<p><strong>ಚೆನ್ನೈ, (ಪಿಟಿಐ): </strong>ದಿವಂಗತ ಮಾಜಿ ಪ್ರಧಾನಿ ರಾಜೀವ್ಗಾಂಧಿ ಹತ್ಯೆಗೈದ ಮೂವರಿಗೆ ಕ್ಷಮಾದಾನ ನೀಡಬೇಕೆಂಬ ಒತ್ತಾಯ ಕೇಳು ಬರುತ್ತಿರುವ ಮಧ್ಯೆಯೇ, ಹಂತಕರನ್ನು ಗಲ್ಲಿಗೇರಿಸುವಂತೆ ರಾಜೀವ್ ಜೊತೆ ಮೃತಪಟ್ಟ15 ಜನರ ಕುಟುಂಬದ ಸದಸ್ಯರು ಒತ್ತಾಯಿಸಿದ್ದಾರೆ.<br /> <br /> ತಮ್ಮ ಕುಟುಂಬದವರನ್ನು ಹತ್ಯೆಗೈದ ಮುರುಗನ್, ಸಂತಾನ್ ಮತ್ತು ಪೇರ್ ಅರಿವಳನ್ ಅವರನ್ನು ಗಲ್ಲಿಗೇರಿಸಬೇಕು ಎಂಬುದು ಇವರ ಒತ್ತಾಯ. ಬಂಧುಗಳನ್ನು ಕಳೆದುಕೊಂಡ ಕುಟುಂಬದ ಸದಸ್ಯರು ಶುಕ್ರವಾರ ಕೈಗೊಂಡ ಒಂದು ದಿನದ ಉಪವಾಸ ಸತ್ಯಾಗ್ರಹದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಅಪರಾಧಿಗಳಿಗೆ ಕ್ಷಮಾದಾನ ನೀಡುವುದನ್ನು ವಿರೋಧಿಸಿದರು.<br /> <br /> ಕೇಂದ್ರದ ಮಾಜಿ ಸಚಿವ ಇವಿಕೆಎಸ್ ಇಳಂಗೋವನ್ ಮತ್ತು ಇತರ ಕಾಂಗ್ರೆಸ್ ನಾಯಕರೂ ಪಾಲ್ಗೊಂಡಿದ್ದರು. ಮೂವರು ಅಪರಾಧಿಗಳಿಗೆ ಗಲ್ಲು ಶಿಕ್ಷೆ ವಿಧಿಸುವುದನ್ನು ರಾಷ್ಟ್ರಪತಿ ಮರುಪರಿಶೀಲಿಸುವಂತೆ ಕೋರಿ ತಮಿಳುನಾಡು ವಿಧಾನಸಭೆ ಆಗಸ್ಟ್ 30ರಂದು ಸರ್ವಾನುಮತದ ಗೊತ್ತುವಳಿ ಅಂಗೀಕರಿಸಿತ್ತು. <br /> <br /> ಅದೇ ದಿನ ಮದ್ರಾಸ್ ಹೈಕೋರ್ಟ್ ಅಪರಾಧಿಗಳಿಗೆ ಮರಣದಂಡನೆ ನೀಡುವುದಕ್ಕೆ 8 ವಾರಗಳ ಕಾಲ ತಡೆಯಾಜ್ಞೆ ನೀಡಿತ್ತು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚೆನ್ನೈ, (ಪಿಟಿಐ): </strong>ದಿವಂಗತ ಮಾಜಿ ಪ್ರಧಾನಿ ರಾಜೀವ್ಗಾಂಧಿ ಹತ್ಯೆಗೈದ ಮೂವರಿಗೆ ಕ್ಷಮಾದಾನ ನೀಡಬೇಕೆಂಬ ಒತ್ತಾಯ ಕೇಳು ಬರುತ್ತಿರುವ ಮಧ್ಯೆಯೇ, ಹಂತಕರನ್ನು ಗಲ್ಲಿಗೇರಿಸುವಂತೆ ರಾಜೀವ್ ಜೊತೆ ಮೃತಪಟ್ಟ15 ಜನರ ಕುಟುಂಬದ ಸದಸ್ಯರು ಒತ್ತಾಯಿಸಿದ್ದಾರೆ.<br /> <br /> ತಮ್ಮ ಕುಟುಂಬದವರನ್ನು ಹತ್ಯೆಗೈದ ಮುರುಗನ್, ಸಂತಾನ್ ಮತ್ತು ಪೇರ್ ಅರಿವಳನ್ ಅವರನ್ನು ಗಲ್ಲಿಗೇರಿಸಬೇಕು ಎಂಬುದು ಇವರ ಒತ್ತಾಯ. ಬಂಧುಗಳನ್ನು ಕಳೆದುಕೊಂಡ ಕುಟುಂಬದ ಸದಸ್ಯರು ಶುಕ್ರವಾರ ಕೈಗೊಂಡ ಒಂದು ದಿನದ ಉಪವಾಸ ಸತ್ಯಾಗ್ರಹದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಅಪರಾಧಿಗಳಿಗೆ ಕ್ಷಮಾದಾನ ನೀಡುವುದನ್ನು ವಿರೋಧಿಸಿದರು.<br /> <br /> ಕೇಂದ್ರದ ಮಾಜಿ ಸಚಿವ ಇವಿಕೆಎಸ್ ಇಳಂಗೋವನ್ ಮತ್ತು ಇತರ ಕಾಂಗ್ರೆಸ್ ನಾಯಕರೂ ಪಾಲ್ಗೊಂಡಿದ್ದರು. ಮೂವರು ಅಪರಾಧಿಗಳಿಗೆ ಗಲ್ಲು ಶಿಕ್ಷೆ ವಿಧಿಸುವುದನ್ನು ರಾಷ್ಟ್ರಪತಿ ಮರುಪರಿಶೀಲಿಸುವಂತೆ ಕೋರಿ ತಮಿಳುನಾಡು ವಿಧಾನಸಭೆ ಆಗಸ್ಟ್ 30ರಂದು ಸರ್ವಾನುಮತದ ಗೊತ್ತುವಳಿ ಅಂಗೀಕರಿಸಿತ್ತು. <br /> <br /> ಅದೇ ದಿನ ಮದ್ರಾಸ್ ಹೈಕೋರ್ಟ್ ಅಪರಾಧಿಗಳಿಗೆ ಮರಣದಂಡನೆ ನೀಡುವುದಕ್ಕೆ 8 ವಾರಗಳ ಕಾಲ ತಡೆಯಾಜ್ಞೆ ನೀಡಿತ್ತು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>