<p>ಬೆಂಗಳೂರು: ನಗರದ ಮಾಣೆಕ್ ಷಾ ಪೆರೇಡ್ ಮೈದಾನಲ್ಲಿ ಮೆಟ್ರೊ ರೈಲು ಉದ್ಘಾಟನಾ ಸಮಾರಂಭ ನಡೆಯಲಿರುವ ಹಿನ್ನೆಲೆಯಲ್ಲಿ ಗುರುವಾರ (ಅ.20) ಬೆಳಿಗ್ಗೆ 6ರಿಂದ ಸಂಜೆ 6ರವರೆಗೆ ಸುತ್ತಮುತ್ತಲ ರಸ್ತೆಗಳ ವಾಹನ ಸಂಚಾರ ವ್ಯವಸ್ಥೆಯಲ್ಲಿ ಬದಲಾವಣೆ ಮಾಡಲಾಗಿದೆ.<br /> <br /> ಎಂ.ಜಿ.ರಸ್ತೆಯ ಅನಿಲ್ ಕುಂಬ್ಳೆ ವೃತ್ತದಿಂದ ಕಾವೇರಿ ಎಂಪೋರಿಯಂ ಜಂಕ್ಷನ್ವರೆಗೆ ವಾಹನ ಸಂಚಾರವನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ ಮತ್ತು ರಸ್ತೆಯ ಎರಡೂ ಕಡೆ ವಾಹನ ನಿಲುಗಡೆಗೆ ಅವಕಾಶವಿಲ್ಲ.<br /> <br /> ಬ್ರಿಗೇಡ್ ರಸ್ತೆಯಲ್ಲಿ ಕಾವೇರಿ ಎಂಪೋರಿಯಂ ಜಂಕ್ಷನ್ನಿಂದ ಓಪೇರಾ ಜಂಕ್ಷನ್ವರೆಗೆ, ಕಾಮರಾಜ ರಸ್ತೆಯಲ್ಲಿ ಕಾವೇರಿ ಎಂಪೋರಿಯಂ ಜಂಕ್ಷನ್ನಿಂದ ಕಬ್ಬನ್ ರಸ್ತೆ ಜಂಕ್ಷನ್ವರೆಗೆ ಮತ್ತು ಚರ್ಚ್ಸ್ಟ್ರೀಟ್ನ ರಸ್ತೆಯ ಎರಡೂ ಬದಿಯಲ್ಲಿ ವಾಹನ ನಿಲುಗಡೆ ನಿಷೇಧಿಸಿದೆ.<br /> <br /> ಮೆಯೋಹಾಲ್ನಿಂದ ಎಂ.ಜಿ.ರಸ್ತೆ ಕಡೆಗೆ ಸಂಚರಿಸುವ ವಾಹನಗಳು ಕಾವೇರಿ ಎಂಪೋರಿಯಂ ಜಂಕ್ಷನ್ನಲ್ಲಿ ಎಡಕ್ಕೆ ತಿರುಗಿ ಬ್ರಿಗೇಡ್ ರಸ್ತೆಯಲ್ಲಿ ಸಾಗಿ ನಂತರ ಚರ್ಚಸ್ಟ್ರೀಟ್ಗೆ ಬಲ ತಿರುವು ಪಡೆದು ಮ್ಯೂಸಿಯಂ ರಸ್ತೆ, ಸೇಂಟ್ ಮಾರ್ಕ್ಸ್ ರಸ್ತೆ ಮೂಲಕ ಹೋಗಬೇಕು.<br /> <br /> <strong>ವಾಹನ ನಿಲುಗಡೆ:</strong> ಕೇಂದ್ರ ಸಚಿವರು, ರಾಜ್ಯಪಾಲರು ಹಾಗೂ ಮುಖ್ಯಮಂತ್ರಿಗಳ ವಾಹನ ನಿಲುಗಡೆಗೆ ಮಾಣೆಕ್ ಷಾ ಪೆರೇಡ್ ಮೈದಾನದ ಸಮಾರಂಭದ ವೇದಿಕೆ ಹಿಂಭಾಗದಲ್ಲಿ ಅವಕಾಶ ನೀಡಲಾಗಿದೆ. ಗಣ್ಯ ಮತ್ತು ಅತಿಗಣ್ಯ ವ್ಯಕ್ತಿಗಳ ವಾಹನಗಳನ್ನು ಮೈದಾನದ ಉತ್ತರ ಭಾಗದಲ್ಲಿ (ಕಬ್ಬನ್ ರಸ್ತೆ ಕಡೆಗೆ) ನಿಲ್ಲಿಸಬೇಕು.<br /> <br /> ಸಾರ್ವಜನಿಕರ ವಾಹನಗಳನ್ನು ಮೈದಾನದ ದಕ್ಷಿಣ ಭಾಗದಲ್ಲಿ (ಎಂ.ಜಿ.ರಸ್ತೆ ಕಡೆಗೆ), ಪೊಲೀಸ್ ಅಧಿಕಾರಿಗಳು ಮತ್ತು ಮೆಟ್ರೊ ಅಧಿಕಾರಿಗಳ ವಾಹನಗಳನ್ನು ಬಿಆರ್ವಿ ಮೈದಾನದಲ್ಲಿ ನಿಲ್ಲಿಸಬೇಕು. ಕಾಮರಾಜ ರಸ್ತೆಯಲ್ಲಿ ಕಬ್ಬನ್ ರಸ್ತೆ ಜಂಕ್ಷನ್ನಿಂದ ಡಿಕೆನ್ಸನ್ ರಸ್ತೆ ಜಂಕ್ಷನ್ವರೆಗೆ ವಾಹನ ನಿಲುಗಡೆಗೆ ಅವಕಾಶವಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ನಗರದ ಮಾಣೆಕ್ ಷಾ ಪೆರೇಡ್ ಮೈದಾನಲ್ಲಿ ಮೆಟ್ರೊ ರೈಲು ಉದ್ಘಾಟನಾ ಸಮಾರಂಭ ನಡೆಯಲಿರುವ ಹಿನ್ನೆಲೆಯಲ್ಲಿ ಗುರುವಾರ (ಅ.20) ಬೆಳಿಗ್ಗೆ 6ರಿಂದ ಸಂಜೆ 6ರವರೆಗೆ ಸುತ್ತಮುತ್ತಲ ರಸ್ತೆಗಳ ವಾಹನ ಸಂಚಾರ ವ್ಯವಸ್ಥೆಯಲ್ಲಿ ಬದಲಾವಣೆ ಮಾಡಲಾಗಿದೆ.<br /> <br /> ಎಂ.ಜಿ.ರಸ್ತೆಯ ಅನಿಲ್ ಕುಂಬ್ಳೆ ವೃತ್ತದಿಂದ ಕಾವೇರಿ ಎಂಪೋರಿಯಂ ಜಂಕ್ಷನ್ವರೆಗೆ ವಾಹನ ಸಂಚಾರವನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ ಮತ್ತು ರಸ್ತೆಯ ಎರಡೂ ಕಡೆ ವಾಹನ ನಿಲುಗಡೆಗೆ ಅವಕಾಶವಿಲ್ಲ.<br /> <br /> ಬ್ರಿಗೇಡ್ ರಸ್ತೆಯಲ್ಲಿ ಕಾವೇರಿ ಎಂಪೋರಿಯಂ ಜಂಕ್ಷನ್ನಿಂದ ಓಪೇರಾ ಜಂಕ್ಷನ್ವರೆಗೆ, ಕಾಮರಾಜ ರಸ್ತೆಯಲ್ಲಿ ಕಾವೇರಿ ಎಂಪೋರಿಯಂ ಜಂಕ್ಷನ್ನಿಂದ ಕಬ್ಬನ್ ರಸ್ತೆ ಜಂಕ್ಷನ್ವರೆಗೆ ಮತ್ತು ಚರ್ಚ್ಸ್ಟ್ರೀಟ್ನ ರಸ್ತೆಯ ಎರಡೂ ಬದಿಯಲ್ಲಿ ವಾಹನ ನಿಲುಗಡೆ ನಿಷೇಧಿಸಿದೆ.<br /> <br /> ಮೆಯೋಹಾಲ್ನಿಂದ ಎಂ.ಜಿ.ರಸ್ತೆ ಕಡೆಗೆ ಸಂಚರಿಸುವ ವಾಹನಗಳು ಕಾವೇರಿ ಎಂಪೋರಿಯಂ ಜಂಕ್ಷನ್ನಲ್ಲಿ ಎಡಕ್ಕೆ ತಿರುಗಿ ಬ್ರಿಗೇಡ್ ರಸ್ತೆಯಲ್ಲಿ ಸಾಗಿ ನಂತರ ಚರ್ಚಸ್ಟ್ರೀಟ್ಗೆ ಬಲ ತಿರುವು ಪಡೆದು ಮ್ಯೂಸಿಯಂ ರಸ್ತೆ, ಸೇಂಟ್ ಮಾರ್ಕ್ಸ್ ರಸ್ತೆ ಮೂಲಕ ಹೋಗಬೇಕು.<br /> <br /> <strong>ವಾಹನ ನಿಲುಗಡೆ:</strong> ಕೇಂದ್ರ ಸಚಿವರು, ರಾಜ್ಯಪಾಲರು ಹಾಗೂ ಮುಖ್ಯಮಂತ್ರಿಗಳ ವಾಹನ ನಿಲುಗಡೆಗೆ ಮಾಣೆಕ್ ಷಾ ಪೆರೇಡ್ ಮೈದಾನದ ಸಮಾರಂಭದ ವೇದಿಕೆ ಹಿಂಭಾಗದಲ್ಲಿ ಅವಕಾಶ ನೀಡಲಾಗಿದೆ. ಗಣ್ಯ ಮತ್ತು ಅತಿಗಣ್ಯ ವ್ಯಕ್ತಿಗಳ ವಾಹನಗಳನ್ನು ಮೈದಾನದ ಉತ್ತರ ಭಾಗದಲ್ಲಿ (ಕಬ್ಬನ್ ರಸ್ತೆ ಕಡೆಗೆ) ನಿಲ್ಲಿಸಬೇಕು.<br /> <br /> ಸಾರ್ವಜನಿಕರ ವಾಹನಗಳನ್ನು ಮೈದಾನದ ದಕ್ಷಿಣ ಭಾಗದಲ್ಲಿ (ಎಂ.ಜಿ.ರಸ್ತೆ ಕಡೆಗೆ), ಪೊಲೀಸ್ ಅಧಿಕಾರಿಗಳು ಮತ್ತು ಮೆಟ್ರೊ ಅಧಿಕಾರಿಗಳ ವಾಹನಗಳನ್ನು ಬಿಆರ್ವಿ ಮೈದಾನದಲ್ಲಿ ನಿಲ್ಲಿಸಬೇಕು. ಕಾಮರಾಜ ರಸ್ತೆಯಲ್ಲಿ ಕಬ್ಬನ್ ರಸ್ತೆ ಜಂಕ್ಷನ್ನಿಂದ ಡಿಕೆನ್ಸನ್ ರಸ್ತೆ ಜಂಕ್ಷನ್ವರೆಗೆ ವಾಹನ ನಿಲುಗಡೆಗೆ ಅವಕಾಶವಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>