<p><strong>ಕುಶಾಲನಗರ: </strong>ಮೂಲ ವಿಜ್ಞಾನದ ಬಗ್ಗೆ ಇಂದಿನ ಮಕ್ಕಳಲ್ಲಿ ಆಸಕ್ತಿ ಹೆಚ್ಚಿಸಲು ವಿದ್ಯಾರ್ಥಿ ದೆಸೆಯಿಂದಲೇ ಶಿಕ್ಷಕರು ಪ್ರಯತ್ನಿಸಬೇಕು ಎಂದು ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ಪ್ರಾಂಶುಪಾಲ ದೊಡ್ಡಮಲ್ಲಪ್ಪ ಹೇಳಿದರು.<br /> <br /> ಸಮೀಪದ ಕೂಡಿಗೆ ಡಯಟ್ ಸಭಾಂಗಣದಲ್ಲಿ ಸೋಮವಾರ ನಡೆದ ಶಿಕ್ಷಕರು ಮತ್ತು ವಿದ್ಯಾರ್ಥಿಗಳ ಜಿಲ್ಲಾಮಟ್ಟದ ವಿಜ್ಞಾನ ವಸ್ತು ಪ್ರದರ್ಶನದ ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.<br /> <br /> ವಿದ್ಯಾರ್ಥಿಗಳು ಕೇವಲ ಎಂಜಿನಿಯರ್ ಅಥವಾ ಡಾಕ್ಟರ್ ವೃತ್ತಿಗೆ ಮಹತ್ವ ನೀಡುತ್ತಿದ್ದಾರೆ. ಇದು ಒಳ್ಳೆಯ ಬೆಳವಣಿಗೆಯಲ್ಲ ಎಂದರು.<br /> ಶಿಕ್ಷಣ ಇಲಾಖೆ ಕಾರ್ಯನಿರ್ವಾಹಕ ಅಧಿಕಾರಿ ರಾಮಲಿಂಗಪ್ಪ ವಸ್ತು ಪ್ರದರ್ಶನಕ್ಕೆ ಚಾಲನೆ ನೀಡಿದರು.<br /> <br /> ವಸ್ತು ಪ್ರದರ್ಶನದಲ್ಲಿ ಮೂರು ತಾಲ್ಲೂಕುಗಳ 50 ವಿದ್ಯಾರ್ಥಿಗಳು ಮತ್ತು 18 ಶಿಕ್ಷಕರು ಭಾಗವಹಿಸಿದ್ದರು. ಸೌರಶಕ್ತಿ ಚಾಲಿತ ಯಂತ್ರಗಳು, ಪರಿಸರ ಸಮತೋಲನದ ಚಿತ್ರಣ, ನೀರು ಶುದ್ಧೀಕರಿಸುವ ಯಂತ್ರ, ಬೈಜಿಕ ಅನಿಲ ಉತ್ಪಾದನೆ ಮೊದಲಾದ ನೂರಾರು ಮಾದರಿಗಳನ್ನು ಪ್ರದರ್ಶನಕ್ಕಿಟ್ಟಿದ್ದರು.<br /> <br /> ಉಪನ್ಯಾಸಕ ಸಲೀಂ ಪಾಷಾ, ವಿಷಯ ಪರಿವೀಕ್ಷಕ ರತ್ನಾಕರ್, ಚಂಗಪ್ಪ, ದೇವ ನಾಯಕ್, ಉಪನ್ಯಾಸಕಿ ಸಾವಿತ್ರಿ ಇದ್ದರು. ಡಯಟ್ ಉಪನ್ಯಾಸಕ ರಮೇಶ್ ವಸ್ತು ಪ್ರದರ್ಶನ ಸಂಯೋಜಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕುಶಾಲನಗರ: </strong>ಮೂಲ ವಿಜ್ಞಾನದ ಬಗ್ಗೆ ಇಂದಿನ ಮಕ್ಕಳಲ್ಲಿ ಆಸಕ್ತಿ ಹೆಚ್ಚಿಸಲು ವಿದ್ಯಾರ್ಥಿ ದೆಸೆಯಿಂದಲೇ ಶಿಕ್ಷಕರು ಪ್ರಯತ್ನಿಸಬೇಕು ಎಂದು ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ಪ್ರಾಂಶುಪಾಲ ದೊಡ್ಡಮಲ್ಲಪ್ಪ ಹೇಳಿದರು.<br /> <br /> ಸಮೀಪದ ಕೂಡಿಗೆ ಡಯಟ್ ಸಭಾಂಗಣದಲ್ಲಿ ಸೋಮವಾರ ನಡೆದ ಶಿಕ್ಷಕರು ಮತ್ತು ವಿದ್ಯಾರ್ಥಿಗಳ ಜಿಲ್ಲಾಮಟ್ಟದ ವಿಜ್ಞಾನ ವಸ್ತು ಪ್ರದರ್ಶನದ ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.<br /> <br /> ವಿದ್ಯಾರ್ಥಿಗಳು ಕೇವಲ ಎಂಜಿನಿಯರ್ ಅಥವಾ ಡಾಕ್ಟರ್ ವೃತ್ತಿಗೆ ಮಹತ್ವ ನೀಡುತ್ತಿದ್ದಾರೆ. ಇದು ಒಳ್ಳೆಯ ಬೆಳವಣಿಗೆಯಲ್ಲ ಎಂದರು.<br /> ಶಿಕ್ಷಣ ಇಲಾಖೆ ಕಾರ್ಯನಿರ್ವಾಹಕ ಅಧಿಕಾರಿ ರಾಮಲಿಂಗಪ್ಪ ವಸ್ತು ಪ್ರದರ್ಶನಕ್ಕೆ ಚಾಲನೆ ನೀಡಿದರು.<br /> <br /> ವಸ್ತು ಪ್ರದರ್ಶನದಲ್ಲಿ ಮೂರು ತಾಲ್ಲೂಕುಗಳ 50 ವಿದ್ಯಾರ್ಥಿಗಳು ಮತ್ತು 18 ಶಿಕ್ಷಕರು ಭಾಗವಹಿಸಿದ್ದರು. ಸೌರಶಕ್ತಿ ಚಾಲಿತ ಯಂತ್ರಗಳು, ಪರಿಸರ ಸಮತೋಲನದ ಚಿತ್ರಣ, ನೀರು ಶುದ್ಧೀಕರಿಸುವ ಯಂತ್ರ, ಬೈಜಿಕ ಅನಿಲ ಉತ್ಪಾದನೆ ಮೊದಲಾದ ನೂರಾರು ಮಾದರಿಗಳನ್ನು ಪ್ರದರ್ಶನಕ್ಕಿಟ್ಟಿದ್ದರು.<br /> <br /> ಉಪನ್ಯಾಸಕ ಸಲೀಂ ಪಾಷಾ, ವಿಷಯ ಪರಿವೀಕ್ಷಕ ರತ್ನಾಕರ್, ಚಂಗಪ್ಪ, ದೇವ ನಾಯಕ್, ಉಪನ್ಯಾಸಕಿ ಸಾವಿತ್ರಿ ಇದ್ದರು. ಡಯಟ್ ಉಪನ್ಯಾಸಕ ರಮೇಶ್ ವಸ್ತು ಪ್ರದರ್ಶನ ಸಂಯೋಜಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>