<p><strong>ನರಸಿಂಹರಾಜಪುರ:</strong> ತಾಲ್ಲೂಕಿನಾದ್ಯಂತ ಬುಧವಾರ ಭಾರಿ ಪ್ರಮಾಣದಲ್ಲಿ ಸುರಿದಿದ್ದ ಆರಿದ್ರಾ ಮಳೆ ಗುರುವಾರ ಬೆಳಿಗ್ಗೆಯಿಂದಲೇ ಕ್ಷೀಣಿಸಿತ್ತು. ಬುಧವಾರ ದಿಂದ ಗುರುವಾರ ಬೆಳಿಗ್ಗೆಯವರೆಗೆ 98.6 ಮಿ.ಮೀ ಮಳೆಯಾಗಿದೆ.<br /> <br /> ಬುಧವಾರ ಸುರಿದ ಭಾರಿ ಮಳೆಗೆ ತಾಲ್ಲೂಕಿನ ಶೆಟ್ಟಿಕೊಪ್ಪ ಗ್ರಾಮದಿಂದ ನೇರಲೆಕೊಪ್ಪ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಸೇತುವೆಯ ಬಳಿ ಮಣ್ಣು ಕುಸಿದಿದ್ದು ನೀರು ನುಗ್ಗಿದ ರಭಸಕ್ಕೆ ಹೊಸದಾಗಿ ನಿರ್ಮಿಸಿದ್ದ ರಸ್ತೆ ಸಂಪೂರ್ಣ ಶಿಥಿಲಗೊಂಡಿದೆ.<br /> <br /> ಬುಧವಾರ ಸೇತುವೆಯ ಮೇಲೆ ಸುಮಾರು 5 ಅಡಿಗೂ ಹೆಚ್ಚಿನ ನೀರು ಉಕ್ಕಿಹರಿಯಿತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದರು. ಗುರುವಾರವೂ ಹಳ್ಳದಲ್ಲಿ ನೀರು ತುಂಬಿ ಹರಿಯುತ್ತಿತ್ತು. ಶೆಟ್ಟಿಕೊಪ್ಪ ಗ್ರಾಮದ ಕೆರೆಯೂ ಸಹ ತುಂಬಿ ಹರಿದಿದೆ.<br /> <br /> ಶೆಟ್ಟಿಕೊಪ್ಪದ ಭದ್ರಾ ಕಾಲೋನಿಗೆ ಸಂಪರ್ಕಕಲ್ಪಿಸುವ ಕಾಲುವೆ ಸೇತುವೆ ಕುಸಿಯುವ ಹಂತ ತಲುಪಿದೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ. ಗುರುವಾರ ಮಳೆ ಬಿಡುವು ನೀಡಿದ್ದರಿಂದ ಬತ್ತದ ಬೆಳೆಗಾರರು ಸಸಿ ಹಾಕುವ, ಗದ್ದೆ ಬದು ಸರಿಪಡಿಸುವ ಕಾರ್ಯದಲ್ಲಿ ನಿರತರಾಗಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನರಸಿಂಹರಾಜಪುರ:</strong> ತಾಲ್ಲೂಕಿನಾದ್ಯಂತ ಬುಧವಾರ ಭಾರಿ ಪ್ರಮಾಣದಲ್ಲಿ ಸುರಿದಿದ್ದ ಆರಿದ್ರಾ ಮಳೆ ಗುರುವಾರ ಬೆಳಿಗ್ಗೆಯಿಂದಲೇ ಕ್ಷೀಣಿಸಿತ್ತು. ಬುಧವಾರ ದಿಂದ ಗುರುವಾರ ಬೆಳಿಗ್ಗೆಯವರೆಗೆ 98.6 ಮಿ.ಮೀ ಮಳೆಯಾಗಿದೆ.<br /> <br /> ಬುಧವಾರ ಸುರಿದ ಭಾರಿ ಮಳೆಗೆ ತಾಲ್ಲೂಕಿನ ಶೆಟ್ಟಿಕೊಪ್ಪ ಗ್ರಾಮದಿಂದ ನೇರಲೆಕೊಪ್ಪ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಸೇತುವೆಯ ಬಳಿ ಮಣ್ಣು ಕುಸಿದಿದ್ದು ನೀರು ನುಗ್ಗಿದ ರಭಸಕ್ಕೆ ಹೊಸದಾಗಿ ನಿರ್ಮಿಸಿದ್ದ ರಸ್ತೆ ಸಂಪೂರ್ಣ ಶಿಥಿಲಗೊಂಡಿದೆ.<br /> <br /> ಬುಧವಾರ ಸೇತುವೆಯ ಮೇಲೆ ಸುಮಾರು 5 ಅಡಿಗೂ ಹೆಚ್ಚಿನ ನೀರು ಉಕ್ಕಿಹರಿಯಿತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದರು. ಗುರುವಾರವೂ ಹಳ್ಳದಲ್ಲಿ ನೀರು ತುಂಬಿ ಹರಿಯುತ್ತಿತ್ತು. ಶೆಟ್ಟಿಕೊಪ್ಪ ಗ್ರಾಮದ ಕೆರೆಯೂ ಸಹ ತುಂಬಿ ಹರಿದಿದೆ.<br /> <br /> ಶೆಟ್ಟಿಕೊಪ್ಪದ ಭದ್ರಾ ಕಾಲೋನಿಗೆ ಸಂಪರ್ಕಕಲ್ಪಿಸುವ ಕಾಲುವೆ ಸೇತುವೆ ಕುಸಿಯುವ ಹಂತ ತಲುಪಿದೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ. ಗುರುವಾರ ಮಳೆ ಬಿಡುವು ನೀಡಿದ್ದರಿಂದ ಬತ್ತದ ಬೆಳೆಗಾರರು ಸಸಿ ಹಾಕುವ, ಗದ್ದೆ ಬದು ಸರಿಪಡಿಸುವ ಕಾರ್ಯದಲ್ಲಿ ನಿರತರಾಗಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>