<p><strong>ಗುಲ್ಬರ್ಗ: </strong>ಬಟ್ಟೆ ತೊಳೆಯಲು ಹೋಗಿದ್ದ ಮೂವರು ಯುವತಿಯರು ಕಾಲು ಜಾರಿ ಬಿದ್ದು ಸಾವನ್ನಪ್ಪಿದ ದಾರುಣ ಘಟನೆ ಭಾನುವಾರ ಸಂಜೆ ಸಂಭವಿಸಿದೆ. ಶಹಾಬಾದ್ ಸಮೀಪದ ಕಲ್ಲಿನ ಕ್ವಾರಿಯಲ್ಲಿ ಕೆಲಸ ಮಾಡುತ್ತಿದ್ದ ಸುನೀತಾ ರಾಠೋಡ, ಸೀತಾಬಾಯಿ ರಾಠೋಡ ಹಾಗೂ ಶಾಮಾಬಾಯಿ ಗಾಡಿವಡ್ಡರ್ ಮೃತಪಟ್ಟ ದುರ್ದೈವಿಗಳು.<br /> <br /> ಕಲ್ಲಿನ ಗಣಿಗಾರಿಕೆಯ ನಂತರ ಖಾಲಿಯಿದ್ದ ಹೊಂಡದಲ್ಲಿ ನೀರು ತುಂಬಿತ್ತು. ಈ ಯುವತಿಯರು ಅಲ್ಲಿ ಬಟ್ಟೆ ತೊಳೆಯಲು ತೆರಳಿದ್ದರು. ಸುನೀತಾ ಕಾಲು ಜಾರಿ ಬಿದ್ದುದನ್ನು ಗಮನಿಸಿ ಉಳಿದಿಬ್ಬರು ಆಕೆಯನ್ನು ರಕ್ಷಿಸಲು ಮುಂದಾದಾಗ, ಮೂವರೂ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದರು ಎಂದು ತಿಳಿದುಬಂದಿದೆ.<br /> <br /> ಸುನೀತಾ ಹಾಗೂ ಸೀತಾಬಾಯಿ ರೇವೂರ ತಾಂಡಾದ ನಿವಾಸಿಯಾಗಿದ್ದರೆ, ಶಾಮಾಬಾಯಿ ಎಂಬಾಕೆ ಮಹಾರಾಷ್ಟ್ರದ ನವಲೂರು ಗ್ರಾಮದ ನಿವಾಸಿ ಎಂದು ಪೊಲೀಸರು ತಿಳಿಸಿದ್ದಾರೆ. ವಿಶ್ವವಿದ್ಯಾಲಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುಲ್ಬರ್ಗ: </strong>ಬಟ್ಟೆ ತೊಳೆಯಲು ಹೋಗಿದ್ದ ಮೂವರು ಯುವತಿಯರು ಕಾಲು ಜಾರಿ ಬಿದ್ದು ಸಾವನ್ನಪ್ಪಿದ ದಾರುಣ ಘಟನೆ ಭಾನುವಾರ ಸಂಜೆ ಸಂಭವಿಸಿದೆ. ಶಹಾಬಾದ್ ಸಮೀಪದ ಕಲ್ಲಿನ ಕ್ವಾರಿಯಲ್ಲಿ ಕೆಲಸ ಮಾಡುತ್ತಿದ್ದ ಸುನೀತಾ ರಾಠೋಡ, ಸೀತಾಬಾಯಿ ರಾಠೋಡ ಹಾಗೂ ಶಾಮಾಬಾಯಿ ಗಾಡಿವಡ್ಡರ್ ಮೃತಪಟ್ಟ ದುರ್ದೈವಿಗಳು.<br /> <br /> ಕಲ್ಲಿನ ಗಣಿಗಾರಿಕೆಯ ನಂತರ ಖಾಲಿಯಿದ್ದ ಹೊಂಡದಲ್ಲಿ ನೀರು ತುಂಬಿತ್ತು. ಈ ಯುವತಿಯರು ಅಲ್ಲಿ ಬಟ್ಟೆ ತೊಳೆಯಲು ತೆರಳಿದ್ದರು. ಸುನೀತಾ ಕಾಲು ಜಾರಿ ಬಿದ್ದುದನ್ನು ಗಮನಿಸಿ ಉಳಿದಿಬ್ಬರು ಆಕೆಯನ್ನು ರಕ್ಷಿಸಲು ಮುಂದಾದಾಗ, ಮೂವರೂ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದರು ಎಂದು ತಿಳಿದುಬಂದಿದೆ.<br /> <br /> ಸುನೀತಾ ಹಾಗೂ ಸೀತಾಬಾಯಿ ರೇವೂರ ತಾಂಡಾದ ನಿವಾಸಿಯಾಗಿದ್ದರೆ, ಶಾಮಾಬಾಯಿ ಎಂಬಾಕೆ ಮಹಾರಾಷ್ಟ್ರದ ನವಲೂರು ಗ್ರಾಮದ ನಿವಾಸಿ ಎಂದು ಪೊಲೀಸರು ತಿಳಿಸಿದ್ದಾರೆ. ವಿಶ್ವವಿದ್ಯಾಲಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>