<p><strong>ಮಾಗಡಿ: </strong>ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ನೆನಪಿಗಾಗಿ ಪಟ್ಟಣದಲ್ಲಿ ನಿರ್ಮಿಸಿರುವ ಭವನದಲ್ಲಿ ನೀರು, ಶೌಚಾಲಯ ಸೌಲಭ್ಯವಿಲ್ಲ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.ಭವನ ನಿರ್ಮಾಣಗೊಂಡು ಎರಡು ವರ್ಷ ಪೂರ್ಣಗೊಂಡಿದ್ದರೂ ಪುರಸಭೆ ನಿರ್ಲಕ್ಷ್ಯದಿಂದಾಗಿ ಈ ಭವನ ಮೂಲ ಸೌಲಭ್ಯಗಳ ಕೊರತೆಯಿಂದ ಬಳಲುತ್ತಿದೆ ಎಂದು ಹಿರಿಯ ಚಿಂತಕ ಕೆ.ಆರ್.ರವಿಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. <br /> </p>.<p>ಅಂಬೇಡ್ಕರ್ ಭವನಕ್ಕೆ ಕಾಪೌಂಡ್ ನಿರ್ಮಿಸಿ, ಪ್ರತಿಧ್ವನಿ ರಹಿತ ಒಳಾಂಗಣ ರಚನೆಗಾಗಿ ಹಲವುಬಾರಿ ಅಧಿಕಾರಿಗಳ ಗಮನಕ್ಕೆ ತಂದರೂ ಸಹ ಪ್ರಯೋಜನವಾಗಿಲ್ಲ. ಕಳಪೆ ಕಾಮಗಾರಿಯಿಂದಾಗಿ ನಾಮಫಲಕವಿರುವ ಮುಂಭಾಗ ಶಿಥಿಲವಾಗಿದೆ ಎಂದು ಸಮಾಜ ಸೇವಕ ಬಿ.ವಿ.ಜಯರಾಮು ತಿಳಿಸಿದ್ದಾರೆ. <br /> </p>.<p>ತಾಲ್ಲೂಕಿನಲ್ಲಿರುವ ಡಾ. ಬಿ.ಆರ್.ಅಂಬೇಡ್ಕರ್ ಅಭಿಮಾನಿಗಳು ಪುರಸಭೆನಿರ್ಲಕ್ಷ್ಯವನ್ನು ಖಂಡಿಸಿದ್ದಾರೆ. ನಾಳೆ ಅಂಬೇಡ್ಕರ್ ದಿನಾಚರಣೆ. ಆ ವೇಳೆಗಾದರೂ ಅಂಬೇಡ್ಕರ್ ಭವನಕ್ಕೆ ಮೂಲ ಸವಲತ್ತುಗಳನ್ನು ದೊರಕಿಸಬೇಕು. ಇಲ್ಲದಿದ್ದರೆ ಶಾಂತಿಯುತ ಪ್ರತಿಭಟನೆ ನಡೆಸುವುದಾಗಿ ಅವರು ಎಚ್ಚರಿಸಿದ್ದಾರೆ. <br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಾಗಡಿ: </strong>ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ನೆನಪಿಗಾಗಿ ಪಟ್ಟಣದಲ್ಲಿ ನಿರ್ಮಿಸಿರುವ ಭವನದಲ್ಲಿ ನೀರು, ಶೌಚಾಲಯ ಸೌಲಭ್ಯವಿಲ್ಲ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.ಭವನ ನಿರ್ಮಾಣಗೊಂಡು ಎರಡು ವರ್ಷ ಪೂರ್ಣಗೊಂಡಿದ್ದರೂ ಪುರಸಭೆ ನಿರ್ಲಕ್ಷ್ಯದಿಂದಾಗಿ ಈ ಭವನ ಮೂಲ ಸೌಲಭ್ಯಗಳ ಕೊರತೆಯಿಂದ ಬಳಲುತ್ತಿದೆ ಎಂದು ಹಿರಿಯ ಚಿಂತಕ ಕೆ.ಆರ್.ರವಿಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. <br /> </p>.<p>ಅಂಬೇಡ್ಕರ್ ಭವನಕ್ಕೆ ಕಾಪೌಂಡ್ ನಿರ್ಮಿಸಿ, ಪ್ರತಿಧ್ವನಿ ರಹಿತ ಒಳಾಂಗಣ ರಚನೆಗಾಗಿ ಹಲವುಬಾರಿ ಅಧಿಕಾರಿಗಳ ಗಮನಕ್ಕೆ ತಂದರೂ ಸಹ ಪ್ರಯೋಜನವಾಗಿಲ್ಲ. ಕಳಪೆ ಕಾಮಗಾರಿಯಿಂದಾಗಿ ನಾಮಫಲಕವಿರುವ ಮುಂಭಾಗ ಶಿಥಿಲವಾಗಿದೆ ಎಂದು ಸಮಾಜ ಸೇವಕ ಬಿ.ವಿ.ಜಯರಾಮು ತಿಳಿಸಿದ್ದಾರೆ. <br /> </p>.<p>ತಾಲ್ಲೂಕಿನಲ್ಲಿರುವ ಡಾ. ಬಿ.ಆರ್.ಅಂಬೇಡ್ಕರ್ ಅಭಿಮಾನಿಗಳು ಪುರಸಭೆನಿರ್ಲಕ್ಷ್ಯವನ್ನು ಖಂಡಿಸಿದ್ದಾರೆ. ನಾಳೆ ಅಂಬೇಡ್ಕರ್ ದಿನಾಚರಣೆ. ಆ ವೇಳೆಗಾದರೂ ಅಂಬೇಡ್ಕರ್ ಭವನಕ್ಕೆ ಮೂಲ ಸವಲತ್ತುಗಳನ್ನು ದೊರಕಿಸಬೇಕು. ಇಲ್ಲದಿದ್ದರೆ ಶಾಂತಿಯುತ ಪ್ರತಿಭಟನೆ ನಡೆಸುವುದಾಗಿ ಅವರು ಎಚ್ಚರಿಸಿದ್ದಾರೆ. <br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>