<p><strong>ಚಳ್ಳಕೆರೆ: </strong>ತಾಲ್ಲೂಕಿನ ಪ್ರತಿಷ್ಠಿತ ಜಿಲ್ಲಾ ಪಂಚಾಯ್ತಿ ಕ್ಷೇತ್ರ ಎಂದೇ ಎಲ್ಲರ ಗಮನ ಸೆಳೆದಿದ್ದ ದೊಡ್ಡೇರಿ ಮೀಸಲು ಕ್ಷೇತ್ರದಲ್ಲಿ ಜೆಡಿಎಸ್ನಿಂದ ಸ್ಪರ್ಧಿಸಿದ್ದ ಪೊಲೀಸ್ ಅಧಿಕಾರಿ ಎಚ್. ಆಂಜನೇಯ ಅವರ ಪುತ್ರ ಎ. ಅನಿಲ್ಕುಮಾರ್ ಆಯ್ಕೆಯಾಗಿದ್ದಾರೆ.<br /> <br /> ರಾಜಕೀಯ ಕ್ಷೇತ್ರಕ್ಕೆ ಇದೀಗ ಪಾದಾರ್ಪಣೆ ಮಾಡಿರುವ ಇವರು ಮೊದಲ ಪ್ರಯತ್ನದಲ್ಲಿಯೇ ಯಶಸ್ವಿಯಾಗಿದ್ದಾರೆ. ಅವರು ‘ಪ್ರಜಾವಾಣಿ’ ಜತೆ ತಮ್ಮ ಅನಿಸಿಕೆಗಳನ್ನು ಹಂಚಿಕೊಂಡಿದ್ದಾರೆ.<br /> <br /> <strong>* ರಾಜಕೀಯಕ್ಕೆ ಬರಲು ಕಾರಣ ಏನು?<br /> </strong>ಮೊದಲಿನಿಂದಲೂ ರಾಜಕೀಯವೇ ನನ್ನ ಆಸಕ್ತಿಯ ಕ್ಷೇತ್ರವಾಗಿತ್ತು. ಮೂಲತಃ ದೊಡ್ಡೇರಿ ಕ್ಷೇತ್ರದವನಾದ ನಾನು ಈ ಬಾರಿ ಪರಿಶಿಷ್ಟ ಜಾತಿಗೆ ಮೀಸಲಾಗಿದ್ದರಿಂದ ಬಂದ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳುವ ಸಲುವಾಗಿ ಸ್ಪರ್ಧಿಸಿದೆ. ಕ್ಷೇತ್ರದ ಜನತೆಯ ಬೆಂಬಲ ಹಾಗೂ ಮಾಜಿ ಸಚಿವ ಡಿ. ಸುಧಾಕರ್ ಕೃಪಾಕಟಾಕ್ಷದಿಂದ ಗೆದ್ದು ಬಂದಿದ್ದೇನೆ.<br /> <br /> <strong>* ಕ್ಷೇತ್ರದ ಸಮಸ್ಯೆಗಳ ಬಗ್ಗೆ ಏನು ಹೇಳುತ್ತೀರಿ?<br /> </strong>ದೊಡ್ಡೇರಿ ಕ್ಷೇತ್ರದಲ್ಲಿ ಸಾಕಷ್ಟು ಸಮಸ್ಯೆಗಳಿವೆ. ರಸ್ತೆ, ಶಾಲಾ ಕೊಠಡಿಗಳ ದುರಸ್ತಿ, ಕುಡಿಯುವ ನೀರಿನ ಸಮಸ್ಯೆ ಹೀಗೆ ಅನೇಕ ಸಮಸ್ಯೆಗಳಿಂದ ಬಳಲುತ್ತಿರುವುದರಿಂದ ಮೊದಲು ಮೂಲ ಸೌಕರ್ಯಗಳನ್ನು ಒದಗಿಸಲು ಶ್ರಮಿಸುತ್ತೇನೆ.<br /> <br /> <strong>* ಇಷ್ಟು ದಿನಗಳ ಕಾಲ ಬೇರೆಡೆ ವಾಸಿಸುತ್ತಿದ್ದ ನೀವು ಇನ್ನು ಮುಂದೆ ಕ್ಷೇತ್ರದ ಜನತೆಗೆ ಸಿಗುತ್ತೀರಾ?<br /> </strong>ಖಂಡಿತ. ನನ್ನ ಕ್ಷೇತ್ರದ ವ್ಯಾಪ್ತಿಯಲ್ಲಿಯೇ ನಾನು ವಾಸಿಸುತ್ತೇನೆ. ತಂದೆಯವರ ಸರ್ಕಾರಿ ಕೆಲಸದಿಂದಾಗಿ ಬೇರೆಡೆ ವಾಸಿಸುತ್ತಿದ್ದುದು ನಿಜ. ಇನ್ನುಮುಂದೆ ಜನರ ಸೇವೆ ಮಾಡಲು ಸದಾ ಸಿದ್ಧನಿದ್ದೇನೆ.<br /> <br /> <strong>* ಮೊದಲ ಚುನಾವಣೆ ಏನನ್ನಿಸಿತು?<br /> </strong>ನಮ್ಮ ಊರಿನವರು ಹಾಗೂ ಕ್ಷೇತ್ರದ ಮುಖಂಡರ ಮುಂದಾಳತ್ವದಲ್ಲಿ ಚುನಾವಣೆ ಮಾಡಿರುವ ನನಗೆ ಹಿರಿಯರ ಆಶೀರ್ವಾದ ಹಾಗೂ ಕಾರ್ಯಕರ್ತರ ಬೆಂಬಲ ಸಿಕ್ಕಿದ್ದರಿಂದ ಚುನಾವಣೆ ನನಗೆ ಹೊಸತಾದ ಅನುಭವ ನೀಡಿದೆ. ಹಿರಿಯ ಮುಖಂಡರ ಮಾರ್ಗದರ್ಶನದಂತೆ ಪ್ರಚಾರ ಕಾರ್ಯದಲ್ಲಿ ನಿರತನಾಗಿದ್ದರಿಂದ ಈ ಚುನಾವಣೆ ನನ್ನ ಜೀವನದಲ್ಲಿ ಮರೆಯಲಾರೆ.<br /> <br /> <strong>* ಅಭಿವೃದ್ಧಿ ಕುರಿತ ಮುಂದಿನ ಯೋಜನೆಗಳು ಏನು?<br /> </strong>ಕ್ಷೇತ್ರದ ಜನರ ಸಮಸ್ಯೆಗಳಿಗೆ ಸ್ಪಂದಿಸುತ್ತಾ ಹಿರಿಯ ಮುಖಂಡರ ಮಾರ್ಗದರ್ಶನದಲ್ಲಿ ಕ್ಷೇತ್ರವನ್ನು ಅಭಿವೃದ್ಧಿಯತ್ತ ಕೊಂಡೊಯ್ಯುವ ಮಹದಾಸೆ ನನ್ನದು. ಆದಷ್ಟು ಶಾಲಾ ಕೊಠಡಿ, ಕುಡಿಯುವ ನೀರು, ರಸ್ತೆ ಅಭಿವೃದ್ಧಿಗೆ ಆದ್ಯತೆ ನೀಡುವ ಮೂಲಕ ಮೂಲ ಸೌಕರ್ಯಗಳಿಂದ ನನ್ನ ಕ್ಷೇತ್ರದ ಜನತೆಯನ್ನು ವಿಮುಕ್ತಿಗೊಳಿಸುವುದೇ ನನ್ನ ಗುರಿಯಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಳ್ಳಕೆರೆ: </strong>ತಾಲ್ಲೂಕಿನ ಪ್ರತಿಷ್ಠಿತ ಜಿಲ್ಲಾ ಪಂಚಾಯ್ತಿ ಕ್ಷೇತ್ರ ಎಂದೇ ಎಲ್ಲರ ಗಮನ ಸೆಳೆದಿದ್ದ ದೊಡ್ಡೇರಿ ಮೀಸಲು ಕ್ಷೇತ್ರದಲ್ಲಿ ಜೆಡಿಎಸ್ನಿಂದ ಸ್ಪರ್ಧಿಸಿದ್ದ ಪೊಲೀಸ್ ಅಧಿಕಾರಿ ಎಚ್. ಆಂಜನೇಯ ಅವರ ಪುತ್ರ ಎ. ಅನಿಲ್ಕುಮಾರ್ ಆಯ್ಕೆಯಾಗಿದ್ದಾರೆ.<br /> <br /> ರಾಜಕೀಯ ಕ್ಷೇತ್ರಕ್ಕೆ ಇದೀಗ ಪಾದಾರ್ಪಣೆ ಮಾಡಿರುವ ಇವರು ಮೊದಲ ಪ್ರಯತ್ನದಲ್ಲಿಯೇ ಯಶಸ್ವಿಯಾಗಿದ್ದಾರೆ. ಅವರು ‘ಪ್ರಜಾವಾಣಿ’ ಜತೆ ತಮ್ಮ ಅನಿಸಿಕೆಗಳನ್ನು ಹಂಚಿಕೊಂಡಿದ್ದಾರೆ.<br /> <br /> <strong>* ರಾಜಕೀಯಕ್ಕೆ ಬರಲು ಕಾರಣ ಏನು?<br /> </strong>ಮೊದಲಿನಿಂದಲೂ ರಾಜಕೀಯವೇ ನನ್ನ ಆಸಕ್ತಿಯ ಕ್ಷೇತ್ರವಾಗಿತ್ತು. ಮೂಲತಃ ದೊಡ್ಡೇರಿ ಕ್ಷೇತ್ರದವನಾದ ನಾನು ಈ ಬಾರಿ ಪರಿಶಿಷ್ಟ ಜಾತಿಗೆ ಮೀಸಲಾಗಿದ್ದರಿಂದ ಬಂದ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳುವ ಸಲುವಾಗಿ ಸ್ಪರ್ಧಿಸಿದೆ. ಕ್ಷೇತ್ರದ ಜನತೆಯ ಬೆಂಬಲ ಹಾಗೂ ಮಾಜಿ ಸಚಿವ ಡಿ. ಸುಧಾಕರ್ ಕೃಪಾಕಟಾಕ್ಷದಿಂದ ಗೆದ್ದು ಬಂದಿದ್ದೇನೆ.<br /> <br /> <strong>* ಕ್ಷೇತ್ರದ ಸಮಸ್ಯೆಗಳ ಬಗ್ಗೆ ಏನು ಹೇಳುತ್ತೀರಿ?<br /> </strong>ದೊಡ್ಡೇರಿ ಕ್ಷೇತ್ರದಲ್ಲಿ ಸಾಕಷ್ಟು ಸಮಸ್ಯೆಗಳಿವೆ. ರಸ್ತೆ, ಶಾಲಾ ಕೊಠಡಿಗಳ ದುರಸ್ತಿ, ಕುಡಿಯುವ ನೀರಿನ ಸಮಸ್ಯೆ ಹೀಗೆ ಅನೇಕ ಸಮಸ್ಯೆಗಳಿಂದ ಬಳಲುತ್ತಿರುವುದರಿಂದ ಮೊದಲು ಮೂಲ ಸೌಕರ್ಯಗಳನ್ನು ಒದಗಿಸಲು ಶ್ರಮಿಸುತ್ತೇನೆ.<br /> <br /> <strong>* ಇಷ್ಟು ದಿನಗಳ ಕಾಲ ಬೇರೆಡೆ ವಾಸಿಸುತ್ತಿದ್ದ ನೀವು ಇನ್ನು ಮುಂದೆ ಕ್ಷೇತ್ರದ ಜನತೆಗೆ ಸಿಗುತ್ತೀರಾ?<br /> </strong>ಖಂಡಿತ. ನನ್ನ ಕ್ಷೇತ್ರದ ವ್ಯಾಪ್ತಿಯಲ್ಲಿಯೇ ನಾನು ವಾಸಿಸುತ್ತೇನೆ. ತಂದೆಯವರ ಸರ್ಕಾರಿ ಕೆಲಸದಿಂದಾಗಿ ಬೇರೆಡೆ ವಾಸಿಸುತ್ತಿದ್ದುದು ನಿಜ. ಇನ್ನುಮುಂದೆ ಜನರ ಸೇವೆ ಮಾಡಲು ಸದಾ ಸಿದ್ಧನಿದ್ದೇನೆ.<br /> <br /> <strong>* ಮೊದಲ ಚುನಾವಣೆ ಏನನ್ನಿಸಿತು?<br /> </strong>ನಮ್ಮ ಊರಿನವರು ಹಾಗೂ ಕ್ಷೇತ್ರದ ಮುಖಂಡರ ಮುಂದಾಳತ್ವದಲ್ಲಿ ಚುನಾವಣೆ ಮಾಡಿರುವ ನನಗೆ ಹಿರಿಯರ ಆಶೀರ್ವಾದ ಹಾಗೂ ಕಾರ್ಯಕರ್ತರ ಬೆಂಬಲ ಸಿಕ್ಕಿದ್ದರಿಂದ ಚುನಾವಣೆ ನನಗೆ ಹೊಸತಾದ ಅನುಭವ ನೀಡಿದೆ. ಹಿರಿಯ ಮುಖಂಡರ ಮಾರ್ಗದರ್ಶನದಂತೆ ಪ್ರಚಾರ ಕಾರ್ಯದಲ್ಲಿ ನಿರತನಾಗಿದ್ದರಿಂದ ಈ ಚುನಾವಣೆ ನನ್ನ ಜೀವನದಲ್ಲಿ ಮರೆಯಲಾರೆ.<br /> <br /> <strong>* ಅಭಿವೃದ್ಧಿ ಕುರಿತ ಮುಂದಿನ ಯೋಜನೆಗಳು ಏನು?<br /> </strong>ಕ್ಷೇತ್ರದ ಜನರ ಸಮಸ್ಯೆಗಳಿಗೆ ಸ್ಪಂದಿಸುತ್ತಾ ಹಿರಿಯ ಮುಖಂಡರ ಮಾರ್ಗದರ್ಶನದಲ್ಲಿ ಕ್ಷೇತ್ರವನ್ನು ಅಭಿವೃದ್ಧಿಯತ್ತ ಕೊಂಡೊಯ್ಯುವ ಮಹದಾಸೆ ನನ್ನದು. ಆದಷ್ಟು ಶಾಲಾ ಕೊಠಡಿ, ಕುಡಿಯುವ ನೀರು, ರಸ್ತೆ ಅಭಿವೃದ್ಧಿಗೆ ಆದ್ಯತೆ ನೀಡುವ ಮೂಲಕ ಮೂಲ ಸೌಕರ್ಯಗಳಿಂದ ನನ್ನ ಕ್ಷೇತ್ರದ ಜನತೆಯನ್ನು ವಿಮುಕ್ತಿಗೊಳಿಸುವುದೇ ನನ್ನ ಗುರಿಯಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>