<p><strong>ಬೆಂಗಳೂರು</strong>: ಸೆಪ್ಟೆಂಬರ್ 2ರಂದು ನಡೆಯಲಿರುವ ಅಖಿಲ ಭಾರತ ಸಾರ್ವತ್ರಿಕ ಮುಷ್ಕರವನ್ನು ಬೆಂಬಲಿಸಿ ಕೇಂದ್ರ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿಯು ಮಂಗಳವಾರ ಪ್ರತಿಭಟನಾ ಸಮಾವೇಶ ನಡೆಸಿತು.<br /> <br /> ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಿಂದ ಮೆರವಣಿಗೆಯಲ್ಲಿ ಬಂದ ನೂರಾರು ಜನರು, ಸ್ವಾತಂತ್ರ್ಯ ಉದ್ಯಾನದಲ್ಲಿ ಜಮಾಯಿಸಿದರು.<br /> ಈ ವೇಳೆ, ಸಿಐಟಿಯು, ಎಐಟಿಯುಸಿ, ಐಎನ್ಟಿಯುಸಿ, ಎಚ್ಎಂಎಸ್ ಸೇರಿದಂತೆ ವಿವಿಧ ಸಂಘಟನೆಗಳ ಮುಖಂಡರು ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಗಳ ವಿರುದ್ಧ ವಾಗ್ದಾಳಿ ನಡೆಸಿದರು.<br /> <br /> ‘ಸರ್ಕಾರಗಳು ಕಾರ್ಮಿಕ ಪರ ಕಾಯ್ದೆಗಳನ್ನು ಗಂಭೀರವಾಗಿ ಅನುಷ್ಠಾನ ಮಾಡಬೇಕು. ಅಸಂಘಟಿತ ವರ್ಗದ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಒದಗಿಸಿ, ಅವರಿಗೆ ಪಿಂಚಣಿ ನೀಡಬೇಕು’ ಎಂದು ಒತ್ತಾಯಿಸಿದರು.<br /> <br /> ‘ಕೇಂದ್ರದ ಮೋದಿ ಸರ್ಕಾರವು ಬಂಡವಾಳಶಾಹಿಗಳ ಪರವಾಗಿ ಕೆಲಸ ಮಾಡುತ್ತಿದೆ’ ಎಂದು ದೂರಿದ ಮುಖಂಡರು, ‘ಸರ್ಕಾರವು ಗುತ್ತಿಗೆ ಕಾರ್ಮಿಕ ಪದ್ಧತಿಯನ್ನು ಕೂಡಲೇ ನಿಲ್ಲಿಸಬೇಕು. ತಿಂಗಳ ಕನಿಷ್ಠ ಕೂಲಿಯನ್ನು ₹ 18 ಸಾವಿರಕ್ಕೆ ಹೆಚ್ಚಿಸಬೇಕು’ ಎಂದು ಆಗ್ರಹಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಸೆಪ್ಟೆಂಬರ್ 2ರಂದು ನಡೆಯಲಿರುವ ಅಖಿಲ ಭಾರತ ಸಾರ್ವತ್ರಿಕ ಮುಷ್ಕರವನ್ನು ಬೆಂಬಲಿಸಿ ಕೇಂದ್ರ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿಯು ಮಂಗಳವಾರ ಪ್ರತಿಭಟನಾ ಸಮಾವೇಶ ನಡೆಸಿತು.<br /> <br /> ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಿಂದ ಮೆರವಣಿಗೆಯಲ್ಲಿ ಬಂದ ನೂರಾರು ಜನರು, ಸ್ವಾತಂತ್ರ್ಯ ಉದ್ಯಾನದಲ್ಲಿ ಜಮಾಯಿಸಿದರು.<br /> ಈ ವೇಳೆ, ಸಿಐಟಿಯು, ಎಐಟಿಯುಸಿ, ಐಎನ್ಟಿಯುಸಿ, ಎಚ್ಎಂಎಸ್ ಸೇರಿದಂತೆ ವಿವಿಧ ಸಂಘಟನೆಗಳ ಮುಖಂಡರು ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಗಳ ವಿರುದ್ಧ ವಾಗ್ದಾಳಿ ನಡೆಸಿದರು.<br /> <br /> ‘ಸರ್ಕಾರಗಳು ಕಾರ್ಮಿಕ ಪರ ಕಾಯ್ದೆಗಳನ್ನು ಗಂಭೀರವಾಗಿ ಅನುಷ್ಠಾನ ಮಾಡಬೇಕು. ಅಸಂಘಟಿತ ವರ್ಗದ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಒದಗಿಸಿ, ಅವರಿಗೆ ಪಿಂಚಣಿ ನೀಡಬೇಕು’ ಎಂದು ಒತ್ತಾಯಿಸಿದರು.<br /> <br /> ‘ಕೇಂದ್ರದ ಮೋದಿ ಸರ್ಕಾರವು ಬಂಡವಾಳಶಾಹಿಗಳ ಪರವಾಗಿ ಕೆಲಸ ಮಾಡುತ್ತಿದೆ’ ಎಂದು ದೂರಿದ ಮುಖಂಡರು, ‘ಸರ್ಕಾರವು ಗುತ್ತಿಗೆ ಕಾರ್ಮಿಕ ಪದ್ಧತಿಯನ್ನು ಕೂಡಲೇ ನಿಲ್ಲಿಸಬೇಕು. ತಿಂಗಳ ಕನಿಷ್ಠ ಕೂಲಿಯನ್ನು ₹ 18 ಸಾವಿರಕ್ಕೆ ಹೆಚ್ಚಿಸಬೇಕು’ ಎಂದು ಆಗ್ರಹಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>