<p><strong>ಹೊಳೆನರಸೀಪುರ:</strong> ‘ದೇಶದ ಒಳಗಿರುವ ಜನರು ನೆಮ್ಮದಿ ಯಂದಿರಲು ಗಡಿಭಾಗ ದಲ್ಲಿರುವ ವೀರ ಯೋಧರ ದೇಶಪ್ರೇಮದ ಕರ್ತವ್ಯ ಕಾರಣ’ ಎಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ನುಡಿದರು. <br /> <br /> ಭಾರತ ಮತ್ತು ಬಾಂಗ್ಲಾ ಗಡಿಯ ರಕ್ಷಣೆಯಲ್ಲಿ ತೊಡಗಿದ್ದ ವೇಳೆ ವೀರಮರಣವನ್ನಪಿದ ತಾಲ್ಲೂಕಿನ ಹರದನಹಳ್ಳಿಯ ಯೋಧ ಎಚ್.ಟಿ. ಕಾಂತರಾಜು ಅವರ ಮನೆಗೆ ಗೌಡರು ಭೇಟಿ ನೀಡಿ ಕುಟುಂಬ ವರ್ಗದವರಿಗೆ ಸಾಂತ್ವಾನ ಹೇಳಿದರು.<br /> <br /> ‘ನನ್ನೂರಿನ ಯೋಧ ನನ್ನ ದೇಶದ ರಕ್ಷಣಾ ಕಾರ್ಯದಲ್ಲಿ ಹೋರಾಡಿ ವೀರ ಮರಣವನ್ನಪ್ಪಿದ್ದಾನೆ. ದೇಶ ರಕ್ಷಣೆಯಲ್ಲಿ ತೊಡಗಿರುವಾಗ ವೀರಮರಣವನ್ನಪ್ಪಿದ ಎಲ್ಲ ಯೋಧರ ಸಾವು ಭಾರತದ ಎಲ್ಲ ಪ್ರಜೆಗಳಿಗೆ ದುಃಖ ಉಂಟುಮಾಡುತ್ತದೆ ಎಂದರು.<br /> <br /> ಸಂಜೆವರೆಗೂ ಯೋಧನ ಮನೆ ಯಲ್ಲೇ ಕಾಲ ಕಳೆದರು. ಗಡಿ ರಕ್ಷಣಾ ಕಾರ್ಯದಲ್ಲಿ ವೀರಮರಣವನ್ನಪ್ಪಿದ ಯೋಧರ ಪಾರ್ಥಿವ ಶರೀರವನ್ನು ಅದೇ ದಿನ ಯೋಧನ ಹುಟ್ಟೂರಿಗೆ ವಿಶೇಷ ಹೆಲಿಕಾಪ್ಟರ್ನಲ್ಲಿ ಕಳುಹಿಸುವ ವ್ಯವಸ್ಥೆ ಮಾಡುವ ಬಗ್ಗೆ ಈ ಹಿಂದೆಯೇ ಪ್ರಸ್ತಾವನೆ ಸಲ್ಲಿಸಿದ್ದೆ ಮತ್ತೊಮ್ಮೆ ಈ ಬಗ್ಗೆ ರಕ್ಷಣಾ ಸಚಿವಾಲಯದ ಗಮನ ಸೆಳೆಯು ವುದಾಗಿ ಗೌಡರು ತಿಳಿಸಿದರು. <br /> <br /> ವಿಧಾನ ಪರಿಷತ್ ಸದಸ್ಯ ಪಟೇಲ್ ಶಿವರಾಂ, ಜಿಲ್ಲಾ ಸಹಕಾರ ಬ್ಯಾಂಕ್ ಅಧ್ಯಕ್ಷ ಸಿ.ಎನ್. ಬಾಲಕೃಷ್ಣ, ರಾಜ್ಯ ಸಭೆಯ ಮಾಜಿ ಸದಸ್ಯ ಎಚ್.ಕೆ. ಜವರೇಗೌಡ, ಜಿಲ್ಲಾ ಪಂಚಾಯ್ತಿ ಸದಸ್ಯ ಎಚ್.ಎನ್. ದೇವೇಗೌಡ ಪಾಪಣ್ಣಿ ಜೊತೆಯಲ್ಲಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಳೆನರಸೀಪುರ:</strong> ‘ದೇಶದ ಒಳಗಿರುವ ಜನರು ನೆಮ್ಮದಿ ಯಂದಿರಲು ಗಡಿಭಾಗ ದಲ್ಲಿರುವ ವೀರ ಯೋಧರ ದೇಶಪ್ರೇಮದ ಕರ್ತವ್ಯ ಕಾರಣ’ ಎಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ನುಡಿದರು. <br /> <br /> ಭಾರತ ಮತ್ತು ಬಾಂಗ್ಲಾ ಗಡಿಯ ರಕ್ಷಣೆಯಲ್ಲಿ ತೊಡಗಿದ್ದ ವೇಳೆ ವೀರಮರಣವನ್ನಪಿದ ತಾಲ್ಲೂಕಿನ ಹರದನಹಳ್ಳಿಯ ಯೋಧ ಎಚ್.ಟಿ. ಕಾಂತರಾಜು ಅವರ ಮನೆಗೆ ಗೌಡರು ಭೇಟಿ ನೀಡಿ ಕುಟುಂಬ ವರ್ಗದವರಿಗೆ ಸಾಂತ್ವಾನ ಹೇಳಿದರು.<br /> <br /> ‘ನನ್ನೂರಿನ ಯೋಧ ನನ್ನ ದೇಶದ ರಕ್ಷಣಾ ಕಾರ್ಯದಲ್ಲಿ ಹೋರಾಡಿ ವೀರ ಮರಣವನ್ನಪ್ಪಿದ್ದಾನೆ. ದೇಶ ರಕ್ಷಣೆಯಲ್ಲಿ ತೊಡಗಿರುವಾಗ ವೀರಮರಣವನ್ನಪ್ಪಿದ ಎಲ್ಲ ಯೋಧರ ಸಾವು ಭಾರತದ ಎಲ್ಲ ಪ್ರಜೆಗಳಿಗೆ ದುಃಖ ಉಂಟುಮಾಡುತ್ತದೆ ಎಂದರು.<br /> <br /> ಸಂಜೆವರೆಗೂ ಯೋಧನ ಮನೆ ಯಲ್ಲೇ ಕಾಲ ಕಳೆದರು. ಗಡಿ ರಕ್ಷಣಾ ಕಾರ್ಯದಲ್ಲಿ ವೀರಮರಣವನ್ನಪ್ಪಿದ ಯೋಧರ ಪಾರ್ಥಿವ ಶರೀರವನ್ನು ಅದೇ ದಿನ ಯೋಧನ ಹುಟ್ಟೂರಿಗೆ ವಿಶೇಷ ಹೆಲಿಕಾಪ್ಟರ್ನಲ್ಲಿ ಕಳುಹಿಸುವ ವ್ಯವಸ್ಥೆ ಮಾಡುವ ಬಗ್ಗೆ ಈ ಹಿಂದೆಯೇ ಪ್ರಸ್ತಾವನೆ ಸಲ್ಲಿಸಿದ್ದೆ ಮತ್ತೊಮ್ಮೆ ಈ ಬಗ್ಗೆ ರಕ್ಷಣಾ ಸಚಿವಾಲಯದ ಗಮನ ಸೆಳೆಯು ವುದಾಗಿ ಗೌಡರು ತಿಳಿಸಿದರು. <br /> <br /> ವಿಧಾನ ಪರಿಷತ್ ಸದಸ್ಯ ಪಟೇಲ್ ಶಿವರಾಂ, ಜಿಲ್ಲಾ ಸಹಕಾರ ಬ್ಯಾಂಕ್ ಅಧ್ಯಕ್ಷ ಸಿ.ಎನ್. ಬಾಲಕೃಷ್ಣ, ರಾಜ್ಯ ಸಭೆಯ ಮಾಜಿ ಸದಸ್ಯ ಎಚ್.ಕೆ. ಜವರೇಗೌಡ, ಜಿಲ್ಲಾ ಪಂಚಾಯ್ತಿ ಸದಸ್ಯ ಎಚ್.ಎನ್. ದೇವೇಗೌಡ ಪಾಪಣ್ಣಿ ಜೊತೆಯಲ್ಲಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>