದೇವಾಲಯಗಳು ಶಿಥಿಲಾವಸ್ಥೆ ತಲುಪಿವೆ. ಹೀಗಾಗಿ, ದೇವಾಲಯಗಳ ಅಭಿವೃದ್ಧಿಗೆ ಸೂಕ್ತ ಅನುದಾನ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿ ಫೆ. 15ರಂದು ಸಚಿವರಿಗೆ ಮನವಿ ಸಲ್ಲಿಸಲಾಗಿತ್ತು ಎಂದು ಶಾಸಕ ಗೋ. ಮಧುಸೂದನ್ ಹೇಳಿದ್ದಾರೆ.<br /> <br /> <strong>‘ಕೈಗಾರಿಕೆಯಿಂದ ಜೀವವೈವಿಧ್ಯ ನಾಶ’</strong><br /> ಕೊಳ್ಳೇಗಾಲ: ‘ಕೈಗಾರಿಕಾ ಕ್ರಾಂತಿ ಮತ್ತು ಇತರೆ ಕಾರಣಗಳಿಂದ ಜೈವಿಕ ಸಂಪತ್ತು ನಶಿಸುತ್ತಿದೆ’ ಎಂದು ಉಪನ್ಯಾಸಕ ಜಿ.ಕೆ. ಕಾಂತರಾಜು ತಿಳಿಸಿದರು.<br /> <br /> ತಾಲ್ಲೂಕಿನ ದೊಡ್ಡಿಂದುವಾಡಿ ಸರ್ಕಾರಿ ಪ್ರೌಢಶಾಲೆಯಲ್ಲಿ ರಾಜ್ಯ ವಿಜ್ಞಾನ ಪರಿಷತ್ತು ಜಿಲ್ಲಾ ಸಮಿತಿ ವತಿಯಿಂದ ‘ನಿಮ್ಮ ಬಳಿಗೆ ವಿಜ್ಞಾನ’ ಶೀರ್ಷಿಕೆಯಡಿ ಸೋಮವಾರ ಏರ್ಪಡಿಸಿದ್ದ ‘ಜೀವಿ ವೈವಿದರ್ಯತೆಯ ಸಂರಕ್ಷಣೆ ಅಗತ್ಯತೆ’ ಕುರಿತ ಮಾತನಾಡಿದರು.<br /> <br /> ಭೂಮಿ ಮೇಲಿನ ಜೀವಗಳ ನಡುವಿನ ಸೂಕ್ಷ್ಮ ಸಂಬಂಧಗಳು ಈಚೆಗೆ ಹಾಳಾಗುತ್ತಿವೆ. ಅನೇಕ ಜೀವ ಪ್ರಭೇದಗಳು ವಿನಾಶದ ಅಂಚಿನಲ್ಲಿವೆ. ಇದರ ಪರಿಣಾಮ ಪರಿಸರದಲ್ಲಿ ಅಸಮತೋಲನ ಉಂಟಾಗಿದೆ ಎಂದರು.<br /> <br /> ರಾಜ್ಯ ವಿಜ್ಞಾನ ಪರಿಷತ್ ಜಿಲ್ಲಾ ಸಮಿತಿ ಕಾರ್ಯದರ್ಶಿ ಬಿ.ಎನ್. ಶಿವಶಂಕರ್ ಮಾತನಾಡಿ, ವಿಜ್ಞಾನ ಮತ್ತು ವೈಜ್ಞಾನಿಕ ಮನೋಭಾವದ ಬಗ್ಗೆ ವಿವರಣೆ ನೀಡಿದರು.<br /> <br /> ಪ್ರೌಢಶಾಲೆ ಮುಖ್ಯ ಶಿಕ್ಷಕ ಚಿನ್ನಸ್ವಾಮಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ವಿಜ್ಞಾನ ಶಿಕ್ಷಕಿ ಚಂದ್ರಕಲಾ, ವೆಂಕಟಾಚಲ, ಜೋಸೆಫ್ ರವಿ, ಜಯಕುಮಾರ್, ಚಿಕ್ಕರಾಜು, ರಾಧಿಕಾ, ಮಹೇಶ್, ಕಿರಣ್ಕುಮಾರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮೈಸೂರು: ವಿಧಾನ ಪರಿಷತ್ತಿನ ದಕ್ಷಿಣ ಪದವೀಧರ ಕ್ಷೇತ್ರ ವ್ಯಾಪ್ತಿಯ ನಾಲ್ಕು ದೇವಾಲಯಗಳಿಗೆ ರಾಜ್ಯ ಸರ್ಕಾರ ಅನುದಾನ ಬಿಡುಗಡೆ ಮಾಡಿ ಆದೇಶ ಹೊರಡಿಸಿದೆ ಎಂದು ವಿಧಾನ ಪರಿಷತ್ ಸದಸ್ಯ ಗೋ. ಮಧುಸೂದನ್ ತಿಳಿಸಿದ್ದಾರೆ.<br /> <br /> ಕ್ಷೇತ್ರ ವ್ಯಾಪ್ತಿಯ ಮೈಸೂರು, ಹಾಸನ, ಮಂಡ್ಯ ಹಾಗೂ ಚಾಮರಾಜನಗರ ಜಿಲ್ಲೆಯ ನಾಲ್ಕು ದೇವಾಲಯಗಳಿಗೆ ಸರ್ಕಾರ ₨ 10 ಲಕ್ಷ ಬಿಡುಗಡೆ ಮಾಡಿದೆ.<br /> <br /> ಮೈಸೂರಿನ ಸಂತೆಪೇಟೆಯ ಪ್ರಸನ್ನ ನಂಜುಂಡೇಶ್ವರಸ್ವಾಮಿ ದೇವಸ್ಥಾನ, ಗುಂಡ್ಲುಪೇಟೆ ತಾಲ್ಲೂಕಿನ ಹುಲುಗನಮುರಡಿ ಗ್ರಾಮದ ವೆಂಕಟರಾಮಣಸ್ವಾಮಿ ದೇವಸ್ಥಾನ, ಪಾಂಡವಪುರ ತಾಲ್ಲೂಕಿನ ಕೋದಂಡರಾಮಸ್ವಾಮಿ ದೇವಾಲಯ ಹಾಗೂ ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲ್ಲೂಕಿನ ಆನೆಕನ್ನಂಬಾಡಿಯ ತ್ರಿಕೂಟಾಚಲ ದೇವಾಲಯಗಳಿಗೆ ಮುಜರಾಯಿ ಸಚಿವ ಪ್ರಕಾಶ್ ಹುಕ್ಕೇರಿ ಅವರು ತಲಾ ₨ 2.5 ಲಕ್ಷ ಅನುದಾನ ಬಿಡುಗಡೆ ಮಾಡಿ ಆದೇಶ ಹೊರಡಿಸಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.<br /> <br /> ವಿಧಾನ ಪರಿಷತ್ತಿನ ದಕ್ಷಿಣ ಪದವೀಧರ ಕ್ಷೇತ್ರ ವ್ಯಾಪ್ತಿಯಲ್ಲಿ ಐತಿಹಾಸಿಕ ದೇವಾಲಯಗಳಿವೆ. ಈ ಪೈಕಿ ಕೆಲವು ದೇವಾಲಯಗಳು ಶಿಥಿಲಾವಸ್ಥೆ ತಲುಪಿವೆ. ಹೀಗಾಗಿ, ದೇವಾಲಯಗಳ ಅಭಿವೃದ್ಧಿಗೆ ಸೂಕ್ತ ಅನುದಾನ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿ ಫೆ. 15ರಂದು ಸಚಿವರಿಗೆ ಮನವಿ ಸಲ್ಲಿಸಲಾಗಿತ್ತು ಎಂದು ಶಾಸಕ ಗೋ. ಮಧುಸೂದನ್ ಹೇಳಿದ್ದಾರೆ.<br /> <br /> <strong>‘ಕೈಗಾರಿಕೆಯಿಂದ ಜೀವವೈವಿಧ್ಯ ನಾಶ’</strong><br /> ಕೊಳ್ಳೇಗಾಲ: ‘ಕೈಗಾರಿಕಾ ಕ್ರಾಂತಿ ಮತ್ತು ಇತರೆ ಕಾರಣಗಳಿಂದ ಜೈವಿಕ ಸಂಪತ್ತು ನಶಿಸುತ್ತಿದೆ’ ಎಂದು ಉಪನ್ಯಾಸಕ ಜಿ.ಕೆ. ಕಾಂತರಾಜು ತಿಳಿಸಿದರು.<br /> <br /> ತಾಲ್ಲೂಕಿನ ದೊಡ್ಡಿಂದುವಾಡಿ ಸರ್ಕಾರಿ ಪ್ರೌಢಶಾಲೆಯಲ್ಲಿ ರಾಜ್ಯ ವಿಜ್ಞಾನ ಪರಿಷತ್ತು ಜಿಲ್ಲಾ ಸಮಿತಿ ವತಿಯಿಂದ ‘ನಿಮ್ಮ ಬಳಿಗೆ ವಿಜ್ಞಾನ’ ಶೀರ್ಷಿಕೆಯಡಿ ಸೋಮವಾರ ಏರ್ಪಡಿಸಿದ್ದ ‘ಜೀವಿ ವೈವಿದರ್ಯತೆಯ ಸಂರಕ್ಷಣೆ ಅಗತ್ಯತೆ’ ಕುರಿತ ಮಾತನಾಡಿದರು.<br /> <br /> ಭೂಮಿ ಮೇಲಿನ ಜೀವಗಳ ನಡುವಿನ ಸೂಕ್ಷ್ಮ ಸಂಬಂಧಗಳು ಈಚೆಗೆ ಹಾಳಾಗುತ್ತಿವೆ. ಅನೇಕ ಜೀವ ಪ್ರಭೇದಗಳು ವಿನಾಶದ ಅಂಚಿನಲ್ಲಿವೆ. ಇದರ ಪರಿಣಾಮ ಪರಿಸರದಲ್ಲಿ ಅಸಮತೋಲನ ಉಂಟಾಗಿದೆ ಎಂದರು.<br /> <br /> ರಾಜ್ಯ ವಿಜ್ಞಾನ ಪರಿಷತ್ ಜಿಲ್ಲಾ ಸಮಿತಿ ಕಾರ್ಯದರ್ಶಿ ಬಿ.ಎನ್. ಶಿವಶಂಕರ್ ಮಾತನಾಡಿ, ವಿಜ್ಞಾನ ಮತ್ತು ವೈಜ್ಞಾನಿಕ ಮನೋಭಾವದ ಬಗ್ಗೆ ವಿವರಣೆ ನೀಡಿದರು.<br /> <br /> ಪ್ರೌಢಶಾಲೆ ಮುಖ್ಯ ಶಿಕ್ಷಕ ಚಿನ್ನಸ್ವಾಮಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ವಿಜ್ಞಾನ ಶಿಕ್ಷಕಿ ಚಂದ್ರಕಲಾ, ವೆಂಕಟಾಚಲ, ಜೋಸೆಫ್ ರವಿ, ಜಯಕುಮಾರ್, ಚಿಕ್ಕರಾಜು, ರಾಧಿಕಾ, ಮಹೇಶ್, ಕಿರಣ್ಕುಮಾರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>