<p>ಬೆಂಗಳೂರು: `ಮೆಟ್ರೊ ರೈಲು ಮಾರ್ಗ ನಿರ್ಮಾಣ ಕಾಮಗಾರಿ ಪೂರ್ಣಗೊಂಡಿರುವ ರಸ್ತೆಗಳಲ್ಲಿ ಬಿದ್ದಿರುವ ತ್ಯಾಜ್ಯವನ್ನು ಇನ್ನು ಮೂರು ತಿಂಗಳಲ್ಲಿ ಸಂಪೂರ್ಣವಾಗಿ ತೆಗೆದುಹಾಕುವ ಮೂಲಕ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕು' ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್. ರಾಮಲಿಂಗಾರೆಡ್ಡಿ ಸೂಚಿಸಿದರು.<br /> <br /> ಮೇಯರ್ ಡಿ.ವೆಂಕಟೇಶಮೂರ್ತಿ, ಶಾಸಕ ಆರ್. ಅಶೋಕ ಅವರೊಂದಿಗೆ ಸೋಮವಾರ ಬಸವನಗುಡಿ ಮತ್ತು ಜಯನಗರ ಪ್ರದೇಶದಲ್ಲಿ ನಡೆದಿರುವ ಮೆಟ್ರೊ ಕಾಮಗಾರಿ ಪರಿಶೀಲನೆ ನಡೆಸಿದ ಬಳಿಕ ಅಧಿಕಾರಿಗಳಿಗೆ ಈ ಆದೇಶ ನೀಡಿದರು.<br /> <br /> `ಕಾಮಗಾರಿಗೆ ಬಳಸಿದ ಸಾಮಗ್ರಿಗಳನ್ನು ರಸ್ತೆಯಲ್ಲಿಯೇ ಉಳಿಸಲಾಗಿದ್ದು, ತ್ಯಾಜ್ಯವೂ ಬಹಳ ಪ್ರಮಾಣದಲ್ಲಿ ಸಂಗ್ರಹವಾಗಿದೆ. ಇದರಿಂದ ವಾಹನಗಳ ಓಡಾಟಕ್ಕೆ ಅಡಚಣೆಯಾಗಿದ್ದು, ಸಂಚಾರ ದಟ್ಟಣೆ ಹೆಚ್ಚುತ್ತಿದೆ. ಮೂರು ತಿಂಗಳಲ್ಲಿ ನಗರದ ರಸ್ತೆಗಳ ಮೇಲಿನ ತ್ಯಾಜ್ಯವನ್ನು ಸಂಪೂರ್ಣವಾಗಿ ತೆಗೆಯಬೇಕು' ಎಂದು ಮೆಟ್ರೊ ರೈಲು ನಿಗಮದ ಅಧಿಕಾರಿಗಳಿಗೆ ಹೇಳಿದರು. `ಮುಂದಿನ ವಾರ ಮತ್ತೆ ಮೆಟ್ರೊ ಕಾಮಗಾರಿ ತಪಾಸಣೆ ನಡೆಸಲಾಗುವುದು' ಎಂದರು.<br /> <br /> ಅಶೋಕ ಮಾತನಾಡಿ, `ಮೆಟ್ರೊ ಕಾಮಗಾರಿ ವಿಳಂಬವಾಗಿದ್ದು, ಕಟ್ಟಡ ತ್ಯಾಜ್ಯವೂ ಬಹಳ ಪ್ರಮಾಣದಲ್ಲಿ ಬಿದ್ದಿದೆ. ಕಾಮಗಾರಿ ಮುಗಿದ ರಸ್ತೆಗಳು ಸಹ ದುರಸ್ತಿಗೊಂಡಿಲ್ಲ. ಮೆಟ್ರೊ ರೈಲು ನಿಗಮ ಮತ್ತು ಬಿಬಿಎಂಪಿ ಅಧಿಕಾರಿಗಳ ನಡುವೆ ಸಮನ್ವಯದ ಕೊರತೆಯೇ ಇದಕ್ಕೆ ಕಾರಣ' ಎಂದು ದೂರಿದರು.<br /> <br /> `ಮಾಗಡಿ ರಸ್ತೆ ದುರಸ್ತಿಗೆ ಅಗತ್ಯವಾದ ಹಣಕಾಸಿನ ನೆರವು ನೀಡಲು ನಿಗಮ ಬದ್ಧವಾಗಿದ್ದು, ಶೀಘ್ರವೇ ಬಿಬಿಎಂಪಿ ಆಯುಕ್ತರು ಟೆಂಡರ್ ಕರೆಯಲಿದ್ದಾರೆ' ಎಂದು ಮೆಟ್ರೊ ರೈಲು ನಿಗಮದ ಅಧಿಕಾರಿಗಳು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: `ಮೆಟ್ರೊ ರೈಲು ಮಾರ್ಗ ನಿರ್ಮಾಣ ಕಾಮಗಾರಿ ಪೂರ್ಣಗೊಂಡಿರುವ ರಸ್ತೆಗಳಲ್ಲಿ ಬಿದ್ದಿರುವ ತ್ಯಾಜ್ಯವನ್ನು ಇನ್ನು ಮೂರು ತಿಂಗಳಲ್ಲಿ ಸಂಪೂರ್ಣವಾಗಿ ತೆಗೆದುಹಾಕುವ ಮೂಲಕ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕು' ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್. ರಾಮಲಿಂಗಾರೆಡ್ಡಿ ಸೂಚಿಸಿದರು.<br /> <br /> ಮೇಯರ್ ಡಿ.ವೆಂಕಟೇಶಮೂರ್ತಿ, ಶಾಸಕ ಆರ್. ಅಶೋಕ ಅವರೊಂದಿಗೆ ಸೋಮವಾರ ಬಸವನಗುಡಿ ಮತ್ತು ಜಯನಗರ ಪ್ರದೇಶದಲ್ಲಿ ನಡೆದಿರುವ ಮೆಟ್ರೊ ಕಾಮಗಾರಿ ಪರಿಶೀಲನೆ ನಡೆಸಿದ ಬಳಿಕ ಅಧಿಕಾರಿಗಳಿಗೆ ಈ ಆದೇಶ ನೀಡಿದರು.<br /> <br /> `ಕಾಮಗಾರಿಗೆ ಬಳಸಿದ ಸಾಮಗ್ರಿಗಳನ್ನು ರಸ್ತೆಯಲ್ಲಿಯೇ ಉಳಿಸಲಾಗಿದ್ದು, ತ್ಯಾಜ್ಯವೂ ಬಹಳ ಪ್ರಮಾಣದಲ್ಲಿ ಸಂಗ್ರಹವಾಗಿದೆ. ಇದರಿಂದ ವಾಹನಗಳ ಓಡಾಟಕ್ಕೆ ಅಡಚಣೆಯಾಗಿದ್ದು, ಸಂಚಾರ ದಟ್ಟಣೆ ಹೆಚ್ಚುತ್ತಿದೆ. ಮೂರು ತಿಂಗಳಲ್ಲಿ ನಗರದ ರಸ್ತೆಗಳ ಮೇಲಿನ ತ್ಯಾಜ್ಯವನ್ನು ಸಂಪೂರ್ಣವಾಗಿ ತೆಗೆಯಬೇಕು' ಎಂದು ಮೆಟ್ರೊ ರೈಲು ನಿಗಮದ ಅಧಿಕಾರಿಗಳಿಗೆ ಹೇಳಿದರು. `ಮುಂದಿನ ವಾರ ಮತ್ತೆ ಮೆಟ್ರೊ ಕಾಮಗಾರಿ ತಪಾಸಣೆ ನಡೆಸಲಾಗುವುದು' ಎಂದರು.<br /> <br /> ಅಶೋಕ ಮಾತನಾಡಿ, `ಮೆಟ್ರೊ ಕಾಮಗಾರಿ ವಿಳಂಬವಾಗಿದ್ದು, ಕಟ್ಟಡ ತ್ಯಾಜ್ಯವೂ ಬಹಳ ಪ್ರಮಾಣದಲ್ಲಿ ಬಿದ್ದಿದೆ. ಕಾಮಗಾರಿ ಮುಗಿದ ರಸ್ತೆಗಳು ಸಹ ದುರಸ್ತಿಗೊಂಡಿಲ್ಲ. ಮೆಟ್ರೊ ರೈಲು ನಿಗಮ ಮತ್ತು ಬಿಬಿಎಂಪಿ ಅಧಿಕಾರಿಗಳ ನಡುವೆ ಸಮನ್ವಯದ ಕೊರತೆಯೇ ಇದಕ್ಕೆ ಕಾರಣ' ಎಂದು ದೂರಿದರು.<br /> <br /> `ಮಾಗಡಿ ರಸ್ತೆ ದುರಸ್ತಿಗೆ ಅಗತ್ಯವಾದ ಹಣಕಾಸಿನ ನೆರವು ನೀಡಲು ನಿಗಮ ಬದ್ಧವಾಗಿದ್ದು, ಶೀಘ್ರವೇ ಬಿಬಿಎಂಪಿ ಆಯುಕ್ತರು ಟೆಂಡರ್ ಕರೆಯಲಿದ್ದಾರೆ' ಎಂದು ಮೆಟ್ರೊ ರೈಲು ನಿಗಮದ ಅಧಿಕಾರಿಗಳು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>