<p><strong>ನವದೆಹಲಿ (ಪಿಟಿಐ): `</strong>ಸಮಾಜವಾದಿ ಪಕ್ಷದ ಮುಖ್ಯಸ್ಥ ಮುಲಾಯಂ ಸಿಂಗ್ ಯಾದವ್ ವಿರುದ್ಧ ಹೋರಾಡುತ್ತಿರುವ ನನ್ನನ್ನು ಯಾರಾದರು ತಡೆಯಲು ಪ್ರಯತ್ನಿಸಿದರೆ ಕಾಂಗ್ರೆಸ್ ತ್ಯಜಿಸುತ್ತೇನೆ' ಎಂದು ಕೇಂದ್ರ ಉಕ್ಕು ಖಾತೆ ಸಚಿವ ಬೇಣಿ ಪ್ರಸಾದ್ ವರ್ಮಾ ಬೆದರಿಕೆ ಹಾಕಿದ್ದಾರೆ.<br /> <br /> ಮುಲಾಯಂ ಯಾದವ್ ವಿರುದ್ಧ ಕೆಟ್ಟ ಭಾಷೆ ಬಳಸಿದ್ದ ಬೇಣಿ ಅವರಿಗೆ ಉತ್ತರ ಪ್ರದೇಶದ ಕಾಂಗ್ರೆಸ್ ಉಸ್ತುವಾರಿ ಮಧುಸೂದನ್ ಮಿಸ್ತ್ರಿ ಅವರು ಬುಧವಾರ ಛೀಮಾರಿ ಹಾಕಿದ ಬೆನ್ನಲ್ಲೇ ಅವರಿಂದ ಈ ಹೇಳಿಕೆ ಹೊರಬಿದ್ದಿದೆ.<br /> <br /> `ನನ್ನ ಹೇಳಿಕೆ ದಿನಪತ್ರಿಕೆಗಳಲ್ಲಿ ಪ್ರಕಟಗೊಂಡ ನಂತರ ಪ್ರತಿಕೃತಿ ದಹಿಸಲಾಗಿದೆ. ಇದರಿಂದ ನಾನು ತೀವ್ರ ಅವಮಾನಕ್ಕೆ ಒಳಗಾಗಿದ್ದೇನೆ. ಶೀಘ್ರವೇ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಭೇಟಿಯಾಗಿ ಈ ಕುರಿತು ಚರ್ಚಿಸುವೆ' ಎಂದು ಬೇಣಿ ಗುರುವಾರ ಇಲ್ಲಿ ಸುದ್ದಿಗಾರರಿಗೆ ತಿಳಿಸಿದ್ದಾರೆ.<br /> <br /> `ಕುರ್ಚಿ ಅಥವಾ ಸಚಿವ ಸ್ಥಾನಕ್ಕಾಗಿ ನಾನು ರಾಜಕೀಯದಲ್ಲಿ ಇಲ್ಲ. ನಾನು ಮೌಲ್ಯಗಳನ್ನು ನಂಬಿದ್ದೇನೆ. ನಾನು ಯಾವುದೇ ವೇಳೆ ಕಾಂಗ್ರೆಸ್ ತೊರೆಯಬಹುದು ಅಥವಾ ಆ ಪಕ್ಷವೇ ನನ್ನನ್ನು ಹೊರಹಾಕಬಹುದು. ಮುಲಾಯಂ ವಿರುದ್ಧ ಹೋರಾಡುತ್ತಿರುವ ನನ್ನನ್ನು ತಡೆದರೆ ರಾಜೀನಾಮೆ ನೀಡುತ್ತೇನೆ' ಎಂದು ಹೇಳಿದ್ದಾರೆ.<br /> <br /> `ಪ್ರಧಾನಿಯಾಗುವ ಮಹದಾಸೆ ಹೊಂದಿರುವ ಮುಲಾಯಂ ಸಿಂಗ್ ಯಾದವ್ ಅವರು ಮೊದಲು ಪ್ರಧಾನಿ ಕಚೇರಿಯಲ್ಲಿ ಕಸ ಗುಡಿಸುವವನ ಕೆಲಸಕ್ಕೆ ಪ್ರಯತ್ನಿಸಬೇಕು' ಎಂದು ಬೇಣಿ ಈಚೆಗೆ ವಿವಾದಾತ್ಮಕ ಹೇಳಿಕೆ ನೀಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ (ಪಿಟಿಐ): `</strong>ಸಮಾಜವಾದಿ ಪಕ್ಷದ ಮುಖ್ಯಸ್ಥ ಮುಲಾಯಂ ಸಿಂಗ್ ಯಾದವ್ ವಿರುದ್ಧ ಹೋರಾಡುತ್ತಿರುವ ನನ್ನನ್ನು ಯಾರಾದರು ತಡೆಯಲು ಪ್ರಯತ್ನಿಸಿದರೆ ಕಾಂಗ್ರೆಸ್ ತ್ಯಜಿಸುತ್ತೇನೆ' ಎಂದು ಕೇಂದ್ರ ಉಕ್ಕು ಖಾತೆ ಸಚಿವ ಬೇಣಿ ಪ್ರಸಾದ್ ವರ್ಮಾ ಬೆದರಿಕೆ ಹಾಕಿದ್ದಾರೆ.<br /> <br /> ಮುಲಾಯಂ ಯಾದವ್ ವಿರುದ್ಧ ಕೆಟ್ಟ ಭಾಷೆ ಬಳಸಿದ್ದ ಬೇಣಿ ಅವರಿಗೆ ಉತ್ತರ ಪ್ರದೇಶದ ಕಾಂಗ್ರೆಸ್ ಉಸ್ತುವಾರಿ ಮಧುಸೂದನ್ ಮಿಸ್ತ್ರಿ ಅವರು ಬುಧವಾರ ಛೀಮಾರಿ ಹಾಕಿದ ಬೆನ್ನಲ್ಲೇ ಅವರಿಂದ ಈ ಹೇಳಿಕೆ ಹೊರಬಿದ್ದಿದೆ.<br /> <br /> `ನನ್ನ ಹೇಳಿಕೆ ದಿನಪತ್ರಿಕೆಗಳಲ್ಲಿ ಪ್ರಕಟಗೊಂಡ ನಂತರ ಪ್ರತಿಕೃತಿ ದಹಿಸಲಾಗಿದೆ. ಇದರಿಂದ ನಾನು ತೀವ್ರ ಅವಮಾನಕ್ಕೆ ಒಳಗಾಗಿದ್ದೇನೆ. ಶೀಘ್ರವೇ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಭೇಟಿಯಾಗಿ ಈ ಕುರಿತು ಚರ್ಚಿಸುವೆ' ಎಂದು ಬೇಣಿ ಗುರುವಾರ ಇಲ್ಲಿ ಸುದ್ದಿಗಾರರಿಗೆ ತಿಳಿಸಿದ್ದಾರೆ.<br /> <br /> `ಕುರ್ಚಿ ಅಥವಾ ಸಚಿವ ಸ್ಥಾನಕ್ಕಾಗಿ ನಾನು ರಾಜಕೀಯದಲ್ಲಿ ಇಲ್ಲ. ನಾನು ಮೌಲ್ಯಗಳನ್ನು ನಂಬಿದ್ದೇನೆ. ನಾನು ಯಾವುದೇ ವೇಳೆ ಕಾಂಗ್ರೆಸ್ ತೊರೆಯಬಹುದು ಅಥವಾ ಆ ಪಕ್ಷವೇ ನನ್ನನ್ನು ಹೊರಹಾಕಬಹುದು. ಮುಲಾಯಂ ವಿರುದ್ಧ ಹೋರಾಡುತ್ತಿರುವ ನನ್ನನ್ನು ತಡೆದರೆ ರಾಜೀನಾಮೆ ನೀಡುತ್ತೇನೆ' ಎಂದು ಹೇಳಿದ್ದಾರೆ.<br /> <br /> `ಪ್ರಧಾನಿಯಾಗುವ ಮಹದಾಸೆ ಹೊಂದಿರುವ ಮುಲಾಯಂ ಸಿಂಗ್ ಯಾದವ್ ಅವರು ಮೊದಲು ಪ್ರಧಾನಿ ಕಚೇರಿಯಲ್ಲಿ ಕಸ ಗುಡಿಸುವವನ ಕೆಲಸಕ್ಕೆ ಪ್ರಯತ್ನಿಸಬೇಕು' ಎಂದು ಬೇಣಿ ಈಚೆಗೆ ವಿವಾದಾತ್ಮಕ ಹೇಳಿಕೆ ನೀಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>