<p><strong>ನವದೆಹಲಿ: </strong>ಉತ್ತರ ಕನ್ನಡ ಜಿಲ್ಲೆಯ ಕೈಗಾ ಅಣು ಸ್ಥಾವರದ ಸುತ್ತಮುತ್ತ ಇರುವ ಗ್ರಾಮಗಳ ಮೂಲಸೌಕರ್ಯ ವ್ಯವಸ್ಥೆಯನ್ನು ಮೇಲ್ದರ್ಜೆಗೇರಿಸುವ ಪ್ರಸ್ತಾವ ಸಿದ್ಧಪಡಿಸಿರುವುದಾಗಿ ಕರ್ನಾಟಕ ಸರ್ಕಾರವು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರಕ್ಕೆ (ಎನ್ಡಿಎಂಎ) ತಿಳಿಸಿದೆ.<br /> <br /> ಪರಮಾಣು ವಿಪತ್ತು ಎದುರಿಸಲು ವಿವಿಧ ಸಂಸ್ಥೆಗಳು ಮಾಡಿಕೊಂಡ ಸಿದ್ಧತೆಗಳನ್ನು ಪರಿಶೀಲಿಸಲು ಎನ್ಡಿಎಂಎ, ಕರ್ನಾಟಕ ಸೇರಿದಂತೆ ವಿವಿಧ ರಾಜ್ಯ ಸರ್ಕಾರಗಳ ಸಹಯೋಗದಲ್ಲಿ ಪರಮಾಣು ಸ್ಥಾವರ ಪ್ರದೇಶಗಳಲ್ಲಿ ಅಣಕು ಕಾರ್ಯಾಚರಣೆ ನಡೆಸಿತ್ತು. ಅಲ್ಲದೆ ಅಣು ಸ್ಥಾವರಗಳ `ತುರ್ತು ಯೋಜನಾ ವಲಯ~ ವ್ಯಾಪ್ತಿಗೆ ಬರುವ ಗ್ರಾಮಗಳಲ್ಲಿ ಅಭಿವೃದ್ಧಿ ಯೋಜನೆ ರೂಪಿಸುವಂತೆ ಎಲ್ಲ ರಾಜ್ಯ ಸರ್ಕಾರಗಳಿಗೆ ಸೂಚನೆ ನೀಡಿತ್ತು.<br /> <br /> ಈ ನಡುವೆ, ರಾಜ್ಯಸಭಾ ಸದಸ್ಯ ಸೀತಾರಾಂ ಯೆಚೂರಿ ಅವರ ನೇತೃತ್ವದ ನಿಯೋಗವನ್ನು ಭೇಟಿ ಮಾಡಿದ ಎನ್ಡಿಎಂಎ ಉಪಾಧ್ಯಕ್ಷ ಶಶಿಧರ್ ರೆಡ್ಡಿ, ಆರೋಗ್ಯ ಕಾಳಜಿ, ಶಿಕ್ಷಣ ಸೇರಿದಂತೆ ಪರಮಾಣು ಸ್ಥಾವರಕ್ಕೆ ಸಮೀಪದ ಗ್ರಾಮಸ್ಥರಿಗೆ ಉತ್ತಮ ಮೂಲಸೌಕರ್ಯ ಒದಗಿಸುವ ಭರವಸೆ ನೀಡಿದರು.<br /> <br /> ಕೈಗಾ ಅಣು ಸ್ಥಾವರದ ಸುತ್ತಮುತ್ತ 5 ಕಿ.ಮೀ ವ್ಯಾಪ್ತಿಯಲ್ಲಿ ಬರುವ ಐದು ಗ್ರಾಮಗಳ ಜನರಿಗೆ ಪುನರ್ವಸತಿ ಕಲ್ಪಿಸಿಕೊಡಬೇಕೆನ್ನುವ ನಿಯೋಗದ ಕೋರಿಕೆಗೆ ಪ್ರತಿಕ್ರಿಯಿಸಿದ ಅವರು, ಸ್ಥಾವರದಿಂದ 1.6 ಕಿ.ಮೀ ವ್ಯಾಪ್ತಿಯ ಜನರಿಗೆ ಮಾತ್ರವೇ ಪುನರ್ವಸತಿ ಕಲ್ಪಿಸಲಾಗುತ್ತದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ಉತ್ತರ ಕನ್ನಡ ಜಿಲ್ಲೆಯ ಕೈಗಾ ಅಣು ಸ್ಥಾವರದ ಸುತ್ತಮುತ್ತ ಇರುವ ಗ್ರಾಮಗಳ ಮೂಲಸೌಕರ್ಯ ವ್ಯವಸ್ಥೆಯನ್ನು ಮೇಲ್ದರ್ಜೆಗೇರಿಸುವ ಪ್ರಸ್ತಾವ ಸಿದ್ಧಪಡಿಸಿರುವುದಾಗಿ ಕರ್ನಾಟಕ ಸರ್ಕಾರವು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರಕ್ಕೆ (ಎನ್ಡಿಎಂಎ) ತಿಳಿಸಿದೆ.<br /> <br /> ಪರಮಾಣು ವಿಪತ್ತು ಎದುರಿಸಲು ವಿವಿಧ ಸಂಸ್ಥೆಗಳು ಮಾಡಿಕೊಂಡ ಸಿದ್ಧತೆಗಳನ್ನು ಪರಿಶೀಲಿಸಲು ಎನ್ಡಿಎಂಎ, ಕರ್ನಾಟಕ ಸೇರಿದಂತೆ ವಿವಿಧ ರಾಜ್ಯ ಸರ್ಕಾರಗಳ ಸಹಯೋಗದಲ್ಲಿ ಪರಮಾಣು ಸ್ಥಾವರ ಪ್ರದೇಶಗಳಲ್ಲಿ ಅಣಕು ಕಾರ್ಯಾಚರಣೆ ನಡೆಸಿತ್ತು. ಅಲ್ಲದೆ ಅಣು ಸ್ಥಾವರಗಳ `ತುರ್ತು ಯೋಜನಾ ವಲಯ~ ವ್ಯಾಪ್ತಿಗೆ ಬರುವ ಗ್ರಾಮಗಳಲ್ಲಿ ಅಭಿವೃದ್ಧಿ ಯೋಜನೆ ರೂಪಿಸುವಂತೆ ಎಲ್ಲ ರಾಜ್ಯ ಸರ್ಕಾರಗಳಿಗೆ ಸೂಚನೆ ನೀಡಿತ್ತು.<br /> <br /> ಈ ನಡುವೆ, ರಾಜ್ಯಸಭಾ ಸದಸ್ಯ ಸೀತಾರಾಂ ಯೆಚೂರಿ ಅವರ ನೇತೃತ್ವದ ನಿಯೋಗವನ್ನು ಭೇಟಿ ಮಾಡಿದ ಎನ್ಡಿಎಂಎ ಉಪಾಧ್ಯಕ್ಷ ಶಶಿಧರ್ ರೆಡ್ಡಿ, ಆರೋಗ್ಯ ಕಾಳಜಿ, ಶಿಕ್ಷಣ ಸೇರಿದಂತೆ ಪರಮಾಣು ಸ್ಥಾವರಕ್ಕೆ ಸಮೀಪದ ಗ್ರಾಮಸ್ಥರಿಗೆ ಉತ್ತಮ ಮೂಲಸೌಕರ್ಯ ಒದಗಿಸುವ ಭರವಸೆ ನೀಡಿದರು.<br /> <br /> ಕೈಗಾ ಅಣು ಸ್ಥಾವರದ ಸುತ್ತಮುತ್ತ 5 ಕಿ.ಮೀ ವ್ಯಾಪ್ತಿಯಲ್ಲಿ ಬರುವ ಐದು ಗ್ರಾಮಗಳ ಜನರಿಗೆ ಪುನರ್ವಸತಿ ಕಲ್ಪಿಸಿಕೊಡಬೇಕೆನ್ನುವ ನಿಯೋಗದ ಕೋರಿಕೆಗೆ ಪ್ರತಿಕ್ರಿಯಿಸಿದ ಅವರು, ಸ್ಥಾವರದಿಂದ 1.6 ಕಿ.ಮೀ ವ್ಯಾಪ್ತಿಯ ಜನರಿಗೆ ಮಾತ್ರವೇ ಪುನರ್ವಸತಿ ಕಲ್ಪಿಸಲಾಗುತ್ತದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>