<p><strong>ಬೆಂಗಳೂರು:</strong> ಮುಂಗಾರು ಮಳೆ ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳನ್ನು ವ್ಯಾಪಿಸಿದ್ದು, ಮೂರು ದಿನಗಳೊಳಗೆ ಉತ್ತರ ಒಳನಾಡನ್ನೂ ಪೂರ್ಣವಾಗಿ ಆವರಿಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.<br /> <br /> `ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮೂರು ದಿನಗಳಿಂದ ಮಳೆ ಬೀಳುತ್ತಿದೆ. ಕೊಡಗು, ಮೈಸೂರು, ಚಾಮರಾಜನಗರ ಜಿಲ್ಲೆಗಳಲ್ಲೂ ಮಳೆಯಾಗುತ್ತಿದೆ.<br /> <br /> ಸೋಮವಾರ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಮಳೆ ಬಿದ್ದಿದೆ. ದಕ್ಷಿಣ ಒಳನಾಡಿನಲ್ಲಿ 16 ಜಿಲ್ಲೆಗಳಿದ್ದು, ಬಳ್ಳಾರಿ ಹೊರತುಪಡಿಸಿ ಎಲ್ಲ ಜಿಲ್ಲೆ ಗಳಲ್ಲೂ ಮಳೆ ಬೀಳುತ್ತಿದೆ' ಎಂದು ಹವಾಮಾನ ಇಲಾಖೆ ನಿರ್ದೇಶಕ ಬಿ.ಪುಟ್ಟಣ್ಣ `ಪ್ರಜಾವಾಣಿ'ಗೆ ತಿಳಿಸಿದರು.<br /> <br /> ಉತ್ತರ ಒಳನಾಡಿನಲ್ಲೂ ಮಳೆ ಆರಂಭವಾಗಿದೆ. ಹಾವೇರಿ ಜಿಲ್ಲೆಯಲ್ಲಿ ಈಗಾಗಲೇ ಮಳೆ ಸುರಿಯುತ್ತಿದೆ. ಮುಂಗಾರು ಮಾರುತಗಳು ಎರಡರಿಂದ ಮೂರು ದಿನಗಳೊಳಗೆ ಉಳಿದ ಜಿಲ್ಲೆಗಳನ್ನೂ ತಲುಪುವ ನಿರೀಕ್ಷೆ ಇದೆ. ಮುಂಗಾರು ಮಾರುತಗಳು ಅತ್ಯಂತ ವೇಗವಾಗಿ ಸಾಗುತ್ತಿದ್ದು, ಒಂದೆರಡು ದಿನಗಳಲ್ಲೇ ಮಳೆ ಮತ್ತಷ್ಟು ಬಿರುಸಾಗಲಿದೆ ಎಂದರು.<br /> <br /> ವಾಡಿಕೆಗಿಂತ ಹೆಚ್ಚು ಮಳೆ: ಮುಂಗಾರು ಮಾರುತಗಳು ರಾಜ್ಯ ಪ್ರವೇಶಿಸಿದ ಮೊದಲ ಮೂರು ದಿನಗಳಲ್ಲಿ ಎಲ್ಲ ಜಿಲ್ಲೆ ಗಳಲ್ಲೂ ಸರಾಸರಿ 12.2 ಮಿಲಿಮೀಟರ್ ಮಳೆ ಸುರಿಯುವುದು ವಾಡಿಕೆ. ಆದರೆ, ಈ ಬಾರಿ ಎಲ್ಲ ಜಿಲ್ಲೆಗಳಲ್ಲೂ ವಾಡಿಕೆಗಿಂತ ಹೆಚ್ಚಿನ ಮಳೆ ಬಿದ್ದಿದೆ. ಈ ಬಾರಿ ಮೊದಲ ಮೂರು ದಿನಗಳ ಅವಧಿಯಲ್ಲಿ ಸುರಿದ ಮಳೆಯ ಸರಾಸರಿ ಪ್ರಮಾಣ 35.4 ಮಿ.ಮೀ ಇದೆ ಎಂದು ವಿವರ ನೀಡಿದರು.<br /> <br /> `ಮುಂದಿನ ಎರಡು ದಿನಗಳಲ್ಲಿ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಬಹುತೇಕ ಕಡೆಗಳಲ್ಲಿ ಹೆಚ್ಚಿನ ಮಳೆ ಬೀಳುವ ಮುನ್ಸೂಚನೆ ಇದೆ. ಮುಂಗಾರು ಮಾರುತಗಳ ವೇಗ ಹೆಚ್ಚಿರುವುದರಿಂದ ಸಮುದ್ರದಲ್ಲಿ ವೇಗವಾಗಿ ಗಾಳಿ ಬೀಸುತ್ತಿದೆ. ಈ ಕಾರಣದಿಂದ ಮುಂಗಾರು ಅವಧಿಯಲ್ಲಿ ಸಮುದ್ರಕ್ಕೆ ಇಳಿಯದಂತೆ ಕರಾವಳಿ ತೀರದ ಮೀನು ಗಾರರಿಗೆ ಎಚ್ಚರಿಕೆ ನೀಡಲಾಗಿದೆ' ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಮುಂಗಾರು ಮಳೆ ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳನ್ನು ವ್ಯಾಪಿಸಿದ್ದು, ಮೂರು ದಿನಗಳೊಳಗೆ ಉತ್ತರ ಒಳನಾಡನ್ನೂ ಪೂರ್ಣವಾಗಿ ಆವರಿಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.<br /> <br /> `ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮೂರು ದಿನಗಳಿಂದ ಮಳೆ ಬೀಳುತ್ತಿದೆ. ಕೊಡಗು, ಮೈಸೂರು, ಚಾಮರಾಜನಗರ ಜಿಲ್ಲೆಗಳಲ್ಲೂ ಮಳೆಯಾಗುತ್ತಿದೆ.<br /> <br /> ಸೋಮವಾರ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಮಳೆ ಬಿದ್ದಿದೆ. ದಕ್ಷಿಣ ಒಳನಾಡಿನಲ್ಲಿ 16 ಜಿಲ್ಲೆಗಳಿದ್ದು, ಬಳ್ಳಾರಿ ಹೊರತುಪಡಿಸಿ ಎಲ್ಲ ಜಿಲ್ಲೆ ಗಳಲ್ಲೂ ಮಳೆ ಬೀಳುತ್ತಿದೆ' ಎಂದು ಹವಾಮಾನ ಇಲಾಖೆ ನಿರ್ದೇಶಕ ಬಿ.ಪುಟ್ಟಣ್ಣ `ಪ್ರಜಾವಾಣಿ'ಗೆ ತಿಳಿಸಿದರು.<br /> <br /> ಉತ್ತರ ಒಳನಾಡಿನಲ್ಲೂ ಮಳೆ ಆರಂಭವಾಗಿದೆ. ಹಾವೇರಿ ಜಿಲ್ಲೆಯಲ್ಲಿ ಈಗಾಗಲೇ ಮಳೆ ಸುರಿಯುತ್ತಿದೆ. ಮುಂಗಾರು ಮಾರುತಗಳು ಎರಡರಿಂದ ಮೂರು ದಿನಗಳೊಳಗೆ ಉಳಿದ ಜಿಲ್ಲೆಗಳನ್ನೂ ತಲುಪುವ ನಿರೀಕ್ಷೆ ಇದೆ. ಮುಂಗಾರು ಮಾರುತಗಳು ಅತ್ಯಂತ ವೇಗವಾಗಿ ಸಾಗುತ್ತಿದ್ದು, ಒಂದೆರಡು ದಿನಗಳಲ್ಲೇ ಮಳೆ ಮತ್ತಷ್ಟು ಬಿರುಸಾಗಲಿದೆ ಎಂದರು.<br /> <br /> ವಾಡಿಕೆಗಿಂತ ಹೆಚ್ಚು ಮಳೆ: ಮುಂಗಾರು ಮಾರುತಗಳು ರಾಜ್ಯ ಪ್ರವೇಶಿಸಿದ ಮೊದಲ ಮೂರು ದಿನಗಳಲ್ಲಿ ಎಲ್ಲ ಜಿಲ್ಲೆ ಗಳಲ್ಲೂ ಸರಾಸರಿ 12.2 ಮಿಲಿಮೀಟರ್ ಮಳೆ ಸುರಿಯುವುದು ವಾಡಿಕೆ. ಆದರೆ, ಈ ಬಾರಿ ಎಲ್ಲ ಜಿಲ್ಲೆಗಳಲ್ಲೂ ವಾಡಿಕೆಗಿಂತ ಹೆಚ್ಚಿನ ಮಳೆ ಬಿದ್ದಿದೆ. ಈ ಬಾರಿ ಮೊದಲ ಮೂರು ದಿನಗಳ ಅವಧಿಯಲ್ಲಿ ಸುರಿದ ಮಳೆಯ ಸರಾಸರಿ ಪ್ರಮಾಣ 35.4 ಮಿ.ಮೀ ಇದೆ ಎಂದು ವಿವರ ನೀಡಿದರು.<br /> <br /> `ಮುಂದಿನ ಎರಡು ದಿನಗಳಲ್ಲಿ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಬಹುತೇಕ ಕಡೆಗಳಲ್ಲಿ ಹೆಚ್ಚಿನ ಮಳೆ ಬೀಳುವ ಮುನ್ಸೂಚನೆ ಇದೆ. ಮುಂಗಾರು ಮಾರುತಗಳ ವೇಗ ಹೆಚ್ಚಿರುವುದರಿಂದ ಸಮುದ್ರದಲ್ಲಿ ವೇಗವಾಗಿ ಗಾಳಿ ಬೀಸುತ್ತಿದೆ. ಈ ಕಾರಣದಿಂದ ಮುಂಗಾರು ಅವಧಿಯಲ್ಲಿ ಸಮುದ್ರಕ್ಕೆ ಇಳಿಯದಂತೆ ಕರಾವಳಿ ತೀರದ ಮೀನು ಗಾರರಿಗೆ ಎಚ್ಚರಿಕೆ ನೀಡಲಾಗಿದೆ' ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>