<p>ಬೆಂಗಳೂರು: ದೇಶದಲ್ಲಿ ಹೊಸ ತಂತ್ರಜ್ಞಾನಗಳ ಆವಿಷ್ಕಾರ ಮತ್ತು ಉದ್ಯಮಶೀಲತೆಯನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ಹೊಸ ಉದ್ದಿಮೆಗಳಿಗೆ ಮೂಲಧನ ಒದಗಿಸುವ ಯೋಜನೆ ಜಾರಿಗೊಳಿಸಿದೆ ಎಂದು ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವಾಲಯದ ತಂತ್ರಜ್ಞಾನ ಅಭಿವೃದ್ಧಿ ಮಂಡಳಿಯ ಕಾರ್ಯದರ್ಶಿ ಹರಕೇಶ್ ಮಿತ್ತಲ್ ಹೇಳಿದರು.<br /> <br /> `ಇ-ಹೆಲ್ತ್ ಟಿಬಿಐ~ ಸಂಸ್ಥೆ ಮೂಲಕ ಮಂಜೂರಾಗಿರುವ ಮೂಲಧನ ಯೋಜನೆಗೆ ಚಾಲನೆ ನೀಡಿ ಶನಿವಾರ ಮಾತನಾಡಿದ ಅವರು, `ಸಂಶೋಧನೆ ಮತ್ತು ಅನುಷ್ಠಾನ ನಡುವಣ ಹಂತದಲ್ಲಿ ಉದ್ದಿಮೆ ಸ್ಥಾಪಿಸಲು ಮುಂದಾಗುವವರನ್ನು ಪ್ರೋತ್ಸಾಹಿಸುವುದು ಮುಖ್ಯ. ಅಂತಹ ಉದ್ದಿಮೆಗಳಿಂದಲೇ ಹೊಸ ಸಂಶೋಧನೆಗಳು ಸ್ಪಷ್ಟ ಸ್ವರೂಪ ಪಡೆಯಲು ಸಾಧ್ಯ. ಈ ಕಾರಣಕ್ಕಾಗಿ ತಂತ್ರಜ್ಞಾನ ಅಭಿವೃದ್ಧಿ ಮಂಡಳಿ ಮೂಲಧನ ಯೋಜನೆಗೆ ಹೆಚ್ಚಿನ ಆದ್ಯತೆ ನೀಡಿದೆ~ ಎಂದರು.<br /> <br /> ದೇಶದಲ್ಲಿ ನಡೆಯುವ ಹತ್ತು ಸಂಶೋಧನೆಗಳ ಪೈಕಿ ಎರಡು ಮಾತ್ರ ಫಲಪ್ರದವಾಗುತ್ತವೆ. ಈ ಕಾರಣಕ್ಕಾಗಿ ಭಾರತ ಹೆಚ್ಚಿನ ವಸ್ತುಗಳನ್ನು ವಿದೇಶಗಳಿಂದ ಆಮದು ಮಾಡಿಕೊಳ್ಳಬೇಕಾದ ಪರಿಸ್ಥಿತಿಯಲ್ಲಿದೆ. <br /> <br /> ಇದನ್ನು ತಪ್ಪಿಸಬೇಕಾದರೆ ಸಂಶೋಧನೆಗಳು ಮತ್ತು ಅವುಗಳ ಪ್ರಯೋಗಕ್ಕೆ ವೇದಿಕೆ ಕಲ್ಪಿಸುವ ಉದ್ದಿಮೆಗಳ ಸ್ಥಾಪನೆಗೆ ಒತ್ತು ನೀಡಬೇಕಾಗುತ್ತದೆ ಎಂದು ಅಭಿಪ್ರಾಯಪಟ್ಟರು.<br /> <br /> `ಸಂಶೋಧನೆಗಳಿಗೆ ಪೂರಕವಾದ ಹೊಸ ಉದ್ಯಮಗಳ ಸ್ಥಾಪನೆಗೆ ಮೂಲಧನ~ ಯೋಜನೆಯ ಅಡಿಯಲ್ಲಿ `ಇ-ಹೆಲ್ತ್ ಟಿಬಿಐ~ ಸಂಸ್ಥೆ ಸಲ್ಲಿಸಿದ್ದ ಪ್ರಸ್ತಾವದ ಪ್ರಕಾರ ಹಲವು ಉದ್ದಿಮೆದಾರರಿಗೆ ಈ ಸಂದರ್ಭದಲ್ಲಿ ಮೂಲಧನ ವಿತರಿಸಲಾಯಿತು. <br /> <br /> ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಕೆ.ಜೋತಿರಾಮಲಿಂಗಂ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕೈಗಾರಿಕಾ ಅಭಿವೃದ್ಧಿ ಆಯುಕ್ತ ಎಂ.ಮಹೇಶ್ವರ ರಾವ್, ಭಾರತ-ಅಮೆರಿಕ ವಿಜ್ಞಾನ ಮತ್ತು ತಂತ್ರಜ್ಞಾನ ವೇದಿಕೆಯ ಕಾರ್ಯನಿರ್ವಾಹಕ ನಿರ್ದೇಶಕ ಡಾ.ರಾಜೀವ್ ಶರ್ಮ ಮತ್ತಿತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ದೇಶದಲ್ಲಿ ಹೊಸ ತಂತ್ರಜ್ಞಾನಗಳ ಆವಿಷ್ಕಾರ ಮತ್ತು ಉದ್ಯಮಶೀಲತೆಯನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ಹೊಸ ಉದ್ದಿಮೆಗಳಿಗೆ ಮೂಲಧನ ಒದಗಿಸುವ ಯೋಜನೆ ಜಾರಿಗೊಳಿಸಿದೆ ಎಂದು ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವಾಲಯದ ತಂತ್ರಜ್ಞಾನ ಅಭಿವೃದ್ಧಿ ಮಂಡಳಿಯ ಕಾರ್ಯದರ್ಶಿ ಹರಕೇಶ್ ಮಿತ್ತಲ್ ಹೇಳಿದರು.<br /> <br /> `ಇ-ಹೆಲ್ತ್ ಟಿಬಿಐ~ ಸಂಸ್ಥೆ ಮೂಲಕ ಮಂಜೂರಾಗಿರುವ ಮೂಲಧನ ಯೋಜನೆಗೆ ಚಾಲನೆ ನೀಡಿ ಶನಿವಾರ ಮಾತನಾಡಿದ ಅವರು, `ಸಂಶೋಧನೆ ಮತ್ತು ಅನುಷ್ಠಾನ ನಡುವಣ ಹಂತದಲ್ಲಿ ಉದ್ದಿಮೆ ಸ್ಥಾಪಿಸಲು ಮುಂದಾಗುವವರನ್ನು ಪ್ರೋತ್ಸಾಹಿಸುವುದು ಮುಖ್ಯ. ಅಂತಹ ಉದ್ದಿಮೆಗಳಿಂದಲೇ ಹೊಸ ಸಂಶೋಧನೆಗಳು ಸ್ಪಷ್ಟ ಸ್ವರೂಪ ಪಡೆಯಲು ಸಾಧ್ಯ. ಈ ಕಾರಣಕ್ಕಾಗಿ ತಂತ್ರಜ್ಞಾನ ಅಭಿವೃದ್ಧಿ ಮಂಡಳಿ ಮೂಲಧನ ಯೋಜನೆಗೆ ಹೆಚ್ಚಿನ ಆದ್ಯತೆ ನೀಡಿದೆ~ ಎಂದರು.<br /> <br /> ದೇಶದಲ್ಲಿ ನಡೆಯುವ ಹತ್ತು ಸಂಶೋಧನೆಗಳ ಪೈಕಿ ಎರಡು ಮಾತ್ರ ಫಲಪ್ರದವಾಗುತ್ತವೆ. ಈ ಕಾರಣಕ್ಕಾಗಿ ಭಾರತ ಹೆಚ್ಚಿನ ವಸ್ತುಗಳನ್ನು ವಿದೇಶಗಳಿಂದ ಆಮದು ಮಾಡಿಕೊಳ್ಳಬೇಕಾದ ಪರಿಸ್ಥಿತಿಯಲ್ಲಿದೆ. <br /> <br /> ಇದನ್ನು ತಪ್ಪಿಸಬೇಕಾದರೆ ಸಂಶೋಧನೆಗಳು ಮತ್ತು ಅವುಗಳ ಪ್ರಯೋಗಕ್ಕೆ ವೇದಿಕೆ ಕಲ್ಪಿಸುವ ಉದ್ದಿಮೆಗಳ ಸ್ಥಾಪನೆಗೆ ಒತ್ತು ನೀಡಬೇಕಾಗುತ್ತದೆ ಎಂದು ಅಭಿಪ್ರಾಯಪಟ್ಟರು.<br /> <br /> `ಸಂಶೋಧನೆಗಳಿಗೆ ಪೂರಕವಾದ ಹೊಸ ಉದ್ಯಮಗಳ ಸ್ಥಾಪನೆಗೆ ಮೂಲಧನ~ ಯೋಜನೆಯ ಅಡಿಯಲ್ಲಿ `ಇ-ಹೆಲ್ತ್ ಟಿಬಿಐ~ ಸಂಸ್ಥೆ ಸಲ್ಲಿಸಿದ್ದ ಪ್ರಸ್ತಾವದ ಪ್ರಕಾರ ಹಲವು ಉದ್ದಿಮೆದಾರರಿಗೆ ಈ ಸಂದರ್ಭದಲ್ಲಿ ಮೂಲಧನ ವಿತರಿಸಲಾಯಿತು. <br /> <br /> ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಕೆ.ಜೋತಿರಾಮಲಿಂಗಂ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕೈಗಾರಿಕಾ ಅಭಿವೃದ್ಧಿ ಆಯುಕ್ತ ಎಂ.ಮಹೇಶ್ವರ ರಾವ್, ಭಾರತ-ಅಮೆರಿಕ ವಿಜ್ಞಾನ ಮತ್ತು ತಂತ್ರಜ್ಞಾನ ವೇದಿಕೆಯ ಕಾರ್ಯನಿರ್ವಾಹಕ ನಿರ್ದೇಶಕ ಡಾ.ರಾಜೀವ್ ಶರ್ಮ ಮತ್ತಿತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>