<p><strong>ಹುಬ್ಬಳ್ಳಿ: </strong>ನ್ಯಾಯಮೂರ್ತಿ ಲಿಬ್ಹರಾನ್ ಆಯೋಗದ ವರದಿ ಆಧಾರದ ಮೇಲೆ ಬಾಬರಿ ಮಸೀದಿ ಧ್ವಂಸಗೊಳಿಸಿದವರನ್ನು ಶಿಕ್ಷಿಸುವಂತೆ ಒತ್ತಾಯಿಸಿ ಶುಕ್ರವಾರ ಕರಾಳ ದಿನ ಆಚರಿಸಿದ ಮುಸ್ಲಿಮರು ಕರ್ನಾಟಕ ಮುಸ್ಲಿಂ ಏಕೀಕರಣ ಸಮಿತಿ ನೇತೃತ್ವದಲ್ಲಿ ನಗರದಲ್ಲಿ ಮೌನಮೆರವಣಿಗೆ ಮೂಲಕ ಪ್ರತಿಭಟನೆ ನಡೆಸಿದರು.<br /> <br /> ಮುಸ್ಲಿಂ ಏಕೀಕರಣ ಸಮಿತಿ ಅಧ್ಯಕ್ಷ ದಾದಾಪೀರ ಎಂ.ಕೊಪ್ಪಳ ನೇತೃತ್ವದಲ್ಲಿ ಹಳೇಹುಬ್ಬಳ್ಳಿ ಸದರ ಸೋಫಾದಿಂದ ಪ್ರತಿಭಟನೆ ಆರಂಭಿಸಿದ ಮುಸ್ಲಿಮರು, ಕಪ್ಪು ಪಟ್ಟಿ ಧರಿಸಿಕೊಂಡು ಮೆರವಣಿಗೆಯಲ್ಲಿ ತಹಸೀಲ್ದಾರ್ ಕಚೇರಿಗೆ ಬಂದರು.<br /> <br /> ಅಯೋಧ್ಯೆಯಲ್ಲಿ ಬಾಬರಿ ಮಸೀದಿ ಧ್ವಂಸಗೊಳಿಸಿ 21 ವರ್ಷಗಳಾಗಿದ್ದು, ಇಲ್ಲಿಯವರೆಗೂ ಆರೋಪಿಗಳಿಗೆ ಶಿಕ್ಷೆಯಾಗಿಲ್ಲ.<br /> <br /> ಬಾಬರಿ ಮಸೀದಿ ಧ್ವಂಸಗೊಳಿಸಿದ ಪ್ರಕರಣದಲ್ಲಿ ಲಿಬ್ಹರಾನ್ ಆಯೋಗ ಬಿಜೆಪಿ ಮುಖಂಡರಾದ ಎಲ್.ಕೆ.ಅಡ್ವಾಣಿ, ಉಮಾಭಾರತಿ ಸೇರಿದಂತೆ 68 ಮಂದಿಯನ್ನು ಪ್ರಮುಖ ಆರೋಪಿಗಳು ಎಂದು ಗುರ್ತಿಸಿದೆ. ಮಸೀದಿ ಧ್ವಂಸ ಪ್ರಕರಣದಿಂದಾಗಿ ದೇಶದ ಮುಸ್ಲಿಮ್ ಸಮುದಾಯದ ಭಾವನೆಗಳಿಗೆ ಧಕ್ಕೆಯಾಗಿದೆ ಎಂದು ಪ್ರತಿಭಟನಾಕಾರರು ಆಪಾದಿಸಿದರು.<br /> <br /> ಕೇಂದ್ರ ಸರ್ಕಾರ ಕೂಡಲೇ ಮುಂದಾಗಿ ಆರೋಪಿಗಳಿಗೆ ಶಿಕ್ಷೆ ವಿಧಿಸಲಿ. ಧ್ವಂಸಗೊಂಡ ಸ್ಥಳದಲ್ಲಿಯೇ ಮಸೀದಿಯನ್ನು ಪುನರ್ ನಿರ್ಮಿಸಲಿ ಎಂದು ಒತ್ತಾಯಿಸಿದರು.<br /> <br /> ಪ್ರತಿಭಟನೆಯ ನಂತರ ತಹಸೀಲ್ದಾರ್ ಮೂಲಕ ರಾಷ್ಟ್ರಪತಿಗೆ, ಪ್ರಧಾನಿ ಹಾಗೂ ಕೇಂದ್ರಗೃಹ ಸಚಿವರಿಗೆ ಮನವಿ ಸಲ್ಲಿಸಲಾಯಿತು.<br /> ಪ್ರತಿಭಟನೆಯಲ್ಲಿ ಕರ್ನಾಟಕ ಮುಸ್ಲಿಂ ಏಕೀಕರಣ ಸಮಿತಿಯ ಪದಾಧಿಕಾರಿಗಳಾದ ಸಲಾವುದ್ದೀನ್ ಮುಲ್ಲಾ, ಮುಜಾಹಿದ್ ಜನಾಬ, ಜಲಾಜಸಾಬ ವಿಜಾಪುರಿ, ನಿಜಾಮುದ್ದೀನ್ ಬೇಪಾರಿ, ನರಸಪ್ಪ ಚಲವಾದಿ ಮತ್ತಿತರರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ: </strong>ನ್ಯಾಯಮೂರ್ತಿ ಲಿಬ್ಹರಾನ್ ಆಯೋಗದ ವರದಿ ಆಧಾರದ ಮೇಲೆ ಬಾಬರಿ ಮಸೀದಿ ಧ್ವಂಸಗೊಳಿಸಿದವರನ್ನು ಶಿಕ್ಷಿಸುವಂತೆ ಒತ್ತಾಯಿಸಿ ಶುಕ್ರವಾರ ಕರಾಳ ದಿನ ಆಚರಿಸಿದ ಮುಸ್ಲಿಮರು ಕರ್ನಾಟಕ ಮುಸ್ಲಿಂ ಏಕೀಕರಣ ಸಮಿತಿ ನೇತೃತ್ವದಲ್ಲಿ ನಗರದಲ್ಲಿ ಮೌನಮೆರವಣಿಗೆ ಮೂಲಕ ಪ್ರತಿಭಟನೆ ನಡೆಸಿದರು.<br /> <br /> ಮುಸ್ಲಿಂ ಏಕೀಕರಣ ಸಮಿತಿ ಅಧ್ಯಕ್ಷ ದಾದಾಪೀರ ಎಂ.ಕೊಪ್ಪಳ ನೇತೃತ್ವದಲ್ಲಿ ಹಳೇಹುಬ್ಬಳ್ಳಿ ಸದರ ಸೋಫಾದಿಂದ ಪ್ರತಿಭಟನೆ ಆರಂಭಿಸಿದ ಮುಸ್ಲಿಮರು, ಕಪ್ಪು ಪಟ್ಟಿ ಧರಿಸಿಕೊಂಡು ಮೆರವಣಿಗೆಯಲ್ಲಿ ತಹಸೀಲ್ದಾರ್ ಕಚೇರಿಗೆ ಬಂದರು.<br /> <br /> ಅಯೋಧ್ಯೆಯಲ್ಲಿ ಬಾಬರಿ ಮಸೀದಿ ಧ್ವಂಸಗೊಳಿಸಿ 21 ವರ್ಷಗಳಾಗಿದ್ದು, ಇಲ್ಲಿಯವರೆಗೂ ಆರೋಪಿಗಳಿಗೆ ಶಿಕ್ಷೆಯಾಗಿಲ್ಲ.<br /> <br /> ಬಾಬರಿ ಮಸೀದಿ ಧ್ವಂಸಗೊಳಿಸಿದ ಪ್ರಕರಣದಲ್ಲಿ ಲಿಬ್ಹರಾನ್ ಆಯೋಗ ಬಿಜೆಪಿ ಮುಖಂಡರಾದ ಎಲ್.ಕೆ.ಅಡ್ವಾಣಿ, ಉಮಾಭಾರತಿ ಸೇರಿದಂತೆ 68 ಮಂದಿಯನ್ನು ಪ್ರಮುಖ ಆರೋಪಿಗಳು ಎಂದು ಗುರ್ತಿಸಿದೆ. ಮಸೀದಿ ಧ್ವಂಸ ಪ್ರಕರಣದಿಂದಾಗಿ ದೇಶದ ಮುಸ್ಲಿಮ್ ಸಮುದಾಯದ ಭಾವನೆಗಳಿಗೆ ಧಕ್ಕೆಯಾಗಿದೆ ಎಂದು ಪ್ರತಿಭಟನಾಕಾರರು ಆಪಾದಿಸಿದರು.<br /> <br /> ಕೇಂದ್ರ ಸರ್ಕಾರ ಕೂಡಲೇ ಮುಂದಾಗಿ ಆರೋಪಿಗಳಿಗೆ ಶಿಕ್ಷೆ ವಿಧಿಸಲಿ. ಧ್ವಂಸಗೊಂಡ ಸ್ಥಳದಲ್ಲಿಯೇ ಮಸೀದಿಯನ್ನು ಪುನರ್ ನಿರ್ಮಿಸಲಿ ಎಂದು ಒತ್ತಾಯಿಸಿದರು.<br /> <br /> ಪ್ರತಿಭಟನೆಯ ನಂತರ ತಹಸೀಲ್ದಾರ್ ಮೂಲಕ ರಾಷ್ಟ್ರಪತಿಗೆ, ಪ್ರಧಾನಿ ಹಾಗೂ ಕೇಂದ್ರಗೃಹ ಸಚಿವರಿಗೆ ಮನವಿ ಸಲ್ಲಿಸಲಾಯಿತು.<br /> ಪ್ರತಿಭಟನೆಯಲ್ಲಿ ಕರ್ನಾಟಕ ಮುಸ್ಲಿಂ ಏಕೀಕರಣ ಸಮಿತಿಯ ಪದಾಧಿಕಾರಿಗಳಾದ ಸಲಾವುದ್ದೀನ್ ಮುಲ್ಲಾ, ಮುಜಾಹಿದ್ ಜನಾಬ, ಜಲಾಜಸಾಬ ವಿಜಾಪುರಿ, ನಿಜಾಮುದ್ದೀನ್ ಬೇಪಾರಿ, ನರಸಪ್ಪ ಚಲವಾದಿ ಮತ್ತಿತರರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>