<p>ಕೋಲಾರ: 18ರಿಂದ 60ರ ವಯಸ್ಸಿನ ಆರೋಗ್ಯವಂತರು ಪ್ರತಿ ಮೂರು ತಿಂಗಳಿಗೊಮ್ಮೆ ರಕ್ತದಾನ ಮಾಡಬೇಕು ಎಂದು ಆರ್.ಎಲ್.ಜಾಲಪ್ಪ ಆಸ್ಪತ್ರೆಯ ಡಾ.ಕೃಷ್ಣಮೂರ್ತಿ ಸಲಹೆ ನೀಡಿದರು.<br /> <br /> ನಗರದ ಮಹಿಳಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಾಸವಿ ವನಿತಾ ಕ್ಲಬ್ ಆಶ್ರಯದಲ್ಲಿ ಬುಧವಾರ ಏರ್ಪಡಿಸಿದ್ದ ಸ್ವಯಂಪ್ರೇರಿತ ರಕ್ತದಾನ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು. <br /> <br /> ರಕ್ತದಾನ ಆಪತ್ತಿನಲ್ಲಿರುವವರಿಗೆ ಜೀವದಾನ ಮಾಡುತ್ತದೆ. ತುರ್ತು ಸಂದರ್ಭಗಳಲ್ಲಷ್ಟೆ ಅಲ್ಲದೆ, ನಿಯಮಿತವಾಗಿ ರಕ್ತದಾನ ಮಾಡುವುದು ವ್ಯಕ್ತಿಯ ಆರೋಗ್ಯಕ್ಕೂ ಒಳಿತು ತರುವ ಸಂಗತಿ ಎಂದರು.<br /> <br /> 80ರ ದಶಕದವರೆಗೂ ಮದ್ಯಪಾನಕ್ಕಾಗಿ ರಕ್ತ ದಾನ ಮಾಡಿ ಹಣ ಪಡೆಯುವವರ ಸಂಖ್ಯೆ ಹೆಚ್ಚಿತ್ತು. ನಂತರದ ದಿನಗಳಲ್ಲಿ ಹಾಗೆ ಸ್ವಯಂಪ್ರೇರಿತ ರಕ್ತದಾನದ ವ್ಯಾಖ್ಯಾನ ಬದಲಿಸಲಾಯಿತು. ಇದೀಗ ಆರೋಗ್ಯವಂತರಿಂದ ಮಾತ್ರ ರಕ್ತ ಪಡೆಯಲಾಗುತ್ತದೆ ಎಂದು ತಿಳಿಸಿದರು. <br /> <br /> ಮಧ್ಯಾಹ್ನ 2 ಗಂಟೆವರೆಗೂ ನಡೆದ ಶಿಬಿರದಲ್ಲಿ ಉಪನ್ಯಾಸಕ ಚೌಡೇಗೌಡ ಸೇರಿದಂತೆ 33 ವಿದ್ಯಾರ್ಥಿನಿಯರು ರಕ್ತದಾನ ಮಾಡಿದರು. ಪ್ರಾಂಶುಪಾಲ ಪ್ರೊ.ರಾಮೇಗೌಡ, ಕನ್ನಡ ವಿಭಾಗದ ಮುಖ್ಯಸ್ಥೆ ಕೆ.ಆರ್.ಜಯಶ್ರೀ, ಜಿಲ್ಲಾ ಆಸ್ಪತ್ರೆಯ ವೈದ್ಯೆ ತಬ್ಸುಮ್, ಕ್ಲಬ್ನ ಅಧ್ಯಕ್ಷೆ ಶ್ರೀದೇವಿ, ನಿರ್ಮಲಾ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕೋಲಾರ: 18ರಿಂದ 60ರ ವಯಸ್ಸಿನ ಆರೋಗ್ಯವಂತರು ಪ್ರತಿ ಮೂರು ತಿಂಗಳಿಗೊಮ್ಮೆ ರಕ್ತದಾನ ಮಾಡಬೇಕು ಎಂದು ಆರ್.ಎಲ್.ಜಾಲಪ್ಪ ಆಸ್ಪತ್ರೆಯ ಡಾ.ಕೃಷ್ಣಮೂರ್ತಿ ಸಲಹೆ ನೀಡಿದರು.<br /> <br /> ನಗರದ ಮಹಿಳಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಾಸವಿ ವನಿತಾ ಕ್ಲಬ್ ಆಶ್ರಯದಲ್ಲಿ ಬುಧವಾರ ಏರ್ಪಡಿಸಿದ್ದ ಸ್ವಯಂಪ್ರೇರಿತ ರಕ್ತದಾನ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು. <br /> <br /> ರಕ್ತದಾನ ಆಪತ್ತಿನಲ್ಲಿರುವವರಿಗೆ ಜೀವದಾನ ಮಾಡುತ್ತದೆ. ತುರ್ತು ಸಂದರ್ಭಗಳಲ್ಲಷ್ಟೆ ಅಲ್ಲದೆ, ನಿಯಮಿತವಾಗಿ ರಕ್ತದಾನ ಮಾಡುವುದು ವ್ಯಕ್ತಿಯ ಆರೋಗ್ಯಕ್ಕೂ ಒಳಿತು ತರುವ ಸಂಗತಿ ಎಂದರು.<br /> <br /> 80ರ ದಶಕದವರೆಗೂ ಮದ್ಯಪಾನಕ್ಕಾಗಿ ರಕ್ತ ದಾನ ಮಾಡಿ ಹಣ ಪಡೆಯುವವರ ಸಂಖ್ಯೆ ಹೆಚ್ಚಿತ್ತು. ನಂತರದ ದಿನಗಳಲ್ಲಿ ಹಾಗೆ ಸ್ವಯಂಪ್ರೇರಿತ ರಕ್ತದಾನದ ವ್ಯಾಖ್ಯಾನ ಬದಲಿಸಲಾಯಿತು. ಇದೀಗ ಆರೋಗ್ಯವಂತರಿಂದ ಮಾತ್ರ ರಕ್ತ ಪಡೆಯಲಾಗುತ್ತದೆ ಎಂದು ತಿಳಿಸಿದರು. <br /> <br /> ಮಧ್ಯಾಹ್ನ 2 ಗಂಟೆವರೆಗೂ ನಡೆದ ಶಿಬಿರದಲ್ಲಿ ಉಪನ್ಯಾಸಕ ಚೌಡೇಗೌಡ ಸೇರಿದಂತೆ 33 ವಿದ್ಯಾರ್ಥಿನಿಯರು ರಕ್ತದಾನ ಮಾಡಿದರು. ಪ್ರಾಂಶುಪಾಲ ಪ್ರೊ.ರಾಮೇಗೌಡ, ಕನ್ನಡ ವಿಭಾಗದ ಮುಖ್ಯಸ್ಥೆ ಕೆ.ಆರ್.ಜಯಶ್ರೀ, ಜಿಲ್ಲಾ ಆಸ್ಪತ್ರೆಯ ವೈದ್ಯೆ ತಬ್ಸುಮ್, ಕ್ಲಬ್ನ ಅಧ್ಯಕ್ಷೆ ಶ್ರೀದೇವಿ, ನಿರ್ಮಲಾ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>