<p><strong>ನವದೆಹಲಿ (ಪಿಟಿಐ): </strong>ದೆಹಲಿಯ ಖಾಸಗಿ ಶಾಲೆಗಳಲ್ಲಿ ಮುಸ್ಲಿಂ ಮಕ್ಕಳ ದಾಖಲಾತಿಯಲ್ಲಿ ಇಳಿಕೆ ಕಾಣಿಸಿಕೊಂಡಿದೆ ಎಂಬ ವಿಚಾರ ರಾಜ್ಯಸಭೆಯಲ್ಲಿ ಸೋಮವಾರ ಕೋಲಾಹಲಕ್ಕೆ ಕಾರಣವಾಯಿತು.<br /> ಈ ವಿಷಯಕ್ಕೆ ಸಂಬಂಧಿಸಿ ಬಿಜೆಪಿ, ಎಲ್ಜೆಪಿ ಹಾಗೂ ಎನ್ಸಿಪಿ ಸದಸ್ಯರು ವಾಗ್ವಾದದಲ್ಲಿ ತೊಡಗಿಕೊಂಡು ಗದ್ದಲ ಎಬ್ಬಿಸಿದರು.<br /> <br /> ಎಲ್ಜೆಪಿ ನಾಯಕ ರಾಮ್ ವಿಲಾಸ್ ಪಾಸ್ವಾನ್ ಶೂನ್ಯ ವೇಳೆಯಲ್ಲಿ ಪತ್ರಿಕೆಯೊಂದನ್ನು ತೋರಿಸಿ ದೆಹಲಿಯ ಖಾಸಗಿ ಶಾಲೆಗಳಲ್ಲಿ ಮುಸ್ಲಿಂ ಮಕ್ಕಳ ದಾಖಲಾತಿ ಕಡಿಮೆಯಾಗುತ್ತಿದೆ ಎನ್ನುವ ವರದಿಯತ್ತ ಗಮನ ಸೆಳೆದರು. <br /> ಕೂಡಲೇ ಎದ್ದು ನಿಂತ ಬಿಜೆಪಿ ಸದಸ್ಯ ಬಲ್ಬೀರ್ ಪುಂಜ್ ಶಾಲಾ ದಾಖಲಾತಿಯಂತಹ ವಿಚಾರದಲ್ಲೂ ಧರ್ಮವನ್ನು ತರುವುದು ಸರಿಯಲ್ಲ ಎಂದು ಖಂಡಿಸಿದರು. ಎನ್ಸಿಪಿಯ ತಾರೀಕ್ ಅನ್ವರ್, ಪಾಸ್ವಾನ್ ಅವರನ್ನು ಬೆಂಬಲಿಸಿದರು.<br /> <br /> ತಮಗೆ ಈ ವಿಚಾರದಲ್ಲಿ ಮಾತನಾಡಲು ಹೆಚ್ಚು ಕಾಲಾವಕಾಶ ನೀಡಲಿಲ್ಲ ಎಂಬ ಕಾರಣಕ್ಕೆ ಸಭಾಧ್ಯಕ್ಷರ ಪೀಠದಲ್ಲಿದ್ದ ಪಿ.ಜೆ. ಕುರಿಯನ್ ಕಾಂಗ್ರೆಸ್ಗೆ ಸೇರಿದ ವ್ಯಕ್ತಿ ಎಂದು ಪಾಸ್ವಾನ್ ನಿಂದಿಸಿದರು.<br /> <br /> ಸಭಾಧ್ಯಕ್ಷರ ಪೀಠ ಯಾವುದೇ ಪಕ್ಷಕ್ಕೆ ಸೇರಿದ್ದಲ್ಲ. ನಿಂದಾತ್ಮಕ ಮಾತುಗಳನ್ನು ವಾಪಸು ಪಡೆಯಿರಿ ಎಂದು ಬಿಜೆಪಿ ಸದಸ್ಯರು ಪಟ್ಟು ಹಿಡಿದರು. ತಾವು ಅಂತಹ ಟೀಕೆ ಮಾಡಿಲ್ಲ ಎಂದು ಪಾಸ್ವಾನ್ ಆನಂತರ ಸ್ಪಷ್ಟಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ (ಪಿಟಿಐ): </strong>ದೆಹಲಿಯ ಖಾಸಗಿ ಶಾಲೆಗಳಲ್ಲಿ ಮುಸ್ಲಿಂ ಮಕ್ಕಳ ದಾಖಲಾತಿಯಲ್ಲಿ ಇಳಿಕೆ ಕಾಣಿಸಿಕೊಂಡಿದೆ ಎಂಬ ವಿಚಾರ ರಾಜ್ಯಸಭೆಯಲ್ಲಿ ಸೋಮವಾರ ಕೋಲಾಹಲಕ್ಕೆ ಕಾರಣವಾಯಿತು.<br /> ಈ ವಿಷಯಕ್ಕೆ ಸಂಬಂಧಿಸಿ ಬಿಜೆಪಿ, ಎಲ್ಜೆಪಿ ಹಾಗೂ ಎನ್ಸಿಪಿ ಸದಸ್ಯರು ವಾಗ್ವಾದದಲ್ಲಿ ತೊಡಗಿಕೊಂಡು ಗದ್ದಲ ಎಬ್ಬಿಸಿದರು.<br /> <br /> ಎಲ್ಜೆಪಿ ನಾಯಕ ರಾಮ್ ವಿಲಾಸ್ ಪಾಸ್ವಾನ್ ಶೂನ್ಯ ವೇಳೆಯಲ್ಲಿ ಪತ್ರಿಕೆಯೊಂದನ್ನು ತೋರಿಸಿ ದೆಹಲಿಯ ಖಾಸಗಿ ಶಾಲೆಗಳಲ್ಲಿ ಮುಸ್ಲಿಂ ಮಕ್ಕಳ ದಾಖಲಾತಿ ಕಡಿಮೆಯಾಗುತ್ತಿದೆ ಎನ್ನುವ ವರದಿಯತ್ತ ಗಮನ ಸೆಳೆದರು. <br /> ಕೂಡಲೇ ಎದ್ದು ನಿಂತ ಬಿಜೆಪಿ ಸದಸ್ಯ ಬಲ್ಬೀರ್ ಪುಂಜ್ ಶಾಲಾ ದಾಖಲಾತಿಯಂತಹ ವಿಚಾರದಲ್ಲೂ ಧರ್ಮವನ್ನು ತರುವುದು ಸರಿಯಲ್ಲ ಎಂದು ಖಂಡಿಸಿದರು. ಎನ್ಸಿಪಿಯ ತಾರೀಕ್ ಅನ್ವರ್, ಪಾಸ್ವಾನ್ ಅವರನ್ನು ಬೆಂಬಲಿಸಿದರು.<br /> <br /> ತಮಗೆ ಈ ವಿಚಾರದಲ್ಲಿ ಮಾತನಾಡಲು ಹೆಚ್ಚು ಕಾಲಾವಕಾಶ ನೀಡಲಿಲ್ಲ ಎಂಬ ಕಾರಣಕ್ಕೆ ಸಭಾಧ್ಯಕ್ಷರ ಪೀಠದಲ್ಲಿದ್ದ ಪಿ.ಜೆ. ಕುರಿಯನ್ ಕಾಂಗ್ರೆಸ್ಗೆ ಸೇರಿದ ವ್ಯಕ್ತಿ ಎಂದು ಪಾಸ್ವಾನ್ ನಿಂದಿಸಿದರು.<br /> <br /> ಸಭಾಧ್ಯಕ್ಷರ ಪೀಠ ಯಾವುದೇ ಪಕ್ಷಕ್ಕೆ ಸೇರಿದ್ದಲ್ಲ. ನಿಂದಾತ್ಮಕ ಮಾತುಗಳನ್ನು ವಾಪಸು ಪಡೆಯಿರಿ ಎಂದು ಬಿಜೆಪಿ ಸದಸ್ಯರು ಪಟ್ಟು ಹಿಡಿದರು. ತಾವು ಅಂತಹ ಟೀಕೆ ಮಾಡಿಲ್ಲ ಎಂದು ಪಾಸ್ವಾನ್ ಆನಂತರ ಸ್ಪಷ್ಟಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>