<p>ಶಿವಮೊಗ್ಗ: ಜಿಲ್ಲಾ ಕೇಂದ್ರದಿಂದ ಕೇವಲ 12 ಕಿ.ಮೀ. ದೂರವಿರುವ ಶಿವಮೊಗ್ಗ ತಾಲ್ಲೂಕಿನ ಎರೇಕೊಪ್ಪ, ಎರೇಕೊಪ್ಪ ತಾಂಡ ಹಾಗೂ ಹೊಸೂರು ಗ್ರಾಮಗಳಿಗೆ ರಸ್ತೆ, ಸಾರಿಗೆ ವ್ಯವಸ್ಥೆ ಸೇರಿದಂತೆ ಅಗತ್ಯ ಮೂಲಸೌಲಭ್ಯ ಕಲ್ಪಿಸಲು ಆಗ್ರಹಿಸಿ ಗ್ರಾಮಸ್ಥರು ಹೆಚ್ಚುವರಿ ಜಿಲ್ಲಾಧಿಕಾರಿ ಶ್ರೀರಂಗಯ್ಯ ಅವರಿಗೆ ಸೋಮವಾರ ಮನವಿ ಸಲ್ಲಿಸಿದರು.<br /> <br /> ಈ ಗ್ರಾಮಗಳು ರಾಷ್ಟ್ರೀಯ ಹೆದ್ದಾರಿ-206 (ಶಿವಮೊಗ್ಗ-ಸಾಗರ ರಸ್ತೆ)ಯಿಂದ ಕೇವಲ 4 ಕಿ.ಮೀ. ದೂರದಲ್ಲಿವೆ. ಆದರೆ, ರಸ್ತೆ, ಸಾರಿಗೆ ವ್ಯವಸ್ಥೆ ಈ ಗ್ರಾಮಗಳಿಗೆ ಇಲ್ಲ. ಜನಪ್ರತಿನಿಧಿಗಳು, ಅಧಿಕಾರಿಗಳು ಇತ್ತ ಗಮನಹರಿಸಿಲ್ಲ ಎಂದು ಗ್ರಾಮಸ್ಥರು ದೂರಿದರು.<br /> <br /> ರಸ್ತೆ ಹಾಗೂ ಸಾರಿಗೆ ವ್ಯವಸ್ಥೆ ಇಲ್ಲದಿರುವುದರಿಂದ ಹಿರಿಯ ಪ್ರಾಥಮಿಕ ಶಿಕ್ಷಣ ಪೂರೈಸಿದ ನಂತರ ವಿದ್ಯಾರ್ಥಿಗಳು 3ರಿಂದ 5 ಕಿ.ಮೀ. ದೂರ ನಡೆದುಕೊಂಡು ಹೋಗಿ ಬಸ್ ಸೌಲಭ್ಯ ಪಡೆಯಬೇಕಾಗಿದೆ. ಅಲ್ಲದೇ, ಹಿರಿಯ ನಾಗರಿಕರು ಬೇರೆ ಊರುಗಳಿಗೆ ಹೋಗಿ, ಬರುವುದು ಸಾಧ್ಯವಾಗದ ಸಂಗತಿಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.<br /> <br /> ಇದಲ್ಲದೇ, ರಸ್ತೆ ಇಲ್ಲದಿರುವುದರಿಂದ ಈ ಗ್ರಾಮಗಳಿಗೆ ಅತಿ ತುರ್ತು ಸೇವೆಗಾಗಿ ತುರ್ತು ಚಿಕಿತ್ಸಾ ವಾಹನ ಆರೋಗ್ಯಕವಚ-108 ಮೂರು ಕಿ.ಮೀ. ಕ್ರಮಿಸಲು ಕನಿಷ್ಠ 20ರಿಂದ 25 ನಿಮಿಷಗಳು ಬೇಕಾಗುತ್ತದೆ ಎಂದು ಗ್ರಾಮಸ್ಥರು ಸಮಸ್ಯೆ ತೆರೆದಿಟ್ಟರು.<br /> <br /> ರಾಜ್ಯ ಸರ್ಕಾರ ತುರ್ತಾಗಿ ಇತ್ತ ಗಮನ ಹರಿಸಬೇಕು. ಈ ಗ್ರಾಮಗಳಿಗೆ ಶೀಘ್ರ ಸೌಲಭ್ಯ ಕಲ್ಪಿಸಬೇಕು ಎಂದು ಆಗ್ರಹಿಸಿದರು. ಎಚ್.ಎಂ. ಸತೀಶ್, ಮಂಜು, ನಾರಾಯಣ, ಸೋಮು, ಜಗದೀಶ್ ಮತ್ತಿತರರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಶಿವಮೊಗ್ಗ: ಜಿಲ್ಲಾ ಕೇಂದ್ರದಿಂದ ಕೇವಲ 12 ಕಿ.ಮೀ. ದೂರವಿರುವ ಶಿವಮೊಗ್ಗ ತಾಲ್ಲೂಕಿನ ಎರೇಕೊಪ್ಪ, ಎರೇಕೊಪ್ಪ ತಾಂಡ ಹಾಗೂ ಹೊಸೂರು ಗ್ರಾಮಗಳಿಗೆ ರಸ್ತೆ, ಸಾರಿಗೆ ವ್ಯವಸ್ಥೆ ಸೇರಿದಂತೆ ಅಗತ್ಯ ಮೂಲಸೌಲಭ್ಯ ಕಲ್ಪಿಸಲು ಆಗ್ರಹಿಸಿ ಗ್ರಾಮಸ್ಥರು ಹೆಚ್ಚುವರಿ ಜಿಲ್ಲಾಧಿಕಾರಿ ಶ್ರೀರಂಗಯ್ಯ ಅವರಿಗೆ ಸೋಮವಾರ ಮನವಿ ಸಲ್ಲಿಸಿದರು.<br /> <br /> ಈ ಗ್ರಾಮಗಳು ರಾಷ್ಟ್ರೀಯ ಹೆದ್ದಾರಿ-206 (ಶಿವಮೊಗ್ಗ-ಸಾಗರ ರಸ್ತೆ)ಯಿಂದ ಕೇವಲ 4 ಕಿ.ಮೀ. ದೂರದಲ್ಲಿವೆ. ಆದರೆ, ರಸ್ತೆ, ಸಾರಿಗೆ ವ್ಯವಸ್ಥೆ ಈ ಗ್ರಾಮಗಳಿಗೆ ಇಲ್ಲ. ಜನಪ್ರತಿನಿಧಿಗಳು, ಅಧಿಕಾರಿಗಳು ಇತ್ತ ಗಮನಹರಿಸಿಲ್ಲ ಎಂದು ಗ್ರಾಮಸ್ಥರು ದೂರಿದರು.<br /> <br /> ರಸ್ತೆ ಹಾಗೂ ಸಾರಿಗೆ ವ್ಯವಸ್ಥೆ ಇಲ್ಲದಿರುವುದರಿಂದ ಹಿರಿಯ ಪ್ರಾಥಮಿಕ ಶಿಕ್ಷಣ ಪೂರೈಸಿದ ನಂತರ ವಿದ್ಯಾರ್ಥಿಗಳು 3ರಿಂದ 5 ಕಿ.ಮೀ. ದೂರ ನಡೆದುಕೊಂಡು ಹೋಗಿ ಬಸ್ ಸೌಲಭ್ಯ ಪಡೆಯಬೇಕಾಗಿದೆ. ಅಲ್ಲದೇ, ಹಿರಿಯ ನಾಗರಿಕರು ಬೇರೆ ಊರುಗಳಿಗೆ ಹೋಗಿ, ಬರುವುದು ಸಾಧ್ಯವಾಗದ ಸಂಗತಿಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.<br /> <br /> ಇದಲ್ಲದೇ, ರಸ್ತೆ ಇಲ್ಲದಿರುವುದರಿಂದ ಈ ಗ್ರಾಮಗಳಿಗೆ ಅತಿ ತುರ್ತು ಸೇವೆಗಾಗಿ ತುರ್ತು ಚಿಕಿತ್ಸಾ ವಾಹನ ಆರೋಗ್ಯಕವಚ-108 ಮೂರು ಕಿ.ಮೀ. ಕ್ರಮಿಸಲು ಕನಿಷ್ಠ 20ರಿಂದ 25 ನಿಮಿಷಗಳು ಬೇಕಾಗುತ್ತದೆ ಎಂದು ಗ್ರಾಮಸ್ಥರು ಸಮಸ್ಯೆ ತೆರೆದಿಟ್ಟರು.<br /> <br /> ರಾಜ್ಯ ಸರ್ಕಾರ ತುರ್ತಾಗಿ ಇತ್ತ ಗಮನ ಹರಿಸಬೇಕು. ಈ ಗ್ರಾಮಗಳಿಗೆ ಶೀಘ್ರ ಸೌಲಭ್ಯ ಕಲ್ಪಿಸಬೇಕು ಎಂದು ಆಗ್ರಹಿಸಿದರು. ಎಚ್.ಎಂ. ಸತೀಶ್, ಮಂಜು, ನಾರಾಯಣ, ಸೋಮು, ಜಗದೀಶ್ ಮತ್ತಿತರರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>